ತುಮಕೂರು : ಪಾವಗಡ ತಾಲೂಕಿನ ಪಳವಳ್ಳಿಕಟ್ಟೆ ಬಳಿ ಸಂಭವಿಸಿದ ಖಾಸಗಿ ಬಸ್ ದುರಂತದಲ್ಲಿ ಮೃತಪಟ್ಟವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ. ನೀಡುವ ಬದಲು, ಕನಿಷ್ಟ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಖಾಸಗಿ ಬಸ್ಗಳ ಪರ್ಮಿಟ್ ಕ್ಯಾನ್ಸಲ್ ಮಾಡುವ ನಿರ್ಧಾರವನ್ನು ಸಚಿವರು ವ್ಯಕ್ತಪಡಿಸುತ್ತಿದ್ದಾರೆ. ಇದರ ಬದಲು ಯಾವುದೇ ರೀತಿಯ ಲಾಭ-ನಷ್ಟ ನೋಡದೇ, ಪ್ರತಿ ಗ್ರಾಮಕ್ಕೂ ಸರ್ಕಾರಿ ಸಾರಿಗೆ ಬಸ್ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಹೆಚ್ಡಿಕೆ ಸರ್ಕಾರವನ್ನು ಒತ್ತಾಯಿಸಿದರು.
ತುಮಕೂರಿನ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಾವಗಡ ಬಸ್ ದುರಂತದ ಗಾಯಾಳುಗಳ ಆರೋಗ್ಯವನ್ನು ಹೆಚ್ಡಿಕೆ ವಿಚಾರಿಸಿದರು. ಬಳಿಕ ಮಾತನಾಡಿದ ಅವರು, ಅಧಿಕಾರಿಗಳು ಈ ಅವಘಡದ ಬಗ್ಗೆ ಸರ್ಕಾರಕ್ಕೆ ಸೂಕ್ತ ವರದಿ ಸಲ್ಲಿಸಬೇಕು. ಅಲ್ಲದೆ ಗ್ರಾಮೀಣ ಪ್ರದೇಶಗಳಿಗೆ ಸರ್ಕಾರಿ ಸಾರಿಗೆ ಬಸ್ ವ್ಯವಸ್ಥೆಯನ್ನು ಕಲ್ಪಿಸುವ ಕುರಿತಂತೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ: ಪಾವಗಡ ಅಪಘಾತ : ಬಸ್ನ ಮೇಲಿದ್ದರು 40ಕ್ಕೂ ಹೆಚ್ಚು ಮಂದಿ!