ETV Bharat / state

ತುಮಕೂರಿನಲ್ಲಿ ಪ್ಲಾಸ್ಟಿಕ್ ನಿಷೇಧ ಜನಜಾಗೃತಿ ಜಾಥಾ: ಹೇಗಿತ್ತು ರೆಸ್ಪಾನ್ಸ್​​​?

author img

By

Published : Sep 25, 2019, 10:03 PM IST

ತುಮಕೂರಿನಲ್ಲಿ ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆಯಿಂದ ಪ್ಲಾಸ್ಟಿಕ್ ನಿಷೇಧ ಜನಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ತುಮಕೂರು ಬಹಳಷ್ಟು ಪ್ಲಾಸ್ಟಿಕ್​ನಿಂದ ಕಲುಷಿತಗೊಂಡಿದ್ದು, ನಗರವನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಎಲ್ಲರೂ ಸಹಕರಿಸಬೇಕೆಂದು ಶಾಸಕ ಜ್ಯೋತಿಗಣೇಶ್ ತಿಳಿಸಿದರು.

Plastic Prohibition program in Tumkur

ತುಮಕೂರು: ನಗರದ ಟೌನ್ ಹಾಲ್ ವೃತ್ತದಲ್ಲಿ ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆಯಿಂದ ಪ್ಲಾಸ್ಟಿಕ್ ನಿಷೇಧ ಜನಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ತುಮಕೂರಿನಲ್ಲಿ ಪ್ಲಾಸ್ಟಿಕ್ ನಿಷೇಧ ಜನಜಾಗೃತಿ ಜಾಥಾ

ಜಾಥಾಗೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ ರಾಕೇಶ್ ಕುಮಾರ್, ರಾಜ್ಯದಲ್ಲಿ ಪ್ಲಾಸ್ಟಿಕ್​ ಬಳಕೆ ತಡೆಗಟ್ಟುವ ಉದ್ದೇಶದಿಂದ ಈ ಜನಾಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಒಂದು ವಾರಗಳ ಕಾಲ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಲಿದೆ. ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿಯವರ 150ನೇ ಜಯಂತಿ ಆಚರಿಸುತ್ತಿರುವುದರ ಪ್ರಯುಕ್ತ ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡಲಾಗಿದೆ, ಸಾರ್ವಜನಿಕರೆಲ್ಲರೂ ನಮ್ಮ ಜೊತೆ ಕೈಜೋಡಿಸಿದರೆ ಪ್ಲಾಸ್ಟಿಕ್ ಮುಕ್ತ ಮಾಡಲು ಸಾಧ್ಯವಾಗುತ್ತದೆ ಎಂದರು.

ಶಾಸಕ ಜ್ಯೋತಿಗಣೇಶ್ ಮಾತನಾಡಿ, ಗಾಂಧೀಜಿಯವರ 150ನೇ ಜನ್ಮದಿನಾಚರಣೆ ನಿಮಿತ್ತ ಪ್ರಧಾನಿ ಮೋದಿಯವರು ಪ್ಲಾಸ್ಟಿಕ್ ನಿಷೇಧ ಜನಾಂದೋಲನ ಕಾರ್ಯಕ್ರಮ ಮಾಡುವಂತೆ ಆದೇಶ ನೀಡಿದ್ದಾರೆ. ಈ ಸಂದರ್ಭದಲ್ಲಿ ಎಲ್ಲ ಅಧಿಕಾರಿಗಳು, ಜನಪ್ರತಿನಿಧಿಗಳು ಎಲ್ಲರೂ ಸೇರಿ ಜನಾಂದೋಲನ ಮಾಡುತ್ತಿದ್ದಾರೆ. ಕೆಲ ದಿನಗಳ ಹಿಂದೆ ಸುರಿದಂತಹ ಮಳೆಯಿಂದಾಗಿ ನಗರದ ಎಲ್ಲ ಚರಂಡಿಗಳಲ್ಲಿ ಶೇಕಡ 20ರಷ್ಟು ಭಾಗ ಪ್ಲಾಸ್ಟಿಕ್ ಕವರ್​ಗಳಿಂದಲೇ ತುಂಬಿಕೊಂಡಿತ್ತು. ಇದರಿಂದ ತುಮಕೂರು ನಗರ ಎಷ್ಟು ಕಲುಷಿತಗೊಂಡಿದೆ ಎಂದು ತಿಳಿಯುತ್ತದೆ. ಹಾಗಾಗಿ ನಗರವನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಎಲ್ಲರೂ ಸಹಕರಿಸಬೇಕು ಎಂದು ತಿಳಿಸಿದರು.

ತುಮಕೂರು: ನಗರದ ಟೌನ್ ಹಾಲ್ ವೃತ್ತದಲ್ಲಿ ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆಯಿಂದ ಪ್ಲಾಸ್ಟಿಕ್ ನಿಷೇಧ ಜನಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ತುಮಕೂರಿನಲ್ಲಿ ಪ್ಲಾಸ್ಟಿಕ್ ನಿಷೇಧ ಜನಜಾಗೃತಿ ಜಾಥಾ

ಜಾಥಾಗೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ ರಾಕೇಶ್ ಕುಮಾರ್, ರಾಜ್ಯದಲ್ಲಿ ಪ್ಲಾಸ್ಟಿಕ್​ ಬಳಕೆ ತಡೆಗಟ್ಟುವ ಉದ್ದೇಶದಿಂದ ಈ ಜನಾಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಒಂದು ವಾರಗಳ ಕಾಲ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಲಿದೆ. ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿಯವರ 150ನೇ ಜಯಂತಿ ಆಚರಿಸುತ್ತಿರುವುದರ ಪ್ರಯುಕ್ತ ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡಲಾಗಿದೆ, ಸಾರ್ವಜನಿಕರೆಲ್ಲರೂ ನಮ್ಮ ಜೊತೆ ಕೈಜೋಡಿಸಿದರೆ ಪ್ಲಾಸ್ಟಿಕ್ ಮುಕ್ತ ಮಾಡಲು ಸಾಧ್ಯವಾಗುತ್ತದೆ ಎಂದರು.

ಶಾಸಕ ಜ್ಯೋತಿಗಣೇಶ್ ಮಾತನಾಡಿ, ಗಾಂಧೀಜಿಯವರ 150ನೇ ಜನ್ಮದಿನಾಚರಣೆ ನಿಮಿತ್ತ ಪ್ರಧಾನಿ ಮೋದಿಯವರು ಪ್ಲಾಸ್ಟಿಕ್ ನಿಷೇಧ ಜನಾಂದೋಲನ ಕಾರ್ಯಕ್ರಮ ಮಾಡುವಂತೆ ಆದೇಶ ನೀಡಿದ್ದಾರೆ. ಈ ಸಂದರ್ಭದಲ್ಲಿ ಎಲ್ಲ ಅಧಿಕಾರಿಗಳು, ಜನಪ್ರತಿನಿಧಿಗಳು ಎಲ್ಲರೂ ಸೇರಿ ಜನಾಂದೋಲನ ಮಾಡುತ್ತಿದ್ದಾರೆ. ಕೆಲ ದಿನಗಳ ಹಿಂದೆ ಸುರಿದಂತಹ ಮಳೆಯಿಂದಾಗಿ ನಗರದ ಎಲ್ಲ ಚರಂಡಿಗಳಲ್ಲಿ ಶೇಕಡ 20ರಷ್ಟು ಭಾಗ ಪ್ಲಾಸ್ಟಿಕ್ ಕವರ್​ಗಳಿಂದಲೇ ತುಂಬಿಕೊಂಡಿತ್ತು. ಇದರಿಂದ ತುಮಕೂರು ನಗರ ಎಷ್ಟು ಕಲುಷಿತಗೊಂಡಿದೆ ಎಂದು ತಿಳಿಯುತ್ತದೆ. ಹಾಗಾಗಿ ನಗರವನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಎಲ್ಲರೂ ಸಹಕರಿಸಬೇಕು ಎಂದು ತಿಳಿಸಿದರು.

Intro:ತುಮಕೂರು: ನಗರದ ಟೌನ್ ಹಾಲ್ ವೃತ್ತದಲ್ಲಿ ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ವತಿಯಿಂದ ಪ್ಲಾಸ್ಟಿಕ್ ನಿಷೇಧ ಜನಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.


Body:ಜಾಥಾಗೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ ಕುಮಾರ್, ರಾಜ್ಯದಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು ತಡೆಗಟ್ಟುವ ಉದ್ದೇಶದಿಂದ ಈ ಜನಾಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಒಂದು ವಾರಗಳ ಕಾಲ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಲಿದೆ. ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿಯವರ 150ನೇ ಜಯಂತಿಯನ್ನು ಆಚರಿಸುತ್ತಿರುವುದರ ಪ್ರಯುಕ್ತ ಪ್ಲಾಸ್ಟಿಕ್ ನನ್ನು ನಿಷೇಧ ಮಾಡಲಾಗಿದೆ, ಸಾರ್ವಜನಿಕರೆಲ್ಲರೂ ನಮ್ಮ ಜೊತೆ ಕೈಜೋಡಿಸಿದರೆ ಪ್ಲಾಸ್ಟಿಕ್ ಮುಕ್ತ ಮಾಡಲು ಸಾಧ್ಯವಾಗುತ್ತದೆ, ಅಲ್ಲದೆ ಇದರಿಂದ ಆಗುವಂತಹ ಅನಾಹುತಗಳ ಬಗ್ಗೆ ಎಲ್ಲರಿಗೂ ಅರಿವು ಮೂಡಿಸುವ ಕಾರ್ಯ ಆಗಬೇಕಿದೆ ಎಂದರು.
ಬೈಟ್: ಡಾ. ಕೆ. ರಾಕೇಶ್ ಕುಮಾರ್, ಜಿಲ್ಲಾಧಿಕಾರಿ
ಶಾಸಕ ಜ್ಯೋತಿಗಣೇಶ್ ಮಾತನಾಡಿ, ಗಾಂಧೀಜಿಯವರ 150ನೇ ಜನ್ಮದಿನಾಚರಣೆಯ ಪ್ರಯುಕ್ತ ಪ್ರಧಾನಿ ಮೋದಿಯವರು ಪ್ಲಾಸ್ಟಿಕ್ ನಿಷೇಧ ಜನಾಂದೋಲನ ಕಾರ್ಯಕ್ರಮವನ್ನು ಮಾಡುವಂತೆ ಆದೇಶ ನೀಡಿದ್ದಾರೆ, ಈ ಸಂದರ್ಭದಲ್ಲಿ ಎಲ್ಲಾ ಅಧಿಕಾರಿಗಳು, ಜನಪ್ರತಿನಿಧಿಗಳು ಎಲ್ಲರೂ ಸೇರಿ ಜನಾಂದೋಲನವನ್ನು ಮಾಡುತ್ತಿದ್ದಾರೆ. ಕೆಲ ದಿನಗಳ ಹಿಂದೆ ಸುರಿದಂತಹ ಮಳೆಯಿಂದಾಗಿ ನಗರದ ಎಲ್ಲಾ ಚರಂಡಿಗಳಲ್ಲಿ ಶೇಕಡ 20ರಷ್ಟು ಭಾಗ ಪ್ಲಾಸ್ಟಿಕ್ ಕವರ್ ಗಳಿಂದಲೇ ತುಂಬಿಕೊಂಡಿದ್ದು, ಇದರಿಂದಲೇ ತಿಳಿಯುತ್ತದೆ ತುಮಕೂರು ನಗರ ಎಷ್ಟು ಕಲುಷಿತಗೊಂಡಿದೆ ಎಂದು ಹಾಗಾಗಿ ನಗರವನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಎಲ್ಲರೂ ಸಹಕರಿಸಬೇಕೆಂದು ತಿಳಿಸಿದರು.
ಬೈಟ್: ಜ್ಯೋತಿಗಣೇಶ್, ಶಾಸಕ.


Conclusion:ವರದಿ
ಸುಧಾಕರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.