ತುಮಕೂರು: ಜೀವನದಲ್ಲಿ ಜಿಗುಪ್ಸೆಗೊಂಡ ಪೊಲೀಸ್ ಕಾನ್ಸ್ಟೇಬಲ್ವೊಬ್ಬರು ಚಲಿಸುತ್ತಿದ್ದ ರೈಲಿಗೆ ಅಡ್ಡ ಮಲಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಕುಣಿಗಲ್ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಯಲ್ಲಾಲಿಂಗ ಮೇಟಿ (29) ಎಂದು ಗುರುತಿಸಲಾಗಿದೆ. ಕುಣಿಗಲ್ ರೈಲ್ವೆ ನಿಲ್ದಾಣದ ಬಳಿ ಘಟನೆ ಸಂಭವಿಸಿದ್ದು, ಯಲ್ಲಾಲಿಂಗ ವಿಜಯಪುರ ಮೂಲದವರಾಗಿದ್ದಾರೆ. ಈ ಕುರಿತಂತೆ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.