ETV Bharat / state

ತುರುವೇಕೆರೆಯಲ್ಲಿ ಶಾಸಕ ಮಸಾಲೆ ಜಯರಾಮ್ ವಿರುದ್ಧ ಪ್ರತಿಭಟನೆ

author img

By

Published : Jun 24, 2020, 11:05 AM IST

ತುರುವೇಕೆರೆ ತಾಲೂಕು ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದ ಗಲಾಟೆ ಪ್ರಕರಣದಲ್ಲಿ ಶಾಸಕ ಮಸಾಲೆ ಜಯರಾಮ್​ ಹಲ್ಲೆಕೋರರಿಗೆ ಬೆಂಬಲ ನೀಡಿದ್ದಾರೆ ಎಂದು ಆರೋಪಿಸಿ ತುರುವೇಕೆರೆಯಲ್ಲಿ ಪ್ರತಿಭಟನೆ ನಡೆಸಲಾಗಿದೆ.

jayaram
ಶಾಸಕ ಮಸಾಲೆ ಜಯರಾಮ್ ವಿರುದ್ಧ ಪ್ರತಿಭಟನೆ

ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕಿನ ಮುನಿಯೂರು ಗ್ರಾಮದಲ್ಲಿ ನಿವೇಶನ ವಿವಾದಕ್ಕೆ ಸಂಬಂಧಿಸಿದಂತೆ ದೊಡ್ಡ ಗಲಾಟೆ ನಡೆದಿತ್ತು. ಈ ಸಂಬಂಧ ಹಲ್ಲೆಕೋರರ ಪರವಾಗಿ ಶಾಸಕ ಮಸಾಲೆ ಜಯರಾಮ್ ನಿಂತಿದ್ದು ಅವರನ್ನು ರಕ್ಷಿಸಲು ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ತುರುವೇಕೆರೆಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಶಾಸಕ ಮಸಾಲೆ ಜಯರಾಮ್ ವಿರುದ್ಧ ಪ್ರತಿಭಟನೆ

ಮಾಜಿ ಶಾಸಕ ಎಂ.ಟಿ. ಕೃಷ್ಣಪ್ಪ ನೇತೃತ್ವದಲ್ಲಿ ತುರುವೇಕೆರೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಜನರು ತುರುವೇಕೆರೆ ಪೊಲೀಸ್ ಠಾಣೆ ಎದುರು ಆಕ್ರೋಶ ವ್ಯಕ್ತಪಡಿಸಿದರು. ಶಾಸಕ ಮಸಾಲೆ ಜಯರಾಮ್ ಗೂಂಡಗಳಿಗೆ ಬೆಂಬಲ ನೀಡುತ್ತಿದ್ದಾರೆ. ಹಲ್ಲೆಕೋರರ ವಿರುದ್ಧ ಎಫ್ಐಆರ್ ದಾಖಲಿಸಬೇಕು ಮತ್ತು ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕಿನ ಮುನಿಯೂರು ಗ್ರಾಮದಲ್ಲಿ ನಿವೇಶನ ವಿವಾದಕ್ಕೆ ಸಂಬಂಧಿಸಿದಂತೆ ದೊಡ್ಡ ಗಲಾಟೆ ನಡೆದಿತ್ತು. ಈ ಸಂಬಂಧ ಹಲ್ಲೆಕೋರರ ಪರವಾಗಿ ಶಾಸಕ ಮಸಾಲೆ ಜಯರಾಮ್ ನಿಂತಿದ್ದು ಅವರನ್ನು ರಕ್ಷಿಸಲು ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ತುರುವೇಕೆರೆಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಶಾಸಕ ಮಸಾಲೆ ಜಯರಾಮ್ ವಿರುದ್ಧ ಪ್ರತಿಭಟನೆ

ಮಾಜಿ ಶಾಸಕ ಎಂ.ಟಿ. ಕೃಷ್ಣಪ್ಪ ನೇತೃತ್ವದಲ್ಲಿ ತುರುವೇಕೆರೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಜನರು ತುರುವೇಕೆರೆ ಪೊಲೀಸ್ ಠಾಣೆ ಎದುರು ಆಕ್ರೋಶ ವ್ಯಕ್ತಪಡಿಸಿದರು. ಶಾಸಕ ಮಸಾಲೆ ಜಯರಾಮ್ ಗೂಂಡಗಳಿಗೆ ಬೆಂಬಲ ನೀಡುತ್ತಿದ್ದಾರೆ. ಹಲ್ಲೆಕೋರರ ವಿರುದ್ಧ ಎಫ್ಐಆರ್ ದಾಖಲಿಸಬೇಕು ಮತ್ತು ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.