ETV Bharat / state

ಶಿರಾ ನಿಲ್ದಾಣಕ್ಕೆ ಪ್ರತಿ ಬಸ್​​ ಸಂಚರಿಸಬೇಕು ಎಂದು ಆಗ್ರಹಿಸಿ ರಸ್ತೆ ತಡೆ: ಪ್ರತಿಭಟನೆ

ಶಿರಾ ಬಸ್​ ನಿಲ್ದಾಣಕ್ಕೆ ಬರಲು ಬಸ್​ ಚಾಲಕರು ಹಿಂದೇಟು ಹಾಕಿದ್ದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ಬಸ್ ಸಂಚಾರಕ್ಕೆ ಅಡ್ಡಿಪಡಿಸಿ ಪ್ರತಿಭಟನೆ ನಡೆಸಿದರು. ಇದರಿಂದ ಬೈಪಾಸ್​ ರಸ್ತೆಯಲ್ಲಿ ಕೆಲಹೊತ್ತು ಸಂಚಾರ ದಟ್ಟಣೆ ಉಂಟಾಯಿತು.

author img

By

Published : Jun 10, 2019, 12:06 PM IST

ರಸ್ತೆ ತಡೆ ನಡೆಸಿ ಪ್ರತಿಭಟನೆ

ತುಮಕೂರು: ರಾತ್ರಿ ವೇಳೆ, ತುಮಕೂರಿನ ಶಿರಾ ತಾಲೂಕಿನ ಬಸ್​ ನಿಲ್ದಾಣಕ್ಕೆ ಬಸ್​ ಬಿಡುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಬೈಪಾಸ್​ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಶಿರಾ ಬಸ್​ ನಿಲ್ದಾಣಕ್ಕೆ ಬಸ್​ಗಳು ಸಂಚರಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ

ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕೆಲವು ಸಂಘಟನೆಗಳ ಮುಖಂಡರು ಬೈಪಾಸ್​ನಲ್ಲಿ ಸಾಗುತ್ತಿದ್ದ ಬಸ್​ಗಳನ್ನು ಅಡ್ಡಗಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದರು. ಬೆಂಗಳೂರಿನಿಂದ ಹೊರಟ ಬಸ್​ಗಳಲ್ಲಿ ಪ್ರಯಾಣಿಸಿದ ಸಂಘಟನೆಗಳ ಕಾರ್ಯಕರ್ತರು ಶಿರಾ ನಗರಕ್ಕೆ ಹೋಗಲು ನಿರಾಕರಿಸಿದ ಚಾಲಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬಸ್​ ಸಂಚಾರಕ್ಕೆ ಅಡ್ಡಿಪಡಿಸಿದರು.

ಈ ಮೊದಲು ರಾತ್ರಿ ವೇಳೆ, ಬಸ್​ ನಿಲ್ದಾಣಕ್ಕೆ ಬರುತ್ತಿದ್ದ ಬಸ್​​ಗಳು ಏಕಾಏಕಿ ಸಂಚಾರ ನಿಲ್ಲಿಸಿದ್ದು, ಬಸ್​ ನಿಲ್ದಾಣಕ್ಕೆ ಬಾರದೇ ಬೈಪಾಸ್​ನಲ್ಲಿ ಸಾಗುತ್ತಿವೆ. ಇದರಿಂದ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಿಷಯ ತಿಳಿದು ಪ್ರತಿಭಟನಾ ಸ್ಥಳಕ್ಕೆ ಬಂದ ಶಿರಾ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.

ತುಮಕೂರು: ರಾತ್ರಿ ವೇಳೆ, ತುಮಕೂರಿನ ಶಿರಾ ತಾಲೂಕಿನ ಬಸ್​ ನಿಲ್ದಾಣಕ್ಕೆ ಬಸ್​ ಬಿಡುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಬೈಪಾಸ್​ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಶಿರಾ ಬಸ್​ ನಿಲ್ದಾಣಕ್ಕೆ ಬಸ್​ಗಳು ಸಂಚರಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ

ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕೆಲವು ಸಂಘಟನೆಗಳ ಮುಖಂಡರು ಬೈಪಾಸ್​ನಲ್ಲಿ ಸಾಗುತ್ತಿದ್ದ ಬಸ್​ಗಳನ್ನು ಅಡ್ಡಗಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದರು. ಬೆಂಗಳೂರಿನಿಂದ ಹೊರಟ ಬಸ್​ಗಳಲ್ಲಿ ಪ್ರಯಾಣಿಸಿದ ಸಂಘಟನೆಗಳ ಕಾರ್ಯಕರ್ತರು ಶಿರಾ ನಗರಕ್ಕೆ ಹೋಗಲು ನಿರಾಕರಿಸಿದ ಚಾಲಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬಸ್​ ಸಂಚಾರಕ್ಕೆ ಅಡ್ಡಿಪಡಿಸಿದರು.

ಈ ಮೊದಲು ರಾತ್ರಿ ವೇಳೆ, ಬಸ್​ ನಿಲ್ದಾಣಕ್ಕೆ ಬರುತ್ತಿದ್ದ ಬಸ್​​ಗಳು ಏಕಾಏಕಿ ಸಂಚಾರ ನಿಲ್ಲಿಸಿದ್ದು, ಬಸ್​ ನಿಲ್ದಾಣಕ್ಕೆ ಬಾರದೇ ಬೈಪಾಸ್​ನಲ್ಲಿ ಸಾಗುತ್ತಿವೆ. ಇದರಿಂದ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಿಷಯ ತಿಳಿದು ಪ್ರತಿಭಟನಾ ಸ್ಥಳಕ್ಕೆ ಬಂದ ಶಿರಾ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.

Intro:ರಾತ್ರಿ ಶಿರಾ ನಿಲ್ದಾಣಕ್ಕೆ ಬಸ್ ಬರುವಂತೆ ಆಗ್ರಹಿಸಿ ಪ್ರತಿಭಟನೆ.....

ತುಮಕೂರು
ರಾತ್ರಿ ವೇಳೆ ಶಿರಾ ಬಸ್ ನಿಲ್ದಾಣಕ್ಕೆ ಬಾರದೆ ಬೈಪಾಸ್ ನಲ್ಲಿ ಸಾಗುತ್ತಿದ್ದ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕೆಲ ಸಂಘಟನೆ ಕಾರ್ಯಕರ್ತರು ನಿನ್ನೆ ರಾತ್ರಿ ಬಸ್ಸುಗಳನ್ನು ತಡೆದು ಪ್ರತಿಭಟಿಸಿದ ಘಟನೆ ನಡೆದಿದೆ.
ಬೈಪಾಸ್ ನಲ್ಲಿ ಬಸ್ ಗಳನ್ನು ಅಡ್ಡಗಟ್ಟಿ ಆಕ್ರೋಶ ವ್ಯಕ್ತಪಡಿಸಿದರು.
ಕರವೇ ಹಾಗೂ ಕೆಲ ಸಂಘಟನೆಗಳ ಮುಖಂಡರು ಭಾಗಿಯಾಗಿದ್ದರು.
ಬೆಂಗಳೂರಿನಿಂದ ಹೊರಟ ಬಸ್ಗಳಲ್ಲಿ ಪ್ರಯಾಣಿಸಿದ ಸಂಘಟನೆ ಕಾರ್ಯಕರ್ತರು
ಶಿರಾ ನಗರಕ್ಕೆ ಹೋಗಲು ನಿರಾಕರಿಸಿದ ಚಾಲಕರ ವಿರುದ್ಧ ಬೈಪಾಸ್ ನಲ್ಲಿ ಬಸ್ಕರ ಸಂಚಾರಕ್ಕೆ ಅಡ್ಡಿ ಪಡಿಸಿದರು.ವಿಷಯ ತಿಳಿದು ಸ್ಥಳಕ್ಕೆ ಬಂದ ಶಿರಾ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದರು.Body:TumakuruConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.