ETV Bharat / state

ಪಾಲಿಕೆ ಆಯುಕ್ತ ಭೂಬಾಲನ್‌ ಬೇಕೇಬೇಕು.. ತುಮಕೂರಿನಲ್ಲಿ ವಿವಿಧ ಸಂಘಟನೆಗಳ ಪ್ರತಿಭಟನೆ

author img

By

Published : Dec 17, 2019, 11:29 PM IST

ಭೂಬಾಲನ್ ಚುನಾವಣಾ ಅಧಿಕಾರಿಯಾಗಿ ವರ್ಗಾವಣೆಗೊಂಡಿದ್ದರು. ಚುನಾವಣೆ ನಡೆದ ನಂತರ ನಗರದಕ್ಕೆ ಹಿಂದಿರುಗಲಿದ್ದಾರೆ ಎಂದು ಭರವಸೆ ನೀಡಿದ್ದರು. ಆದರೆ, ಅದು ಹುಸಿಯಾಗಿದ್ದು, ಶೀಘ್ರವೇ ಅವರನ್ನು ಜಿಲ್ಲೆಗೆ ವರ್ಗಾವಣೆ ಮಾಡಬೇಕು ಎಂದು ತುಮಕೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.

dddfdf
ಆಯುಕ್ತ ಭೂಬಾಲನ್​ ಬೇಕೆ ಬೇಕು, ತುಮಕೂರಿನಲ್ಲಿ ಪ್ರತಿಭಟನೆ

ತುಮಕೂರು:ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ಟಿ.ಭೂಬಾಲನ್​ರನ್ನು ಮತ್ತೆ ಅದೇ ಜಾಗಕ್ಕೆ ಮರು ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿ ವಿವಿಧ ಸಂಘ-ಸಂಸ್ಥೆಗಳಿಂದ ಪ್ರತಿಭಟನೆ ನಡೆಸಲಾಯಿತು.

ಆಯುಕ್ತ ಭೂಬಾಲನ್​ ಬೇಕೇಬೇಕು.. ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ನಗರದ ಟೌನ್ ಹಾಲ್ ವೃತ್ತದಲ್ಲಿ ಜನಪರ ಹೋರಾಟಗಾರರು, ರೈತ ಸಂಘಟನೆಗಳು ದಕ್ಷ ಅಧಿಕಾರಿ ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ಟಿ.ಭೂಬಾಲನ್ ಮರು ವರ್ಗಾವಣೆ ಮಾಡುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಸಾಮಾಜಿಕ ಹೋರಾಟಗಾರ ಬಿ.ಉಮೇಶ್, ಜನಪರ ಆಡಳಿತ ನಡೆಸುತ್ತಿದ್ದ ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ಭೂಬಾಲನ್​ರನ್ನು ವರ್ಗಾವಣೆಗೊಳಿಸಲಾಗಿತ್ತು. ಇದನ್ನು ಖಂಡಿಸಿ ಈಗಾಗಲೇ ಅನೇಕ ಬಾರಿ ಪ್ರತಿಭಟನೆ ನಡೆಸಲಾಗಿದೆ. ಆಗ ಸ್ಥಳೀಯ ಸಂಸದರು ಹಾಗೂ ಶಾಸಕರು ಭೂಬಾಲನ್​ರನ್ನು ವಾಪಸ್ ಕರೆಸಿಕೊಳ್ಳುತ್ತೇವೆ ಎಂದು ಹೇಳಿ ಸುಮ್ಮನಾಗಿದ್ದಾರೆ. ಹೀಗಾಗಿ ಪ್ರತಿಭಟನೆ ನಡೆಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ನಗರಾಭಿವೃದ್ಧಿ ಮತ್ತು ಸ್ಮಾರ್ಟ್ ಸಿಟಿ ಅಭಿವೃದ್ಧಿಯ ಕಾಮಗಾರಿಗಳಿಗೆ ಅರ್ಥ ಬರಬೇಕಾದರೆ ಅವರು ನಗರಕ್ಕೆ ವರ್ಗಾವಣೆಯಾಗಿ ಬರಬೇಕಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಜೆ ಸಿ ಮಧುಸ್ವಾಮಿ ಚಿಕ್ಕನಾಯಕನಹಳ್ಳಿ ತಾಲೂಕಿಗೆ ಮಾತ್ರ ಸೀಮಿತವಾಗದೆ, ಜಿಲ್ಲಾ ಕೇಂದ್ರದಲ್ಲಿ ಇದ್ದುಕೊಂಡು ಕೆಲಸ ಮಾಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ತುಮಕೂರು:ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ಟಿ.ಭೂಬಾಲನ್​ರನ್ನು ಮತ್ತೆ ಅದೇ ಜಾಗಕ್ಕೆ ಮರು ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿ ವಿವಿಧ ಸಂಘ-ಸಂಸ್ಥೆಗಳಿಂದ ಪ್ರತಿಭಟನೆ ನಡೆಸಲಾಯಿತು.

ಆಯುಕ್ತ ಭೂಬಾಲನ್​ ಬೇಕೇಬೇಕು.. ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ನಗರದ ಟೌನ್ ಹಾಲ್ ವೃತ್ತದಲ್ಲಿ ಜನಪರ ಹೋರಾಟಗಾರರು, ರೈತ ಸಂಘಟನೆಗಳು ದಕ್ಷ ಅಧಿಕಾರಿ ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ಟಿ.ಭೂಬಾಲನ್ ಮರು ವರ್ಗಾವಣೆ ಮಾಡುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಸಾಮಾಜಿಕ ಹೋರಾಟಗಾರ ಬಿ.ಉಮೇಶ್, ಜನಪರ ಆಡಳಿತ ನಡೆಸುತ್ತಿದ್ದ ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ಭೂಬಾಲನ್​ರನ್ನು ವರ್ಗಾವಣೆಗೊಳಿಸಲಾಗಿತ್ತು. ಇದನ್ನು ಖಂಡಿಸಿ ಈಗಾಗಲೇ ಅನೇಕ ಬಾರಿ ಪ್ರತಿಭಟನೆ ನಡೆಸಲಾಗಿದೆ. ಆಗ ಸ್ಥಳೀಯ ಸಂಸದರು ಹಾಗೂ ಶಾಸಕರು ಭೂಬಾಲನ್​ರನ್ನು ವಾಪಸ್ ಕರೆಸಿಕೊಳ್ಳುತ್ತೇವೆ ಎಂದು ಹೇಳಿ ಸುಮ್ಮನಾಗಿದ್ದಾರೆ. ಹೀಗಾಗಿ ಪ್ರತಿಭಟನೆ ನಡೆಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ನಗರಾಭಿವೃದ್ಧಿ ಮತ್ತು ಸ್ಮಾರ್ಟ್ ಸಿಟಿ ಅಭಿವೃದ್ಧಿಯ ಕಾಮಗಾರಿಗಳಿಗೆ ಅರ್ಥ ಬರಬೇಕಾದರೆ ಅವರು ನಗರಕ್ಕೆ ವರ್ಗಾವಣೆಯಾಗಿ ಬರಬೇಕಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಜೆ ಸಿ ಮಧುಸ್ವಾಮಿ ಚಿಕ್ಕನಾಯಕನಹಳ್ಳಿ ತಾಲೂಕಿಗೆ ಮಾತ್ರ ಸೀಮಿತವಾಗದೆ, ಜಿಲ್ಲಾ ಕೇಂದ್ರದಲ್ಲಿ ಇದ್ದುಕೊಂಡು ಕೆಲಸ ಮಾಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

Intro:ತುಮಕೂರು: ಹಲವಾರು ಸಂಘ ಸಂಸ್ಥೆಗಳು, ಸಂಘಟನೆಗಳು ಜೊತೆಯಾಗಿ ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ಟಿ. ಭೂಬಾಲನ್ ಅವರನ್ನು ತುಮಕೂರು ಮಹಾನಗರ ಪಾಲಿಕೆಯ ಆಯುಕ್ತರನ್ನಾಗಿ ಮರು ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.


Body:ನಗರದ ಟೌನ್ ಹಾಲ್ ವೃತ್ತದಲ್ಲಿ ಜನಪರ ಹೋರಾಟಗಾರರು, ರೈತ ಸಂಘಟನೆಗಳು ದಕ್ಷ ಆಡಳಿತ ಅಧಿಕಾರಿ ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ಟಿ. ಭೂಬಾಲನ್ ಅವರನ್ನು ಮರು ವರ್ಗಾವಣೆ ಮಾಡುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಸಾಮಾಜಿಕ ಹೋರಾಟಗಾರ ಬಿ. ಉಮೇಶ್, ಜನಪರ ಆಡಳಿತ ನಡೆಸುತ್ತಿದ್ದ ಮಹಾನಗರಪಾಲಿಕೆಯ ಆಯುಕ್ತರಾಗಿದ್ದ ಭೂಬಾಲನ್ ಅವರನ್ನು ವರ್ಗಾವಣೆ ಗೊಳಿಸಲಾಗಿತ್ತು, ಇದನ್ನು ಖಂಡಿಸಿ ಈಗಾಗಲೇ ಅನೇಕ ಬಾರಿ ಪ್ರತಿಭಟನೆ ನಡೆಸಲಾಗಿತ್ತು. ಆಗ ಸ್ಥಳೀಯ ಸಂಸದರು ಹಾಗೂ ಶಾಸಕರು ಭೂಬಾಲನ್ ಅವರನ್ನು ವಾಪಸ್ ಕರೆಸಿಕೊಳ್ಳುತ್ತೇವೆ ಎಂದು ಹೇಳಿದ್ದರು, ಆದರೆ ಇಲ್ಲಿಯವರೆಗೂ ಅವರು ಬಂದಿಲ್ಲ ಹೀಗಾಗಿ ಪ್ರತಿಭಟನೆ ನಡೆಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ಜಿಲ್ಲಾಡಳಿತ ಭೂಬಾಲನ್ ಅವರು ಚುನಾವಣಾ ಅಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ, ಚುನಾವಣೆ ನಡೆದ ನಂತರ ತುಮಕೂರಿಗೆ ಹಿಂದಿರುಗಲಿದ್ದಾರೆ ಎಂದು ಭರವಸೆ ನೀಡಿದರು, ಆದರೆ ಇಲ್ಲಿಯವರೆಗೂ ಅವರು ಹಿಂದಿರುಗಿಲ್ಲ. ಹೀಗಾಗಿ ಪ್ರತಿಭಟನೆ ನಡೆಸಲಾಗುತ್ತಿದೆ ನಗರಾಭಿವೃದ್ಧಿ ಮತ್ತು ಸ್ಮಾರ್ಟ್ ಸಿಟಿ ಅಭಿವೃದ್ಧಿಯ ಕಾಮಗಾರಿಗಳಿಗೆ ಅರ್ಥ ಬರಬೇಕಾದರೆ ಅವರು ತುಮಕೂರಿಗೆ ವರ್ಗಾವಣೆಯಾಗಿ ಬರಬೇಕಿದೆ. ಇನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ ಮಧುಸ್ವಾಮಿ ಅವರು ಚಿಕ್ಕನಾಯಕನಹಳ್ಳಿ ತಾಲೂಕಿಗೆ ಮಾತ್ರ ಸೀಮಿತವಾಗದೆ, ಇಡೀ ಜಿಲ್ಲೆಯನ್ನು ಪ್ರತಿನಿಧಿಸುವ ಮೂಲಕ ಜಿಲ್ಲಾ ಕೇಂದ್ರದಲ್ಲಿ ಇದ್ದುಕೊಂಡು ಎಲ್ಲಾ ಕೆಲಸ ಕಾರ್ಯಗಳನ್ನು ಮಾಡಿಸಬೇಕು ಎಂದು ಒತ್ತಾಯಿಸಿದರು.
ಬೈಟ್: ಬಿ.ಉಮೇಶ್, ಸಾಮಾಜಿಕ ಹೋರಾಟಗಾರ.


Conclusion:ವರದಿ
ಸುಧಾಕರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.