ತುಮಕೂರು: ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಿರುವ ಕೋವಿಡ್-19 ಆರ್ ಟಿ-ಟಿಸಿಆರ್ ಟೆಸ್ಟಿಂಗ್ ಮತ್ತು ಸೂಕ್ಷ್ಮಾಣು ಜೀವಶಾಸ್ತ್ರ ಪ್ರಯೋಗಾಲಯವನ್ನು ಸಚಿವ ಆರ್.ಅಶೋಕ್ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ಕೋವಿಡ್-19ಗೆ ಸಂಬಂಧಿಸಿದಂತಹ ಪ್ರಯೋಗಾಲಯವನ್ನು ಇಂದು ಬಿಡುಗಡೆಗೊಳಿಸಲಾಗಿದೆ. ಇದರಿಂದ ರೋಗಿಗಳನ್ನು ಬೇಗ ಗುರುತಿಸಿ, ಚಿಕಿತ್ಸೆ ನೀಡಿ ಗುಣಮುಖರಾಗಲು ಸಹಕಾರಿಯಾಗುತ್ತದೆ.
ಅಷ್ಟೇ ಅಲ್ಲದೆ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್-19 ಸೆಂಟರ್ಗಳನ್ನು ತೆರೆಯಲು ಸರ್ಕಾರ ಮುಂದಾಗಿದೆ. ಇದರಿಂದ ಹೆಚ್ಚಿನ ಜನಸಂಖ್ಯೆಯ ಪ್ರಾಣ ಉಳಿಯುವ ಕಾರ್ಯ ಆಗಲಿದೆ ಎಂದು ಅಭಿಪ್ರಾಯ ಪಟ್ಟರು.