ETV Bharat / state

ಬಂದವರಿಗೆಲ್ಲ ಪೌರತ್ವ ಕೊಡಲು ಭಾರತ ತೋಟದಪ್ಪನ ಛತ್ರವಲ್ಲ.. ಸಚಿವ ಆರ್​.ಅಶೋಕ್ - ತುಮಕೂರಿನಲ್ಲಿ ಸಿಎಎ ಕಾಯ್ದೆ ಕುರಿತು ಜನ ಜಾಗೃತಿ

ಪಾಕಿಸ್ತಾನ,ಆಫ್ಘಾನಿಸ್ತಾನದಿಂದ ಅಕ್ರಮವಾಗಿ ನುಸುಳಿ ಬಂದವರಿಗೆಲ್ಲ ದೇಶದ ಪೌರತ್ವ ಕೊಡಲು ಭಾರತ ತೋಟದಪ್ಪನ ಛತ್ರವಲ್ಲ. ಈ ದೇಶ ಭಾರತೀಯರಿಗೆ ಸೇರಿದ್ದಾಗಿದೆ ಎಂದು ಸಚಿವ ಆರ್​.ಅಶೋಕ್ ಹೇಳಿದ್ದಾರೆ.

awareness campaign on CAA in Tumkur,ಸಿಎಎ ಕಾಯ್ದೆ ಕುರಿತು ಜನ ಜಾಗೃತಿ
ಆರ್.ಅಶೋಕ್
author img

By

Published : Jan 5, 2020, 3:49 PM IST

ತುಮಕೂರು: ಭಾರತ ಯಾವುದೇ ಕಾರಣಕ್ಕೂ ಪಾಕಿಸ್ತಾನ ಅಥವಾ ಆಫ್ಘಾನಿಸ್ತಾನಕ್ಕೆ ಸೇರಿದ್ದಲ್ಲ. ಈ ದೇಶ ಭಾರತೀಯರದು. ಅಲ್ಲದೆ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ. ಬದಲಾಗಿ ಅದನ್ನು ಇನ್ನಷ್ಟು ಗಟ್ಟಿಗೊಳಿಸುತ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಕಂದಾಯ ಸಚಿವ ಆರ್.ಅಶೋಕ್..

ತುಮಕೂರಿನ ವಿವಿಧ ಬಡಾವಣೆಗಳಲ್ಲಿ ಕಾಲ್ನಡಿಗೆಯ ಮೂಲಕ ಮನೆಮನೆಗೆ ತೆರಳಿ ಸಿಎಎ ಕಾಯ್ದೆ ಕುರಿತು ಜನ ಜಾಗೃತಿ ಮೂಡಿಸಿದರು. ಈ ವೇಳೆ ಅಶೋಕನಗರದ ಆಜಾದ್ ಉದ್ಯಾನವನದಲ್ಲಿ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಮೆರಿಕ, ಚೀನಾ, ಜಪಾನ್ ಸೇರಿ ಮುಂದುವರಿದ ದೇಶಗಳ ಸ್ಥಾನಕ್ಕೆ ಭಾರತವನ್ನು ಕೊಂಡೊಯ್ಯುತ್ತೇವೆ. ಪೌರತ್ವ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ ಎಂದರು.

ಪ್ರಪಂಚದ ಮೊದಲ ಸ್ಥಾನಕ್ಕೆ ಭಾರತ ದೇಶವನ್ನು ಕೊಂಡೊಯ್ಯುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ. ಆ ನಿಟ್ಟಿನಲ್ಲಿ ನಾವೆಲ್ಲರೂ ಕಾರ್ಯನಿರ್ವಹಿಸಬೇಕಿದೆ. ಪಾಕಿಸ್ತಾನ, ಆಫ್ಘಾನಿಸ್ತಾನದಿಂದ ಅಕ್ರಮವಾಗಿ ನುಸುಳಿ ಬಂದವರಿಗೆಲ್ಲ ದೇಶದ ಪೌರತ್ವ ಕೊಡಲು ಭಾರತ ತೋಟದಪ್ಪನ ಛತ್ರವಲ್. ಈ ದೇಶ ಭಾರತೀಯರಿಗೆ ಸೇರಿದ್ದಾಗಿದೆ ಎಂದರು.

ಕಾಂಗ್ರೆಸ್ ಮತ್ತು ಕಮ್ಯುನಿಸ್ಟ್ ಪಕ್ಷಗಳು ಸಿಎಎ ಕಾಯ್ದೆಯಲ್ಲಿ ಏನಿದೆ ಎಂಬುದರ ತಿಳುವಳಿಕೆ ಇಲ್ಲದೆ ಮಾತನಾಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ?. ಇದು ಹೀಗೆ ಮುಂದುವರೆದರೆ ಮುಂದಿನ ದಿನಗಳಲ್ಲಿ ಭಾರತದಿಂದ ಕಾಂಗ್ರೆಸ್ ಪಕ್ಷ ಮರೆಯಾಗಲಿದೆ ಅಂತಾ ಅಶೋಕ್‌ ಹೇಳಿದ್ದಾರೆ.

ತುಮಕೂರು: ಭಾರತ ಯಾವುದೇ ಕಾರಣಕ್ಕೂ ಪಾಕಿಸ್ತಾನ ಅಥವಾ ಆಫ್ಘಾನಿಸ್ತಾನಕ್ಕೆ ಸೇರಿದ್ದಲ್ಲ. ಈ ದೇಶ ಭಾರತೀಯರದು. ಅಲ್ಲದೆ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ. ಬದಲಾಗಿ ಅದನ್ನು ಇನ್ನಷ್ಟು ಗಟ್ಟಿಗೊಳಿಸುತ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಕಂದಾಯ ಸಚಿವ ಆರ್.ಅಶೋಕ್..

ತುಮಕೂರಿನ ವಿವಿಧ ಬಡಾವಣೆಗಳಲ್ಲಿ ಕಾಲ್ನಡಿಗೆಯ ಮೂಲಕ ಮನೆಮನೆಗೆ ತೆರಳಿ ಸಿಎಎ ಕಾಯ್ದೆ ಕುರಿತು ಜನ ಜಾಗೃತಿ ಮೂಡಿಸಿದರು. ಈ ವೇಳೆ ಅಶೋಕನಗರದ ಆಜಾದ್ ಉದ್ಯಾನವನದಲ್ಲಿ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಮೆರಿಕ, ಚೀನಾ, ಜಪಾನ್ ಸೇರಿ ಮುಂದುವರಿದ ದೇಶಗಳ ಸ್ಥಾನಕ್ಕೆ ಭಾರತವನ್ನು ಕೊಂಡೊಯ್ಯುತ್ತೇವೆ. ಪೌರತ್ವ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ ಎಂದರು.

ಪ್ರಪಂಚದ ಮೊದಲ ಸ್ಥಾನಕ್ಕೆ ಭಾರತ ದೇಶವನ್ನು ಕೊಂಡೊಯ್ಯುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ. ಆ ನಿಟ್ಟಿನಲ್ಲಿ ನಾವೆಲ್ಲರೂ ಕಾರ್ಯನಿರ್ವಹಿಸಬೇಕಿದೆ. ಪಾಕಿಸ್ತಾನ, ಆಫ್ಘಾನಿಸ್ತಾನದಿಂದ ಅಕ್ರಮವಾಗಿ ನುಸುಳಿ ಬಂದವರಿಗೆಲ್ಲ ದೇಶದ ಪೌರತ್ವ ಕೊಡಲು ಭಾರತ ತೋಟದಪ್ಪನ ಛತ್ರವಲ್. ಈ ದೇಶ ಭಾರತೀಯರಿಗೆ ಸೇರಿದ್ದಾಗಿದೆ ಎಂದರು.

ಕಾಂಗ್ರೆಸ್ ಮತ್ತು ಕಮ್ಯುನಿಸ್ಟ್ ಪಕ್ಷಗಳು ಸಿಎಎ ಕಾಯ್ದೆಯಲ್ಲಿ ಏನಿದೆ ಎಂಬುದರ ತಿಳುವಳಿಕೆ ಇಲ್ಲದೆ ಮಾತನಾಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ?. ಇದು ಹೀಗೆ ಮುಂದುವರೆದರೆ ಮುಂದಿನ ದಿನಗಳಲ್ಲಿ ಭಾರತದಿಂದ ಕಾಂಗ್ರೆಸ್ ಪಕ್ಷ ಮರೆಯಾಗಲಿದೆ ಅಂತಾ ಅಶೋಕ್‌ ಹೇಳಿದ್ದಾರೆ.

Intro:ತುಮಕೂರು: ಭಾರತ ಯಾವುದೇ ಕಾರಣಕ್ಕೂ ಪಾಕಿಸ್ತಾನ ಅಥವಾ ಆಫ್ಘಾನಿಸ್ತಾನಕ್ಕೆ ಸೇರಿದ್ದಲ್ಲ ಇದು ಭಾರತೀಯರದ್ದು ಅಲ್ಲದೆ ಪೌರತ್ವ ತಿದ್ದುಪಡಿ ಕಾಯಿದೆಯನ್ನು ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ ಬದಲಾಗಿ ಅದನ್ನು ಇನ್ನಷ್ಟು ಗಟ್ಟಿಗೊಳಿಸುತ್ತವೆ ಎಂದು ಕಂದಾಯ ಖಾತೆ ಸಚಿವ ಆರ್ ಅಶೋಕ್ ತಿಳಿಸಿದರು.



Body:ತುಮಕೂರಿನ ವಿವಿಧ ಬಡಾವಣೆಗಳಲ್ಲಿ ಕಾಲ್ನಡಿಗೆಯ ಮೂಲಕ ಮನೆಮನೆಗೆ ತೆರಳಿ ಸಿಎಎ ಕಾಯಿದೆ ಕುರಿತು ಜನ ಜಾಗೃತಿ ಮೂಡಿಸಿದರು.

ಈ ವೇಳೆ ಅಶೋಕ ನಗರದ ಆಜಾದ್ ಉದ್ಯಾನವನದಲ್ಲಿ ಆಯೋಜಿಸಲಾಗಿದ್ದ, ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಅಮೆರಿಕಾ, ಚೀನಾ, ಜಪಾನ್ ಸೇರಿದಂತೆ ಮುಂದುವರಿದ ದೇಶಗಳ ಸ್ಥಾನಕ್ಕೆ ಭಾರತವನ್ನು ಕೊಂಡೊಯ್ಯುತ್ತೇವೆ. ಪೌರತ್ವ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ ಎಂದರು.

ಪ್ರಪಂಚದ ಮೊದಲ ಸ್ಥಾನಕ್ಕೆ ಭಾರತ ದೇಶವನ್ನು ಕೊಂಡೊಯ್ಯುವ ಜವಾಬ್ದಾರಿ ನಮ್ಮೆಲ್ಲರದ್ದು, ಆ ನಿಟ್ಟಿನಲ್ಲಿ ನಾವೆಲ್ಲರೂ ಕಾರ್ಯನಿರ್ವಹಿಸಬೇಕಿದೆ. ಪಾಕಿಸ್ತಾನ, ಅಫ್ಘಾನಿಸ್ತಾನ ದಿಂದ ಅಕ್ರಮವಾಗಿ ನುಸುಳಿ ಬಂದವರಿಗೆಲ್ಲ ಭಾರತದ ಪೌರತ್ವ ಕೊಡಲು ಭಾರತ ತೋಟದಪ್ಪನ ಛತ್ರವಲ್ಲ, ಇದು ಭಾರತೀಯರಿಗೆ ಸೇರಿದ್ದು ಎಂದರು.

ಕಾಂಗ್ರೆಸ್ ಪಕ್ಷ ಮತ್ತು ಕಮ್ಯುನಿಸ್ಟ್ ಪಕ್ಷಗಳು ಸಿಎಎ ಕಾಯಿದೆಯಲ್ಲಿ ಏನಿದೆ ಎಂಬುದನ್ನು ಓದದೇ, ಕಾಮನ್ ಸೆನ್ಸ್ ಇಲ್ಲದೆ, ತಿಳುವಳಿಕೆಯಿಲ್ಲದೆ ಮಾತನಾಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ. ಇದು ಹೀಗೆ ಮುಂದುವರೆದರೆ ಮುಂದಿನ ದಿನಗಳಲ್ಲಿ ಭಾರತದಿಂದ ಕಾಂಗ್ರೆಸ್ ಪಕ್ಷ ಮರೆಯಾಗಲಿದೆ ಎಂದರು.
ಬೈಟ್: ಆರ್ ಅಶೋಕ್, ಸಚಿವ.


Conclusion:ಜನಜಾಗೃತಿ ಮೂಡಿಸುವ ಸಂದರ್ಭದಲ್ಲಿ ಶಾಸಕ ಗಣೇಶ್ ಮಾಜಿ ಸಚಿವ ಸೊಗಡು ಶಿವಣ್ಣ ಬಿಜೆಪಿ ಮುಖಂಡರು ಪಾಲ್ಗೊಂಡಿದ್ದರು.

ವರದಿ
ಸುಧಾಕರ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.