ETV Bharat / state

ರಾಮಲಿಂಗಾರೆಡ್ಡಿಗೆ ನೈತಿಕತೆ, ಸಿದ್ಧಾಂತವೇ ಇಲ್ಲ: ಸಚಿವ ಶ್ರೀನಿವಾಸ್​ ವಾಗ್ದಾಳಿ - tumakuru

ರಾಜ್ಯ ಸರ್ಕಾರ ಇದ್ದರೂ ಇರಬಹುದು ಅಥವಾ ಹೋದರೂ ಹೋಗಬಹುದು. ರಾಜೀನಾಮೆ ಕೊಟ್ಟಿರುವ ಶಾಸಕರಿಗೆಲ್ಲ ಅಧಿಕಾರದ ಆಸೆ ಇದೆ ಎಂದು ಸಚಿವ ಎಸ್​ ಆರ್​ ಶ್ರೀನಿವಾಸ ಆರೋಪಿಸಿದ್ದಾರೆ. ಇನ್ನು ರಾಮಲಿಂಗಾರೆಡ್ಡಿ ಅವರಿಗೆ ಪಕ್ಷದ ಸಿದ್ಧಾಂತ ಮತ್ತು ನೈತಿಕತೆಯೇ ಗೊತ್ತಿಲ್ಲವೆಂದು ವಾಗ್ದಾಳಿ ನಡೆಸಿದ್ದಾರೆ.

ಸಚಿವ ಶ್ರೀನಿವಾಸ್
author img

By

Published : Jul 7, 2019, 10:54 AM IST

ತುಮಕೂರು: ರಾಮಲಿಂಗಾರೆಡ್ಡಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಾಗಲೆಲ್ಲಾ ಸಚಿವರಾಗಿ ಕೆಲಸ ಮಾಡಿದವರು. ಈ ಬಾರಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ದೊರೆಯಲಿಲ್ಲ ಎಂದು ರಾಜೀನಾಮೆ ಕೊಟ್ಟು ಹೋಗುತ್ತಾರೆ ಎಂದರೆ ಅವರಿಗೆ ಯಾವ ಪಕ್ಷದ ಸಿದ್ಧಾಂತ ಮತ್ತು ನೈತಿಕತೆ ಗೊತ್ತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್​ ಆರ್​ ಶ್ರೀನಿವಾಸ್ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಇದ್ದರೂ ಇರಬಹುದು ಅಥವಾ ಹೋದರೂ ಹೋಗಬಹುದು. ಆದ್ರೆ ರಾಜೀನಾಮೆ ಕೊಟ್ಟಿರುವ ಶಾಸಕರಿಗೆಲ್ಲ ಅಧಿಕಾರದ ಆಸೆ ಇದೆ ಎಂದು ಆರೋಪಿಸಿದರು. ರಾಮಲಿಂಗಾರೆಡ್ಡಿ ಅವರು ನಮ್ಮ ನಾಯಕರು ಎಂದು ರಾಜೀನಾಮೆ ನೀಡಿರುವ ಮುನಿರತ್ನ ಹೇಳಿದ್ದಾರೆ. ಹೀಗಾಗಿ ಇದರಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ಏಕೆ ಎಳೆದು ತರಬೇಕು ಎಂದರು.

ಸಚಿವ ಶ್ರೀನಿವಾಸ್

ಶಿಕ್ಷಣ ಕ್ಷೇತ್ರವನ್ನು ಸಚಿವ ಶ್ರೀನಿವಾಸ್​ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಹೆಚ್​. ವಿಶ್ವನಾಥ್​ ಹೇಳಿಕೆ ನೀಡಿದ್ದಾರೆ. ವಿಶ್ವನಾಥ್​ ಅವರೇ ಸಚಿವರಾಗಿ ಕೆಲಸ ಮಾಡುವುದಾದರೆ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಶ್ರೀನಿವಾಸ್ ಘೋಷಿಸಿದರು​.

ಇನ್ನು ವ್ಯವಸ್ಥೆ ಬಗ್ಗೆ ಮತ್ತು ಸರ್ಕಾರದ ಬಗ್ಗೆ ಅಸಮಾಧಾನವಿದೆ ಎಂದು ರಾಜೀನಾಮೆ ಕೊಟ್ಟಿರುವ ಶಾಸಕರು ಸೀದಾ ಮನೆಗೆ ಹೋಗಬೇಕು. ಆಕಸ್ಮಾತ್ ಯಾವುದಾದರೂ ಪಕ್ಷಕ್ಕೆ ಸೇರಿದರೆ ಅವರು ಹಣಕ್ಕಾಗಿ ಅಥವಾ ಅಧಿಕಾರಕ್ಕಾಗಿ ಈ ಕೆಲಸ ಮಾಡಿದ್ದಾರೆ ಎಂಬುದನ್ನು ಜನರೇ ನಿರ್ಧರಿಸಲಿದ್ದಾರೆ ಎಂದು ಸಚಿವರು ಹೇಳಿದ್ರು.

ತುಮಕೂರು: ರಾಮಲಿಂಗಾರೆಡ್ಡಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಾಗಲೆಲ್ಲಾ ಸಚಿವರಾಗಿ ಕೆಲಸ ಮಾಡಿದವರು. ಈ ಬಾರಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ದೊರೆಯಲಿಲ್ಲ ಎಂದು ರಾಜೀನಾಮೆ ಕೊಟ್ಟು ಹೋಗುತ್ತಾರೆ ಎಂದರೆ ಅವರಿಗೆ ಯಾವ ಪಕ್ಷದ ಸಿದ್ಧಾಂತ ಮತ್ತು ನೈತಿಕತೆ ಗೊತ್ತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್​ ಆರ್​ ಶ್ರೀನಿವಾಸ್ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಇದ್ದರೂ ಇರಬಹುದು ಅಥವಾ ಹೋದರೂ ಹೋಗಬಹುದು. ಆದ್ರೆ ರಾಜೀನಾಮೆ ಕೊಟ್ಟಿರುವ ಶಾಸಕರಿಗೆಲ್ಲ ಅಧಿಕಾರದ ಆಸೆ ಇದೆ ಎಂದು ಆರೋಪಿಸಿದರು. ರಾಮಲಿಂಗಾರೆಡ್ಡಿ ಅವರು ನಮ್ಮ ನಾಯಕರು ಎಂದು ರಾಜೀನಾಮೆ ನೀಡಿರುವ ಮುನಿರತ್ನ ಹೇಳಿದ್ದಾರೆ. ಹೀಗಾಗಿ ಇದರಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ಏಕೆ ಎಳೆದು ತರಬೇಕು ಎಂದರು.

ಸಚಿವ ಶ್ರೀನಿವಾಸ್

ಶಿಕ್ಷಣ ಕ್ಷೇತ್ರವನ್ನು ಸಚಿವ ಶ್ರೀನಿವಾಸ್​ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಹೆಚ್​. ವಿಶ್ವನಾಥ್​ ಹೇಳಿಕೆ ನೀಡಿದ್ದಾರೆ. ವಿಶ್ವನಾಥ್​ ಅವರೇ ಸಚಿವರಾಗಿ ಕೆಲಸ ಮಾಡುವುದಾದರೆ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಶ್ರೀನಿವಾಸ್ ಘೋಷಿಸಿದರು​.

ಇನ್ನು ವ್ಯವಸ್ಥೆ ಬಗ್ಗೆ ಮತ್ತು ಸರ್ಕಾರದ ಬಗ್ಗೆ ಅಸಮಾಧಾನವಿದೆ ಎಂದು ರಾಜೀನಾಮೆ ಕೊಟ್ಟಿರುವ ಶಾಸಕರು ಸೀದಾ ಮನೆಗೆ ಹೋಗಬೇಕು. ಆಕಸ್ಮಾತ್ ಯಾವುದಾದರೂ ಪಕ್ಷಕ್ಕೆ ಸೇರಿದರೆ ಅವರು ಹಣಕ್ಕಾಗಿ ಅಥವಾ ಅಧಿಕಾರಕ್ಕಾಗಿ ಈ ಕೆಲಸ ಮಾಡಿದ್ದಾರೆ ಎಂಬುದನ್ನು ಜನರೇ ನಿರ್ಧರಿಸಲಿದ್ದಾರೆ ಎಂದು ಸಚಿವರು ಹೇಳಿದ್ರು.

Intro:ಸಚಿವ ಸ್ಥಾನ ಸಿಗಲಿಲ್ಲ ಎಂದು ರಾಜಿನಾಮೆ ನೀಡಿರುವ ರಾಮಲಿಂಗಾರೆಡ್ಡಿಗೆ ನೈತಿಕತೆ ಇಲ್ಲ.....
ಸಚಿವ ಎಸ್ಆರ್ ಶ್ರೀನಿವಾಸ ಹೇಳಿಕೆ.....

ತುಮಕೂರು
ರಾಮಲಿಂಗಾರೆಡ್ಡಿ ಅವರು ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಾಗಲೆಲ್ಲಾ ಸಚಿವರಾಗಿ ಕೆಲಸ ಮಾಡಿದವರು ಈ ಬಾರಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಸರ್ಕಾರದಲ್ಲಿ ಸಚಿವ ಸ್ಥಾನ ದೊರೆಯಲಿಲ್ಲ ಎಂದು ರಾಜೀನಾಮೆ ಕೊಟ್ಟು ಹೋಗುತ್ತಾರೆ ಎಂದರೆ ಅವರಿಗೆ ಯಾವ ರೀತಿಯ ನೈತಿಕತೆ ಇದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಶ್ರೀನಿವಾಸ್ ಟೀಕಿಸಿದ್ದಾರೆ.
ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು,
ರಾಜ್ಯ ಸರ್ಕಾರ ಇದ್ದರೂ ಇರಬಹುದು ಅಥವಾ ಹೋದರೂ ಹೋಗಬಹುದು. ರಾಜೀನಾಮೆ ಕೊಟ್ಟಿರುವ ಶಾಸಕರಿಗೆಲ್ಲ ಅಧಿಕಾರದ ಆಸೆ ಇದೆ ಎಂದರು.
ರಾಮಲಿಂಗಾರೆಡ್ಡಿ ಅವರು ನಮ್ಮ ನಾಯಕರು ಎಂದು ರಾಜೀನಾಮೆ ನೀಡಿರುವ ಮುನಿರತ್ನ ಹೇಳಿದ್ದಾರೆ ಹೀಗಾಗಿ ಇದರಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರನ್ನು ಏಕೆ ತೆಗೆದುಕೊಂಡು ಬರಬೇಕಿದೆ ಎಂದು ವಿಶ್ಲೇಷಣೆ ಮಾಡಿದರು.
ಶಿಕ್ಷಣ ಕ್ಷೇತ್ರವನ್ನು ನಿರ್ಲಕ್ಷ ಮಾಡಿದ್ದಾರೆ ಎಂದು ಹೆಚ್ಚು ವಿಶ್ವನಾಥ ಹೇಳಿಕೆ ನೀಡಿದ್ದಾರೆ ಅವರು ಸಚಿವನಾಗಿ ಕೆಲಸ ಮಾಡುತ್ತೇನೆ ಎನ್ನುವುದಾದರೆ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಅವರೆ ಬಂದು ಸಚಿವರಾಗಿ ಕೆಲಸ ಮಾಡಲಿ ಎಂದು ಹೇಳಿದರು.
ವ್ಯವಸ್ಥೆ ಬಗ್ಗೆ ಮತ್ತು ಸರ್ಕಾರದ ಬಗ್ಗೆ ಅಸಮಾಧಾನವಿದೆ ಎಂದು ರಾಜೀನಾಮೆ ಕೊಟ್ಟಿರುವ ಶಾಸಕರು ಸೀದ ಮನೆಗೆ ಹೋಗಬೇಕು. ಅಕಸ್ಮಾತ್ ಯಾವುದಾದರೂ ಪಕ್ಷಕ್ಕೆ ಸೇರಿದರೆ ಅವರು ಹಣಕ್ಕಾಗಿ ಅಥವಾ ಅಧಿಕಾರಕ್ಕಾಗಿ ಈ ಕೆಲಸ ಮಾಡಿದ್ದಾರೆ ಎಂಬುದನ್ನು ಜನರೇ ನಿರ್ಧರಿಸಲಿದ್ದಾರೆ ಎಂದು ಹೇಳಿದರು.






Body:ತುಮಕೂರು


Conclusion:

For All Latest Updates

TAGGED:

tumakuru
ETV Bharat Logo

Copyright © 2025 Ushodaya Enterprises Pvt. Ltd., All Rights Reserved.