ETV Bharat / state

ಕೆಲವೇ ನಿಮಿಷದಲ್ಲಿ ಒಂದೇ ಸ್ಥಳದಲ್ಲಿ ಎರಡು ಅಪಘಾತ : ಮೂವರು ಬೈಕ್​​ ಸವಾರರು ದುರ್ಮರಣ - ತುಮಕೂರಿನಲ್ಲಿ ಒಂದೇ ಸ್ಥಳದಲ್ಲಿ ಎರಡು ಅಪಘಾತ ಮೂವರ ಬೈಕ್​​ ಸವಾರರು ಸಾವು

ಕೆಲವೇ ನಿಮಿಷಗಳ ಅಂತರದದಲ್ಲಿ ತುಮಕೂರು ಜಿಲ್ಲೆಯಲ್ಲಿ ಎರಡು ಅಪಘಾತಗಳು ಸಂಭವಿಸಿದ ಪರಿಣಾಮ ಮೂವರು ಬೈಕ್​ ಸವಾರರು ಮೃತಪಟ್ಟಿದ್ದಾರೆ.

ತುಮಕೂರು
ತುಮಕೂರು
author img

By

Published : Feb 24, 2022, 8:46 PM IST

ತುಮಕೂರು : ತಿಪಟೂರು ತಾಲೂಕಿನ ಹಿಂಡಿಸ್ಕೆರೆ ಬಳಿ ರಸ್ತೆ ಅಪಘಾತ ನಡೆದಿದ್ದು, ಈ ಅಪಘಾತದಲ್ಲಿ ಇಬ್ಬರು ಬೈಕ್​​ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಈ ಘಟನೆಯನ್ನು ನೋಡಲು ಮತ್ತಿಬ್ಬರು ಆ ಸ್ಥಳಕ್ಕೆ ಹೋಗಿದ್ದು, ಆಗ ಬೈಕ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮತ್ತೊಬ್ಬ ಬೈಕ್ ಸವಾರ ಮೃತಪಟ್ಟಿರುವ ದಾರುಣ ಘಟನೆ ಸಂಭವಿಸಿದೆ.

ಎರಡು ಪ್ರತ್ಯೇಕ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಮೃತರನ್ನು ನರೇಂದ್ರ ಕುಮಾರ್, ಆಕಾಶ್ ಮತ್ತು ಮಂಜುನಾಥ್ ಎಂದು ಗುರುತಿಸಲಾಗಿದೆ. ಮೊದಲು ಬೈಕ್​​ನಲ್ಲಿ ಹೋಗುತ್ತಿದ್ದ ಅರಸೀಕೆರೆ ಮೂಲದ ಆಕಾಶ್ ಮತ್ತು ಮಂಜುನಾಥ್ ಹತ್ಯಾಳು ಬೆಟ್ಟದಿಂದ ವಾಪಸ್ ಅರಸೀಕೆರೆಗೆ ಹೋಗುತ್ತಿದ್ದರು. ಈ ವೇಳೆ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಆಕಾಶ್ ಮತ್ತು ಮಂಜುನಾಥ್ ಮೃತಪಟ್ಟಿದ್ದಾರೆ. ಲಾರಿ ಚಾಲಕ ಲಾರಿಯನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ.

ಸ್ಥಳದಲಿದ್ದ ಜನರು ಅಪಘಾತವನ್ನು ನೋಡುತ್ತಿದ್ದರು. ಇನ್ನೊಂದೆಡೆ ನರೇಂದ್ರ ಕುಮಾರ್ ಮತ್ತೊಬ್ಬ ಸ್ನೇಹಿತ ಬೈಕ್​​ನಲ್ಲಿ ತುಮಕೂರು ಕಡೆಗೆ ಹೋಗುತ್ತಿದ್ದರು. ಮೊದಲು ನಡೆದ ಅಪಘಾತವನ್ನು ನೋಡಲು ರಸ್ತೆ ತಿರುವಿನಲ್ಲಿ ಬೈಕ್​​ ಚಲಾಯಿಸುವಾಗ ಹಿಂಬದಿಯಿಂದ ಸಿಮೆಂಟ್ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ನರೇಂದ್ರ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಲ್ಲದೆ ಇನ್ನೊಬ್ಬನಿಗೆ ಗಂಭೀರ ಗಾಯಗಳಾಗಿವೆ.

ಇದನ್ನೂ ಓದಿ : ಉಕ್ರೇನ್‌ನಲ್ಲಿ ಸಿಲುಕಿಕೊಂಡ ಬಾಗಲಕೋಟೆಯ ಇಬ್ಬರು MBBS ವಿದ್ಯಾರ್ಥಿಗಳು

ಕೆಲವೇ ನಿಮಿಷಗಳಲ್ಲಿ ಒಂದೇ ಸ್ಥಳದಲ್ಲಿ ಎರಡು ಅಪಘಾತಗಳು ಸಂಭವಿಸಿದ ಪರಿಣಾಮ ಮೂವರು ಅಸುನೀಗಿದ್ದಾರೆ. ಈ ಸಂಬಂಧ ಕೆ.ಬಿ. ಕ್ರಾಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತುಮಕೂರು : ತಿಪಟೂರು ತಾಲೂಕಿನ ಹಿಂಡಿಸ್ಕೆರೆ ಬಳಿ ರಸ್ತೆ ಅಪಘಾತ ನಡೆದಿದ್ದು, ಈ ಅಪಘಾತದಲ್ಲಿ ಇಬ್ಬರು ಬೈಕ್​​ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಈ ಘಟನೆಯನ್ನು ನೋಡಲು ಮತ್ತಿಬ್ಬರು ಆ ಸ್ಥಳಕ್ಕೆ ಹೋಗಿದ್ದು, ಆಗ ಬೈಕ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮತ್ತೊಬ್ಬ ಬೈಕ್ ಸವಾರ ಮೃತಪಟ್ಟಿರುವ ದಾರುಣ ಘಟನೆ ಸಂಭವಿಸಿದೆ.

ಎರಡು ಪ್ರತ್ಯೇಕ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಮೃತರನ್ನು ನರೇಂದ್ರ ಕುಮಾರ್, ಆಕಾಶ್ ಮತ್ತು ಮಂಜುನಾಥ್ ಎಂದು ಗುರುತಿಸಲಾಗಿದೆ. ಮೊದಲು ಬೈಕ್​​ನಲ್ಲಿ ಹೋಗುತ್ತಿದ್ದ ಅರಸೀಕೆರೆ ಮೂಲದ ಆಕಾಶ್ ಮತ್ತು ಮಂಜುನಾಥ್ ಹತ್ಯಾಳು ಬೆಟ್ಟದಿಂದ ವಾಪಸ್ ಅರಸೀಕೆರೆಗೆ ಹೋಗುತ್ತಿದ್ದರು. ಈ ವೇಳೆ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಆಕಾಶ್ ಮತ್ತು ಮಂಜುನಾಥ್ ಮೃತಪಟ್ಟಿದ್ದಾರೆ. ಲಾರಿ ಚಾಲಕ ಲಾರಿಯನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ.

ಸ್ಥಳದಲಿದ್ದ ಜನರು ಅಪಘಾತವನ್ನು ನೋಡುತ್ತಿದ್ದರು. ಇನ್ನೊಂದೆಡೆ ನರೇಂದ್ರ ಕುಮಾರ್ ಮತ್ತೊಬ್ಬ ಸ್ನೇಹಿತ ಬೈಕ್​​ನಲ್ಲಿ ತುಮಕೂರು ಕಡೆಗೆ ಹೋಗುತ್ತಿದ್ದರು. ಮೊದಲು ನಡೆದ ಅಪಘಾತವನ್ನು ನೋಡಲು ರಸ್ತೆ ತಿರುವಿನಲ್ಲಿ ಬೈಕ್​​ ಚಲಾಯಿಸುವಾಗ ಹಿಂಬದಿಯಿಂದ ಸಿಮೆಂಟ್ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ನರೇಂದ್ರ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಲ್ಲದೆ ಇನ್ನೊಬ್ಬನಿಗೆ ಗಂಭೀರ ಗಾಯಗಳಾಗಿವೆ.

ಇದನ್ನೂ ಓದಿ : ಉಕ್ರೇನ್‌ನಲ್ಲಿ ಸಿಲುಕಿಕೊಂಡ ಬಾಗಲಕೋಟೆಯ ಇಬ್ಬರು MBBS ವಿದ್ಯಾರ್ಥಿಗಳು

ಕೆಲವೇ ನಿಮಿಷಗಳಲ್ಲಿ ಒಂದೇ ಸ್ಥಳದಲ್ಲಿ ಎರಡು ಅಪಘಾತಗಳು ಸಂಭವಿಸಿದ ಪರಿಣಾಮ ಮೂವರು ಅಸುನೀಗಿದ್ದಾರೆ. ಈ ಸಂಬಂಧ ಕೆ.ಬಿ. ಕ್ರಾಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.