ETV Bharat / state

ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಪ್ರೊಟೆಸ್ಟ್​​

author img

By

Published : Jun 26, 2019, 10:02 PM IST

ನೂರಾರು ರೈತರು ಟೌನ್ ಹಾಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದರು. ಹೇಮಾವತಿ ನಾಲೆ ಅಗಲೀಕರಣ, ತುಂಗಭದ್ರಾ ಮೇಲ್ದಂಡೆ ಯೋಜನೆ, ಎತ್ತಿನಹೊಳೆ ಯೋಜನೆ, ರೈಲ್ವೇ, ರಸ್ತೆ ಅಗಲೀಕರಣಕ್ಕೆ ರೈತರಿಂದ ಸ್ವಾಧೀನ ಪಡಿಸಿಕೊಂಡಿರುವ ಭೂಮಿಗೆ ವೈಜ್ಞಾನಿಕ ಪರಿಹಾರ ನೀಡುವಂತೆ ಒತ್ತಾಯಿಸಿದರು.

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಪ್ರತಿಭಟನೆ

ತುಮಕೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ನಗರದ ಟೌನ್ ಹಾಲ್​ ವೃತ್ತದಲ್ಲಿ ಜಮಾಯಿಸಿದ ತಾಲೂಕಿನ ನೂರಾರು ರೈತರು ಜಿಲ್ಲಾಧಿಕಾರಿ ಕಚೇರಿಯವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದರು. ಹೇಮಾವತಿ ನಾಲೆ ಅಗಲೀಕರಣ, ತುಂಗಭದ್ರಾ ಮೇಲ್ದಂಡೆ ಯೋಜನೆ, ಎತ್ತಿನಹೊಳೆ ಯೋಜನೆ, ರೈಲ್ವೇ, ರಸ್ತೆ ಅಗಲೀಕರಣಕ್ಕೆ ರೈತರಿಂದ ಸ್ವಾಧೀನ ಪಡಿಸಿಕೊಂಡಿರುವ ಭೂಮಿಗೆ ವೈಜ್ಞಾನಿಕ ಪರಿಹಾರ ನೀಡುವಂತೆ ಒತ್ತಾಯಿಸಿದರು.

ಇದೇ ವೇಳೆ ಹಸಿರು ಸೇನೆ ಜಿಲ್ಲಾಧ್ಯಕ್ಷ ಗೋವಿಂದ ರಾಜು ಮಾತನಾಡಿ, ತುಮಕೂರು ಬರ ಪೀಡಿತ ಜಿಲ್ಲೆಯಾಗಿದ್ದು, ಜಿಲ್ಲೆಯ ಎಲ್ಲ ತಾಲೂಕುಗಳನ್ನು ಈಗಾಗಲೇ ಬರಪೀಡಿತ ಎಂದು ಘೋಷಿಸಲಾಗಿದೆ. ಆದರೆ ಸರ್ಕಾರ ಇಲ್ಲಿಯವರೆಗೂ ಬೆಳೆ ನಷ್ಟ ಪರಿಹಾರ, ಬೆಳೆ ವಿಮೆಯನ್ನು ಸಹ ರೈತರಿಗೆ ಪಾವತಿ ಮಾಡಿಲ್ಲ. ಇದರ ಜೊತೆಗೆ ಕುಡಿಯುವ ನೀರಿನ ಸಮಸ್ಯೆಯೂ ಕಾಡುತ್ತಿರುವುದರಿಂದ ರೈತರು ಜಾನುವಾರುಗಳನ್ನು ಕಸಾಯಿಖಾನೆಗೆ ಬಿಡುವಂತಾಗುತ್ತದೆ. ಹೇಮಾವತಿ ನಾಲೆ, ಭದ್ರಾ ಮೇಲ್ದಂಡೆ ಯೋಜನೆ, ಎತ್ತಿನಹೊಳೆ ಯೋಜನೆ ಗಳನ್ನು ಶ್ರೀಘ್ರವಾಗಿ ಅನುಷ್ಠಾನ ಮಾಡಬೇಕಿದೆ ಎಂದರು.

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಪ್ರತಿಭಟನೆ

ಅಭಿವೃದ್ಧಿಯ ಹೆಸರಿನಲ್ಲಿ ಭೂಮಿಯನ್ನು ವಶಪಡಿಸಿಕೊಂಡು, ಭಿಕ್ಷೆಯ ರೂಪದಲ್ಲಿ ರೈತರಿಗೆ ಹಣವನ್ನು ನೀಡಲಾಗುತ್ತಿದೆ. ವೈಜ್ಞಾನಿಕವಾದ ಬೆಲೆ ನಿಗದಿ ಮಾಡಬೇಕು. ತುಂಗಭದ್ರಾ ಯೋಜನೆ ಕುಂಠಿತವಾಗಿದ್ದು, ಇದರ ಜೊತೆಗೆ ಹೇಮಾವತಿ ನಾಲೆಯನ್ನು ಅಗಲೀಕರಣ ಮಾಡುವ ಮೂಲಕ ತುಮಕೂರು ಜಿಲ್ಲೆಯ ಪಾಲಿನ ನೀರನ್ನು ಬಿಡಬೇಕು, ಅಲ್ಲದೆ ಕೆರೆಗಳು, ರಾಜಕಾಲುವೆಗಳು ಒತ್ತುವರಿಯಾಗಿದ್ದು, ಎಲ್ಲವನ್ನೂ ತೆರವುಗೊಳಿಸಬೇಕು. ಅನಧಿಕೃತವಾಗಿ ಹಳ್ಳಿಗಳಲ್ಲಿ ನಿರ್ಮಾಣಗೊಂಡಿರುವ ಮದ್ಯದಂಗಡಿಗಳನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.

ರೈಲ್ವೆ ಮಾರ್ಗಕ್ಕೆ ಪಡೆದಿರುವ ಭೂಮಿಗೆ ಸರಿಯಾದ ರೀತಿಯಲ್ಲಿ ಭೂ ಪರಿಹಾರ ನೀಡದೆ, ಸರ್ಕಾರ ರೈತರಿಗೆ ವಂಚನೆ ಮಾಡುತ್ತಿದೆ. ಮನಬಂದ ರೀತಿಯಲ್ಲಿ ಅಧಿಕಾರಿಗಳು ರೈತರಿಗೆ ಪರಿಹಾರದ ಹಣ ನೀಡುತ್ತಿದ್ದು, ಭೂಮಿಯ ಬೆಲೆಗಿಂತ ಮೂರು ಪಟ್ಟು ಹೆಚ್ಚು ಹಣ ನೀಡಬೇಕು. ಭೂಮಿ ಕಳೆದುಕೊಂಡ ನಂತರ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ. ದೇಶದ ಬೆನ್ನೆಲುಬು ಎಂದು ಕರೆಯುವ ರೈತರಿಗೆ ವಂಚನೆ ಮಾಡಲಾಗುತ್ತಿದೆ. ಪವರ್ ಗ್ರಿಡ್, ಕೆಪಿಟಿಸಿಎಲ್ ಕಂಪನಿಯವರು ರೈತರಿಗೆ ಪರಿಹಾರದ ಹಣ ನೀಡುವಲ್ಲಿ ಮೋಸ ಮಾಡುವ ಮೂಲಕ ವಂಚನೆ ಮಾಡುತ್ತಿದ್ದಾರೆ. ಇನ್ನು ರಾಜ್ಯದ ಮುಖ್ಯಮಂತ್ರಿ ರೈತರ ಸಾಲ ಮನ್ನಾ ಮಾಡುತ್ತೇನೆ ಎಂದು ಹೇಳಿ ಕಾಲಹರಣ ಮಾಡುತ್ತಿದ್ದಾರೆ. ಗ್ರಾಮ ವಾಸ್ತವ್ಯ ಮಾಡುವುದನ್ನು ಬಿಟ್ಟು ಮೊದಲು ರೈತರ ಸಾಲಮನ್ನಾ ಮಾಡಲಿ ಎಂದು ಆಗ್ರಹಿಸಿದರು.

ತುಮಕೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ನಗರದ ಟೌನ್ ಹಾಲ್​ ವೃತ್ತದಲ್ಲಿ ಜಮಾಯಿಸಿದ ತಾಲೂಕಿನ ನೂರಾರು ರೈತರು ಜಿಲ್ಲಾಧಿಕಾರಿ ಕಚೇರಿಯವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದರು. ಹೇಮಾವತಿ ನಾಲೆ ಅಗಲೀಕರಣ, ತುಂಗಭದ್ರಾ ಮೇಲ್ದಂಡೆ ಯೋಜನೆ, ಎತ್ತಿನಹೊಳೆ ಯೋಜನೆ, ರೈಲ್ವೇ, ರಸ್ತೆ ಅಗಲೀಕರಣಕ್ಕೆ ರೈತರಿಂದ ಸ್ವಾಧೀನ ಪಡಿಸಿಕೊಂಡಿರುವ ಭೂಮಿಗೆ ವೈಜ್ಞಾನಿಕ ಪರಿಹಾರ ನೀಡುವಂತೆ ಒತ್ತಾಯಿಸಿದರು.

ಇದೇ ವೇಳೆ ಹಸಿರು ಸೇನೆ ಜಿಲ್ಲಾಧ್ಯಕ್ಷ ಗೋವಿಂದ ರಾಜು ಮಾತನಾಡಿ, ತುಮಕೂರು ಬರ ಪೀಡಿತ ಜಿಲ್ಲೆಯಾಗಿದ್ದು, ಜಿಲ್ಲೆಯ ಎಲ್ಲ ತಾಲೂಕುಗಳನ್ನು ಈಗಾಗಲೇ ಬರಪೀಡಿತ ಎಂದು ಘೋಷಿಸಲಾಗಿದೆ. ಆದರೆ ಸರ್ಕಾರ ಇಲ್ಲಿಯವರೆಗೂ ಬೆಳೆ ನಷ್ಟ ಪರಿಹಾರ, ಬೆಳೆ ವಿಮೆಯನ್ನು ಸಹ ರೈತರಿಗೆ ಪಾವತಿ ಮಾಡಿಲ್ಲ. ಇದರ ಜೊತೆಗೆ ಕುಡಿಯುವ ನೀರಿನ ಸಮಸ್ಯೆಯೂ ಕಾಡುತ್ತಿರುವುದರಿಂದ ರೈತರು ಜಾನುವಾರುಗಳನ್ನು ಕಸಾಯಿಖಾನೆಗೆ ಬಿಡುವಂತಾಗುತ್ತದೆ. ಹೇಮಾವತಿ ನಾಲೆ, ಭದ್ರಾ ಮೇಲ್ದಂಡೆ ಯೋಜನೆ, ಎತ್ತಿನಹೊಳೆ ಯೋಜನೆ ಗಳನ್ನು ಶ್ರೀಘ್ರವಾಗಿ ಅನುಷ್ಠಾನ ಮಾಡಬೇಕಿದೆ ಎಂದರು.

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಪ್ರತಿಭಟನೆ

ಅಭಿವೃದ್ಧಿಯ ಹೆಸರಿನಲ್ಲಿ ಭೂಮಿಯನ್ನು ವಶಪಡಿಸಿಕೊಂಡು, ಭಿಕ್ಷೆಯ ರೂಪದಲ್ಲಿ ರೈತರಿಗೆ ಹಣವನ್ನು ನೀಡಲಾಗುತ್ತಿದೆ. ವೈಜ್ಞಾನಿಕವಾದ ಬೆಲೆ ನಿಗದಿ ಮಾಡಬೇಕು. ತುಂಗಭದ್ರಾ ಯೋಜನೆ ಕುಂಠಿತವಾಗಿದ್ದು, ಇದರ ಜೊತೆಗೆ ಹೇಮಾವತಿ ನಾಲೆಯನ್ನು ಅಗಲೀಕರಣ ಮಾಡುವ ಮೂಲಕ ತುಮಕೂರು ಜಿಲ್ಲೆಯ ಪಾಲಿನ ನೀರನ್ನು ಬಿಡಬೇಕು, ಅಲ್ಲದೆ ಕೆರೆಗಳು, ರಾಜಕಾಲುವೆಗಳು ಒತ್ತುವರಿಯಾಗಿದ್ದು, ಎಲ್ಲವನ್ನೂ ತೆರವುಗೊಳಿಸಬೇಕು. ಅನಧಿಕೃತವಾಗಿ ಹಳ್ಳಿಗಳಲ್ಲಿ ನಿರ್ಮಾಣಗೊಂಡಿರುವ ಮದ್ಯದಂಗಡಿಗಳನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.

ರೈಲ್ವೆ ಮಾರ್ಗಕ್ಕೆ ಪಡೆದಿರುವ ಭೂಮಿಗೆ ಸರಿಯಾದ ರೀತಿಯಲ್ಲಿ ಭೂ ಪರಿಹಾರ ನೀಡದೆ, ಸರ್ಕಾರ ರೈತರಿಗೆ ವಂಚನೆ ಮಾಡುತ್ತಿದೆ. ಮನಬಂದ ರೀತಿಯಲ್ಲಿ ಅಧಿಕಾರಿಗಳು ರೈತರಿಗೆ ಪರಿಹಾರದ ಹಣ ನೀಡುತ್ತಿದ್ದು, ಭೂಮಿಯ ಬೆಲೆಗಿಂತ ಮೂರು ಪಟ್ಟು ಹೆಚ್ಚು ಹಣ ನೀಡಬೇಕು. ಭೂಮಿ ಕಳೆದುಕೊಂಡ ನಂತರ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ. ದೇಶದ ಬೆನ್ನೆಲುಬು ಎಂದು ಕರೆಯುವ ರೈತರಿಗೆ ವಂಚನೆ ಮಾಡಲಾಗುತ್ತಿದೆ. ಪವರ್ ಗ್ರಿಡ್, ಕೆಪಿಟಿಸಿಎಲ್ ಕಂಪನಿಯವರು ರೈತರಿಗೆ ಪರಿಹಾರದ ಹಣ ನೀಡುವಲ್ಲಿ ಮೋಸ ಮಾಡುವ ಮೂಲಕ ವಂಚನೆ ಮಾಡುತ್ತಿದ್ದಾರೆ. ಇನ್ನು ರಾಜ್ಯದ ಮುಖ್ಯಮಂತ್ರಿ ರೈತರ ಸಾಲ ಮನ್ನಾ ಮಾಡುತ್ತೇನೆ ಎಂದು ಹೇಳಿ ಕಾಲಹರಣ ಮಾಡುತ್ತಿದ್ದಾರೆ. ಗ್ರಾಮ ವಾಸ್ತವ್ಯ ಮಾಡುವುದನ್ನು ಬಿಟ್ಟು ಮೊದಲು ರೈತರ ಸಾಲಮನ್ನಾ ಮಾಡಲಿ ಎಂದು ಆಗ್ರಹಿಸಿದರು.

Intro:ತುಮಕೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನಾ ಧರಣಿ ನಡೆಸಿದರು.


Body:ನಗರದ ಟೌನ್ ವೃತ್ತದಲ್ಲಿ ಜಮಾಯಿಸಿದ ತಾಲೂಕಿನ ನೂರಾರು ರೈತರು ಟೌನ್ ಹಾಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದರು.
ಹೇಮಾವತಿ ನಾಲೆ ಅಗಲೀಕರಣ, ತುಂಗಭದ್ರಾ ಮೇಲ್ದಂಡೆ ಯೋಜನೆ, ಎತ್ತಿನಹೊಳೆ ಯೋಜನೆ, ರೈಲ್ವೇ, ರಸ್ತೆ ಅಗಲೀಕರಣಕ್ಕೆ ರೈತರಿಂದ ಸ್ವಾಧೀನ ಪಡಿಸಿಕೊಂಡಿರುವ ಭೂಮಿಗೆ ವೈಜ್ಞಾನಿಕ ಪರಿಹಾರ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಇದೇ ವೇಳೆ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, ತುಮಕೂರು ಬರ ಪೀಡಿತ ಜಿಲ್ಲೆಯಾಗಿದ್ದು, ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಈಗಾಗಲೇ ಬರಪೀಡಿತ ಎಂದು ಘೋಷಿಸಲಾಗಿದೆ. ಆದರೆ ಸರ್ಕಾರ ಇಲ್ಲಿಯವರೆಗೂ ಬೆಳೆ ನಷ್ಟ ಪರಿಹಾರ, ಬೆಳೆ ವಿಮೆಯನ್ನು ಸಹ ರೈತರಿಗೆ ಪಾವತಿ ಮಾಡಿಲ್ಲ. ಇದರ ಜೊತೆಗೆ ಕುಡಿಯುವ ನೀರಿನ ಸಮಸ್ಯೆಯೂ ಕಾಡುತ್ತಿರುವುದರಿಂದ ರೈತರು ಜಾನುವಾರುಗಳನ್ನು ಕಸಾಯಿಖಾನೆಗೆ ಬಿಡುವಂತಾಗುತ್ತದೆ.
ಹೇಮಾವತಿ ನಾಲೆ, ಭದ್ರಾ ಮೇಲ್ದಂಡೆ ಯೋಜನೆ, ಎತ್ತಿನಹೊಳೆ ಯೋಜನೆ ಗಳನ್ನು ಶ್ರೀಘ್ರವಾಗಿ ಅನುಷ್ಠಾನ ಮಾಡಬೇಕಿದೆ. ಅಭಿವೃದ್ಧಿಯ ಹೆಸರಿನಲ್ಲಿ ಭೂಮಿಯನ್ನು ವಶಪಡಿಸಿಕೊಂಡು, ಭಿಕ್ಷೆಯ ರೂಪದಲ್ಲಿ ರೈತರಿಗೆ ಹಣವನ್ನು ನೀಡಲಾಗುತ್ತಿದೆ. ವೈಜ್ಞಾನಿಕವಾದ ಬೆಲೆ ನಿಗದಿ ಮಾಡಬೇಕು.
ತುಂಗಭದ್ರಾ ಯೋಜನೆ ಕುಂಠಿತವಾಗಿದ್ದು, ಇದರ ಜೊತೆಗೆ ಹೇಮಾವತಿ ನಾಲೆಯನ್ನು ಅಗಲೀಕರಣ ಮಾಡುವ ಮೂಲಕ ತುಮಕೂರು ಜಿಲ್ಲೆಯ ಪಾಲಿನ ನೀರನ್ನು ಬಿಡಬೇಕು, ಅಲ್ಲದೆ ಕೆರೆಗಳು, ರಾಜಕಾಲುವೆಗಳು ಒತ್ತುವರಿಯಾಗಿದ್ದು, ಎಲ್ಲವನ್ನೂ ತೆರವುಗೊಳಿಸಬೇಕು.
ಅನಧಿಕೃತವಾಗಿ ಹಳ್ಳಿಗಳಲ್ಲಿ ನಿರ್ಮಾಣಗೊಂಡಿರುವ ಮದ್ಯದಂಗಡಿಗಳನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.
ಬೈಟ್: ಕೋಡಿಹಳ್ಳಿ ಚಂದ್ರಶೇಖರ್, ಹಸಿರು ಸೇನೆ ರಾಜ್ಯಾಧ್ಯಕ್ಷ

ರೈಲ್ವೆ ಮಾರ್ಗಕ್ಕೆ ಪಡೆದಿರುವ ಭೂಮಿಗೆ ಸರಿಯಾದ ರೀತಿಯಲ್ಲಿ ಭೂ ಪರಿಹಾರ ನೀಡದೆ, ಸರ್ಕಾರ ರೈತರಿಗೆ ವಂಚನೆ ಮಾಡುತ್ತಿದೆ. ಮನಬಂದ ರೀತಿಯಲ್ಲಿ ಅಧಿಕಾರಿಗಳು ರೈತರಿಗೆ ಪರಿಹಾರದ ಹಣ ನೀಡುತ್ತಿದ್ದು, ಭೂಮಿಯ ಬೆಲೆಗಿಂತ ಮೂರು ಪಟ್ಟು ಹೆಚ್ಚು ಹಣ ನೀಡಬೇಕು.
ಭೂಮಿ ಕಳೆದುಕೊಂಡ ನಂತರ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ. ದೇಶದ ಬೆನ್ನೆಲುಬು ಎಂದು ಕರೆಯುವ ರೈತರಿಗೆ ವಂಚನೆ ಮಾಡಲಾಗುತ್ತಿದೆ.
ಪವರ್ ಗ್ರಿಡ್, ಕೆಪಿಟಿಸಿಎಲ್ ಕಂಪನಿಯವರು ರೈತರಿಗೆ ಪರಿಹಾರದ ಹಣ ನೀಡುವಲ್ಲಿ ಮೋಸ ಮಾಡುವ ಮೂಲಕ ವಂಚನೆ ಮಾಡುತ್ತಿದ್ದಾರೆ.
ಇನ್ನು ರಾಜ್ಯದ ಮುಖ್ಯಮಂತ್ರಿ ರೈತರ ಸಾಲ ಮನ್ನಾ ಮಾಡುತ್ತೇನೆ ಎಂದು ಹೇಳಿ ಕಾಲಹರಣ ಮಾಡುತ್ತಿದ್ದಾರೆ. ಗ್ರಾಮ ವಾಸ್ತವ್ಯ ಮಾಡುವುದನ್ನು ಬಿಟ್ಟು ಮೊದಲು ರೈತರ ಸಾಲಮನ್ನಾ ಮಾಡಲಿ ಎಂದು ಆಗ್ರಹಿಸಿದರು.
ಬೈಟ್: ಪೂಜಾರಪ್ಪ, ಪಾವಗಡ ತಾಲೂಕಿನ ರೈತ ಸಂಘದ ಅಧ್ಯಕ್ಷ


Conclusion:ವರದಿ
ಸುಧಾಕರ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.