ETV Bharat / state

ಭೀಕರ ಅಪಘಾತ: ಬಸ್​​ಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು - Tumakuru

ಕಾರು ಮತ್ತು ಬಸ್​ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾನೆ. ಈ ಕುರಿತು ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತ
author img

By

Published : Jun 16, 2019, 11:08 PM IST

ತುಮಕೂರು: ಕೆಎಸ್ಆರ್​ಟಿಸಿ ಬಸ್​ಗೆ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲಿ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದ ಬಳಿ ನಡೆದಿದೆ.

accident
ಬಸ್​ ಮತ್ತು ಕಾರಿನ ನಡುವೆ ಜರುಗಿದ ಡಿಕ್ಕಿಗೆ ಜಖಂಗೊಂಡಿರುವುದು

ಮೃತರನ್ನು ಶಿವಕುಮಾರ್ (27) ಮತ್ತು ಲೋಹಿತ್​​ಕುಮಾರ್ (26) ಎಂದು ಗುರುತಿಸಲಾಗಿದೆ. ಇಬ್ಬರೂ ಕಾರಿನಲ್ಲಿ ತುಮಕೂರಿಗೆ ಹೋಗುತ್ತಿದ್ದ ವೇಳೆ ಗುಬ್ಬಿ ತಾಲೂಕಿನ ದೊಡ್ಡಗುಣಿ ಕೆರೆ ಏರಿ ಮೇಲೆ ತುಮಕೂರು ಕಡೆಯಿಂದ ತುರುವೇಕೆರೆಗೆ ಹೋಗುತ್ತಿದ್ದ ಬಸ್​ಗೆ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಲೋಹಿತ್​ಕುಮಾರ್ ಅವರ ಪತ್ನಿ ಒಂದು ವಾರದ ಹಿಂದೆ ಮಗುವಿಗೆ ಜನ್ಮ ನೀಡಿದ್ದರು. ಹಾಗಾಗಿ ಲೋಹಿತ್​ಕುಮಾರ್​ ಅವರು ತಮ್ಮ ಮಗುವನ್ನು ನೋಡಲು ತುಮಕೂರಿಗೆ ಹೋಗುತ್ತಿದ್ದರು. ಶಿವಕುಮಾರ್ ಚಿಕ್ಕನಾಯಕನಹಳ್ಳಿ ಆಸ್ಪತ್ರೆಯಲ್ಲಿ 108 ಆಂಬ್ಯುಲೆನ್ಸ್​​ನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗ್ತಿದೆ. ವಾಹನಗಳೆರಡು ಸಂಪೂರ್ಣವಾಗಿ ಜಖಂಗೊಂಡಿವೆ.

ತುಮಕೂರು: ಕೆಎಸ್ಆರ್​ಟಿಸಿ ಬಸ್​ಗೆ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲಿ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದ ಬಳಿ ನಡೆದಿದೆ.

accident
ಬಸ್​ ಮತ್ತು ಕಾರಿನ ನಡುವೆ ಜರುಗಿದ ಡಿಕ್ಕಿಗೆ ಜಖಂಗೊಂಡಿರುವುದು

ಮೃತರನ್ನು ಶಿವಕುಮಾರ್ (27) ಮತ್ತು ಲೋಹಿತ್​​ಕುಮಾರ್ (26) ಎಂದು ಗುರುತಿಸಲಾಗಿದೆ. ಇಬ್ಬರೂ ಕಾರಿನಲ್ಲಿ ತುಮಕೂರಿಗೆ ಹೋಗುತ್ತಿದ್ದ ವೇಳೆ ಗುಬ್ಬಿ ತಾಲೂಕಿನ ದೊಡ್ಡಗುಣಿ ಕೆರೆ ಏರಿ ಮೇಲೆ ತುಮಕೂರು ಕಡೆಯಿಂದ ತುರುವೇಕೆರೆಗೆ ಹೋಗುತ್ತಿದ್ದ ಬಸ್​ಗೆ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಲೋಹಿತ್​ಕುಮಾರ್ ಅವರ ಪತ್ನಿ ಒಂದು ವಾರದ ಹಿಂದೆ ಮಗುವಿಗೆ ಜನ್ಮ ನೀಡಿದ್ದರು. ಹಾಗಾಗಿ ಲೋಹಿತ್​ಕುಮಾರ್​ ಅವರು ತಮ್ಮ ಮಗುವನ್ನು ನೋಡಲು ತುಮಕೂರಿಗೆ ಹೋಗುತ್ತಿದ್ದರು. ಶಿವಕುಮಾರ್ ಚಿಕ್ಕನಾಯಕನಹಳ್ಳಿ ಆಸ್ಪತ್ರೆಯಲ್ಲಿ 108 ಆಂಬ್ಯುಲೆನ್ಸ್​​ನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗ್ತಿದೆ. ವಾಹನಗಳೆರಡು ಸಂಪೂರ್ಣವಾಗಿ ಜಖಂಗೊಂಡಿವೆ.

Intro:ಬಸ್ ಡಿಕ್ಕಿ ಕಾರಿನಲ್ಲಿದ್ದ ಇಬ್ಬರು ಸಾವು.....

ತುಮಕೂರು
ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಡೆದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದ ಬಳಿ ನಡೆದಿದೆ.
ಮೃತರನ್ನು ಕಾರಿನಲ್ಲಿದ್ದ ಶಿವಕುಮಾರ್ (27) ಮತ್ತು ಲೋಹಿತ್ ಕುಮಾರ್(26) ಎಂದು ಗುರುತಿಸಲಾಗಿದೆ.
ಇಬ್ಬರೂ ಕಾರಿನಲ್ಲಿ ತುಮಕೂರಿಗೆ ಹೋಗುತ್ತಿದ್ದ ವೇಳೆ ಗುಬ್ಬಿ ತಾಲೂಕಿನ ದೊಡ್ಡಗುಣಿ ಕೆರೆ ಏರಿ ಮೇಲೆ ತುಮಕೂರಿನಿಂದ ತುರುವೇಕೆರೆಗೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಗೆ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಲೋಹಿತ್ ಕುಮಾರ್ ಎಂಬುವವರ ಪತ್ನಿ ಒಂದು ವಾರದಿಂದೀಚೆಗೆ ಜನ್ಮ ನೀಡಿದ ಮಗುವನ್ನು ನೋಡಲು ತುಮಕೂರಿಗೆ ಹೋಗುತ್ತಿದ್ದರು. ಚಿಕ್ಕನಾಯಕನಹಳ್ಳಿ ಆಸ್ಪತ್ರೆಯಲ್ಲಿ 108 ಆಂಬುಲೆನ್ಸ್ ನಲ್ಲಿ ಚಾಲಕನಾಗಿ ಶಿವಕುಮಾರ್ ಕೆಲಸ ಮಾಡುತ್ತಿದ್ದರು. ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Body:TumakuruConclusion:

For All Latest Updates

TAGGED:

Tumakuru
ETV Bharat Logo

Copyright © 2025 Ushodaya Enterprises Pvt. Ltd., All Rights Reserved.