ETV Bharat / state

ಪೌರಕಾರ್ಮಿಕರು ಶ್ರೇಷ್ಠ ಕಾಯಕ ಯೋಗಿಗಳು : ಡಾ. ಹೆಚ್ ನಟರಾಜು

author img

By

Published : May 26, 2019, 5:35 AM IST

ಪೌರಕಾರ್ಮಿಕರು ಶ್ರೇಷ್ಠವಾದ ಕಾರ್ಯಗಳನ್ನು ಮಾಡುತ್ತಿದ್ದು, ಸಮಾಜದ ಕೊಳೆಯನ್ನು ತೊಳೆಯುವ ಅವರು ಆರೋಗ್ಯಯುತ ಸಮಾಜ ನಿರ್ಮಾಣ ಮಾಡಲು ಅವರಿಂದ ಮಾತ್ರ ಸಾಧ್ಯ ಎಂದು ಡಾ. ಹೆಚ್ ನಟರಾಜು ಅಭಿಪ್ರಾಯಪಟ್ಟರು.

ಪೌರಕಾರ್ಮಿಕರು ಶ್ರೇಷ್ಠ ಕಾಯಕ ಯೋಗಿಗಳು

ತುಮಕೂರು: ಪೌರಕಾರ್ಮಿಕರು ಶ್ರೇಷ್ಠವಾದ ಕಾರ್ಯಗಳನ್ನು ಮಾಡುತ್ತಿದ್ದು, ಅವರೆಲ್ಲರೂ ಕಾಯಕ ಯೋಗಿಗಳು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿ ಡಾ. ಹೆಚ್ ನಟರಾಜು ಹೊಗಳಿದರು.

ತುಮಕೂರು ಜಿಲ್ಲಾ ಸಮಿತಿಯ ಸಫಾಯಿ ಕರ್ಮಚಾರಿ ಕಾವಲು ಸಮಿತಿ ಕರ್ನಾಟಕ ವತಿಯಿಂದ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನ್ ರಾಮ್ ಅವರ ಜನ್ಮದಿನಾಚರಣೆ ಅಂಗವಾಗಿ ಪೌರಕಾರ್ಮಿಕರ ಹಾಗೂ ಮ್ಯಾನ್ಯೂಯಲ್ ಸ್ಕ್ಯಾವೆಂಜರ್ಸ್ ಸ್ಥಿತಿ-ಗತಿಗಳ ಕುರಿತ ವಿಚಾರ ಸಂಕೀರ್ಣವನ್ನು ಏರ್ಪಡಿಸಲಾಗಿತ್ತು.

ಪೌರಕಾರ್ಮಿಕರು ಶ್ರೇಷ್ಠ ಕಾಯಕ ಯೋಗಿಗಳು : ಡಾ. ಹೆಚ್ ನಟರಾಜು

ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಮ್ ಅವರು ಶೋಷಿತ ವರ್ಗಗಳ ಕಣ್ಮಣಿಗಳು, ಮಹಾನ್ ಚಿಂತಕರು. ತುಳಿತಕ್ಕೊಳಗಾದವರ ಸಮುದಾಯದ ಏಳಿಗೆಗೆ ಅವರು ನೀಡಿದ ಕೊಡುಗೆ ಅಪಾರ. ಇಂತಹ ವ್ಯಕ್ತಿಗಳ ಚಿಂತನೆ ತತ್ವಾದರ್ಶಗಳನ್ನು ತಿಳಿದುಕೊಳ್ಳಬೇಕು ಎಂದು ಡಾ. ಹೆಚ್ ನಟರಾಜು ಹೇಳಿದರು.

ತುಮಕೂರು: ಪೌರಕಾರ್ಮಿಕರು ಶ್ರೇಷ್ಠವಾದ ಕಾರ್ಯಗಳನ್ನು ಮಾಡುತ್ತಿದ್ದು, ಅವರೆಲ್ಲರೂ ಕಾಯಕ ಯೋಗಿಗಳು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿ ಡಾ. ಹೆಚ್ ನಟರಾಜು ಹೊಗಳಿದರು.

ತುಮಕೂರು ಜಿಲ್ಲಾ ಸಮಿತಿಯ ಸಫಾಯಿ ಕರ್ಮಚಾರಿ ಕಾವಲು ಸಮಿತಿ ಕರ್ನಾಟಕ ವತಿಯಿಂದ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನ್ ರಾಮ್ ಅವರ ಜನ್ಮದಿನಾಚರಣೆ ಅಂಗವಾಗಿ ಪೌರಕಾರ್ಮಿಕರ ಹಾಗೂ ಮ್ಯಾನ್ಯೂಯಲ್ ಸ್ಕ್ಯಾವೆಂಜರ್ಸ್ ಸ್ಥಿತಿ-ಗತಿಗಳ ಕುರಿತ ವಿಚಾರ ಸಂಕೀರ್ಣವನ್ನು ಏರ್ಪಡಿಸಲಾಗಿತ್ತು.

ಪೌರಕಾರ್ಮಿಕರು ಶ್ರೇಷ್ಠ ಕಾಯಕ ಯೋಗಿಗಳು : ಡಾ. ಹೆಚ್ ನಟರಾಜು

ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಮ್ ಅವರು ಶೋಷಿತ ವರ್ಗಗಳ ಕಣ್ಮಣಿಗಳು, ಮಹಾನ್ ಚಿಂತಕರು. ತುಳಿತಕ್ಕೊಳಗಾದವರ ಸಮುದಾಯದ ಏಳಿಗೆಗೆ ಅವರು ನೀಡಿದ ಕೊಡುಗೆ ಅಪಾರ. ಇಂತಹ ವ್ಯಕ್ತಿಗಳ ಚಿಂತನೆ ತತ್ವಾದರ್ಶಗಳನ್ನು ತಿಳಿದುಕೊಳ್ಳಬೇಕು ಎಂದು ಡಾ. ಹೆಚ್ ನಟರಾಜು ಹೇಳಿದರು.

Intro:ತುಮಕೂರು: ಪೌರಕಾರ್ಮಿಕರು ಶ್ರೇಷ್ಠವಾದ ಕಾರ್ಯಗಳನ್ನು ಮಾಡುತ್ತಿದ್ದು, ಅವರೆಲ್ಲರೂ ಶ್ರೇಷ್ಠ ಕಾಯಕ ಯೋಗಿಗಳು. ಸಮಾಜದ ಕೊಳೆಯನ್ನು ತೊಳೆಯುವ, ಆರೋಗ್ಯಯುತ ಸಮಾಜ ನಿರ್ಮಾಣ ಅವರಿಂದ ಮಾತ್ರ ಸಾಧ್ಯ ಎಂದು ಸಮಾಜ ಕಲ್ಯಾಣ ಇಲಾಖೆಯ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿ ಡಾ. ಹೆಚ್ ನಟರಾಜು ತಿಳಿಸಿದರು.


Body:ತುಮಕೂರು ಜಿಲ್ಲಾ ಸಮಿತಿಯ ಸಪಾಯಿಕರ್ಮಚಾರಿ ಕಾವಲು ಸಮಿತಿ ಕರ್ನಾಟಕ ವತಿಯಿಂದವ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನ್ ರಾಮ್ ಅವರ ಜನ್ಮದಿನಾಚರಣೆ ಅಂಗವಾಗಿ ಪೌರಕಾರ್ಮಿಕರ ಹಾಗೂ ಮ್ಯಾನ್ಯೂಯಲ್ ಸ್ಕ್ಯಾವೆಂಜರ್ಸ್ ಸ್ಥಿತಿ-ಗತಿಗಳ ಕುರಿತ ವಿಚಾರ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿದರು.
ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಮ್ ಅವರು ಶೋಷಿತ ವರ್ಗಗಳ ಕಣ್ಮಣಿಗಳು, ಮಹಾನ್ ಚಿಂತಕರು. ತುಳಿತಕ್ಕೊಳಗಾದವರ ಸಮುದಾಯದ ಏಳಿಗೆಗೆ ಅವರು ನೀಡಿದ ಕೊಡುಗೆ ಅಪಾರ. ಇಂತಹ ವ್ಯಕ್ತಿಗಳ ಚಿಂತನೆ ತತ್ವಾದರ್ಶಗಳನ್ನು ತಿಳಿದುಕೊಳ್ಳಬೇಕು.
ನಮ್ಮ ಸಮುದಾಯ ಬೇರೆ ಸಮುದಾಯಗಳಿಗೆ ಹೋಲಿಕೆ ಮಾಡಿ ನೋಡಿದರೆ ನಾವು ಏಕೆ ಹಿಂದುಳಿದಿದ್ದೇವೆ? ಎಂಬುದನ್ನು ಚಿಂತಿಸಬೇಕಿದೆ.
ಅಸ್ಪೃಶ್ಯತೆಯೆಂಬ ಕದಂಬ ಬಾಹುಗಳಿಂದ ರಕ್ಷಿಸಿದವರು ಅಂಬೇಡ್ಕರ್, ಅವರ ಚಿಂತನೆಗಳನ್ನು ನಾವು ಅರಿತುಕೊಂಡು ನಮ್ಮ ಮಕ್ಕಳಿಗೂ ತಿಳಿಸಬೇಕು.
ಪೌರಕಾರ್ಮಿಕರು ಶ್ರೇಷ್ಠವಾದ ಕಾರ್ಯಗಳನ್ನು ಮಾಡುತ್ತಿದ್ದು, ಅವರೆಲ್ಲರೂ ಕಾಯಕಯೋಗಿಗಳು, ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಅವರಿಂದ ಮಾತ್ರ ಸಾಧ್ಯ, ಸರ್ಕಾರ ತಂದಿರುವ ಎಲ್ಲಾ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಸಫಾಯಿ ಕರ್ಮಚಾರಿಗಳಿಗೆ ಕಿವಿಮಾತನ್ನು ಹೇಳಿದರು.


Conclusion:ನಂತರ ಮಾತನಾಡಿದ ತುಮಕೂರು ಮಹಾನಗರ ಪಾಲಿಕೆಯ ಆಯುಕ್ತ ಭೂಬಾಲನ್, ನಮ್ಮ ಭಾರತ ದೇಶವನ್ನು ವರ್ಣಾಶ್ರಮದಿಂದ ಬದಲಾಯಿಸಿ ಹಿಂದುಳಿದವರಿಗೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಆಗುತ್ತಿದ್ದಂತಹ ಅನ್ಯಾಯವನ್ನು ತಡೆಯುವಲ್ಲಿ ಪ್ರಮುಖ ಪಾತ್ರವಹಿಸುವ ವಹಿಸಿದವರು ಅಂಬೇಡ್ಕರ್.
ಅವರ ಕಾಲದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಯಾವ ಯಾವ ರೀತಿಯಲ್ಲಿ ಅನ್ಯಾಯವಾಗಿದೆ ಎಂಬುದನ್ನು ಎಲ್ಲಾ ನಾಯಕರಿಗೆ ಸ್ಪಷ್ಟವಾಗಿ ತಿಳಿಹೇಳಿ, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಬಹಳ ಶ್ರಮಪಟ್ಟಿದ್ದಾರೆ.
ಭಾರತ ಸಂವಿಧಾನದ ತಂದೆಯೆಂದು ಅಂಬೇಡ್ಕರ್ ಅವರನ್ನು ಕರೆಯಲಾಗುತ್ತದೆ, ಕೇವಲ ಹಿಂದುಳಿದ ವರ್ಗದವರಿಗೆ ಮಾತ್ರ ಅಂಬೇಡ್ಕರ್ ನಾಯಕರಾಗಿ ಇರಲಿಲ್ಲ, ಭಾರತದ ಪ್ರತಿಯೊಬ್ಬ ಪ್ರಜೆಗೂ ಸಹ ಅವರು ಮಹಾನ್ ನಾಯಕರು ಎಂದರು.

ವರದಿ
ಸುಧಾಕರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.