ETV Bharat / state

ಜಿಲ್ಲಾ ಉಸ್ತುವಾರಿ ಸಚಿವರು ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು: ರಮೇಶ್ ಆಗ್ರಹ

author img

By

Published : Jan 3, 2020, 7:50 PM IST

ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರನ್ನು ಮದಲೂರು ಕೆರೆಗೆ ನೀರು ಹರಿಸುವಂತೆ ಕೇಳಿಕೊಂಡಾಗ ಉಡಾಫೆ ಉತ್ತರಗಳನ್ನು ಹೇಳುವ ಮೂಲಕ ರೈತರನ್ನು ಹಾಗೂ ನೀರಾವರಿ ಹೋರಾಟಗಾರರನ್ನು ಅವಮಾನಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಶಿರಾ ತಾಲೂಕು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ರಮೇಶ್ ಒತ್ತಾಯಿಸಿದ್ದಾರೆ.

the-minister-in-charge-of-the-district-should-resign-on-moral-responsibility-said-by-ramesh
ಶಿರಾ ತಾಲೂಕು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ರಮೇಶ್

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರನ್ನು ಮದಲೂರು ಕೆರೆಗೆ ನೀರು ಹರಿಸುವಂತೆ ಕೇಳಿಕೊಂಡಾಗ ಉಡಾಫೆಯ ಉತ್ತರಗಳನ್ನು ಹೇಳುವ ಮೂಲಕ ರೈತರನ್ನು ಹಾಗೂ ನೀರಾವರಿ ಹೋರಾಟಗಾರರನ್ನು ಅವಮಾನಿಸಿದ್ದಾರೆ, ಜಿಲ್ಲಾ ಉಸ್ತುವಾರಿ ಸಚಿವರು ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಶಿರಾ ತಾಲೂಕು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ರಮೇಶ್ ಒತ್ತಾಯಿಸಿದ್ದಾರೆ.

ಶಿರಾ ತಾಲೂಕಿನ ಮದಲೂರು ಕೆರೆಗೆ ನೀರು ಹರಿಸುವಂತೆ ಒತ್ತಾಯಿಸಿ ರೈತ ಮುಖಂಡರು ಶಿರಾದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೈಕ್ ರ‍್ಯಾಲಿ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಶಿರಾ ತಾಲೂಕು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ರಮೇಶ್, ಶಿರಾ ತಾಲೂಕಿಗೆ ಹಂಚಿಕೆಯಾಗಿರುವ ಹೇಮಾವತಿ ನೀರನ್ನು ಹರಿಸಲು ಸ್ಥಳೀಯ ಸಂಸದರಾದ ಎಂ.ಪಿ ಬಸವರಾಜು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ ಮಾಧುಸ್ವಾಮಿ ಇಲ್ಲಸಲ್ಲದ ನೆಪ ಹೇಳುವ ಮೂಲಕ ಶಿರಾಗೆ ನೀರು ಹರಿಸುವುದಕ್ಕೆ ತಡೆ ಹಾಕಿದ್ದಾರೆ. ಅಷ್ಟೇ ಅಲ್ಲ ರೈತರನ್ನು ಬೇಕಾಬಿಟ್ಟಿಯಾಗಿ ಮಾತನಾಡಿಸುವ ಮೂಲಕ ನೀರಾವರಿ ಹೋರಾಟಗಾರರನ್ನು ಅವಮಾನ ಮಾಡಿದ್ದಾರೆ ಎಂದು ಮಾದುಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಶಿರಾ ತಾಲೂಕು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ರಮೇಶ್

ಶಿರಾಗೆ ಹೇಮಾವತಿ ನೀರು ಹರಿಸುವಂತೆ ಒತ್ತಾಯಿಸಿದರೆ, ಉಡಾಫೆಯ ಉತ್ತರ ನೀಡುತ್ತಾರೆ. ನೀರು ಹರಿಯದಂತೆ ಚಾನೆಲ್​ಗೆ ಮರಳು ಮೂಟೆ ಹಾಕಿದ್ದಾರೆ. ಮದಲೂರು ಕೆರೆಗೆ ನೀರು ಹಂಚಿಕೆಯಾಗಿಲ್ಲ ಎನ್ನುವ ಉಸ್ತುವಾರಿ ಸಚಿವರಿಗೆ ಮಾಹಿತಿ ಇಲ್ಲವೆ? ನೀರು ಹಂಚಿಕೆ ಆಗದೆ ಕೇಂದ್ರ ಸರ್ಕಾರ ಅನುದಾನ ನೀಡಿದೆಯೇ? ಎಂದು‌ ಪ್ರಶ್ನಿಸಿದರು. ಶಿರಾಗೆ ಹಂಚಿಕೆಯಾಗಿರುವ 0.9 ಟಿಎಂಸಿ ನೀರು ಹರಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಹಾಗೂ ರೈತರಿಗೆ ಅವಮಾನ ಮಾಡಿರುವ ರೀತಿಯಲ್ಲಿ ವರ್ತಿಸಿರುವುದರಿಂದ ಜಿಲ್ಲಾ ಉಸ್ತುವಾರಿ ಸಚಿವರು ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರನ್ನು ಮದಲೂರು ಕೆರೆಗೆ ನೀರು ಹರಿಸುವಂತೆ ಕೇಳಿಕೊಂಡಾಗ ಉಡಾಫೆಯ ಉತ್ತರಗಳನ್ನು ಹೇಳುವ ಮೂಲಕ ರೈತರನ್ನು ಹಾಗೂ ನೀರಾವರಿ ಹೋರಾಟಗಾರರನ್ನು ಅವಮಾನಿಸಿದ್ದಾರೆ, ಜಿಲ್ಲಾ ಉಸ್ತುವಾರಿ ಸಚಿವರು ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಶಿರಾ ತಾಲೂಕು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ರಮೇಶ್ ಒತ್ತಾಯಿಸಿದ್ದಾರೆ.

ಶಿರಾ ತಾಲೂಕಿನ ಮದಲೂರು ಕೆರೆಗೆ ನೀರು ಹರಿಸುವಂತೆ ಒತ್ತಾಯಿಸಿ ರೈತ ಮುಖಂಡರು ಶಿರಾದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೈಕ್ ರ‍್ಯಾಲಿ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಶಿರಾ ತಾಲೂಕು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ರಮೇಶ್, ಶಿರಾ ತಾಲೂಕಿಗೆ ಹಂಚಿಕೆಯಾಗಿರುವ ಹೇಮಾವತಿ ನೀರನ್ನು ಹರಿಸಲು ಸ್ಥಳೀಯ ಸಂಸದರಾದ ಎಂ.ಪಿ ಬಸವರಾಜು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ ಮಾಧುಸ್ವಾಮಿ ಇಲ್ಲಸಲ್ಲದ ನೆಪ ಹೇಳುವ ಮೂಲಕ ಶಿರಾಗೆ ನೀರು ಹರಿಸುವುದಕ್ಕೆ ತಡೆ ಹಾಕಿದ್ದಾರೆ. ಅಷ್ಟೇ ಅಲ್ಲ ರೈತರನ್ನು ಬೇಕಾಬಿಟ್ಟಿಯಾಗಿ ಮಾತನಾಡಿಸುವ ಮೂಲಕ ನೀರಾವರಿ ಹೋರಾಟಗಾರರನ್ನು ಅವಮಾನ ಮಾಡಿದ್ದಾರೆ ಎಂದು ಮಾದುಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಶಿರಾ ತಾಲೂಕು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ರಮೇಶ್

ಶಿರಾಗೆ ಹೇಮಾವತಿ ನೀರು ಹರಿಸುವಂತೆ ಒತ್ತಾಯಿಸಿದರೆ, ಉಡಾಫೆಯ ಉತ್ತರ ನೀಡುತ್ತಾರೆ. ನೀರು ಹರಿಯದಂತೆ ಚಾನೆಲ್​ಗೆ ಮರಳು ಮೂಟೆ ಹಾಕಿದ್ದಾರೆ. ಮದಲೂರು ಕೆರೆಗೆ ನೀರು ಹಂಚಿಕೆಯಾಗಿಲ್ಲ ಎನ್ನುವ ಉಸ್ತುವಾರಿ ಸಚಿವರಿಗೆ ಮಾಹಿತಿ ಇಲ್ಲವೆ? ನೀರು ಹಂಚಿಕೆ ಆಗದೆ ಕೇಂದ್ರ ಸರ್ಕಾರ ಅನುದಾನ ನೀಡಿದೆಯೇ? ಎಂದು‌ ಪ್ರಶ್ನಿಸಿದರು. ಶಿರಾಗೆ ಹಂಚಿಕೆಯಾಗಿರುವ 0.9 ಟಿಎಂಸಿ ನೀರು ಹರಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಹಾಗೂ ರೈತರಿಗೆ ಅವಮಾನ ಮಾಡಿರುವ ರೀತಿಯಲ್ಲಿ ವರ್ತಿಸಿರುವುದರಿಂದ ಜಿಲ್ಲಾ ಉಸ್ತುವಾರಿ ಸಚಿವರು ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

Intro:ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರನ್ನು ಮದಲೂರು ಕೆರೆಗೆ ನೀರು ಹರಿಸುವಂತೆ ಕೇಳಿಕೊಂಡಾಗ ಉಡಾಫೆಯ ಉತ್ತರಗಳನ್ನು ಹೇಳುವ ಮೂಲಕ ರೈತರನ್ನು ಹಾಗೂ ನೀರಾವರಿ ಹೋರಾಟಗಾರರನ್ನು ಅವಮಾನಿಸಿದ್ದಾರೆ, ಜಿಲ್ಲಾ ಉಸ್ತುವಾರಿ ಸಚಿವರು ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಶಿರಾ ತಾಲೂಕು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ರಮೇಶ್ ಒತ್ತಾಯಿಸಿದರು.


Body:ಶಿರಾ ತಾಲೂಕಿನ ಮದಲೂರು ಕೆರೆಗೆ ನೀರು ಹರಿಸುವಂತೆ ಒತ್ತಾಯಿಸಿ ರೈತ ಮುಖಂಡರು ಶಿರಾದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೈಕ್ ರ್ಯಾಲಿ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಶಿರಾ ತಾಲೂಕು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ರಮೇಶ್, ಶಿರಾ ತಾಲೂಕಿಗೆ ಹಂಚಿಕೆಯಾಗಿರುವ ಹೇಮಾವತಿ ನೀರನ್ನು ಹರಿಸಲು ಸ್ಥಳೀಯ ಸಂಸದರಾದ ಎಂ.ಪಿ ಬಸವರಾಜು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ ಮಾಧುಸ್ವಾಮಿ ಇಲ್ಲಸಲ್ಲದ ನೆಪ ಹೇಳುವ ಮೂಲಕ ಶಿರಾಗೆ ನೀರು ಹರಿಸುವುದಕ್ಕೆ ತಡೆ ಹಾಕುವ ಜೊತೆಗೆ ರೈತರನ್ನು ಬೇಕಾಬಿಟ್ಟಿ ರೀತಿಯಲ್ಲಿ ಮಾತನಾಡಿಸುವ ಮೂಲಕ ನೀರಾವರಿ ಹೋರಾಟಗಾರರನ್ನು ಉಸ್ತುವಾರಿ ಸಚಿವರು ಅವಮಾನ ಮಾಡಿದ್ದಾರೆ ಎಂದು ಮಾದುಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಶಿರಾಗೆ ಹೇಮಾವತಿ ನೀರು ಹರಿಸುವಂತೆ ಒತ್ತಾಯಿಸಿದರೆ ಉಡಾಫೆಯ ಉತ್ತರ ನೀಡುತ್ತಾರೆ. ನೀರು ಹರಿಯದಂತೆ ಚಾನೆಲ್ ಗೆ ಮರಳು ಮೂಟೆ ಹಾಕಿದ್ದಾರೆ. ಮದಲೂರು ಕೆರೆಗೆ ನೀರು ಹಂಚಿಕೆಯಾಗಿಲ್ಲ ಎನ್ನುವ ಉಸ್ತುವಾರಿ ಸಚಿವರಿಗೆ ಮಾಹಿತಿ ಇಲ್ಲವೆ? ನೀರು ಹಂಚಿಕೆ ಆಗದೆ ಕೇಂದ್ರ ಸರ್ಕಾರ ಅನುದಾನ ನೀಡಿದೆಯೇ? ಎಂದು‌ ಪ್ರಶ್ನಿಸಿದರು. ಸಿರಾಗೆ ಹಂಚಿಕೆಯಾಗಿರುವ 0.9 ಟಿಎಂಸಿ ನೀರು ಹರಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಹಾಗೂ ರೈತರಿಗೆ ಅವಮಾನ ಮಾಡಿರುವ ರೀತಿಯಲ್ಲಿ ವರ್ತಿಸಿರುವುದರಿಂದ ಜಿಲ್ಲಾ ಉಸ್ತುವಾರಿ ಸಚಿವರು ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಬೈಟ್: ರಮೇಶ್, ಅಧ್ಯಕ್ಷ, ಶಿರಾ ತಾಲೂಕು ಶಾಶ್ವತ ನೀರಾವರಿ ಹೋರಾಟ ಸಮಿತಿ.


Conclusion: ಪ್ರತಿಭಟನೆಯಲ್ಲಿ ಎನ್ ಶ್ರೀನಿವಾಸ್ ಯತಿರಾಜು ಪುಟ್ಟ ಕಾಮಣ್ಣ ಪರಮಶಿವಯ್ಯ ಸಿಪಿಐ ಮುಖಂಡ ಗಿರೀಶ್ ಗೋವಿಂದಪ್ಪ ಮುಂತಾದ ರೈತರು ಪಾಲ್ಗೊಂಡಿದ್ದರು.


ವರದಿ
ಸುಧಾಕರ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.