ETV Bharat / state

ವೈದ್ಯರ ವಿರುದ್ಧ ನಿರ್ಲಕ್ಷ್ಯ ಆರೋಪ: ಕರವೇ ಕಾರ್ಯಕರ್ತರ ಪ್ರತಿಭಟನೆ - latest tumkur protest

ವೈದ್ಯರು ತಮ್ಮ ಸೇವೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿ ಮಿಂಟೋ ಕಣ್ಣಿನ ಆಸ್ಪತ್ರೆಯ ವೈದ್ಯರು ಹಾಗೂ ಔಷಧಿ ಸರಬರಾಜುದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು.

ವೈದ್ಯರ ನಿರ್ಲಕ್ಷ್ಯ ಖಂಡಿಸಿ ಕರವೇ ಪ್ರತಿಭಟನೆ
author img

By

Published : Nov 5, 2019, 9:25 PM IST

ತುಮಕೂರು: ಮಿಂಟೋ ಆಸ್ಪತ್ರೆಯ ವೈದ್ಯರು ಸೇವೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಕರವೇ ಕಾರ್ಯಕರ್ತರು ಆರೋಪಿಸಿದ್ದಾರೆ. ಅಮಾಯಕರು ತಮ್ಮ ಕಣ್ಣುಗಳನ್ನು ಕಳೆದುಕೊಂಡಿದ್ದು, ಈ ನಿರ್ಲಕ್ಷ್ಯ ಧೋರಣೆ ತೋರಿದ ಆಸ್ಪತ್ರೆಯ ವೈದ್ಯರು ಹಾಗೂ ಔಷಧಿ ಸರಬರಾಜುದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು.

ವೈದ್ಯರ ವಿರುದ್ಧ ನಿರ್ಲಕ್ಷ್ಯ ಆರೋಪ: ಕರವೇ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರಿನ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ 22 ಬಡ ರೋಗಿಗಳನ್ನು ಶಾಶ್ವತವಾಗಿ ಕುರುಡರನ್ನಾಗಿಸಿದ ವೈದ್ಯರು, ಸಿಬ್ಬಂದಿ, ಔಷಧಿ ಸರಬರಾಜುದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ವೇಳೆ ಮಾತನಾಡಿದ ಸಂಘಟನೆಯ ಜಿಲ್ಲಾಧ್ಯಕ್ಷ ಕೆ.ಎನ್. ಮಂಜುನಾಥ ಗೌಡ ಅವರು 22 ಜನರ ಜೀವನದ ಜೊತೆ ಹುಡುಗಾಟವಾಡಿರುವ ವೈದ್ಯರಿಂದ ಈ ಜನರ ಕುಟುಂಬಕ್ಕೆ ಅನ್ಯಾಯವಾಗಿದೆ. ಅವರಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸುವುದಾಗಿ ಹೇಳಿದ್ರು.

ಅಷ್ಟೇ ಅಲ್ಲದೇ, ಕರವೇ ಸದಸ್ಯರು ವೈದ್ಯರ ಮೇಲೆ ಹಲ್ಲೆ ನಡೆಸಿಲ್ಲ, ಅವರು ಹೇಳಿದ ಮಾತುಗಳನ್ನು ವಿರೋಧಿಸಿದೆವು ಅಷ್ಟೇ. ಇದನ್ನು ಅವರು ಹಲ್ಲೆ ಮಾಡಿದ್ದಾರೆಂದು ನಮ್ಮ ವಿರುದ್ಧ ಸುಳ್ಳು ಆರೋಪ ಮಾಡುವ ಮೂಲಕ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂತಹವರನ್ನು ಅಮಾನತು ಮಾಡಬೇಕೆಂದು ಇದೇ ವೇಳೆ ಆಗ್ರಹಿಸಿದರು.

ತುಮಕೂರು: ಮಿಂಟೋ ಆಸ್ಪತ್ರೆಯ ವೈದ್ಯರು ಸೇವೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಕರವೇ ಕಾರ್ಯಕರ್ತರು ಆರೋಪಿಸಿದ್ದಾರೆ. ಅಮಾಯಕರು ತಮ್ಮ ಕಣ್ಣುಗಳನ್ನು ಕಳೆದುಕೊಂಡಿದ್ದು, ಈ ನಿರ್ಲಕ್ಷ್ಯ ಧೋರಣೆ ತೋರಿದ ಆಸ್ಪತ್ರೆಯ ವೈದ್ಯರು ಹಾಗೂ ಔಷಧಿ ಸರಬರಾಜುದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು.

ವೈದ್ಯರ ವಿರುದ್ಧ ನಿರ್ಲಕ್ಷ್ಯ ಆರೋಪ: ಕರವೇ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರಿನ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ 22 ಬಡ ರೋಗಿಗಳನ್ನು ಶಾಶ್ವತವಾಗಿ ಕುರುಡರನ್ನಾಗಿಸಿದ ವೈದ್ಯರು, ಸಿಬ್ಬಂದಿ, ಔಷಧಿ ಸರಬರಾಜುದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ವೇಳೆ ಮಾತನಾಡಿದ ಸಂಘಟನೆಯ ಜಿಲ್ಲಾಧ್ಯಕ್ಷ ಕೆ.ಎನ್. ಮಂಜುನಾಥ ಗೌಡ ಅವರು 22 ಜನರ ಜೀವನದ ಜೊತೆ ಹುಡುಗಾಟವಾಡಿರುವ ವೈದ್ಯರಿಂದ ಈ ಜನರ ಕುಟುಂಬಕ್ಕೆ ಅನ್ಯಾಯವಾಗಿದೆ. ಅವರಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸುವುದಾಗಿ ಹೇಳಿದ್ರು.

ಅಷ್ಟೇ ಅಲ್ಲದೇ, ಕರವೇ ಸದಸ್ಯರು ವೈದ್ಯರ ಮೇಲೆ ಹಲ್ಲೆ ನಡೆಸಿಲ್ಲ, ಅವರು ಹೇಳಿದ ಮಾತುಗಳನ್ನು ವಿರೋಧಿಸಿದೆವು ಅಷ್ಟೇ. ಇದನ್ನು ಅವರು ಹಲ್ಲೆ ಮಾಡಿದ್ದಾರೆಂದು ನಮ್ಮ ವಿರುದ್ಧ ಸುಳ್ಳು ಆರೋಪ ಮಾಡುವ ಮೂಲಕ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂತಹವರನ್ನು ಅಮಾನತು ಮಾಡಬೇಕೆಂದು ಇದೇ ವೇಳೆ ಆಗ್ರಹಿಸಿದರು.

Intro:ತುಮಕೂರು: ವಿಂಟೋ ಆಸ್ಪತ್ರೆಯ ವೈದ್ಯರ ನಿರ್ಲಕ್ಷದಿಂದ ಅಮಾಯಕರು ತಮ್ಮ ಕಣ್ಣುಗಳನ್ನು ಕಳೆದುಕೊಂಡಿದ್ದಾರೆ, ಈ ನಿರ್ಲಕ್ಷ್ಯ ದೊರಣೆ ತೋರಿದ ಆಸ್ಪತ್ರೆಯ ವೈದ್ಯರ ಮೇಲೆ ಹಾಗೂ ಔಷಧಿ ಸರಬರಾಜುದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.


Body:ಬೆಂಗಳೂರಿನ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ೨೨ ಅಮಾಯಕ, ಬಡ ರೋಗಿಗಳನ್ನು ಶಾಶ್ವತವಾಗಿ ಕುರುಡರನ್ನಾಗಿಸಿದ ವೈದ್ಯರು, ಸಿಬ್ಬಂದಿ, ಔಷಧಿ ಸರಬರಾಜುದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಿತು.
ಇದೇ ವೇಳೆ ಮಾತನಾಡಿದ ಕೆ.ಎನ್ ಮಂಜುನಾಥ ಗೌಡ ೨೨ ಜನರ ಜೀವನದ ನಡುವೆ ಹುಡುಗಾಟವಾಡಿರುವ ವೈದ್ಯರಿಂದ ಈ ಜನರ ಕುಟುಂಬಕ್ಕೆ ಅನ್ಯಾಯವಾಗಿದೆ. ಅವರಿಗೆ ನ್ಯಾಯ ದೊರೆಯುವವರೆಗೂ ಹೋರಾಟ ಮಾಡುತ್ತೇವೆ. ಕರವೇ ಸದಸ್ಯರು ವೈದ್ಯರ ಮೇಲೆ ಹಲ್ಲೆ ನಡೆಸಿಲ್ಲ, ಅವರು ಹೇಳಿದ ಮಾತುಗಳನ್ನು ವಿರೋಧಿಸಿದೆವು ಅಷ್ಟೆ, ಇದನ್ನು ಅವರು ಹಲ್ಲೆ ಮಾಡಿದ್ದಾರೆ ಎಂದು ನಮ್ಮ ಮೇಲೆ ಸುಳ್ಳು ಆರೋಪವನ್ನು ಮಾಡುವ ಮೂಲಕ ಪ್ರತಿಭಟನೆ ನಡೆಸುತಿದ್ದಾರೆ, ಇಂತಹವರನ್ನು ಅಮಾನತ್ತು ಮಾಡಬೇಕೆಂದು ಇದೇ ವೇಳೆ ಒತ್ತಾಯಿಸಿದರು.
ಬೈಟ್: ಕೆ.ಎನ್. ಮಂಜುನಾಥಗೌಡ, ಜಿಲ್ಲಾಧ್ಯಕ್ಷ, ಕನ್ನಡ ರಕ್ಷಣಾ ವೇದಿಕೆ


Conclusion:ವರದಿ
ಸುಧಾಕರ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.