ETV Bharat / state

ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಲೆಕ್ಕಾಧಿಕಾರಿಗಳ ಸಂಘದಿಂದ ಪ್ರತಿಭಟನೆ - ತುಮಕೂರು, ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ, ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನರಸಿಂಹರಾಜು , ಕನ್ನಡ ವಾರ್ತೆ, ಈ ಟಿವಿ ಭಾರತ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗ್ರಾಮ ಲೆಕ್ಕಾಧಿಕಾರಿಗಳ ಸಂಘದಿಂದ ತುಮಕೂರಿನಲ್ಲಿ ಪ್ರತಿಭಟನೆ ನಡೆಯಿತು.

ಗ್ರಾಮ ಲೆಕ್ಕಾಧಿಕಾರಿಗಳ ಸಂಘದಿಂದ ಪ್ರತಿಭಟನೆ ನಡೆಯಿತು
author img

By

Published : Jul 17, 2019, 7:39 PM IST

ತುಮಕೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ರಾಜ್ಯದ ಗ್ರಾಮ ಲೆಕ್ಕಾಧಿಕಾರಿಗಳ ಕುಂದು ಕೊರತೆ ಮತ್ತು ಮುಂಬಡ್ತಿಯಲ್ಲಿ ಆಗುತ್ತಿರುವಂತಹ ಅನ್ಯಾಯವನ್ನು ಸರಿಪಡಿಸಬೇಕು. ರಜಾ ದಿನಗಳಲ್ಲಿ ಕೆಲಸದ ಒತ್ತಡವನ್ನು ನೌಕರರ ಮೇಲೆ ಹೇರುವುದರಿಂದ ಮಾನಸಿಕ ಕಿರುಕುಳಕ್ಕೆ ಒಳಗಾಗಿ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಆದ್ದರಿಂದ ಕೆಲಸದ ಒತ್ತಡವನ್ನು ತಡೆಯಬೇಕು. ಜಾಬ್ ಚಾರ್ಟ್ ನೀಡಬೇಕು. ಪ್ರಯಾಣ ಭತ್ಯೆ 500ರಿಂದ 1,000 ರೂ.ಗೆ ಹೆಚ್ಚಿಸಬೇಕು. ಕೆಲಸದ ಸಮಯದಲ್ಲಿ ನೌಕರರು ಮೃತಪಟ್ಟರೆ ನೀಡುವಂತಹ ಪರಿಹಾರದ ಮೊತ್ತವನ್ನು ಹೆಚ್ಚಿಸಬೇಕು ಎಂದು ಧರಣಿನಿರತರು ಒತ್ತಾಯಿಸಿದರು.

ಗ್ರಾಮ ಲೆಕ್ಕಾಧಿಕಾರಿಗಳ ಸಂಘದಿಂದ ಪ್ರತಿಭಟನೆ

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನರಸಿಂಹರಾಜು ಮಾತನಾಡಿ, ಹಲವಾರು ಬೇಡಿಕೆಗಳನ್ನಿಟ್ಟುಕೊಂಡು ಇಂದು ಪ್ರತಿಭಟನೆ ನಡೆಸಲಾಗುತ್ತಿದೆ. ಒಂದು ವೇಳೆ ನಮ್ಮ ಬೇಡಿಕೆಗಳು ಈಡೇರದಿದ್ದರೆ ಬೆಂಗಳೂರಿನ ಫ್ರೀಡಂ ಪಾರ್ಕ್ ಮುಂದೆ ಪ್ರತಿಭಟನೆ ನಡೆಸುವುದರ ಮೂಲಕ ಸರ್ಕಾರದ ಮೇಲೆ ಹೆಚ್ಚಿನ ಒತ್ತಡ ಹೇರಲಾಗುವುದು ಎಂದು ತಿಳಿಸಿದರು.

ತುಮಕೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ರಾಜ್ಯದ ಗ್ರಾಮ ಲೆಕ್ಕಾಧಿಕಾರಿಗಳ ಕುಂದು ಕೊರತೆ ಮತ್ತು ಮುಂಬಡ್ತಿಯಲ್ಲಿ ಆಗುತ್ತಿರುವಂತಹ ಅನ್ಯಾಯವನ್ನು ಸರಿಪಡಿಸಬೇಕು. ರಜಾ ದಿನಗಳಲ್ಲಿ ಕೆಲಸದ ಒತ್ತಡವನ್ನು ನೌಕರರ ಮೇಲೆ ಹೇರುವುದರಿಂದ ಮಾನಸಿಕ ಕಿರುಕುಳಕ್ಕೆ ಒಳಗಾಗಿ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಆದ್ದರಿಂದ ಕೆಲಸದ ಒತ್ತಡವನ್ನು ತಡೆಯಬೇಕು. ಜಾಬ್ ಚಾರ್ಟ್ ನೀಡಬೇಕು. ಪ್ರಯಾಣ ಭತ್ಯೆ 500ರಿಂದ 1,000 ರೂ.ಗೆ ಹೆಚ್ಚಿಸಬೇಕು. ಕೆಲಸದ ಸಮಯದಲ್ಲಿ ನೌಕರರು ಮೃತಪಟ್ಟರೆ ನೀಡುವಂತಹ ಪರಿಹಾರದ ಮೊತ್ತವನ್ನು ಹೆಚ್ಚಿಸಬೇಕು ಎಂದು ಧರಣಿನಿರತರು ಒತ್ತಾಯಿಸಿದರು.

ಗ್ರಾಮ ಲೆಕ್ಕಾಧಿಕಾರಿಗಳ ಸಂಘದಿಂದ ಪ್ರತಿಭಟನೆ

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನರಸಿಂಹರಾಜು ಮಾತನಾಡಿ, ಹಲವಾರು ಬೇಡಿಕೆಗಳನ್ನಿಟ್ಟುಕೊಂಡು ಇಂದು ಪ್ರತಿಭಟನೆ ನಡೆಸಲಾಗುತ್ತಿದೆ. ಒಂದು ವೇಳೆ ನಮ್ಮ ಬೇಡಿಕೆಗಳು ಈಡೇರದಿದ್ದರೆ ಬೆಂಗಳೂರಿನ ಫ್ರೀಡಂ ಪಾರ್ಕ್ ಮುಂದೆ ಪ್ರತಿಭಟನೆ ನಡೆಸುವುದರ ಮೂಲಕ ಸರ್ಕಾರದ ಮೇಲೆ ಹೆಚ್ಚಿನ ಒತ್ತಡ ಹೇರಲಾಗುವುದು ಎಂದು ತಿಳಿಸಿದರು.

Intro:ತುಮಕೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಸಲಾಯಿತು.


Body:ರಾಜ್ಯದ ಗ್ರಾಮಲೆಕ್ಕಾಧಿಕಾರಿಗಳ ಕುಂದುಕೊರತೆ ಮತ್ತು ಮುಂಬಡ್ತಿಯಲ್ಲಿ ಆಗುತ್ತಿರುವಂತಹ ಅನ್ಯಾಯವನ್ನು ಸರಿಪಡಿಸಬೇಕು, ಗ್ರಾಮಲೆಕ್ಕಾಧಿಕಾರಿಗಳ ಮೇಲೆ ಬೇರೆ ಇಲಾಖೆಯ ಕೆಲಸದ ಒತ್ತಡವನ್ನು ಹೇರಲಾಗುತ್ತಿದ್ದು ಅದನ್ನು ತಡೆಯಬೇಕು, ರಜಾ ದಿನಗಳಲ್ಲಿ ಕೆಲಸದ ಒತ್ತಡವನ್ನು ನೌಕರರ ಮೇಲೆ ಹೇರುವುದರಿಂದ ಮಾನಸಿಕ ಕಿರುಕುಳಕ್ಕೆ ಒಳಗಾಗಿ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ, ಜಾಬ್ ಚಾರ್ಟ್ ನೀಡಬೇಕು, ಪ್ರಯಾಣ ಭತ್ಯೆ 500ರಿಂದ 1,000 ರೂ ಗೆ ಹೆಚ್ಚಿಸಬೇಕು ಎಂಬ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಒತ್ತಡದ ಕೆಲಸ, ಮುಂಬಡ್ತಿ, ಕೆಲಸದ ಸಮಯದಲ್ಲಿ ನೌಕರರು ಮೃತಪಟ್ಟರೆ ನೀಡುವಂತಹ ಪರಿಹಾರದ ಮೊತ್ತವನ್ನು ಹೆಚ್ಚಿಸಬೇಕು ಎಂಬ ಅಂಶಗಳನ್ನು ಇಟ್ಟುಕೊಂಡು ಇಂದು ಪ್ರತಿಭಟನೆ ನಡೆಸಲಾಗುತ್ತಿದೆ, ಒಂದು ವೇಳೆ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಬೆಂಗಳೂರಿನ ಫ್ರೀಡಂಪಾರ್ಕ್ ಮುಂದೆ ಪ್ರತಿಭಟನೆ ನಡೆಸುವುದರ ಮೂಲಕ ಸರ್ಕಾರದ ಮೇಲೆ ಹೆಚ್ಚಿನ ಒತ್ತಡ ಹೇರಲಾಗುವುದು ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನರಸಿಂಹರಾಜು ತಿಳಿಸಿದರು.
ಬೈಟ್: ನರಸಿಂಹರಾಜು, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ


Conclusion:ವರದಿ
ಸುಧಾಕರ

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.