ತುಮಕೂರು : ಜಿಲ್ಲೆಯಲ್ಲಿ ನಾಳೆಯಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದೆ. ಪರೀಕ್ಷೆ ಬರೆಯಲು ಹಾಜರಾಗಲಿರುವ ವಿದ್ಯಾರ್ಥಿಗಳಿಗೆ ಈ ಬಾರಿ ಜಿಲ್ಲಾಡಳಿತದ ವತಿಯಿಂದ ಲಘು ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿದೆ.
ಬೆಳಗ್ಗೆಯಿಂದ ನಿರಂತರವಾಗಿ ಮೂರು ಗಂಟೆಗಳ ಕಾಲ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಈ ಬಾರಿ ಶೇ.10ರಷ್ಟು ಲಘು ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಬೆಳಗ್ಗೆ 7ಗಂಟೆಯಿಂದಲೇ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳ ಬಳಿ ಬರುವ ಸಾಧ್ಯತೆ ಇದೆ. ಜಿಲ್ಲೆಯಲ್ಲಿ ಒಟ್ಟು 23,650 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯುತ್ತಿದ್ದಾರೆ. ಸುಮಾರು 105 ಮಕ್ಕಳು ಪರೀಕ್ಷೆಗೆ ಹಾಜರಾಗುತ್ತಿಲ್ಲ ಎಂದು ತಿಳಿದು ಬಂದಿದೆ.
ಪ್ರತಿ ವಿದ್ಯಾರ್ಥಿಗೆ ಮಾಹಿತಿ ತಲುಪುವಂತೆ ವ್ಯಾಪಕವಾದ ಪ್ರಚಾರ ಮಾಡಲಾಗಿತ್ತು. ಒಂಬತ್ತನೇ ತರಗತಿಯಲ್ಲಿದ್ದ ಎಲ್ಲ ಮಕ್ಕಳನ್ನು 10ನೇ ತರಗತಿಗೆ ಈ ಬಾರಿ ದಾಖಲು ಮಾಡಲಾಗಿತ್ತು. ಆದರೆ, ಕೆಲ ಪೋಷಕರು ಶಾಲೆಗೆ ಬಂದು ಪರೀಕ್ಷೆಯನ್ನು ಕಟ್ಟುವಂತಹ ಪೂರಕ ಪ್ರಕ್ರಿಯೆಯನ್ನು ಪಾಲನೆ ಮಾಡಿಲ್ಲ. ಹೀಗಾಗಿ, ಜಿಲ್ಲೆಯಲ್ಲಿ 105 ಮಕ್ಕಳು ಪರೀಕ್ಷೆ ಬರೆಯುತ್ತಿಲ್ಲ ಎಂದು ತಿಳಿದು ಬಂದಿದೆ.
ಓದಿ: ಕೋವಿಡ್ ನಡುವೆಯೂ ನಾಳೆಯಿಂದ SSLC ಎಕ್ಸಾಂ.. ಮಕ್ಕಳೇ, ಧೈರ್ಯವಾಗಿ ಪರೀಕ್ಷೆ ಎದುರಿಸಿ..