ETV Bharat / state

ರೈಲು ತಡೆಗೆ ಮುಂದಾದ ರೈತರನ್ನು ಬಂಧಿಸಿದ ಪೊಲೀಸರು

author img

By

Published : Feb 18, 2021, 3:34 PM IST

ಕೃಷಿ ಕಾಯ್ದೆಗಳನ್ನು ವಾಪಸ್​ ಪಡೆಯುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ತುಮಕೂರು ರೈಲ್ವೆ ನಿಲ್ದಾಣದ ಮುಂದೆ ಪ್ರತಿಭಟನೆ ನಡೆಸಿದರು.

protest
ರೈತರ ಪ್ರತಿಭಟನೆ

ತುಮಕೂರು: ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ, ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ತುಮಕೂರು ರೈಲ್ವೆ ನಿಲ್ದಾಣದ ಮುಂದೆ ಪ್ರತಿಭಟನೆ ನಡೆಸಿದರು.

ರೈಲು ತಡೆಗೆ ಮುಂದಾದ ರೈತರನ್ನು ಬಂಧಿಸಿದ ಪೊಲೀಸರು

50ಕ್ಕೂ ಹೆಚ್ಚು ಪ್ರತಿಭಟನಾಕಾರರು, ರೈಲು ನಿಲ್ದಾಣದ ಒಳಗೆ ನುಗ್ಗಲು ಯತ್ನಿಸಿದರು. ರೈಲು ತಡೆಯಲು ಮುಂದಾದ ರೈತರನ್ನು ತಡೆದ ಪೊಲೀಸರು, ನಿಲ್ದಾಣದ ಒಳಗೆ ಹೋಗಲು ಬಿಡದೇ ಗೇಟಿನಲ್ಲೇ ತಡೆದು ಬಂಧಿಸಿದರು.

ಇದೇ ವೇಳೆ ರೈತರು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ಘೊಷಣೆ ಕೂಗಿದರು. ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರ‌ ನಿಯೋಜನೆ ಮಾಡಲಾಗಿತ್ತು. ಪ್ರತಿಭಟನೆಯ ನೇತೃತ್ವವನ್ನು ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ್ ಪಟೇಲ್ ವಹಿಸಿದ್ದರು.

ತುಮಕೂರು: ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ, ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ತುಮಕೂರು ರೈಲ್ವೆ ನಿಲ್ದಾಣದ ಮುಂದೆ ಪ್ರತಿಭಟನೆ ನಡೆಸಿದರು.

ರೈಲು ತಡೆಗೆ ಮುಂದಾದ ರೈತರನ್ನು ಬಂಧಿಸಿದ ಪೊಲೀಸರು

50ಕ್ಕೂ ಹೆಚ್ಚು ಪ್ರತಿಭಟನಾಕಾರರು, ರೈಲು ನಿಲ್ದಾಣದ ಒಳಗೆ ನುಗ್ಗಲು ಯತ್ನಿಸಿದರು. ರೈಲು ತಡೆಯಲು ಮುಂದಾದ ರೈತರನ್ನು ತಡೆದ ಪೊಲೀಸರು, ನಿಲ್ದಾಣದ ಒಳಗೆ ಹೋಗಲು ಬಿಡದೇ ಗೇಟಿನಲ್ಲೇ ತಡೆದು ಬಂಧಿಸಿದರು.

ಇದೇ ವೇಳೆ ರೈತರು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ಘೊಷಣೆ ಕೂಗಿದರು. ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರ‌ ನಿಯೋಜನೆ ಮಾಡಲಾಗಿತ್ತು. ಪ್ರತಿಭಟನೆಯ ನೇತೃತ್ವವನ್ನು ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ್ ಪಟೇಲ್ ವಹಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.