ETV Bharat / state

ಕೇಂದ್ರ-ರಾಜ್ಯ ಸರ್ಕಾರದ ವಿರುದ್ಧ ಸಿಪಿಐ ಪ್ರತಿಭಟನೆ - ಸಿ.ಪಿ.ಐ ಪ್ರತಿಭಟನೆ, ತುಮಕೂರು, ಸರ್ಕಾರದ ವಿರುದ್ಧ ಪ್ರತಿಭಟನೆ, ಈ ಟಿವಿ ಭಾರತ

ಬರ ನಿರ್ವಹಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಪೂರ್ಣವಾಗಿ ವಿಫಲವಾಗಿವೆ ಎಂದು ಆರೋಪಿಸಿ ಸಿ.ಪಿ.ಐ ವತಿಯಿಂದ ತುಮಕೂರು ನಗರದಲ್ಲಿ ಪ್ರತಿಭಟನೆ ನಡೆಯಿತು.

ಸಿ.ಪಿ.ಐ ವತಿಯಿಂದ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು
author img

By

Published : Jul 15, 2019, 11:10 PM IST

ತುಮಕೂರು: ಬರ ಪರಿಹಾರ ನಿರ್ವಹಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿಫಲವಾಗಿವೆ ಎಂದು ಆರೋಪಿಸಿ ಭಾರತ ಕಮ್ಯೂನಿಸ್ಟ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಯಿತು.
ನಗರದ ಟೌನ್ ಹಾಲ್ ವೃತ್ತದಲ್ಲಿ ಜಮಾಜಿಯಿಸಿದ ಸಿಪಿಐನ ಕಾರ್ಯಕರ್ತರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಿಪಿಐ ಜಿಲ್ಲಾ ಕಾರ್ಯದರ್ಶಿ ಗಿರೀಶ್ ಮಾತನಾಡಿ, ಇಂದು ನಾವು ರಾಜ್ಯಾದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದೇವೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಬರ ಪರಿಹಾರ ಮೊತ್ತ ನೀಡುವಲ್ಲಿ ತಾರತಮ್ಯವನ್ನು ಮಾಡುವುದರ ಜೊತೆಗೆ ಪರಿಹಾರ ಕಾಮಗಾರಿಗಳನ್ನು ಸರಿಯಾಗಿ ನಿರ್ವಹಿಸಲು ವಿಫಲವಾಗಿವೆ. ಜುಲೈ ತಿಂಗಳು ಕಳೆಯುತ್ತಾ ಬಂದರೂ ಸಹ ಇಲ್ಲಿಯವರೆಗೂ ರೈತರಿಗೆ ಯಾವುದೇ ಪರಿಹಾರ ನೀಡದೆ ಸರ್ಕಾರ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ರಾಜ್ಯದ ಜನಪ್ರತಿನಿಧಿಗಳು ರಾಜೀನಾಮೆ ನೀಡುವ ಮೂಲಕ ರೆಸಾರ್ಟ್ ರಾಜಕಾರಣ ಮಾಡುತ್ತಿದ್ದಾರೆ. ಜನಪ್ರತಿನಿಧಿಗಳನ್ನು ಕಂಡು ನಗುವಂತಹ ಪರಿಸ್ಥಿತಿ ರಾಜ್ಯದಲ್ಲಿ ಉಂಟಾಗಿದೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಸಿಪಿಐ ವತಿಯಿಂದ ಸರ್ಕಾರದ ವಿರುದ್ಧ ಪ್ರತಿಭಟನೆ

ಪಡಿತರ ಚೀಟಿ ವ್ಯವಸ್ಥೆ, ನ್ಯಾಯಬೆಲೆ ಅಂಗಡಿಗಳನ್ನು ಏಕಾಏಕಿ ಸ್ಥಳಾಂತರಗೊಳಿಸುವುದನ್ನು ನಿಲ್ಲಿಸಬೇಕು. ಜನಸಂಖ್ಯೆಗೆ ಅನುಗುಣವಾಗಿ ಆಧಾರ್ ಕೇಂದ್ರಗಳನ್ನು ತೆರೆಯಬೇಕು. ಭೂ ರಹಿತ ಮತ್ತು ಬಡವರಿಗೆ ಬರಪರಿಹಾರ ಸೌಲಭ್ಯವನ್ನು ಶೀಘ್ರವಾಗಿ ಒದಗಿಸಬೇಕು ಎಂದು ಇದೇ ವೇಳೆ ಸರ್ಕಾರವನ್ನು ಒತ್ತಾಯಿಸಲಾಯಿತು.

ತುಮಕೂರು: ಬರ ಪರಿಹಾರ ನಿರ್ವಹಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿಫಲವಾಗಿವೆ ಎಂದು ಆರೋಪಿಸಿ ಭಾರತ ಕಮ್ಯೂನಿಸ್ಟ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಯಿತು.
ನಗರದ ಟೌನ್ ಹಾಲ್ ವೃತ್ತದಲ್ಲಿ ಜಮಾಜಿಯಿಸಿದ ಸಿಪಿಐನ ಕಾರ್ಯಕರ್ತರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಿಪಿಐ ಜಿಲ್ಲಾ ಕಾರ್ಯದರ್ಶಿ ಗಿರೀಶ್ ಮಾತನಾಡಿ, ಇಂದು ನಾವು ರಾಜ್ಯಾದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದೇವೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಬರ ಪರಿಹಾರ ಮೊತ್ತ ನೀಡುವಲ್ಲಿ ತಾರತಮ್ಯವನ್ನು ಮಾಡುವುದರ ಜೊತೆಗೆ ಪರಿಹಾರ ಕಾಮಗಾರಿಗಳನ್ನು ಸರಿಯಾಗಿ ನಿರ್ವಹಿಸಲು ವಿಫಲವಾಗಿವೆ. ಜುಲೈ ತಿಂಗಳು ಕಳೆಯುತ್ತಾ ಬಂದರೂ ಸಹ ಇಲ್ಲಿಯವರೆಗೂ ರೈತರಿಗೆ ಯಾವುದೇ ಪರಿಹಾರ ನೀಡದೆ ಸರ್ಕಾರ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ರಾಜ್ಯದ ಜನಪ್ರತಿನಿಧಿಗಳು ರಾಜೀನಾಮೆ ನೀಡುವ ಮೂಲಕ ರೆಸಾರ್ಟ್ ರಾಜಕಾರಣ ಮಾಡುತ್ತಿದ್ದಾರೆ. ಜನಪ್ರತಿನಿಧಿಗಳನ್ನು ಕಂಡು ನಗುವಂತಹ ಪರಿಸ್ಥಿತಿ ರಾಜ್ಯದಲ್ಲಿ ಉಂಟಾಗಿದೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಸಿಪಿಐ ವತಿಯಿಂದ ಸರ್ಕಾರದ ವಿರುದ್ಧ ಪ್ರತಿಭಟನೆ

ಪಡಿತರ ಚೀಟಿ ವ್ಯವಸ್ಥೆ, ನ್ಯಾಯಬೆಲೆ ಅಂಗಡಿಗಳನ್ನು ಏಕಾಏಕಿ ಸ್ಥಳಾಂತರಗೊಳಿಸುವುದನ್ನು ನಿಲ್ಲಿಸಬೇಕು. ಜನಸಂಖ್ಯೆಗೆ ಅನುಗುಣವಾಗಿ ಆಧಾರ್ ಕೇಂದ್ರಗಳನ್ನು ತೆರೆಯಬೇಕು. ಭೂ ರಹಿತ ಮತ್ತು ಬಡವರಿಗೆ ಬರಪರಿಹಾರ ಸೌಲಭ್ಯವನ್ನು ಶೀಘ್ರವಾಗಿ ಒದಗಿಸಬೇಕು ಎಂದು ಇದೇ ವೇಳೆ ಸರ್ಕಾರವನ್ನು ಒತ್ತಾಯಿಸಲಾಯಿತು.

Intro:ತುಮಕೂರು: ಬರ ಪರಿಹಾರ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ವಿರೋಧಿಸಿ ಭಾರತ ಕಮ್ಯೂನಿಸ್ಟ್ ಪಕ್ಷದ ಪಕ್ಷದ ಕಾರ್ಯಕರ್ತರು ಮತ್ತು ರೈತ-ಕಾರ್ಮಿಕರು ಪ್ರತಿಭಟನೆ ನಡೆಸಿದರು.


Body:ನಗರದ ಟೌನ್ ಹಾಲ್ ವೃತ್ತದಲ್ಲಿ ಜಮಾಜಿಸಿದ ಸಿ.ಪಿ.ಐ ನ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ನೀತಿಗಳನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.
ಇಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರ ಬರಗಾಲದ ಪರಿಹಾರದ ಮೊತ್ತ ನೀಡುವಲ್ಲಿ ತಾರತಮ್ಯವನ್ನು ಮಾಡುವುದರ ಜೊತೆಗೆ ಪರಿಹಾರ ಕಾಮಗಾರಿಗಳನ್ನು ಸರಿಯಾಗಿ ನಿರ್ವಹಿಸಲು ಸರ್ಕಾರಗಳು ವಿಫಲವಾಗಿವೆ. ಜುಲೈ ತಿಂಗಳು ಕಳೆಯುತ್ತಾ ಬಂದರೂ ಸಹ ಇಲ್ಲಿಯವರೆಗೂ ರೈತರಿಗೆ ಯಾವುದೇ ಪರಿಹಾರ ನೀಡದೆ ಸರ್ಕಾರ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಇನ್ನು ರಾಜ್ಯದ ಜನಪ್ರತಿನಿಧಿಗಳು ರಾಜೀನಾಮೆ ನೀಡುವ ಮೂಲಕ ರೆಸಾರ್ಟ್ ರಾಜಕಾರಣ ಮಾಡುತ್ತಿದ್ದಾರೆ. ಇಂತಹ ಕೆಲ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳನ್ನು ಕಂಡು ನಗುವಂತಹ ಪರಿಸ್ಥಿತಿ ರಾಜ್ಯದಲ್ಲಿ ಉಂಟಾಗಿದೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಗಿರೀಶ್ ತರಾಟೆಗೆ ತೆಗೆದುಕೊಂಡರು.
ಬೈಟ್: ಗಿರೀಶ್, ಜಿಲ್ಲಾ ಕಾರ್ಯದರ್ಶಿ.


Conclusion:ಪಡಿತರ ಚೀಟಿ ವ್ಯವಸ್ಥೆ, ನ್ಯಾಯಬೆಲೆ ಅಂಗಡಿಗಳನ್ನು ಏಕಾಏಕಿ ಸ್ಥಳಾಂತರಗೊಳಿಸುವುದು, ಜನಸಂಖ್ಯೆಗೆ ಅನುಗುಣವಾಗಿ ಆಧಾರ್ ಕೇಂದ್ರಗಳನ್ನು ತೆರೆಯದೇ ಇರುವುದು, ಭೂರಹಿತ ಮತ್ತು ಬಡವರಿಗೆ ಬರಪರಿಹಾರದ ಸೌಲಭ್ಯವನ್ನು ಶೀಘ್ರವಾಗಿ ಒದಾಗಿಸಬೇಕೆಂದು ಇದೇ ವೇಳೆ ಸರ್ಕಾರವನ್ನು ಒತ್ತಾಯಿಸಲಾಯಿತು.

ವರದಿ
ಸುಧಾಕರ

For All Latest Updates

TAGGED:

CPI Protest
ETV Bharat Logo

Copyright © 2025 Ushodaya Enterprises Pvt. Ltd., All Rights Reserved.