ETV Bharat / state

ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ: ಕೆಂಪು ವಲಯದಿಂದ ಕಿತ್ತಳೆಗೆ ತಿರುಗಿದ ತುಮಕೂರು ಜಿಲ್ಲೆ

author img

By

Published : May 25, 2021, 7:27 AM IST

Updated : May 25, 2021, 8:29 AM IST

ಮೇ 15 ರಿಂದ ವರದಿಯಾಗಿರುವ ಕೋವಿಡ್ ಸೋಂಕು ಪ್ರಕರಣಗಳನ್ನು ಅವಲೋಕಿಸಿದಾಗ ಪಾಸಿಟಿವ್ ಪ್ರಕರಣಗಳು ಇಳಿಮುಖವಾಗುತ್ತಿವೆ. ಕಳೆದ ಮೇ 15 ರಂದು 42.29%ರಷ್ಟಿದ್ದ ಸೋಂಕಿತರ ಸಂಖ್ಯೆ ಮೇ 23 ರಂದು 31.66%ಕ್ಕೆ ಇಳಿದಿದೆ. ಇದರಿಂದ ಕೆಂಪು ವಲಯದಲ್ಲಿದ್ದ ಜಿಲ್ಲೆಯು ಕಿತ್ತಳೆ ವಲಯಕ್ಕೆ ಬಂದಿದೆ. ಈ ತಿಂಗಳಾಂತ್ಯದೊಳಗೆ ಸೋಂಕು ಹರಡುವಿಕೆ ಪ್ರಮಾಣ ಮತ್ತಷ್ಟು ಕಡಿಮೆಯಾಗುವ ವಿಶ್ವಾಸವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

ಸಚಿವ ಜೆ.ಸಿ.ಮಾಧುಸ್ವಾಮಿ
ಸಚಿವ ಜೆ.ಸಿ.ಮಾಧುಸ್ವಾಮಿ

ತುಮಕೂರು: ಜಿಲ್ಲೆಯಲ್ಲಿ 28,000 ಇದ್ದ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ಪ್ರಸ್ತುತ 19,000ಕ್ಕೆ ಇಳಿದಿದ್ದು, ಕೆಂಪು ವಲಯದಲ್ಲಿದ್ದ ಜಿಲ್ಲೆಯು ಕಿತ್ತಳೆ ವಲಯಕ್ಕೆ ಬಂದಿದೆ.

ಪಾಸಿಟಿವ್ ಪ್ರಕರಣಗಳು ಇಳಿಮುಖ:

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಎಲ್ಲಾ ಜಿಲ್ಲೆಗಳ ಪರಿಶೀಲನೆ ಕೈಗೊಂಡ ಸಂದರ್ಭದಲ್ಲಿ ಜಿಲ್ಲಾಡಳಿತ ಮತ್ತು ಅಧಿಕಾರಿಗಳ ಉತ್ತಮ ಕಾರ್ಯ ನಿರ್ವಹಣೆಯಿಂದಾಗಿ ಕೊರೊನಾ ಅಬ್ಬರ ದಿನೆ ದಿನೇ ತಗ್ಗಿ ಕಿತ್ತಲೆ ವಲಯಕ್ಕೆ ಬಂದಿರುವುದು ಒಳ್ಳೆಯ ಸೂಚನೆ. ಮೇ 15 ರಿಂದ ವರದಿಯಾಗಿರುವ ಕೋವಿಡ್ ಸೋಂಕು ಪ್ರಕರಣಗಳನ್ನು ಅವಲೋಕಿಸಿದಾಗ ಪಾಸಿಟಿವ್ ಪ್ರಕರಣಗಳು ಇಳಿಮುಖವಾಗುತ್ತಿವೆ. ಕಳೆದ ಮೇ 15 ರಂದು 42.29%ರಷ್ಟಿದ್ದ ಸೋಂಕಿತರ ಸಂಖ್ಯೆ ಮೇ 23 ರಂದು 31.66%ಕ್ಕೆ ಇಳಿದಿದೆ ಎಂದರು.

ಕೋವಿಡ್ ಕೇರ್ ಸೆಂಟರ್​ಗೆ ಕಳುಹಿಸುವ ನಿರ್ಧಾರ:

ಗ್ರಾಮಗಳಲ್ಲಿ ಹರಡುತ್ತಿರುವ ಕೊರೊನಾ ಸೋಂಕಿನ ಪ್ರಸರಣ ತಡೆಗೆ ಜಿಲ್ಲಾಡಳಿತದ ಜೊತೆಗೆ ಜನರ ಸಹಕಾರ ಅಗತ್ಯ. ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಹೆಚ್ಚುತ್ತಿರುವುದಿಂದ ಹಳ್ಳಿಗಳ ಸೋಂಕಿತರನ್ನು ಕೋವಿಡ್ ಆರೈಕೆ ಕೇಂದ್ರಕ್ಕೆ ಸ್ಥಳಾಂತರಿಸಲಾಗುತ್ತಿದೆ. ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್​ಗೆ ಕಳುಹಿಸುವ ನಿರ್ಧಾರದಿಂದ ಜಿಲ್ಲೆಯಲ್ಲಿ ಕೋವಿಡ್ ಪರಿಸ್ಥಿತಿ ಸುಧಾರಣೆಯಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಬೆಳಗಾವಿಯಲ್ಲಿ ಪ್ರತಿ 100 ರಲ್ಲಿ 33 ಜನರಿಗೆ ಸೋಂಕು: ಗುಣಮುಖ ಪ್ರಮಾಣ ದುಪ್ಪಟ್ಟು

ತಾಲೂಕುಗಳಲ್ಲಿ ಕೋವಿಡ್ ನಿರ್ವಹಣೆ ಸಭೆ:

ಜಿಲ್ಲೆಯಲ್ಲಿ ಈವರೆಗೂ 17 ಕೋವಿಡ್ ಆರೈಕೆ ಕೇಂದ್ರಗಳನ್ನು ತೆರೆಯಲಾಗಿದೆ. ಸಾರ್ವಜನಿಕರು ಇಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗುತ್ತಿದ್ದಾರೆ. ಕೋವಿಡ್ ನಿರ್ವಹಣೆ ವಿಚಾರವಾಗಿ ಎಲ್ಲಾ ತಾಲ್ಲೂಕುಗಳಲ್ಲಿ ಸಭೆ ನಡೆಸಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಕೋವಿಡ್ ಪರೀಕ್ಷೆ ನಡೆಸಲು ಸಂಚಾರಿ ಬಸ್:

ನಾಳೆಯಿಂದ ನಿತ್ಯ ಆರು ಸಾವಿರ ಕೋವಿಡ್ ಪರೀಕ್ಷೆ ನಡೆಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಆರ್​ಟಿ-ಪಿಸಿಆರ್ 4500 ಹಾಗೂ 2500 ರ್‍ಯಾಟ್ ಟೆಸ್ಟ್ ನಡೆಸಲು ಸೂಚನೆ ನೀಡಲಾಗಿದೆ. ಬೆಂಗಳೂರಿನ ರೋಟರಿ ಸಂಸ್ಥೆಯವರು ಕೋವಿಡ್ ಪರೀಕ್ಷೆ ನಡೆಸಲು ಸಂಚಾರಿ ಬಸ್ ನೀಡಿದ್ದು ಹೆಚ್ಚು ಕೋವಿಡ್ ಪರೀಕ್ಷೆ ಮಾಡಲು ಸಹಕಾರಿಯಾಗಲಿದೆ. ಸರ್ಕಾರಿ ಆಸ್ಪತ್ರೆಗಳಲ್ಲದೆ ಸಿದ್ದಾರ್ಥ, ಶ್ರೀದೇವಿ ಮೆಡಿಕ್ಲ್​ ಕಾಲೇಜುಗಳಲ್ಲಿ ತಲಾ 200 ಪರೀಕ್ಷೆ ಮಾಡಲು ಸೂಚನೆ ನೀಡಲಾಗಿದೆ ಎಂದರು.

ಸೇಫ್ ಝೋನ್​ಗೆ ತರುವ ವಿಶ್ವಾಸ:

ಈ ತಿಂಗಳಾಂತ್ಯದೊಳಗೆ ಸೋಂಕು ಹರಡುವಿಕೆ ಪ್ರಮಾಣ ಮತ್ತಷ್ಟು ಕಡಿಮೆಯಾಗುವ ವಿಶ್ವಾಸವಿದೆ. ಪ್ರಸ್ತುತ ಜಿಲ್ಲೆಯಲ್ಲಿ ಒಟ್ಟು 19365 ಸಕ್ರಿಯ ಪ್ರಕರಣಗಳಿದ್ದು, ಸೋಂಕಿನ ಪ್ರಮಾಣವನ್ನು ಮತ್ತಷ್ಟು ಇಳಿಸಿ ಸೇಫ್ ಝೋನ್​ಗೆ ತರಲಾಗುವುದೆಂದು ವಿಶ್ವಾಸ ವ್ಯಕ್ತಪಡಿಸಿದರು.

ತುಮಕೂರು: ಜಿಲ್ಲೆಯಲ್ಲಿ 28,000 ಇದ್ದ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ಪ್ರಸ್ತುತ 19,000ಕ್ಕೆ ಇಳಿದಿದ್ದು, ಕೆಂಪು ವಲಯದಲ್ಲಿದ್ದ ಜಿಲ್ಲೆಯು ಕಿತ್ತಳೆ ವಲಯಕ್ಕೆ ಬಂದಿದೆ.

ಪಾಸಿಟಿವ್ ಪ್ರಕರಣಗಳು ಇಳಿಮುಖ:

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಎಲ್ಲಾ ಜಿಲ್ಲೆಗಳ ಪರಿಶೀಲನೆ ಕೈಗೊಂಡ ಸಂದರ್ಭದಲ್ಲಿ ಜಿಲ್ಲಾಡಳಿತ ಮತ್ತು ಅಧಿಕಾರಿಗಳ ಉತ್ತಮ ಕಾರ್ಯ ನಿರ್ವಹಣೆಯಿಂದಾಗಿ ಕೊರೊನಾ ಅಬ್ಬರ ದಿನೆ ದಿನೇ ತಗ್ಗಿ ಕಿತ್ತಲೆ ವಲಯಕ್ಕೆ ಬಂದಿರುವುದು ಒಳ್ಳೆಯ ಸೂಚನೆ. ಮೇ 15 ರಿಂದ ವರದಿಯಾಗಿರುವ ಕೋವಿಡ್ ಸೋಂಕು ಪ್ರಕರಣಗಳನ್ನು ಅವಲೋಕಿಸಿದಾಗ ಪಾಸಿಟಿವ್ ಪ್ರಕರಣಗಳು ಇಳಿಮುಖವಾಗುತ್ತಿವೆ. ಕಳೆದ ಮೇ 15 ರಂದು 42.29%ರಷ್ಟಿದ್ದ ಸೋಂಕಿತರ ಸಂಖ್ಯೆ ಮೇ 23 ರಂದು 31.66%ಕ್ಕೆ ಇಳಿದಿದೆ ಎಂದರು.

ಕೋವಿಡ್ ಕೇರ್ ಸೆಂಟರ್​ಗೆ ಕಳುಹಿಸುವ ನಿರ್ಧಾರ:

ಗ್ರಾಮಗಳಲ್ಲಿ ಹರಡುತ್ತಿರುವ ಕೊರೊನಾ ಸೋಂಕಿನ ಪ್ರಸರಣ ತಡೆಗೆ ಜಿಲ್ಲಾಡಳಿತದ ಜೊತೆಗೆ ಜನರ ಸಹಕಾರ ಅಗತ್ಯ. ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಹೆಚ್ಚುತ್ತಿರುವುದಿಂದ ಹಳ್ಳಿಗಳ ಸೋಂಕಿತರನ್ನು ಕೋವಿಡ್ ಆರೈಕೆ ಕೇಂದ್ರಕ್ಕೆ ಸ್ಥಳಾಂತರಿಸಲಾಗುತ್ತಿದೆ. ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್​ಗೆ ಕಳುಹಿಸುವ ನಿರ್ಧಾರದಿಂದ ಜಿಲ್ಲೆಯಲ್ಲಿ ಕೋವಿಡ್ ಪರಿಸ್ಥಿತಿ ಸುಧಾರಣೆಯಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಬೆಳಗಾವಿಯಲ್ಲಿ ಪ್ರತಿ 100 ರಲ್ಲಿ 33 ಜನರಿಗೆ ಸೋಂಕು: ಗುಣಮುಖ ಪ್ರಮಾಣ ದುಪ್ಪಟ್ಟು

ತಾಲೂಕುಗಳಲ್ಲಿ ಕೋವಿಡ್ ನಿರ್ವಹಣೆ ಸಭೆ:

ಜಿಲ್ಲೆಯಲ್ಲಿ ಈವರೆಗೂ 17 ಕೋವಿಡ್ ಆರೈಕೆ ಕೇಂದ್ರಗಳನ್ನು ತೆರೆಯಲಾಗಿದೆ. ಸಾರ್ವಜನಿಕರು ಇಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗುತ್ತಿದ್ದಾರೆ. ಕೋವಿಡ್ ನಿರ್ವಹಣೆ ವಿಚಾರವಾಗಿ ಎಲ್ಲಾ ತಾಲ್ಲೂಕುಗಳಲ್ಲಿ ಸಭೆ ನಡೆಸಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಕೋವಿಡ್ ಪರೀಕ್ಷೆ ನಡೆಸಲು ಸಂಚಾರಿ ಬಸ್:

ನಾಳೆಯಿಂದ ನಿತ್ಯ ಆರು ಸಾವಿರ ಕೋವಿಡ್ ಪರೀಕ್ಷೆ ನಡೆಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಆರ್​ಟಿ-ಪಿಸಿಆರ್ 4500 ಹಾಗೂ 2500 ರ್‍ಯಾಟ್ ಟೆಸ್ಟ್ ನಡೆಸಲು ಸೂಚನೆ ನೀಡಲಾಗಿದೆ. ಬೆಂಗಳೂರಿನ ರೋಟರಿ ಸಂಸ್ಥೆಯವರು ಕೋವಿಡ್ ಪರೀಕ್ಷೆ ನಡೆಸಲು ಸಂಚಾರಿ ಬಸ್ ನೀಡಿದ್ದು ಹೆಚ್ಚು ಕೋವಿಡ್ ಪರೀಕ್ಷೆ ಮಾಡಲು ಸಹಕಾರಿಯಾಗಲಿದೆ. ಸರ್ಕಾರಿ ಆಸ್ಪತ್ರೆಗಳಲ್ಲದೆ ಸಿದ್ದಾರ್ಥ, ಶ್ರೀದೇವಿ ಮೆಡಿಕ್ಲ್​ ಕಾಲೇಜುಗಳಲ್ಲಿ ತಲಾ 200 ಪರೀಕ್ಷೆ ಮಾಡಲು ಸೂಚನೆ ನೀಡಲಾಗಿದೆ ಎಂದರು.

ಸೇಫ್ ಝೋನ್​ಗೆ ತರುವ ವಿಶ್ವಾಸ:

ಈ ತಿಂಗಳಾಂತ್ಯದೊಳಗೆ ಸೋಂಕು ಹರಡುವಿಕೆ ಪ್ರಮಾಣ ಮತ್ತಷ್ಟು ಕಡಿಮೆಯಾಗುವ ವಿಶ್ವಾಸವಿದೆ. ಪ್ರಸ್ತುತ ಜಿಲ್ಲೆಯಲ್ಲಿ ಒಟ್ಟು 19365 ಸಕ್ರಿಯ ಪ್ರಕರಣಗಳಿದ್ದು, ಸೋಂಕಿನ ಪ್ರಮಾಣವನ್ನು ಮತ್ತಷ್ಟು ಇಳಿಸಿ ಸೇಫ್ ಝೋನ್​ಗೆ ತರಲಾಗುವುದೆಂದು ವಿಶ್ವಾಸ ವ್ಯಕ್ತಪಡಿಸಿದರು.

Last Updated : May 25, 2021, 8:29 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.