ತುಮಕೂರು: ಕಾರು ಚಾಲಕನ ಅಜಾಗರೂಕತೆಯಿಂದ ರಸ್ತೆ ವಿಭಜಕವನ್ನು ದಾಟಿ ಮತ್ತೊಂದು ಬದಿಯಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಶಿವಾಜಿನಗರದ ಬಳಿ ನಡೆದಿದೆ.
ಮೃತಪಟ್ಟವರನ್ನು ರಾಘವೇಂದ್ರ ಜೋಷಿ(50), ಶಾಮ್ (40) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಕಾಳಿ ಮುತ್ತು ಮತ್ತು ಆಚಾರ್ಯ ಎಂಬುವರನ್ನು ತುಮಕೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೊಸಪೇಟೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರಿನ ಚಾಲಕ ರಾಘವೇಂದ್ರನ ಅಜಾಗರೂಕತೆಯಿಂದ ಕಾರು ರಸ್ತೆ ವಿಭಜಕ ದಾಟಿದೆ. ಬೆಂಗಳೂರಿಂದ ಚಿತ್ರದುರ್ಗದ ಕಡೆಗೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಘಟನೆಗೆ ಸಂಬಂಧಪಟ್ಟಂತೆ ಶಿರಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.