ETV Bharat / state

ಪಾಠ ಮಾಡುತ್ತಿದ್ದಾಗ ಕುಸಿಯಿತು ಸರ್ಕಾರಿ ಶಾಲಾ ಚಾವಣಿ: ಮುಂದೇನಾಯ್ತು?

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕು ದೊಡ್ಡ ಪಾಳ್ಯದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡ ಚಾವಣಿ ಕುಸಿದ ಪರಿಣಾಮ ಶಿಕ್ಷಣಾಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

author img

By

Published : Dec 5, 2019, 6:00 PM IST

Villagers' outrage over school building repairs in tumakuru
ಶಾಲಾ ಕಟ್ಟಡ ದುರಸ್ತಿಗೆ ಗ್ರಾಮಸ್ತರ ಆಕ್ರೋಶ

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು ದೊಡ್ಡ ಪಾಳ್ಯದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಚಾವಣಿ ಹಾಗೂ ಕಂಬಗಳು ಧರೆಗುರುಳಿದ್ದು, ಅದೃಷ್ಟವಶಾತ್​ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶಾಲಾ ಕಟ್ಟಡ ದುರಸ್ತಿಗೆ ಗ್ರಾಮಸ್ಥರ ಆಗ್ರಹ

40 ವರ್ಷ ಹಳೆಯದಾದ ಕಟ್ಟದಲ್ಲಿಯೇ ವಿದ್ಯಾರ್ಥಿಗಳಿಗೆ ಪಾಠ ಹೇಳಲಾಗುತ್ತಿತ್ತು. ಎಂದಿನಂತೆ ಶಾಲೆಗೆ ಬಂದ ವಿದ್ಯಾರ್ಥಿಗಳು ಶಿಥಿಲಗೊಂಡ ಕೊಠಡಿಯಲ್ಲಿಯೇ ಕುಳಿತುಕೊಂಡಿದ್ದರು. ಕುಸಿಯುವ ಮುನ್ಸೂಚನೆ ತಿಳಿಯುತ್ತಿದ್ದಂತೆ ಕೊಠಡಿಯಿಂದ ವಿದ್ಯಾರ್ಥಿಗಳು ಹೊರಗೆ ಓಡಿ ಬಂದಿದ್ದಾರೆ. ಸಣ್ಣ ಪುಟ್ಟ ಗಾಯಗೊಳೊಂದಿಗೆ ಮಕ್ಕಳು ಪಾರಾಗಿದ್ದಾರೆ.

ಸ್ಥಳಕ್ಕೆ ತಹಶಿಲ್ದಾರ್ ತೇಜಸ್ವಿನಿ ಮತ್ತು ಚಿಕ್ಕನಾಯಕನಹಳ್ಳಿ ಬಿಇಒ ಕಾತ್ಯಾಯಿನಿ ಭೇಟಿ ನೀಡಿದ್ದರು. ಸಾರ್ವಜನಿಕರು ಹಾಗೂ ಮಕ್ಕಳ ಪಾಲಕರು ಅಧಿಕಾರಿಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

ಡಿಡಿಪಿಒ ಕಚೇರಿಗೆ ಈ ಬಗ್ಗೆ ಅನೇಕ ಬಾರಿ ಮನವಿ ನೀಡಲಾಗಿದೆ. ಯಾವ ಅಧಿಕಾರಿಗಳು ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ಈಗಾಗಲೇ ಅನುದಾನ ಬಿಡುಗಡೆಯಾಗಿದ್ದು, ಕೂಡಲೇ ದುರಸ್ತಿ ಕಾರ್ಯ ಕೈಗೊಂಳ್ಳುವುದಾಗಿ ಅಧಿಕಾರಿಗಳು ಈಟಿವಿ ಭಾರತಕ್ಕೆ ತಿಳಿಸಿದ್ದಾರೆ.

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು ದೊಡ್ಡ ಪಾಳ್ಯದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಚಾವಣಿ ಹಾಗೂ ಕಂಬಗಳು ಧರೆಗುರುಳಿದ್ದು, ಅದೃಷ್ಟವಶಾತ್​ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶಾಲಾ ಕಟ್ಟಡ ದುರಸ್ತಿಗೆ ಗ್ರಾಮಸ್ಥರ ಆಗ್ರಹ

40 ವರ್ಷ ಹಳೆಯದಾದ ಕಟ್ಟದಲ್ಲಿಯೇ ವಿದ್ಯಾರ್ಥಿಗಳಿಗೆ ಪಾಠ ಹೇಳಲಾಗುತ್ತಿತ್ತು. ಎಂದಿನಂತೆ ಶಾಲೆಗೆ ಬಂದ ವಿದ್ಯಾರ್ಥಿಗಳು ಶಿಥಿಲಗೊಂಡ ಕೊಠಡಿಯಲ್ಲಿಯೇ ಕುಳಿತುಕೊಂಡಿದ್ದರು. ಕುಸಿಯುವ ಮುನ್ಸೂಚನೆ ತಿಳಿಯುತ್ತಿದ್ದಂತೆ ಕೊಠಡಿಯಿಂದ ವಿದ್ಯಾರ್ಥಿಗಳು ಹೊರಗೆ ಓಡಿ ಬಂದಿದ್ದಾರೆ. ಸಣ್ಣ ಪುಟ್ಟ ಗಾಯಗೊಳೊಂದಿಗೆ ಮಕ್ಕಳು ಪಾರಾಗಿದ್ದಾರೆ.

ಸ್ಥಳಕ್ಕೆ ತಹಶಿಲ್ದಾರ್ ತೇಜಸ್ವಿನಿ ಮತ್ತು ಚಿಕ್ಕನಾಯಕನಹಳ್ಳಿ ಬಿಇಒ ಕಾತ್ಯಾಯಿನಿ ಭೇಟಿ ನೀಡಿದ್ದರು. ಸಾರ್ವಜನಿಕರು ಹಾಗೂ ಮಕ್ಕಳ ಪಾಲಕರು ಅಧಿಕಾರಿಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

ಡಿಡಿಪಿಒ ಕಚೇರಿಗೆ ಈ ಬಗ್ಗೆ ಅನೇಕ ಬಾರಿ ಮನವಿ ನೀಡಲಾಗಿದೆ. ಯಾವ ಅಧಿಕಾರಿಗಳು ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ಈಗಾಗಲೇ ಅನುದಾನ ಬಿಡುಗಡೆಯಾಗಿದ್ದು, ಕೂಡಲೇ ದುರಸ್ತಿ ಕಾರ್ಯ ಕೈಗೊಂಳ್ಳುವುದಾಗಿ ಅಧಿಕಾರಿಗಳು ಈಟಿವಿ ಭಾರತಕ್ಕೆ ತಿಳಿಸಿದ್ದಾರೆ.

Intro:Body:ಈ ಟಿವಿ ಭಾರತ್ ಇಂಪ್ಯಾಕ್ಟ್……
ಶಾಲಾಕಟ್ಟಡದ ಚಾವಣಿ ಕುಸಿತ : ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ತಹಸೀಲ್ದಾರ್, ಬಿಇಒ…..
ತುಮಕೂರು
ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕು ದೊಡ್ಡ ಪಾಳ್ಯದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಛಾವಣಿ ಹಾಗೂ ಕಟ್ಟಡದ ಕಂಬ ಕುಸಿದುಬಿದ್ದು ಅದೃಷ್ಟವಶಾತ್ ಶಾಲಾ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಕುರಿತು ಸುದ್ದಿ ‘ಈಟಿವಿ ಭಾರತ್ ‘ ಬಂದ ತಕ್ಷಣ ಸ್ಥಳಕ್ಕೆ ತಹಸೀಲ್ದಾರ್ ತೇಜಸ್ವಿನಿ ಮತ್ತು ಚಿಕ್ಕನಾಯಕನಹಳ್ಳಿ ಬಿಇಒ ಕಾತ್ಯಾಯಿನಿ
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇಂದು ಶಾಲೆಯಲ್ಲಿ ಇಂದು ಬೆಳಗ್ಗೆ 10 ಸಂದರ್ಭದಲ್ಲಿ ಘಟನೆ ನಡೆದಿತ್ತು.
ಶಾಲೆಯ ಕಟ್ಟಡ ದುರಸ್ತಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ಹಿರಿಯ ಅಧಿಕಾರಿಗಳಿಗೆ ಕಳುಹಿಸಿದ್ದೇವೆ. ಡಿಡಿಪಿಒ ಕಚೇರಿ ಗಮನಕ್ಕೆ ತರಲಾಗಿದೆ. ಈ ವಷಱದ 1.5ಲಕ್ಷ ರೂ. ಹಣ ಬಿಡುಗಡೆಯಾಗಿತ್ತು ಎಂದು ಬಿಇಒ ಕಾತ್ಯಾಯಿನಿ ತಿಳಿಸಿದ್ದಾರೆ.
ಬೈಟ್ : ಕಾತ್ಯಾಯಿನಿ, ಕ್ಷೇತ್ರ ಶಿಕ್ಷಣಾಧಿಕಾರಿ.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.