ETV Bharat / state

'ಕರೆಂಟ್ ಬಿಲ್ ನಾವು ಕಟ್ಟಲ್ಲ'.. ಬೆಸ್ಕಾಂ ಸಿಬ್ಬಂದಿಯೊಂದಿಗೆ ಮಹಿಳೆ ಮಾತಿನ ಚಕಮಕಿ

author img

By

Published : May 18, 2023, 7:37 PM IST

ಬೆಸ್ಕಾಂ, ಜೆಸ್ಕಾಂ ಸೇರಿದಂತೆ ರಾಜ್ಯದ ವಿದ್ಯುತ್​ ವಿತರಣಾ ಕಂಪನಿಗಳ ಸಿಬ್ಬಂದಿಗೆ ಹೊಸ ತಲೆನೋವು ಶುರುವಾಗಿದೆ. ಚುನಾವಣಾ ಫಲಿತಾಂಶ ಬಂದ ಬಳಿಕ ಜನರು ಕರೆಂಟ್​ ಬಿಲ್​ ಕಟ್ಟಲ್ಲ ಎಂದು ಹೇಳುತ್ತಿದ್ದಾರೆ.

ಬೆಸ್ಕಾಂ ಸಿಬ್ಬಂದಿಗೆ ಗದರಿದ ಮಹಿಳೆ
ಬೆಸ್ಕಾಂ ಸಿಬ್ಬಂದಿಗೆ ಗದರಿದ ಮಹಿಳೆ

ಬೆಸ್ಕಾಂ ಸಿಬ್ಬಂದಿಗೆ ಗದರಿದ ಮಹಿಳೆ

ತುಮಕೂರು : ಕರೆಂಟ್ ಬಿಲ್ ನಾವು ಕಟ್ಟಲ್ಲ. ಅದ್ಯಾರ ಬರ್ತಾರೊ ಬರಲಿ. ಬೆಸ್ಕಾಂ ಸಿಬ್ಬಂದಿಗೆ ವೃದ್ಧೆಯೊಬ್ಬರು ಅವಾಜ್ ಹಾಕಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಟಿ ಗೊಲ್ಲಹಳ್ಳಿಯಲ್ಲಿ ನಡೆದಿದೆ. ಮೇ ತಿಂಗಳ ಬಿಲ್ ಕೊಡಲು ತೆರಳಿದ್ದ ಬೆಸ್ಕಾಂ ಸಿಬ್ಬಂದಿಗೆ, ಕಾಂಗ್ರೆಸ್ ಪಕ್ಷದವರು ಫ್ರೀ ಕೊಡ್ತಿನಿ ಅಂದಿದ್ರು. ಈಗ ನೀವು ಬಿಲ್ ಕೇಳೋಕೆ ಬಂದಿದ್ದಿರಾ? ಎಂದು ಪ್ರಶ್ನಿಸಿದ್ದಾರೆ.

ನಾವು ಬಿಲ್ ಕಟ್ಟಲ್ಲ. ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಅವರನ್ನು ಕೇಳಿ ಎಂದು ತಿಳಿಸಿದ್ದಾರೆ. ಸರ್ಕಾರ ಬಂದ ಮೇಲೇ ಕರೆಂಟ್‌ ಫ್ರೀ‌ ಅಂದಿದ್ರು. ಈಗ ನೀವು ಬಿಲ್ ಕೇಳಬೇಡಿ. ಇನ್ಮೆಲಿಂದ ನಮ್ಮೂರಿಗೆ ಬಿಲ್ ಕೇಳೋಕೆ ಬರಬೇಡಿ ಎಂದು ಮಹಿಳೆ ಬೆಸ್ಕಾಂ ಸಿಬ್ಬಂದಿಯೊಂದಿಗೆ ಮಾತಿನ ಚಕಮಕಿ ನಡೆಸಿದ್ದಾರೆ.

ಕೊಪ್ಪಳದಲ್ಲಿ ವಿದ್ಯುತ್ ಬಿಲ್ ಪಾವತಿಗೆ ಮಹಿಳೆ ನಿರಾಕರಣೆ : ಇನ್ನೊಂದೆಡೆ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಮಾಸಿಕ ರಾಜ್ಯದ ಪ್ರತಿ ಮನೆಗೂ ತಲಾ 200 ಯುನಿಟ್ ವಿದ್ಯುತ್ ಉಚಿತವಾಗಿ ಕೊಡುತ್ತೇನೆ ಎಂಬ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಇದೀಗ ಜೆಸ್ಕಾಂ ಇಲಾಖೆಯ ಸಿಬ್ಬಂದಿಯನ್ನು ಪೇಚಿಗೆ ಸಿಲುಕಿಸಿದೆ.

ವಿದ್ಯುತ್ ಬಿಲ್ ಹಿಡಿದು ಹೋಗುತ್ತಿರುವ ಜೆಸ್ಕಾಂ ಸಿಬ್ಬಂದಿಯೊಂದಿಗೆ ಅಲ್ಲಲ್ಲಿ ಜನ ವಿದ್ಯುತ್ ಬಿಲ್ ಕಟ್ಟುವುದಿಲ್ಲ ಎಂದು ಜಗಳ ಕಾಯುತ್ತಿರುವ ಮಧ್ಯೆಯೇ ಇದೀಗ ಕಾರಟಗಿ ತಾಲ್ಲೂಕಿನ ಕುಂಟೋಜಿ ಗ್ರಾಮದಲ್ಲಿ ಮಹಿಳೆಯೊಬ್ಬರು ರಂಪಾಟ ತೆಗೆದಿರುವ ಘಟನೆ ನಡೆದಿದೆ.

ಪ್ರತಿ ತಿಂಗಳಿನಂತೆ ಕಾರಟಗಿ ವಿಭಾಗದ ಜೆಸ್ಕಾಂ ಸಿಬ್ಬಂದಿ ಕುಂಟೋಜಿ ಗ್ರಾಮದ ವಿದ್ಯುತ್ ಬಳಕೆದಾರರ ಮನೆಗೆ ಬಿಲ್ ನೀಡಲು ತೆರಳಿದ್ದಾರೆ. ಈ ಸಂದರ್ಭದಲ್ಲಿ ಮನೆಯಲ್ಲಿದ್ದ ಮಹಿಳೆಯೊಬ್ಬರು ಬಿಲ್ ಕಟ್ಟುವುದಿರಲಿ, ಬಿಲ್ ಪ್ರತಿ ಸ್ವೀಕರಿಸಲು ಹಿಂದೇಟು ಹಾಕಿದ್ದಾರೆ.

ಬೆಸ್ಕಾಂ ಸಿಬ್ಬಂದಿಗೆ ಗದರಿದ ಮಹಿಳೆ

ಜೆಸ್ಕಾಂ ಸಿಬ್ಬಂದಿಯೊಂದಿಗೆ ವಾದಕ್ಕಿಳಿದ ಮಹಿಳೆ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಒಂದು ನಯಾಪೈಸೆ ಕರೆಂಟು ಬಿಲ್ ಕಟ್ಟುವುದು ಬೇಕಿಲ್ಲ ಎಂದು ಈಗಾಗಲೇ ಹೇಳಿದ್ದಾರೆ. ನಾವು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ ಅಧಿಕಾರಕ್ಕೆ ತಂದಿದ್ದೇವೆ. ಹೀಗಾಗಿ ನಾವು ಬಿಲ್ ಕಟ್ಟುವುದಿಲ್ಲ ಎಂದು ಮಹಿಳೆ ಜೆಸ್ಕಾಂ ಸಿಬ್ಬಂದಿಯೊಂದಿಗೆ ವಾದಕ್ಕಿಳಿದಿದ್ದಾರೆ. ಇನ್ನು ಸರ್ಕಾರದಿಂದ ಅಧಿಕೃತ ಆದೇಶ ಬಂದಿಲ್ಲ. ಹೀಗಾಗಿ ಬಿಲ್​ ಪ್ರತಿ ಪಡೆದುಕೊಂಡು ಕಟ್ಟಬೇಕು ಎಂದು ಸಿಬ್ಬಂದಿ ಹೇಳಿದ್ದರೂ ಕೇಳಿಸಿಕೊಳ್ಳದ ಮಹಿಳೆ, ಸಿಬ್ಬಂದಿಯೊಂದಿಗೆ ವಾದ ಮಾಡಿ ಬಿಲ್ ಕಟ್ಟುವುದಿಲ್ಲ ಎಂದು ಕರಾರುವಕ್ಕಾಗಿ ಹೇಳಿದ್ದಾರೆ.

ಜೆಸ್ಕಾಂ ಸಿಬ್ಬಂದಿ ಮತ್ತು ಮಹಿಳೆ ನಡುವಿನ ವಾಗ್ವಾದವನ್ನು ವ್ಯಕ್ತಿಯೊಬ್ಬರು ವಿಡಿಯೋ ಮಾಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಬಿಲ್ ಕಟ್ಟುವುದಿಲ್ಲ ಎಂದು ಜನ ಹೇಳುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ಜೆಸ್ಕಾಂ ಸಿಬ್ಬಂದಿ ಪರದಾಡುವ ಸನ್ನಿವೇಶ ನಿರ್ಮಾಣವಾಗಿದೆ.

ಜೆಸ್ಕಾಂ ಸಿಬ್ಬಂದಿ ಮತ್ತು ಮಹಿಳೆ ನಡುವಿನ ವಾಗ್ವಾದವನ್ನು ವ್ಯಕ್ತಿಯೊಬ್ಬರು ವಿಡಿಯೋ ಮಾಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕಾಂಗ್ರೆಸ್​ ಹೇಳಿದ್ದೇನು.. ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮೊದಲ ಕ್ಯಾಬಿನೆಟ್​ ಸಭೆಯಲ್ಲೇ ಐದು ಗ್ಯಾರಂಟಿಗಳಿಗೆ ಅನುಮೋದನೆ ನೀಡುತ್ತೇವೆ. ಆಗ 200 ಯುನಿಟ್​ವರೆಗಿನ ವಿದ್ಯುತ್ ಬಳಕೆಗೆ​ ಬಿಲ್​ ಇರುವುದಿಲ್ಲ ಎಂದಿದ್ದರು.

ಇದನ್ನೂ ಓದಿ: ಕರೆಂಟ್ ಫ್ರೀ ಎಂದು ಹೇಳಿದ್ದಾರೆ, ನಾವು ಬಿಲ್ ಕಟ್ಟಲ್ಲ​ ಎಂದ ಗ್ರಾಮಸ್ಥರು!: ವಿಡಿಯೋ ವೈರಲ್​

ಬೆಸ್ಕಾಂ ಸಿಬ್ಬಂದಿಗೆ ಗದರಿದ ಮಹಿಳೆ

ತುಮಕೂರು : ಕರೆಂಟ್ ಬಿಲ್ ನಾವು ಕಟ್ಟಲ್ಲ. ಅದ್ಯಾರ ಬರ್ತಾರೊ ಬರಲಿ. ಬೆಸ್ಕಾಂ ಸಿಬ್ಬಂದಿಗೆ ವೃದ್ಧೆಯೊಬ್ಬರು ಅವಾಜ್ ಹಾಕಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಟಿ ಗೊಲ್ಲಹಳ್ಳಿಯಲ್ಲಿ ನಡೆದಿದೆ. ಮೇ ತಿಂಗಳ ಬಿಲ್ ಕೊಡಲು ತೆರಳಿದ್ದ ಬೆಸ್ಕಾಂ ಸಿಬ್ಬಂದಿಗೆ, ಕಾಂಗ್ರೆಸ್ ಪಕ್ಷದವರು ಫ್ರೀ ಕೊಡ್ತಿನಿ ಅಂದಿದ್ರು. ಈಗ ನೀವು ಬಿಲ್ ಕೇಳೋಕೆ ಬಂದಿದ್ದಿರಾ? ಎಂದು ಪ್ರಶ್ನಿಸಿದ್ದಾರೆ.

ನಾವು ಬಿಲ್ ಕಟ್ಟಲ್ಲ. ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಅವರನ್ನು ಕೇಳಿ ಎಂದು ತಿಳಿಸಿದ್ದಾರೆ. ಸರ್ಕಾರ ಬಂದ ಮೇಲೇ ಕರೆಂಟ್‌ ಫ್ರೀ‌ ಅಂದಿದ್ರು. ಈಗ ನೀವು ಬಿಲ್ ಕೇಳಬೇಡಿ. ಇನ್ಮೆಲಿಂದ ನಮ್ಮೂರಿಗೆ ಬಿಲ್ ಕೇಳೋಕೆ ಬರಬೇಡಿ ಎಂದು ಮಹಿಳೆ ಬೆಸ್ಕಾಂ ಸಿಬ್ಬಂದಿಯೊಂದಿಗೆ ಮಾತಿನ ಚಕಮಕಿ ನಡೆಸಿದ್ದಾರೆ.

ಕೊಪ್ಪಳದಲ್ಲಿ ವಿದ್ಯುತ್ ಬಿಲ್ ಪಾವತಿಗೆ ಮಹಿಳೆ ನಿರಾಕರಣೆ : ಇನ್ನೊಂದೆಡೆ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಮಾಸಿಕ ರಾಜ್ಯದ ಪ್ರತಿ ಮನೆಗೂ ತಲಾ 200 ಯುನಿಟ್ ವಿದ್ಯುತ್ ಉಚಿತವಾಗಿ ಕೊಡುತ್ತೇನೆ ಎಂಬ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಇದೀಗ ಜೆಸ್ಕಾಂ ಇಲಾಖೆಯ ಸಿಬ್ಬಂದಿಯನ್ನು ಪೇಚಿಗೆ ಸಿಲುಕಿಸಿದೆ.

ವಿದ್ಯುತ್ ಬಿಲ್ ಹಿಡಿದು ಹೋಗುತ್ತಿರುವ ಜೆಸ್ಕಾಂ ಸಿಬ್ಬಂದಿಯೊಂದಿಗೆ ಅಲ್ಲಲ್ಲಿ ಜನ ವಿದ್ಯುತ್ ಬಿಲ್ ಕಟ್ಟುವುದಿಲ್ಲ ಎಂದು ಜಗಳ ಕಾಯುತ್ತಿರುವ ಮಧ್ಯೆಯೇ ಇದೀಗ ಕಾರಟಗಿ ತಾಲ್ಲೂಕಿನ ಕುಂಟೋಜಿ ಗ್ರಾಮದಲ್ಲಿ ಮಹಿಳೆಯೊಬ್ಬರು ರಂಪಾಟ ತೆಗೆದಿರುವ ಘಟನೆ ನಡೆದಿದೆ.

ಪ್ರತಿ ತಿಂಗಳಿನಂತೆ ಕಾರಟಗಿ ವಿಭಾಗದ ಜೆಸ್ಕಾಂ ಸಿಬ್ಬಂದಿ ಕುಂಟೋಜಿ ಗ್ರಾಮದ ವಿದ್ಯುತ್ ಬಳಕೆದಾರರ ಮನೆಗೆ ಬಿಲ್ ನೀಡಲು ತೆರಳಿದ್ದಾರೆ. ಈ ಸಂದರ್ಭದಲ್ಲಿ ಮನೆಯಲ್ಲಿದ್ದ ಮಹಿಳೆಯೊಬ್ಬರು ಬಿಲ್ ಕಟ್ಟುವುದಿರಲಿ, ಬಿಲ್ ಪ್ರತಿ ಸ್ವೀಕರಿಸಲು ಹಿಂದೇಟು ಹಾಕಿದ್ದಾರೆ.

ಬೆಸ್ಕಾಂ ಸಿಬ್ಬಂದಿಗೆ ಗದರಿದ ಮಹಿಳೆ

ಜೆಸ್ಕಾಂ ಸಿಬ್ಬಂದಿಯೊಂದಿಗೆ ವಾದಕ್ಕಿಳಿದ ಮಹಿಳೆ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಒಂದು ನಯಾಪೈಸೆ ಕರೆಂಟು ಬಿಲ್ ಕಟ್ಟುವುದು ಬೇಕಿಲ್ಲ ಎಂದು ಈಗಾಗಲೇ ಹೇಳಿದ್ದಾರೆ. ನಾವು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ ಅಧಿಕಾರಕ್ಕೆ ತಂದಿದ್ದೇವೆ. ಹೀಗಾಗಿ ನಾವು ಬಿಲ್ ಕಟ್ಟುವುದಿಲ್ಲ ಎಂದು ಮಹಿಳೆ ಜೆಸ್ಕಾಂ ಸಿಬ್ಬಂದಿಯೊಂದಿಗೆ ವಾದಕ್ಕಿಳಿದಿದ್ದಾರೆ. ಇನ್ನು ಸರ್ಕಾರದಿಂದ ಅಧಿಕೃತ ಆದೇಶ ಬಂದಿಲ್ಲ. ಹೀಗಾಗಿ ಬಿಲ್​ ಪ್ರತಿ ಪಡೆದುಕೊಂಡು ಕಟ್ಟಬೇಕು ಎಂದು ಸಿಬ್ಬಂದಿ ಹೇಳಿದ್ದರೂ ಕೇಳಿಸಿಕೊಳ್ಳದ ಮಹಿಳೆ, ಸಿಬ್ಬಂದಿಯೊಂದಿಗೆ ವಾದ ಮಾಡಿ ಬಿಲ್ ಕಟ್ಟುವುದಿಲ್ಲ ಎಂದು ಕರಾರುವಕ್ಕಾಗಿ ಹೇಳಿದ್ದಾರೆ.

ಜೆಸ್ಕಾಂ ಸಿಬ್ಬಂದಿ ಮತ್ತು ಮಹಿಳೆ ನಡುವಿನ ವಾಗ್ವಾದವನ್ನು ವ್ಯಕ್ತಿಯೊಬ್ಬರು ವಿಡಿಯೋ ಮಾಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಬಿಲ್ ಕಟ್ಟುವುದಿಲ್ಲ ಎಂದು ಜನ ಹೇಳುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ಜೆಸ್ಕಾಂ ಸಿಬ್ಬಂದಿ ಪರದಾಡುವ ಸನ್ನಿವೇಶ ನಿರ್ಮಾಣವಾಗಿದೆ.

ಜೆಸ್ಕಾಂ ಸಿಬ್ಬಂದಿ ಮತ್ತು ಮಹಿಳೆ ನಡುವಿನ ವಾಗ್ವಾದವನ್ನು ವ್ಯಕ್ತಿಯೊಬ್ಬರು ವಿಡಿಯೋ ಮಾಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕಾಂಗ್ರೆಸ್​ ಹೇಳಿದ್ದೇನು.. ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮೊದಲ ಕ್ಯಾಬಿನೆಟ್​ ಸಭೆಯಲ್ಲೇ ಐದು ಗ್ಯಾರಂಟಿಗಳಿಗೆ ಅನುಮೋದನೆ ನೀಡುತ್ತೇವೆ. ಆಗ 200 ಯುನಿಟ್​ವರೆಗಿನ ವಿದ್ಯುತ್ ಬಳಕೆಗೆ​ ಬಿಲ್​ ಇರುವುದಿಲ್ಲ ಎಂದಿದ್ದರು.

ಇದನ್ನೂ ಓದಿ: ಕರೆಂಟ್ ಫ್ರೀ ಎಂದು ಹೇಳಿದ್ದಾರೆ, ನಾವು ಬಿಲ್ ಕಟ್ಟಲ್ಲ​ ಎಂದ ಗ್ರಾಮಸ್ಥರು!: ವಿಡಿಯೋ ವೈರಲ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.