ETV Bharat / state

'ಜೀರೋ ಟ್ರಾಫಿಕ್ ತೊಲಗಿತು': ಪರಮೇಶ್ವರ್​ ವಿರುದ್ಧ ರಾಜಣ್ಣ ಬೆಂಬಲಿಗರ ಆಕ್ರೋಶ

author img

By

Published : Jul 28, 2019, 4:59 AM IST

ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್​ ವಿರುದ್ಧ ತುಮಕೂರಿನಲ್ಲಿ ಪ್ರತಿಭಟನೆ ನಡೆಸಲಾಯ್ತು.

ಮಾಜಿ ಡಿಸಿಎಂ ಪರಮೇಶ್ವರ್​ ವಿರುದ್ಧ ಪ್ರತಿಭಟನೆ

ತುಮಕೂರು: ಸಮ್ಮಿಶ್ರ ಸರ್ಕಾರದ ಪತನದ ಬೆನ್ನಲ್ಲೆ ಅಧಿಕಾರ ಕಳೆದುಕೊಂಡ ಮಾಜಿ ಡಿಸಿಎಂ ಪರಮೇಶ್ವರ್​ ಸ್ಥಿತಿಯನ್ನು ಕುಹಕ ಮಾಡುವ ರೀತಿಯಲ್ಲಿ ಕೆ.ಎನ್​. ರಾಜಣ್ಣ ಬೆಂಬಲಿಗರು ಪ್ರತಿಭಟನೆ ನಡೆಸಿದರು.

ನಗರದ ಟೌನ್​​ಹಾಲ್ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, 'ತೊಲಗಿತು ತೊಲಗಿತು ಜೀರೋ ಟ್ರಾಫಿಕ್ ತೊಲಗಿತು', ' ನೆಮ್ಮದಿ ನೆಮ್ಮದಿ ತುಮಕೂರು ಜನತೆಗೆ ನೆಮ್ಮದಿ' ಎಂಬ ಘೋಷಣೆಗಳನ್ನು ಕೂಗಿದರು.

ಡಾ. ಜಿ. ಪರಮೇಶ್ವರ್ ಅವರು ಉಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜೀರೋ ಟ್ರಾಫಿಕ್ ವ್ಯವಸ್ಥೆಯನ್ನು ಬಳಸುತ್ತಿದ್ದ ಕಾರಣ ಸಾಕಷ್ಟು ಟೀಕೆಗೆ ಗುರಿಯಾಗಿದ್ದರು. ಹೀಗಾಗಿ ಪ್ರತಿಭಟನಾಕಾರರು ಪರಮೇಶ್ವರ್​ ಹೆಸರು ಉಲ್ಲೇಖಿಸದೆ, ಜೀರೋ ಟ್ರಾಫಿಕ್ ಎಂದು ಪರೋಕ್ಷವಾಗಿ ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು.

ಮಾಜಿ ಡಿಸಿಎಂ ಪರಮೇಶ್ವರ್​ ವಿರುದ್ಧ ಪ್ರತಿಭಟನೆ

ಮತ್ತೊಂದೆಡೆ ಸಮ್ಮಿಶ್ರ ಸರ್ಕಾರವು ತುಮಕೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅನ್ನು ಸೂಪರ್ ಸೀಡ್ ಮಾಡಿರುವುದಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿರುವುದನ್ನು ಸ್ವಾಗತಿಸಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ತುಮಕೂರು: ಸಮ್ಮಿಶ್ರ ಸರ್ಕಾರದ ಪತನದ ಬೆನ್ನಲ್ಲೆ ಅಧಿಕಾರ ಕಳೆದುಕೊಂಡ ಮಾಜಿ ಡಿಸಿಎಂ ಪರಮೇಶ್ವರ್​ ಸ್ಥಿತಿಯನ್ನು ಕುಹಕ ಮಾಡುವ ರೀತಿಯಲ್ಲಿ ಕೆ.ಎನ್​. ರಾಜಣ್ಣ ಬೆಂಬಲಿಗರು ಪ್ರತಿಭಟನೆ ನಡೆಸಿದರು.

ನಗರದ ಟೌನ್​​ಹಾಲ್ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, 'ತೊಲಗಿತು ತೊಲಗಿತು ಜೀರೋ ಟ್ರಾಫಿಕ್ ತೊಲಗಿತು', ' ನೆಮ್ಮದಿ ನೆಮ್ಮದಿ ತುಮಕೂರು ಜನತೆಗೆ ನೆಮ್ಮದಿ' ಎಂಬ ಘೋಷಣೆಗಳನ್ನು ಕೂಗಿದರು.

ಡಾ. ಜಿ. ಪರಮೇಶ್ವರ್ ಅವರು ಉಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜೀರೋ ಟ್ರಾಫಿಕ್ ವ್ಯವಸ್ಥೆಯನ್ನು ಬಳಸುತ್ತಿದ್ದ ಕಾರಣ ಸಾಕಷ್ಟು ಟೀಕೆಗೆ ಗುರಿಯಾಗಿದ್ದರು. ಹೀಗಾಗಿ ಪ್ರತಿಭಟನಾಕಾರರು ಪರಮೇಶ್ವರ್​ ಹೆಸರು ಉಲ್ಲೇಖಿಸದೆ, ಜೀರೋ ಟ್ರಾಫಿಕ್ ಎಂದು ಪರೋಕ್ಷವಾಗಿ ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು.

ಮಾಜಿ ಡಿಸಿಎಂ ಪರಮೇಶ್ವರ್​ ವಿರುದ್ಧ ಪ್ರತಿಭಟನೆ

ಮತ್ತೊಂದೆಡೆ ಸಮ್ಮಿಶ್ರ ಸರ್ಕಾರವು ತುಮಕೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅನ್ನು ಸೂಪರ್ ಸೀಡ್ ಮಾಡಿರುವುದಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿರುವುದನ್ನು ಸ್ವಾಗತಿಸಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

Intro:ಜೀರೋ ಟ್ರಾಫಿಕ್ ತೊಲಗಿತು ಎಂದು ಸಂಬೋಧಿಸಿ ಮಾಜಿ ಡಿಸಿಎಂ ಜಿ ಪರಮೇಶ್ವರ್ ವಿರುದ್ಧ ಪ್ರತಿಭಟನೆ......

ತುಮಕೂರು
ತುಮಕೂರು ನಗರದಲ್ಲಿ ಕಾಂಗ್ರೆಸ್ ಮುಖಂಡ ಮಾಜಿ ಶಾಸಕ ಕೇಂದ್ರ ರಾಜಣ್ಣ ಬೆಂಬಲಿಗರಿಂದ ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್ ವಿರುದ್ಧ ಪರೋಕ್ಷವಾಗಿ ವಿಭಿನ್ನ ಪ್ರತಿಭಟನೆ ನಡೆಸಲಾಯಿತು. ನಗರದ ಟೌನ್ ಹಾಲ್ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು 'ತೊಲಗಿತು ತೊಲಗಿತು ಜೀರೋ ಟ್ರಾಫಿಕ್ ತೊಲಗಿತು', ' ನೆಮ್ಮದಿ ನೆಮ್ಮದಿ ತುಮಕೂರು ಜನತೆಗೆ ನೆಮ್ಮದಿ' ಎಂಬ ಘೋಷಣೆಗಳನ್ನು ಕೂಗಿದರು. ಜಿ ಪರಮೇಶ್ವರ್ ಉಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜೀರೋ ಟ್ರಾಫಿಕ್ ವ್ಯವಸ್ಥೆಯನ್ನು ಬಳಸುತ್ತಿದ್ದರು. ಹೀಗಾಗಿ ಪರೋಕ್ಷವಾಗಿ ಪ್ರತಿಭಟನಾಕಾರರು ಜೀರೋ ಟ್ರಾಫಿಕ್ ಎಂದು ಅವರ ವಿರುದ್ಧ ಘೋಷಣೆಗಳನ್ನು ಕೂಗಿದ್ದು ಇಲ್ಲಿ ಗಮನಾರ್ಹವಾಗಿತ್ತು.

ಇನ್ನೊಂದೆಡೆ ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ವೇಳೆ ತುಮಕೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸೂಪರ್ ಸೀಡ್ ಮಾಡಲಾಗಿತ್ತು ಇದಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿರುವುದನ್ನು ಸ್ವಾಗತಿಸಿ ಪ್ರತಿಭಟನಾಕಾರರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.Body:TumakuruConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.