ETV Bharat / state

ಕೋವಿಡ್​​​​​ಗೆ ಉಡುಪಿ ಜಿಲ್ಲೆಯಲ್ಲಿ ಐದನೇ ಬಲಿ: ಒಂದೇ ದಿನ 72 ಪಾಸಿಟಿವ್​ ಪ್ರಕರಣ ಪತ್ತೆ

author img

By

Published : Jul 15, 2020, 7:24 AM IST

ಕಾಪು ತಾಲೂಕಿನ ವೃದ್ಧರೊಬ್ಬರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಪಡುಬಿದ್ರಿಯ 82 ವರ್ಷ ಪ್ರಾಯದ ವೃದ್ಧರೊಬ್ಬರು ನಿನ್ನೆ ಸಂಜೆ ಮೃತಪಟ್ಟಿದ್ದು, ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಲಾಗಿದೆ. ಪರೀಕ್ಷೆಯಲ್ಲಿ ಪಾಸಿಟಿವ್ ಫಲಿತಾಂಶ ನೀಡಿದೆ ಎಂದು ಡಿಎಚ್​​​​ಒ ಡಾ.ಸುಧೀರ್‌ಚಂದ್ರ ಮಾಹಿತಿ ನೀಡಿದ್ದಾರೆ.

ಕೋವಿಡ್-19ಗೆ ಉಡುಪಿ ಜಿಲ್ಲೆಯಲ್ಲಿ ಐದನೇ ಬಲಿ
ಕೋವಿಡ್-19ಗೆ ಉಡುಪಿ ಜಿಲ್ಲೆಯಲ್ಲಿ ಐದನೇ ಬಲಿ

ಉಡುಪಿ: ಕೋವಿಡ್-19ಗೆ ಜಿಲ್ಲೆಯಲ್ಲಿ ಐದನೇ ಬಲಿಯಾಗಿದೆ. ಕಾಪು ತಾಲೂಕಿನಲ್ಲಿ ಮೊದಲ ಸಾವು ಸಂಭವಿಸಿದೆ. ಶ್ವಾಸಕೋಶ ಹಾಗೂ ಕಿಡ್ನಿ ಸಮಸ್ಯೆಗಾಗಿ ಆಸ್ಪತ್ರೆ ದಾಖಲಾಗಿದ್ದ ವೃದ್ಧ ಸಾವನ್ನಪ್ಪಿದ್ದಾನೆ.

ಕಾಪು ತಾಲೂಕಿನ ವೃದ್ಧರೊಬ್ಬರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಪಡುಬಿದ್ರಿಯ 82 ವರ್ಷ ಪ್ರಾಯದ ವೃದ್ಧರೊಬ್ಬರು ನಿನ್ನೆ ಸಂಜೆ ಮೃತಪಟ್ಟಿದ್ದು, ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಲಾಗಿದೆ. ಪರೀಕ್ಷೆಯಲ್ಲಿ ಪಾಸಿಟಿವ್ ಫಲಿತಾಂಶ ನೀಡಿದೆ ಎಂದು ಡಿಎಚ್ ಒ ಡಾ.ಸುಧೀರ್‌ಚಂದ್ರ ಸೂಡ ಮಾಹಿತಿ ನೀಡಿದ್ದಾರೆ.

ಉಸಿರಾಟದ ತೊಂದರೆಯಿದ್ದ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಬೀಡಿನಗುಡ್ಡೆಯಲ್ಲಿ ಮೃತರ ಅಂತ್ಯ ಕ್ರಿಯೆ ನಡೆದಿದೆ. ಕೋವಿಡ್ ಮಾರ್ಗಸೂಚಿಯಂತೆ ಅಂತ್ಯಕ್ರಿಯೆ ಮಾಡಲಾಗಿದೆ. ಉಡುಪಿಯಲ್ಲಿ ಇಂದು 72 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಉಡುಪಿ 16, ಕುಂದಾಪುರ 41, ಕಾರ್ಕಳ ತಾಲೂಕಿನಿಂದ 15 ಕೇಸ್​ಗಳು ವರದಿಯಾಗಿವೆ.

ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 1733ಕ್ಕೆ ಏರಿಕೆಯಾಗಿದ್ದು, ಇಂದು 40 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 370 ಸಕ್ರಿಯ ಪ್ರಕರಣ ಇದೆ ಎಂದು ವೈದ್ಯಕೀಯ ಅಧೀಕ್ಷಕರು ತಿಳಿಸಿದ್ದಾರೆ.

ಉಡುಪಿ: ಕೋವಿಡ್-19ಗೆ ಜಿಲ್ಲೆಯಲ್ಲಿ ಐದನೇ ಬಲಿಯಾಗಿದೆ. ಕಾಪು ತಾಲೂಕಿನಲ್ಲಿ ಮೊದಲ ಸಾವು ಸಂಭವಿಸಿದೆ. ಶ್ವಾಸಕೋಶ ಹಾಗೂ ಕಿಡ್ನಿ ಸಮಸ್ಯೆಗಾಗಿ ಆಸ್ಪತ್ರೆ ದಾಖಲಾಗಿದ್ದ ವೃದ್ಧ ಸಾವನ್ನಪ್ಪಿದ್ದಾನೆ.

ಕಾಪು ತಾಲೂಕಿನ ವೃದ್ಧರೊಬ್ಬರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಪಡುಬಿದ್ರಿಯ 82 ವರ್ಷ ಪ್ರಾಯದ ವೃದ್ಧರೊಬ್ಬರು ನಿನ್ನೆ ಸಂಜೆ ಮೃತಪಟ್ಟಿದ್ದು, ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಲಾಗಿದೆ. ಪರೀಕ್ಷೆಯಲ್ಲಿ ಪಾಸಿಟಿವ್ ಫಲಿತಾಂಶ ನೀಡಿದೆ ಎಂದು ಡಿಎಚ್ ಒ ಡಾ.ಸುಧೀರ್‌ಚಂದ್ರ ಸೂಡ ಮಾಹಿತಿ ನೀಡಿದ್ದಾರೆ.

ಉಸಿರಾಟದ ತೊಂದರೆಯಿದ್ದ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಬೀಡಿನಗುಡ್ಡೆಯಲ್ಲಿ ಮೃತರ ಅಂತ್ಯ ಕ್ರಿಯೆ ನಡೆದಿದೆ. ಕೋವಿಡ್ ಮಾರ್ಗಸೂಚಿಯಂತೆ ಅಂತ್ಯಕ್ರಿಯೆ ಮಾಡಲಾಗಿದೆ. ಉಡುಪಿಯಲ್ಲಿ ಇಂದು 72 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಉಡುಪಿ 16, ಕುಂದಾಪುರ 41, ಕಾರ್ಕಳ ತಾಲೂಕಿನಿಂದ 15 ಕೇಸ್​ಗಳು ವರದಿಯಾಗಿವೆ.

ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 1733ಕ್ಕೆ ಏರಿಕೆಯಾಗಿದ್ದು, ಇಂದು 40 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 370 ಸಕ್ರಿಯ ಪ್ರಕರಣ ಇದೆ ಎಂದು ವೈದ್ಯಕೀಯ ಅಧೀಕ್ಷಕರು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.