ETV Bharat / state

ಗಂಭೀರ ಗಾಯವಾಗಿದ್ದರೂ ಡೋಂಟ್​ ಕೇರ್​... ಆಂಬ್ಯುಲೆನ್ಸ್​​ನಲ್ಲಿ ಬಂದು ಮತ ಹಾಕಿದ ಯುವಕ! - undefined

ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಉಳ್ತೂರಿನ ಯುವಕನೋರ್ವ ಎಲ್ಲರಿಗೂ ಮಾದರಿಯಾಗಿದ್ದಾರೆ. ಜಯಶೀಲ್ ಗೆ ಎರಡು ವಾರಗಳ ಹಿಂದೆ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಬಲಗಾಲಿಗೆ ತೀವ್ರ ಗಾಯವಾಗಿದೆ. 3 ತಿಂಗಳುಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಖಡಕ್ ಸೂಚನೆ ಸಹ ನೀಡಿದ್ದರು. ಆದ್ರೆ ಇಂದು ಆಂಬ್ಯುಲೆನ್ಸ್​ನಲ್ಲೇ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದ್ದಾರೆ ಜಯಶೀಲ್​.​

ಆಂಬುಲೆನ್ಸ್ ನಲ್ಲಿ ಬಂದು ಮತದಾನ ಮಾಡಿದ ಯುವಕ
author img

By

Published : Apr 18, 2019, 5:10 PM IST

ಉಡುಪಿ: ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡಿರುವ ಯುವಕನೋರ್ವ ವೈದ್ಯರು ಸಲಹೆಯನ್ನೂ ಲೆಕ್ಕಿಸದೇ ಇಂದು ತನ್ನ ಹಕ್ಕು ಚಲಾಯಿಸಿ ಬೇರೆಯವರಿಗೂ ಮಾದರಿಯಾಗಿದ್ದಾರೆ. ಆಂಬುಲೆನ್ಸ್ ನಲ್ಲೇ ಮತಗಟ್ಟೆಗೆ ಬಂದು ಯುವಕ ಮತ ಹಾಕಿರುವ ಅಪರೂಪದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.

ಆಂಬ್ಯುಲೆನ್ಸ್​ನಲ್ಲಿ ಬಂದು ಮತದಾನ ಮಾಡಿದ ಯುವಕ

ಕುಂದಾಪುರ ತಾಲೂಕು ಉಳ್ತೂರಿನ ಯುವಕ ಜಯಶೀಲ್​ ಗಾಯಗೊಂಡಿದ್ದರೂ ಪೋಲಿಂಗ್​ ಬೂತ್​ಗೆ ಬಂದು ಮತದಾನ ಚಲಾಯಿಸಿದ್ದಾರೆ. ಜಯಶೀಲ್​ಗೆ ಎರಡು ವಾರಗಳ ಹಿಂದೆ ಅಪಘಾತವಾಗಿತ್ತು. ಇದರಿಂದ ಬಲಗಾಲಿಗೆ ತೀವ್ರ ಗಾಯವಾಗಿದ್ದು, 3 ತಿಂಗಳುಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದರು. ಆದರೆ ತಾನು ಮತ ಹಾಕಲೇಬೇಕು ಎಂದು ಕುಟುಂಬಸ್ಥರಲ್ಲಿ ಜಯಶೀಲ್​ ಒತ್ತಾಯಿಸಿದ್ದರು. ಕೊನೆಗೆ ಗೆಳೆಯರೆಲ್ಲ ಸೇರಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿದ್ದರು.

ಈ ಮೂಲಕ ಮತದಾನಕ್ಕೆ ಹಿಂದೇಟು ಹಾಕುವವರಿಗೆ ಜಯಶೀಲ್ ಮಾದರಿಯಾದ್ದಾರೆ. ಸ್ಟ್ರೆಚ್ಚರ್​ನಲ್ಲಿ ಮಲಗಿಕೊಂಡೇ ಮತದಾನ‌ ಮಾಡಿ ಜಯಶೀಲ್ ಪೂಜಾರಿ ಎಲ್ಲರಿಗೂ ಒಂದು ಸಂದೇಶ ರವಾನಿಸಿದ್ದಾರೆ. ಮತದಾನದ ಬೆಲೆ ಏನು ಎಂಬುದನ್ನು ಇವರು ಸಾರಿ ಹೇಳಿದ್ದಾರೆ. ಮತಗಟ್ಟೆ ಅಧಿಕಾರಿಗಳು ಕೂಡಾ ಜಯಶೀಲ್ ಅವರ ಮತದಾನದ ಉತ್ಸುಕತೆಯನ್ನು ಕೊಂಡಾಡಿದ್ದಾರೆ.

ಉಡುಪಿ: ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡಿರುವ ಯುವಕನೋರ್ವ ವೈದ್ಯರು ಸಲಹೆಯನ್ನೂ ಲೆಕ್ಕಿಸದೇ ಇಂದು ತನ್ನ ಹಕ್ಕು ಚಲಾಯಿಸಿ ಬೇರೆಯವರಿಗೂ ಮಾದರಿಯಾಗಿದ್ದಾರೆ. ಆಂಬುಲೆನ್ಸ್ ನಲ್ಲೇ ಮತಗಟ್ಟೆಗೆ ಬಂದು ಯುವಕ ಮತ ಹಾಕಿರುವ ಅಪರೂಪದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.

ಆಂಬ್ಯುಲೆನ್ಸ್​ನಲ್ಲಿ ಬಂದು ಮತದಾನ ಮಾಡಿದ ಯುವಕ

ಕುಂದಾಪುರ ತಾಲೂಕು ಉಳ್ತೂರಿನ ಯುವಕ ಜಯಶೀಲ್​ ಗಾಯಗೊಂಡಿದ್ದರೂ ಪೋಲಿಂಗ್​ ಬೂತ್​ಗೆ ಬಂದು ಮತದಾನ ಚಲಾಯಿಸಿದ್ದಾರೆ. ಜಯಶೀಲ್​ಗೆ ಎರಡು ವಾರಗಳ ಹಿಂದೆ ಅಪಘಾತವಾಗಿತ್ತು. ಇದರಿಂದ ಬಲಗಾಲಿಗೆ ತೀವ್ರ ಗಾಯವಾಗಿದ್ದು, 3 ತಿಂಗಳುಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದರು. ಆದರೆ ತಾನು ಮತ ಹಾಕಲೇಬೇಕು ಎಂದು ಕುಟುಂಬಸ್ಥರಲ್ಲಿ ಜಯಶೀಲ್​ ಒತ್ತಾಯಿಸಿದ್ದರು. ಕೊನೆಗೆ ಗೆಳೆಯರೆಲ್ಲ ಸೇರಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿದ್ದರು.

ಈ ಮೂಲಕ ಮತದಾನಕ್ಕೆ ಹಿಂದೇಟು ಹಾಕುವವರಿಗೆ ಜಯಶೀಲ್ ಮಾದರಿಯಾದ್ದಾರೆ. ಸ್ಟ್ರೆಚ್ಚರ್​ನಲ್ಲಿ ಮಲಗಿಕೊಂಡೇ ಮತದಾನ‌ ಮಾಡಿ ಜಯಶೀಲ್ ಪೂಜಾರಿ ಎಲ್ಲರಿಗೂ ಒಂದು ಸಂದೇಶ ರವಾನಿಸಿದ್ದಾರೆ. ಮತದಾನದ ಬೆಲೆ ಏನು ಎಂಬುದನ್ನು ಇವರು ಸಾರಿ ಹೇಳಿದ್ದಾರೆ. ಮತಗಟ್ಟೆ ಅಧಿಕಾರಿಗಳು ಕೂಡಾ ಜಯಶೀಲ್ ಅವರ ಮತದಾನದ ಉತ್ಸುಕತೆಯನ್ನು ಕೊಂಡಾಡಿದ್ದಾರೆ.

Intro:ಫೈಲ್- ಆಂಬುಲೆನ್ಸ್ ಮತದಾನ
ಸ್ಥಳ- ಉಡುಪಿ


ಅಪಘಾತಕ್ಕೀಡಾಗಿ ಗಂಭೀರ ಗಾಯಕ್ಕೊಳಗಾಗಿದ್ದ ಯುವಕ ಆಂಬುಲೆನ್ಸ್ ನಲ್ಲಿ ಬಂದು ಹಕ್ಕು ಚಲಾವಣೆ ಮಾಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆ ಕುಂದಾಪುರದ ಉಳ್ತೂರಿನ ಯುವಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಜಯಶೀಲ್ ಗೆ ಎರಡು ವಾರದ ಹಿಂದೆ ಅಪಘಾತವಾಗಿತ್ತು. ಬಲ ಕಾಲಿಗೆ ತೀವ್ರತರವಾದ ಗಾಯವಾಗಿತ್ತು. 3 ತಿಂಗಳುಗಳ ಕಾಲ ರೆಸ್ಟ್ ಮಾಡಲು ವೈದ್ಯರು ಖಡಕ್ ಸೂಚನೆ ನೀಡಿದ್ದರು. ಆದ್ರೆ ಮತ ಹಾಕಲೇಬೇಕು ಎಂದು ಕುಟುಂಬಸ್ಥರಲ್ಲಿ ಯುವಕ ಒತ್ತಾಯಿಸಿದ್ದರು. ಕೊನೆಗೆ ಗೆಳೆಯರೆಲ್ಲ ಸೇರಿ ಆಂಬುಲೆನ್ಸ್ ವ್ಯವಸ್ಥೆ ಮಾಡಿದರು. ಈ ಮೂಲಕ ಮತದಾನಕ್ಕೆ ಹಿಂದೇಟು ಹಾಕುವವರಿಗೆ ಜಯಶೀಲ್ ಮಾದರಿಯಾದರು. ಸ್ಟ್ರೆಚ್ಚರ್ ನಲ್ಲಿ ಮಲಗಿಕೊಂಡೇ ಮತದಾನ‌ ಮಾಡಿ ಜಯಶೀಲ್ ಪೂಜಾರಿ ಎಲ್ಲರಿಗೂ ಒಂದು ಸಂದೇಶ ರವಾನೆ ಮಾಡಿದ್ದಾರೆ. ಮತದಾನದ ಬೆಲೆ ಏನು ಎಂಬೂದನ್ನು ಇವರು ಸಾರಿ ಹೇಳಿದ್ದಾರೆ. ಮತಗಟ್ಟೆ ಅಧಿಕಾರಿಗಳು ಕೂಡಾ ಜಯಶೀಲ್ ಅವರ ಕರ್ತವ್ಯ ಪ್ರಜ್ಞೆಯನ್ನು ಶ್ಲಾಘಿಸಿದ್ದಾರೆ.
Body:Ambulance votingConclusion:Ambulance

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.