ಉಡುಪಿ : ನಗರದ ಜನತೆಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಕೊರೊನಾ ವೈರೆಸ್ ರೀತಿಯ ಉಡುಪನ್ನು ಧರಿಸಿ ಜನರಲ್ಲಿ ಅಚ್ಚರಿ ಮೂಡಿಸಿದ್ದಾರೆ.
ನಗರದಲ್ಲಿ ಅಷ್ಟಮಿ ಸಮಯದಲ್ಲಿ ಮಾತ್ರ ಈ ರೀತಿಯ ವೇಷಗಳು ಕಾಣಿಸಿಕೊಳ್ಳುತ್ತವೆ. ಆದ್ರೆ ಇದೀಗ ಆಕಸ್ಮಿಕರವಾಗಿ ಕಾಣಿಸಿಕೊಂಡ ಕೊರೊನಾ ವೇಷಧಾರಿ ಸಾಮಗ್ರಿಗಳನ್ನು ಕೊಳ್ಳಲು ಬಂದಿದ್ದ ಜನರಲ್ಲಿ ಅಚ್ಚರಿ ಮೂಡಿಸಿದೆ.
ಉಡುಪಿ ಜಿಲ್ಲಾ ನಾಗರಿಕ ಸಮಿತಿಯವರು ಸಾರ್ವಜನಿಕರಲ್ಲಿ ಜಾಗ್ರತಿ ಮೂಡಿಸಲು, "ಕೊರೊನಾಸುರ ಅಟ್ಟಹಾಸ" ಎನ್ನುವ ಅಣಕು ಪ್ರದರ್ಶನ ಮಾಡಿದ್ದರು. ಕೊರೊನಾಸುರ ವೇಷವನ್ನು ನಾಗರಿಕ ಸಮಿತಿಯ ಪ್ರಧಾನ ಸಂಚಾಲಕ ನಿತ್ಯಾನಂದ ಒಳಕಾಡು ಧರಿಸಿದ್ದರು.
ಮುಖಕ್ಕೆ ಮಾಸ್ಕ್ ಧರಿಸುವಂತೆ, ಸಾಮಾಜಿಕ ಅಂತರ ಕಾಯ್ದು ಕೊಳ್ಳುವಂತೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆಯು ಹೊರಡಿಸಿರುವ ಆರೋಗ್ಯ ಸುರಕ್ಷಾ ವಿಧಾನಗಳನ್ನು ಪಾಲಿಸುವಂತೆ ನಿತ್ಯಾನಂದ ಒಳಕಾಡು ಅರಿವು ಮೂಡಿಸಿದರು.