ETV Bharat / state

ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ವಾಹನ ಚಲಾವಣೆ: ಸಾರ್ವಜನಿಕರಿಂದ ಚಾಲಕನಿಗೆ ಬಿತ್ತು ಗೂಸಾ - ಕಾರು ಚಾಲಕನಿಗೆ ಸಾರ್ವಜನಿಕರಿಂದ ಗೂಸಾ

ಉಡುಪಿ ನಗರದ ಕೃಷ್ಣ ಮಠದ ಸಮೀಪ ಬೆಂಗಳೂರು ಮೂಲದ ಯುವಕನೊಬ್ಬ ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿಯಾಗಿ ವಾಹನ ಚಲಾವಣೆ ಮಾಡಿದ ಹಿನ್ನೆಲೆ ಸಾರ್ವಜನಿಕರು ಚಾಲಕನಿಗೆ ಧರ್ಮದೇಟು ನೀಡಿದ್ದಾರೆ.

Drunk driver gets beaten by public
ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ವಾಹನ ಚಲಾವಣೆ
author img

By

Published : Jan 12, 2022, 10:08 AM IST

Updated : Jan 12, 2022, 10:36 AM IST

ಉಡುಪಿ: ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ ಮಾಡಿ ಎರಡು ವಾಹನಗಳನ್ನು ನಜ್ಜುಗುಜ್ಜು ಮಾಡಿದ ಕಾರು ಚಾಲಕನಿಗೆ ಸಾರ್ವಜನಿಕರು ಗೂಸಾ ನೀಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಉಡುಪಿ ನಗರದ ಕೃಷ್ಣ ಮಠದ ಸಮೀಪ ಬೆಂಗಳೂರು ಮೂಲದ ಯುವಕನೊಬ್ಬ ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿಯಾಗಿ ವಾಹನ ಚಲಾವಣೆ ಮಾಡಿದ್ದಾನೆ. ಇದರಿಂದಾಗಿ ಆಕ್ರೋಶಗೊಂಡ ಸಾರ್ವಜನಿಕರು ವಾಹನ ಸವಾರನಿಗೆ ಧರ್ಮದೇಟು ಕೊಟ್ಟಿದ್ದಾರೆ. ಅಷ್ಟೇ ಅಲ್ಲದೆ, ಕಾರಿನಲ್ಲಿದ್ದ ತಾಯಿ - ಮಗು ಸ್ಪಲ್ಪದರಲ್ಲೇ ಅಪಘಾತದಿಂದ ಪಾರಾಗಿದ್ದಾರೆ.

ಅಡ್ಡಾದಿಡ್ಡಿ ವಾಹನ ಚಲಾವಣೆ ಮಾಡಿದ ಆರೋಪಿ ಪೊಲೀಸ್​ ವಶಕ್ಕೆ

ಈ ಸಂಬಂಧ ಸ್ಥಳಕ್ಕೆ ಉಡುಪಿ ನಗರ ಠಾಣಾ ಹೊಯ್ಸಳ ಪೊಲೀಸರು ಭೇಟಿ ನೀಡಿ ಯುವಕರನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಓದಿ: ಅಮಲು ಪದಾರ್ಥ ಸೇವಿಸಿ ರಸ್ತೆ ಮಧ್ಯೆ​ ರಂಪಾಟ: ಪೊಲೀಸರಿಗೆ ಆವಾಜ್ ಹಾಕಿದ ಕಾಲೇಜು​ ವಿದ್ಯಾರ್ಥಿಗಳು

ಉಡುಪಿ: ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ ಮಾಡಿ ಎರಡು ವಾಹನಗಳನ್ನು ನಜ್ಜುಗುಜ್ಜು ಮಾಡಿದ ಕಾರು ಚಾಲಕನಿಗೆ ಸಾರ್ವಜನಿಕರು ಗೂಸಾ ನೀಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಉಡುಪಿ ನಗರದ ಕೃಷ್ಣ ಮಠದ ಸಮೀಪ ಬೆಂಗಳೂರು ಮೂಲದ ಯುವಕನೊಬ್ಬ ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿಯಾಗಿ ವಾಹನ ಚಲಾವಣೆ ಮಾಡಿದ್ದಾನೆ. ಇದರಿಂದಾಗಿ ಆಕ್ರೋಶಗೊಂಡ ಸಾರ್ವಜನಿಕರು ವಾಹನ ಸವಾರನಿಗೆ ಧರ್ಮದೇಟು ಕೊಟ್ಟಿದ್ದಾರೆ. ಅಷ್ಟೇ ಅಲ್ಲದೆ, ಕಾರಿನಲ್ಲಿದ್ದ ತಾಯಿ - ಮಗು ಸ್ಪಲ್ಪದರಲ್ಲೇ ಅಪಘಾತದಿಂದ ಪಾರಾಗಿದ್ದಾರೆ.

ಅಡ್ಡಾದಿಡ್ಡಿ ವಾಹನ ಚಲಾವಣೆ ಮಾಡಿದ ಆರೋಪಿ ಪೊಲೀಸ್​ ವಶಕ್ಕೆ

ಈ ಸಂಬಂಧ ಸ್ಥಳಕ್ಕೆ ಉಡುಪಿ ನಗರ ಠಾಣಾ ಹೊಯ್ಸಳ ಪೊಲೀಸರು ಭೇಟಿ ನೀಡಿ ಯುವಕರನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಓದಿ: ಅಮಲು ಪದಾರ್ಥ ಸೇವಿಸಿ ರಸ್ತೆ ಮಧ್ಯೆ​ ರಂಪಾಟ: ಪೊಲೀಸರಿಗೆ ಆವಾಜ್ ಹಾಕಿದ ಕಾಲೇಜು​ ವಿದ್ಯಾರ್ಥಿಗಳು

Last Updated : Jan 12, 2022, 10:36 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.