ಉಡುಪಿ : ಶಾರ್ಟ್ ಸರ್ಕ್ಯೂಟ್ನಿಂದಾಗಿ ಗೇರು ಬೀಜದ ಫ್ಯಾಕ್ಟರಿಗೆ ಬೆಂಕಿ ತಗುಲಿ ಎರಡು ಲಾರಿ ಸಹಿತ, ಇಂಡಸ್ಟ್ರಿ ಸಂಪೂರ್ಣ ಸಟ್ಟಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಕ್ಕಂದೂರಿನಲ್ಲಿ ನಡೆದಿದೆ.
ಪ್ರಕಾಶ್ ಎಂಬುವವರಿಗೆ ಸೇರಿದ ಮಾರುತಿ ಇಂಡಸ್ಟ್ರೀಸ್ ಗೇರು ಬೀಜದ ಫ್ಯಾಕ್ಟರಿಗೆ ಬೆಂಕಿ ತಗುಲಿದೆ. ಮೂರು ಅಗ್ನಿ ಶಾಮಕ ದಳದ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಚರಣೆ ನಡೆಸಲಾಯಿತು.
ಬೀಜದ ಸಿಪ್ಪೆ ಮತ್ತು ಎಣ್ಣೆ ಇರುವುದರಿಂದ ಬೆಂಕಿ ಅತಿ ವೇಗವಾಗಿ ಪಸರಿಸಿದೆ. ಸುಮಾರು 1.5 ಕೋಟಿ ರೂ. ನಷ್ಟವಾಗಿದೆ ಎಂದು ಮಾಲೀಕ ಪ್ರಕಾಶ್ ತಿಳಿಸಿದ್ದಾರೆ.