ETV Bharat / state

ಉಡುಪಿ: ಮೀನಿನ ಬಲೆಯಲ್ಲಿ ಸಿಲುಕಿ ಪ್ರಾಣ ಕಳೆದುಕೊಂಡ ಮೀನುಗಾರ

author img

By

Published : Feb 9, 2021, 5:19 AM IST

ಕಾಪು ಸಮೀಪದ ಲೈಟ್ ಹೌಸ್ ಬಳಿ ಸೋಮವಾರ ಬೆಳಗ್ಗೆ ಮೀನುಗಾರ ಮೀನಿನ ಬಲೆಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾನೆ. ಮೃತಪಟ್ಟ ಮೀನುಗಾರನನ್ನು ಕಾಪು ಗರಡಿ ಬಳಿ ನಿವಾಸಿ ಕಾಸ್ಮರ್ ಎಂದು ಗುರುತಿಸಲಾಗಿದೆ.

Fisherman
Fisherman

ಉಡುಪಿ: ಸಾಂಪ್ರದಾಯಿಕ ಮೀನುಗಾರಿಕೆಗೆ ತೆರಳಿದ್ದ ಮೀನುಗಾರನೋರ್ವ ತನ್ನ ಬಲೆಗೆ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ.

ಕಾಪು ಸಮೀಪದ ಲೈಟ್ ಹೌಸ್ ಬಳಿ ಸೋಮವಾರ ಬೆಳಗ್ಗೆ ಈ ದುರ್ಘಟನೆ ಸಂಭವಿಸಿದೆ. ಮೃತಪಟ್ಟ ಮೀನುಗಾರನನ್ನು ಕಾಪು ಗರಡಿ ಬಳಿ ನಿವಾಸಿ ಕಾಸ್ಮರ್ (65) ಎಂದು ಗುರುತಿಸಲಾಗಿದೆ.

ಸಾಂಪ್ರದಾಯಿಕ ಮೀನುಗಾರಿಕೆಗೆ ತೆರಳಿದ್ದ ಆತ, ಮೀನುಗಾರಿಕೆಯಲ್ಲಿ ನಿರತರಾಗಿದ್ದ ವೇಳೆ ಬಲೆಯೊಳಗೆ‌ ಸಿಲುಕಿರಬಹುದು. ಈ ಬಳಿಕ ಆತ ಸಮುದ್ರಕ್ಕೆ ಬಿದ್ದು, ಅಲ್ಲೇ ಮೃತಪಟ್ಟಿರಬೇಕೆಂದು ಶಂಕೆ ವ್ಯಕ್ತಪಡಿಸಲಾಗಿದೆ.

ಮೀನಿನ ಬಲೆಯಲ್ಲಿ ಸಿಲುಕಿ ಪ್ರಾಣ ಕಳೆದುಕೊಂಡ ಮೀನುಗಾರ

ಕಾಸ್ಮಾರ್ ನೀರಿನಲ್ಲಿ‌ ಮುಳುಗುತ್ತಿರುವುದನ್ನು ಸ್ಥಳೀಯ ಮೀನುಗಾರರು ಗಮನಿಸಿದ್ದು, ತಕ್ಷಣ ಅವರ ನೆರವಿಗೆ ಧಾವಿಸಿದರು.‌ ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದರು. ಮೃತದೇಹವನ್ನು ಮೇಲಕ್ಕೆತ್ತಲಾಗಿದ್ದು, ಕಾಪು‌ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: ಆನಂದ್ ರಾವ್​​ ವೃತ್ತದ ಬಳಿ ಕಿಲ್ಲರ್ ಬಿಂಎಂಟಿಸಿ ಬಸ್​ಗೆ ಭಿಕ್ಷುಕ ಬಲಿ

ಉಡುಪಿ: ಸಾಂಪ್ರದಾಯಿಕ ಮೀನುಗಾರಿಕೆಗೆ ತೆರಳಿದ್ದ ಮೀನುಗಾರನೋರ್ವ ತನ್ನ ಬಲೆಗೆ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ.

ಕಾಪು ಸಮೀಪದ ಲೈಟ್ ಹೌಸ್ ಬಳಿ ಸೋಮವಾರ ಬೆಳಗ್ಗೆ ಈ ದುರ್ಘಟನೆ ಸಂಭವಿಸಿದೆ. ಮೃತಪಟ್ಟ ಮೀನುಗಾರನನ್ನು ಕಾಪು ಗರಡಿ ಬಳಿ ನಿವಾಸಿ ಕಾಸ್ಮರ್ (65) ಎಂದು ಗುರುತಿಸಲಾಗಿದೆ.

ಸಾಂಪ್ರದಾಯಿಕ ಮೀನುಗಾರಿಕೆಗೆ ತೆರಳಿದ್ದ ಆತ, ಮೀನುಗಾರಿಕೆಯಲ್ಲಿ ನಿರತರಾಗಿದ್ದ ವೇಳೆ ಬಲೆಯೊಳಗೆ‌ ಸಿಲುಕಿರಬಹುದು. ಈ ಬಳಿಕ ಆತ ಸಮುದ್ರಕ್ಕೆ ಬಿದ್ದು, ಅಲ್ಲೇ ಮೃತಪಟ್ಟಿರಬೇಕೆಂದು ಶಂಕೆ ವ್ಯಕ್ತಪಡಿಸಲಾಗಿದೆ.

ಮೀನಿನ ಬಲೆಯಲ್ಲಿ ಸಿಲುಕಿ ಪ್ರಾಣ ಕಳೆದುಕೊಂಡ ಮೀನುಗಾರ

ಕಾಸ್ಮಾರ್ ನೀರಿನಲ್ಲಿ‌ ಮುಳುಗುತ್ತಿರುವುದನ್ನು ಸ್ಥಳೀಯ ಮೀನುಗಾರರು ಗಮನಿಸಿದ್ದು, ತಕ್ಷಣ ಅವರ ನೆರವಿಗೆ ಧಾವಿಸಿದರು.‌ ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದರು. ಮೃತದೇಹವನ್ನು ಮೇಲಕ್ಕೆತ್ತಲಾಗಿದ್ದು, ಕಾಪು‌ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: ಆನಂದ್ ರಾವ್​​ ವೃತ್ತದ ಬಳಿ ಕಿಲ್ಲರ್ ಬಿಂಎಂಟಿಸಿ ಬಸ್​ಗೆ ಭಿಕ್ಷುಕ ಬಲಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.