ETV Bharat / state

ಸಾವನ್ನಪ್ಪಿದ ಕೊರೊನಾ ವಾರಿಯರ್ಸ್‌ಗೆ ಸರಕಾರ ಪರಿಹಾರ ನೀಡಿಲ್ಲ: ವರಲಕ್ಷ್ಮೀ

author img

By

Published : Jan 2, 2021, 8:09 PM IST

ರಾಜ್ಯದಲ್ಲಿ 27 ಜನ ಅಂಗನವಾಡಿ ಕಾರ್ಯಕರ್ತೆಯರು ಸಾವನ್ನಪ್ಪಿದ್ದಾರೆ. ಆದರೆ 26 ಮಂದಿಗೆ ಸರಕಾರ ಪರಿಹಾರ ನೀಡದೇ ನೆಪ ಹೇಳುತ್ತಿದೆ ಎಂದು ಅಂಗನವಾಡಿ ಕಾರ್ಯಕರ್ತೆಯರ ಸಂಘದ ರಾಜ್ಯಾಧ್ಯಕ್ಷೆ ವರಲಕ್ಷ್ಮೀ ಅಸಮಾಧಾನ ಹೊರ ಹಾಕಿದರು.

government-has-not-compensated-for-died-corona-worriers
ಅಂಗನವಾಡಿ ಕಾರ್ಯಕರ್ತೆಯರ ಸಂಘದ ರಾಜ್ಯಾಧ್ಯಕ್ಷೆ ವರಲಕ್ಷ್ಮೀ

ಉಡುಪಿ: ಕೋವಿಡ್​ ವಾರಿಯರ್​​ ಆಗಿ ಸೇವೆ ಸಲ್ಲಿಸುತ್ತಾ ಇಲ್ಲಿಯವರೆಗೆ ರಾಜ್ಯದಲ್ಲಿ 27 ಜನ ಅಂಗನವಾಡಿ ಕಾರ್ಯಕರ್ತೆಯರು ಸಾವನ್ನಪ್ಪಿದ್ದಾರೆ. ಆದರೆ 26 ಮಂದಿಗೆ ಸರಕಾರ ಪರಿಹಾರ ನೀಡದೇ ನೆಪ ಹೇಳುತ್ತಿದೆ ಎಂದು ಉಡುಪಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸಂಘದ ರಾಜ್ಯಾಧ್ಯಕ್ಷೆ ವರಲಕ್ಷ್ಮೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾವನ್ನಪ್ಪಿದ ಕೊರೊನಾ ವಾರಿಯರ್ಸ್​ಗಳಿಗೆ ಸರಕಾರ ಪರಿಹಾರವನ್ನೇ ನೀಡಿಲ್ಲ

ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, 2600 ರೂ. ಸಂಬಳ ಪಡೆಯುವ ಬಿಸಿಯೂಟ ನೌಕರರಿಗೆ ಸೆಪ್ಟೆಂಬರ್​ನಿಂದ ಸಂಬಳ ನೀಡಿಲ್ಲ. ನಾಲ್ಕು ತಿಂಗಳ ಸಂಬಳ ಸರಕಾರ ಬಾಕಿ ಇರಿಸಿದೆ. ಎಲ್ಲ ಕೆಲಸಗಳನ್ನು ಮಾಡಿಸಿ ಸರಕಾರ ನಮಗೆ ಅನ್ಯಾಯ ಎಸಗಿದೆ ಎಂದು ಆರೋಪಿಸಿದರು.

ಪ್ರತೀ ಬಾರಿ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವ ಭರವಸೆ ಮಾತ್ರ ಸಿಗುತ್ತಿದೆ. ಬೇಡಿಕೆ ಈಡೇರದಿದ್ದರೆ ಬಜೆಟ್ ಸೆಷನ್ ಸಂದರ್ಭ ವಿಧಾನ ಸೌಧ ಚಲೋ ಹಮ್ಮಿಕೊಳ್ಳುತ್ತೇವೆ ಎಂದು ವರಲಕ್ಷ್ಮೀ ಹೇಳಿದರು.

ಉಡುಪಿ: ಕೋವಿಡ್​ ವಾರಿಯರ್​​ ಆಗಿ ಸೇವೆ ಸಲ್ಲಿಸುತ್ತಾ ಇಲ್ಲಿಯವರೆಗೆ ರಾಜ್ಯದಲ್ಲಿ 27 ಜನ ಅಂಗನವಾಡಿ ಕಾರ್ಯಕರ್ತೆಯರು ಸಾವನ್ನಪ್ಪಿದ್ದಾರೆ. ಆದರೆ 26 ಮಂದಿಗೆ ಸರಕಾರ ಪರಿಹಾರ ನೀಡದೇ ನೆಪ ಹೇಳುತ್ತಿದೆ ಎಂದು ಉಡುಪಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸಂಘದ ರಾಜ್ಯಾಧ್ಯಕ್ಷೆ ವರಲಕ್ಷ್ಮೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾವನ್ನಪ್ಪಿದ ಕೊರೊನಾ ವಾರಿಯರ್ಸ್​ಗಳಿಗೆ ಸರಕಾರ ಪರಿಹಾರವನ್ನೇ ನೀಡಿಲ್ಲ

ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, 2600 ರೂ. ಸಂಬಳ ಪಡೆಯುವ ಬಿಸಿಯೂಟ ನೌಕರರಿಗೆ ಸೆಪ್ಟೆಂಬರ್​ನಿಂದ ಸಂಬಳ ನೀಡಿಲ್ಲ. ನಾಲ್ಕು ತಿಂಗಳ ಸಂಬಳ ಸರಕಾರ ಬಾಕಿ ಇರಿಸಿದೆ. ಎಲ್ಲ ಕೆಲಸಗಳನ್ನು ಮಾಡಿಸಿ ಸರಕಾರ ನಮಗೆ ಅನ್ಯಾಯ ಎಸಗಿದೆ ಎಂದು ಆರೋಪಿಸಿದರು.

ಪ್ರತೀ ಬಾರಿ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವ ಭರವಸೆ ಮಾತ್ರ ಸಿಗುತ್ತಿದೆ. ಬೇಡಿಕೆ ಈಡೇರದಿದ್ದರೆ ಬಜೆಟ್ ಸೆಷನ್ ಸಂದರ್ಭ ವಿಧಾನ ಸೌಧ ಚಲೋ ಹಮ್ಮಿಕೊಳ್ಳುತ್ತೇವೆ ಎಂದು ವರಲಕ್ಷ್ಮೀ ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.