ETV Bharat / state

ಉಡುಪಿ: ಕಡಲ್ಕೊರೆತ ಬಾಧಿತ ಪ್ರದೇಶಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

author img

By

Published : Jul 12, 2022, 7:01 AM IST

ಮುಳೂರು ಭಾಗಕ್ಕೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಸ್ಥಳೀಯರ ಸಮಸ್ಯೆ ಆಲಿಸಿ, ಪರಿಹಾರ ಒದಗಿಸುವ ಭರವಸೆ ನೀಡಿದ್ದಾರೆ.

heavy rain minister shobha karandlaje visited Udupi
ಉಡುಪಿಗೆ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

ಉಡುಪಿ: ಕಡಲ ಕೊರೆತಕ್ಕೆ ತುತ್ತಾದ ಕಾಪು ತಾಲೂಕಿನ ಮುಳೂರು ಭಾಗಕ್ಕೆ ಸೋಮವಾರ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜನರ ಸಮಸ್ಯೆ ಆಲಿಸಿ ಶೀಘ್ರ ಬಗೆಹರಿಸುವ ಭರವಸೆ ಕೊಟ್ಟರು.


ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಕಳೆದ ಹತ್ತು ದಿನಗಳಿಂದ ವಾಡಿಕೆಗಿಂತ ಹೆಚ್ಚು ಮಳೆ ಸುರಿಯುತ್ತಿದೆ. ಅಂದಾಜು 30 ಕೋಟಿ ರೂ ಆಸ್ತಿಗೆ ನಷ್ಟ ಉಂಟಾಗಿದೆ. 7 ಮನೆಗಳು ಕುಸಿದಿವೆ. 30 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಪ್ರತಿ ವರ್ಷದಂತೆ ಕಡಲ್ಕೊರೆತ ತಡೆಯಲು ತಡೆಗೋಡೆ ನಿರ್ಮಾಣ ಮಾಡಲಾಗುತ್ತಿದೆ. ತಡೆಗೋಡೆ ಇದ್ದಲ್ಲೂ ಕೆಲವೆಡೆಗಳಲ್ಲಿ ನೀರು ನುಗ್ಗುತ್ತಿದೆ. ಇದಕ್ಕೆ ಶಾಶ್ವತ ತಡೆಗೋಡೆ ನಿರ್ಮಾಣ ಆಗಬೇಕು. ಸಿಆರ್‌ಝುಡ್ ಸಮಸ್ಯೆ ಇರುವ ಕಾರಣ ಕೆಲವು ಕೆಲಸಗಳು ಬಾಕಿ ಇವೆ. ಪರಿಹಾರದ ಬಗ್ಗೆ ಸಿಎಂ ಹಾಗೂ ಕಂದಾಯ ಸಚಿವರಲ್ಲಿ ಈಗಾಗಲೇ ಮಾತನಾಡಿದ್ದೇನೆ. ಹಂತಹಂತವಾಗಿ ಹಣ ನೀಡುವ ಭರವಸೆ ನೀಡಿದ್ದಾರೆ" ಎಂದರು.

ಕೇಂದ್ರ ಸಚಿವೆಯನ್ನು ನೋಡಲು ಕೋಟ ವ್ಯಾಪ್ತಿಯ ಮೂಡು ಗಿಳಿಯಾರು ಬಳಿಯ ಕಮ್ಮಟ್ಟು ನಿವಾಸಿಗಳು ನೆರೆ ದಾಟಿಕೊಂಡು ಬಂದಿದ್ದರು. ಮಳೆಯಿಂದಾಗಿ ಬಹುತೇಕ ಕಮ್ಮಟ್ಟು ಪರಿಸರ ದ್ವೀಪದಂತಿತ್ತು. ದಿನ ಬಳಕೆಯ ವಸ್ತುಗಳಿಂದ ಹಿಡಿದು ಪ್ರತಿಯೊಂದಕ್ಕೂ ಇನ್ನೊಬ್ಬರನ್ನು ಅವಲಂಬಿಸಬೇಕಾದ ಪರಿಸ್ಥಿತಿ ಇಲ್ಲಿನ ಜನರದ್ದು. ಜಿಲ್ಲಾಧಿಕಾರಿ ಕೂರ್ಮರಾವ್ ಜೊತೆಗಿದ್ದರು.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಮಂಗಳವಾರವೂ ಶಾಲೆಗಳಿಗೆ ರಜೆ ಘೋಷಣೆ

ಉಡುಪಿ: ಕಡಲ ಕೊರೆತಕ್ಕೆ ತುತ್ತಾದ ಕಾಪು ತಾಲೂಕಿನ ಮುಳೂರು ಭಾಗಕ್ಕೆ ಸೋಮವಾರ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜನರ ಸಮಸ್ಯೆ ಆಲಿಸಿ ಶೀಘ್ರ ಬಗೆಹರಿಸುವ ಭರವಸೆ ಕೊಟ್ಟರು.


ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಕಳೆದ ಹತ್ತು ದಿನಗಳಿಂದ ವಾಡಿಕೆಗಿಂತ ಹೆಚ್ಚು ಮಳೆ ಸುರಿಯುತ್ತಿದೆ. ಅಂದಾಜು 30 ಕೋಟಿ ರೂ ಆಸ್ತಿಗೆ ನಷ್ಟ ಉಂಟಾಗಿದೆ. 7 ಮನೆಗಳು ಕುಸಿದಿವೆ. 30 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಪ್ರತಿ ವರ್ಷದಂತೆ ಕಡಲ್ಕೊರೆತ ತಡೆಯಲು ತಡೆಗೋಡೆ ನಿರ್ಮಾಣ ಮಾಡಲಾಗುತ್ತಿದೆ. ತಡೆಗೋಡೆ ಇದ್ದಲ್ಲೂ ಕೆಲವೆಡೆಗಳಲ್ಲಿ ನೀರು ನುಗ್ಗುತ್ತಿದೆ. ಇದಕ್ಕೆ ಶಾಶ್ವತ ತಡೆಗೋಡೆ ನಿರ್ಮಾಣ ಆಗಬೇಕು. ಸಿಆರ್‌ಝುಡ್ ಸಮಸ್ಯೆ ಇರುವ ಕಾರಣ ಕೆಲವು ಕೆಲಸಗಳು ಬಾಕಿ ಇವೆ. ಪರಿಹಾರದ ಬಗ್ಗೆ ಸಿಎಂ ಹಾಗೂ ಕಂದಾಯ ಸಚಿವರಲ್ಲಿ ಈಗಾಗಲೇ ಮಾತನಾಡಿದ್ದೇನೆ. ಹಂತಹಂತವಾಗಿ ಹಣ ನೀಡುವ ಭರವಸೆ ನೀಡಿದ್ದಾರೆ" ಎಂದರು.

ಕೇಂದ್ರ ಸಚಿವೆಯನ್ನು ನೋಡಲು ಕೋಟ ವ್ಯಾಪ್ತಿಯ ಮೂಡು ಗಿಳಿಯಾರು ಬಳಿಯ ಕಮ್ಮಟ್ಟು ನಿವಾಸಿಗಳು ನೆರೆ ದಾಟಿಕೊಂಡು ಬಂದಿದ್ದರು. ಮಳೆಯಿಂದಾಗಿ ಬಹುತೇಕ ಕಮ್ಮಟ್ಟು ಪರಿಸರ ದ್ವೀಪದಂತಿತ್ತು. ದಿನ ಬಳಕೆಯ ವಸ್ತುಗಳಿಂದ ಹಿಡಿದು ಪ್ರತಿಯೊಂದಕ್ಕೂ ಇನ್ನೊಬ್ಬರನ್ನು ಅವಲಂಬಿಸಬೇಕಾದ ಪರಿಸ್ಥಿತಿ ಇಲ್ಲಿನ ಜನರದ್ದು. ಜಿಲ್ಲಾಧಿಕಾರಿ ಕೂರ್ಮರಾವ್ ಜೊತೆಗಿದ್ದರು.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಮಂಗಳವಾರವೂ ಶಾಲೆಗಳಿಗೆ ರಜೆ ಘೋಷಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.