ETV Bharat / state

ಹಿಜಾಬ್-ಕೇಸರಿ ಶಾಲು ವಿವಾದ : ಶಾಸಕ ರಘುಪತಿ ಭಟ್‌ಗೆ ಬೆದರಿಕೆ ಕರೆ ಬರ್ತಿವೆಯಂತೆ

author img

By

Published : Feb 12, 2022, 8:41 PM IST

ಉಡುಪಿ ಹಿಜಾಬ್​ ವಿವಾದ ಹಿನ್ನೆಲೆಯಲ್ಲಿ ಶಾಸಕ ರಘುಪತಿ ಭಟ್​ಗೆ ಬೆದರಿಕೆ ಕರೆ ಬರುತ್ತಿವೆಯಂತೆ. ಈ ಕುರಿತಂತೆ ಮಾಹಿತಿ ನೀಡಿದ್ದಾರೆ..

Threat call to MLA Raghupati Bhat
ಶಾಸಕ ರಘುಪತಿ ಭಟ್‌ಗೆ ಬೆದರಿಕೆ ಕರೆ

ಉಡುಪಿ : ಹಿಜಾಬ್-ಕೇಸರಿ ಶಾಲು ವಿವಾದದ ಸಂಬಂಧ ಇಂಟರ್‌‌ನೆಟ್‌ನಲ್ಲಿ ಬೆದರಿಕೆ ಕರೆಗಳು ಬರುತ್ತಿವೆ ಎಂದು ಶಾಸಕ ಕೆ.ರಘುಪತಿ ಭಟ್ ತಿಳಿಸಿದರು.

ಶಾಸಕ ರಘುಪತಿ ಭಟ್‌ಗೆ ಬೆದರಿಕೆ ಕರೆ ಬರ್ತಿವೆಯಂತೆ..

ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗಂಭೀರವಾದ ಬೆದರಿಕೆ ಇಲ್ಲ. ಯಾವುದೇ ವ್ಯಕ್ತಿ ಅಥವಾ ನಿರ್ದಿಷ್ಟ ಸಂಘಟನೆಗಳಿಂದ ಬೆದರಿಕೆ ಕರೆ ಬಂದಿಲ್ಲ. ಆದರೆ, ಇಂಟರ್ನೆಟ್ ಕಾಲ್​ನಲ್ಲಿ ಬೆದರಿಕೆ ಕರೆಗಳು ಬಂದಿದೆ.

ಈ ಕುರಿತಂತೆ ಯಾವುದೇ ಪ್ರಕರಣ ದಾಖಲಿಸಿಲ್ಲ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕರೆ ಮಾಡಿ ಭದ್ರತೆ ಒದಗಿಸುವುದಾಗಿ ತಿಳಿಸಿದ್ದಾರೆ ಎಂದು ರಘುಪತಿ ಭಟ್ ತಿಳಿಸಿದರು.

ಹಿಜಾಬ್​​ ವಿಷಯದಲ್ಲಿ ಯಾವುದೇ ಧರ್ಮದ ಬಗ್ಗೆ ಮಾತನಾಡಿಲ್ಲ. ನಾನು ಕಾಲೇಜಿನ ಶಿಸ್ತು, ಸಮವಸ್ತ್ರದ ಬಗ್ಗೆ ಮಾತನಾಡಿದ್ದೇನೆ. ಇದನ್ನು ಎಲ್ಲಾ ಮುಸ್ಲಿಂ ಬಾಂಧವರು ಒಪ್ಪಿದ್ದಾರೆ.

ಬೆಂಗಳೂರಿನಿಂದ ದೊಡ್ಡ ದೊಡ್ಡ ಸ್ಥಾನದಲ್ಲಿದ್ದವರೂ ಕೂಡ ನಾವು ತೆಗೆದುಕೊಂಡ ನಿರ್ಧಾರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದರೆ, ರಾಜಕೀಯ ಲಾಭಕ್ಕಾಗಿ ಕೆಲವರು ವಿರೋಧ ಮಾಡಿದ್ದಾರೆ ಎಂದರು.

ಹೈದರಾಬಾದ್‌ನಿಂದ ಇಂಟರ್‌ನೆಟ್ ಕರೆ ಮಾಡಿದ ವ್ಯಕ್ತಿಯೊಬ್ಬ ಜೀವ ಬೆದರಿಕೆ ಹಾಕಿದ್ದಾನೆ. ಸ್ಥಳೀಯವಾಗಿ ಎರಡು ಕರೆಗಳು ಬಂದಿವೆ. ಪಾಕಿಸ್ತಾನಿ ಟಿವಿ ಚಾಲೆನ್​​ ನೋಡಿ ಉಡುಪಿಯಲ್ಲಿ ಬರ್ಖಾವನ್ನು ನಿಷೇಧ ಮಾಡಿದ್ದಾರೆ ಎಂದು ಭಾವಿಸಿ ವಿರೋಧ ವ್ಯಕ್ತಪಡಿಸಿದ್ದಾರೆ ಎಂದರು.

ನನಗೆ ಬೆದರಿಕೆ ಕರೆಗಳು ಹೊಸದಲ್ಲ, ಅವುಗಳಿಗೆಲ್ಲ ತಲೆ ಕೆಡಿಸಿಕೊಳ್ಳುವುದಿಲ್ಲ. ಬೆದರಿಕೆ ಕರೆಗಳ ಸಂಬಂಧ ಭದ್ರತೆಯ ಅವಶ್ಯಕತೆ ಇಲ್ಲ. ದೇವರು ಹಾಗೂ ಉಡುಪಿ ಕ್ಷೇತ್ರದ ಜನರು ನನಗೆ ಭದ್ರತೆ ನೀಡುತ್ತಾರೆ ಎಂದರು.

ಇದನ್ನೂ ಓದಿ: ತವರು ಮನೆಯಲ್ಲಿ ಭಾವುಕರಾದ ಸಿಎಂ ಬಸವರಾಜ ಬೊಮ್ಮಾಯಿ

ಉಡುಪಿ : ಹಿಜಾಬ್-ಕೇಸರಿ ಶಾಲು ವಿವಾದದ ಸಂಬಂಧ ಇಂಟರ್‌‌ನೆಟ್‌ನಲ್ಲಿ ಬೆದರಿಕೆ ಕರೆಗಳು ಬರುತ್ತಿವೆ ಎಂದು ಶಾಸಕ ಕೆ.ರಘುಪತಿ ಭಟ್ ತಿಳಿಸಿದರು.

ಶಾಸಕ ರಘುಪತಿ ಭಟ್‌ಗೆ ಬೆದರಿಕೆ ಕರೆ ಬರ್ತಿವೆಯಂತೆ..

ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗಂಭೀರವಾದ ಬೆದರಿಕೆ ಇಲ್ಲ. ಯಾವುದೇ ವ್ಯಕ್ತಿ ಅಥವಾ ನಿರ್ದಿಷ್ಟ ಸಂಘಟನೆಗಳಿಂದ ಬೆದರಿಕೆ ಕರೆ ಬಂದಿಲ್ಲ. ಆದರೆ, ಇಂಟರ್ನೆಟ್ ಕಾಲ್​ನಲ್ಲಿ ಬೆದರಿಕೆ ಕರೆಗಳು ಬಂದಿದೆ.

ಈ ಕುರಿತಂತೆ ಯಾವುದೇ ಪ್ರಕರಣ ದಾಖಲಿಸಿಲ್ಲ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕರೆ ಮಾಡಿ ಭದ್ರತೆ ಒದಗಿಸುವುದಾಗಿ ತಿಳಿಸಿದ್ದಾರೆ ಎಂದು ರಘುಪತಿ ಭಟ್ ತಿಳಿಸಿದರು.

ಹಿಜಾಬ್​​ ವಿಷಯದಲ್ಲಿ ಯಾವುದೇ ಧರ್ಮದ ಬಗ್ಗೆ ಮಾತನಾಡಿಲ್ಲ. ನಾನು ಕಾಲೇಜಿನ ಶಿಸ್ತು, ಸಮವಸ್ತ್ರದ ಬಗ್ಗೆ ಮಾತನಾಡಿದ್ದೇನೆ. ಇದನ್ನು ಎಲ್ಲಾ ಮುಸ್ಲಿಂ ಬಾಂಧವರು ಒಪ್ಪಿದ್ದಾರೆ.

ಬೆಂಗಳೂರಿನಿಂದ ದೊಡ್ಡ ದೊಡ್ಡ ಸ್ಥಾನದಲ್ಲಿದ್ದವರೂ ಕೂಡ ನಾವು ತೆಗೆದುಕೊಂಡ ನಿರ್ಧಾರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದರೆ, ರಾಜಕೀಯ ಲಾಭಕ್ಕಾಗಿ ಕೆಲವರು ವಿರೋಧ ಮಾಡಿದ್ದಾರೆ ಎಂದರು.

ಹೈದರಾಬಾದ್‌ನಿಂದ ಇಂಟರ್‌ನೆಟ್ ಕರೆ ಮಾಡಿದ ವ್ಯಕ್ತಿಯೊಬ್ಬ ಜೀವ ಬೆದರಿಕೆ ಹಾಕಿದ್ದಾನೆ. ಸ್ಥಳೀಯವಾಗಿ ಎರಡು ಕರೆಗಳು ಬಂದಿವೆ. ಪಾಕಿಸ್ತಾನಿ ಟಿವಿ ಚಾಲೆನ್​​ ನೋಡಿ ಉಡುಪಿಯಲ್ಲಿ ಬರ್ಖಾವನ್ನು ನಿಷೇಧ ಮಾಡಿದ್ದಾರೆ ಎಂದು ಭಾವಿಸಿ ವಿರೋಧ ವ್ಯಕ್ತಪಡಿಸಿದ್ದಾರೆ ಎಂದರು.

ನನಗೆ ಬೆದರಿಕೆ ಕರೆಗಳು ಹೊಸದಲ್ಲ, ಅವುಗಳಿಗೆಲ್ಲ ತಲೆ ಕೆಡಿಸಿಕೊಳ್ಳುವುದಿಲ್ಲ. ಬೆದರಿಕೆ ಕರೆಗಳ ಸಂಬಂಧ ಭದ್ರತೆಯ ಅವಶ್ಯಕತೆ ಇಲ್ಲ. ದೇವರು ಹಾಗೂ ಉಡುಪಿ ಕ್ಷೇತ್ರದ ಜನರು ನನಗೆ ಭದ್ರತೆ ನೀಡುತ್ತಾರೆ ಎಂದರು.

ಇದನ್ನೂ ಓದಿ: ತವರು ಮನೆಯಲ್ಲಿ ಭಾವುಕರಾದ ಸಿಎಂ ಬಸವರಾಜ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.