ETV Bharat / state

ಪಡಿತರ ಅಕ್ಕಿ-ಗೋಧಿ ಅಕ್ರಮ ದಾಸ್ತಾನು ಆರೋಪ: ಉಡುಪಿ ಪೊಲೀಸರಿಂದ ಐವರ ಬಂಧನ - Udupi Ration

ಅಕ್ರಮ ದಾಸ್ತಾನು ಮಾಡಲಾಗಿದ್ದ ಅಕ್ಕಿ, ಗೋಧಿ ಧಾನ್ಯವನ್ನು ಉಡುಪಿಯ ಡಿಸಿಐಬಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದು, ಐವರನ್ನು ಬಂಧಿಸಿದ್ದಾರೆ.

ಸರ್ಕಾರದ ರೇಶನ್​ ಅಕ್ರಮ ದಾಸ್ತಾನು
ಸರ್ಕಾರದ ರೇಶನ್​ ಅಕ್ರಮ ದಾಸ್ತಾನು
author img

By

Published : Aug 28, 2020, 10:21 AM IST

ಉಡುಪಿ: ಕುಂದಾಪುರ ತಾಲೂಕು ಕೋಟೇಶ್ವರದಲ್ಲಿ ಅಕ್ರಮ ದಾಸ್ತಾನು ಮಾಡಲಾಗಿದ್ದ ಅಕ್ಕಿ, ಗೋಧಿ ಧಾನ್ಯವನ್ನು ಉಡುಪಿಯ ಡಿಸಿಐಬಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದು, ಐವರನ್ನು ಬಂಧಿಸಿದ್ದಾರೆ.

ಇಸ್ಮಾಯಿಲ್ ಬ್ಯಾರಿ, ಮುಸ್ತಫಾ ತೌಫಿಕ್, ಉಬೇದುಲ್ಲಾ, ಮಹಮ್ಮದ್ ಮೇಚ್ರಾ, ನಿಯಾಸ್ ಬಂಧಿತರು. ಡಿಸಿಐಬಿ ಪೊಲೀಸ್ ಇನ್ಸ್​ಪೆಕ್ಟರ್ ಮಂಜಪ್ಪ ನೇತೃತ್ವದಲ್ಲಿ ದಾಳಿ ನಡೆಸಿದ ತಂಡ, ಗೋದಾಮಿನಲ್ಲಿದ್ದ 55 ಟನ್ ಅಕ್ಕಿ, 2.75 ಲಕ್ಷ ನಗದು ಮತ್ತು ಮೂರು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ.

ಸರ್ಕಾರದ ಫ್ರೀ ರೇಷನ್ ಅಕ್ರಮವಾಗಿ ಸಂಗ್ರಹಿಸಿ ಬಳಿಕ ಅದನ್ನು ಕೇರಳಕ್ಕೆ ಸಾಗಾಟ ಮಾಡಲಾಗುತ್ತಿತ್ತು. ಅಷ್ಟೇ ಅಲ್ಲದೆ ಈ ದಂಧೆಯಲ್ಲಿ ಸಾಧಾರಣ ಅಕ್ಕಿಗೆ ಪಾಲೀಶ್​ ಮಾಡಿ ಅದನ್ನು ಸೋನಾ ಮಸೂರಿ ಅಕ್ಕಿ ಎಂದು ಮಾರಾಟ ಮಾಡುತ್ತಿದ್ದರಂತೆ. ಸದ್ಯ ಖದೀಮರ ತಂಡ ಪೊಲೀಸ್​ ಬಲೆಗೆ ಬಿದ್ದಿದ್ದು, ಇವರೆಲ್ಲಾ ಕುಂದಾಪುರದ ಮೂಡು ಗೋಪಾಡಿ ಮತ್ತು ಕೇರಳ ಮೂಲದವರು ಎಂದು ತಿಳಿದು ಬಂದಿದೆ. ಇವರ ವಶದಲ್ಲಿದ್ದ ಲಾರಿ ಸೇರಿ ಸುಮಾರು ಒಂದು ಕೋಟಿ ರುಪಾಯಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಉಡುಪಿ: ಕುಂದಾಪುರ ತಾಲೂಕು ಕೋಟೇಶ್ವರದಲ್ಲಿ ಅಕ್ರಮ ದಾಸ್ತಾನು ಮಾಡಲಾಗಿದ್ದ ಅಕ್ಕಿ, ಗೋಧಿ ಧಾನ್ಯವನ್ನು ಉಡುಪಿಯ ಡಿಸಿಐಬಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದು, ಐವರನ್ನು ಬಂಧಿಸಿದ್ದಾರೆ.

ಇಸ್ಮಾಯಿಲ್ ಬ್ಯಾರಿ, ಮುಸ್ತಫಾ ತೌಫಿಕ್, ಉಬೇದುಲ್ಲಾ, ಮಹಮ್ಮದ್ ಮೇಚ್ರಾ, ನಿಯಾಸ್ ಬಂಧಿತರು. ಡಿಸಿಐಬಿ ಪೊಲೀಸ್ ಇನ್ಸ್​ಪೆಕ್ಟರ್ ಮಂಜಪ್ಪ ನೇತೃತ್ವದಲ್ಲಿ ದಾಳಿ ನಡೆಸಿದ ತಂಡ, ಗೋದಾಮಿನಲ್ಲಿದ್ದ 55 ಟನ್ ಅಕ್ಕಿ, 2.75 ಲಕ್ಷ ನಗದು ಮತ್ತು ಮೂರು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ.

ಸರ್ಕಾರದ ಫ್ರೀ ರೇಷನ್ ಅಕ್ರಮವಾಗಿ ಸಂಗ್ರಹಿಸಿ ಬಳಿಕ ಅದನ್ನು ಕೇರಳಕ್ಕೆ ಸಾಗಾಟ ಮಾಡಲಾಗುತ್ತಿತ್ತು. ಅಷ್ಟೇ ಅಲ್ಲದೆ ಈ ದಂಧೆಯಲ್ಲಿ ಸಾಧಾರಣ ಅಕ್ಕಿಗೆ ಪಾಲೀಶ್​ ಮಾಡಿ ಅದನ್ನು ಸೋನಾ ಮಸೂರಿ ಅಕ್ಕಿ ಎಂದು ಮಾರಾಟ ಮಾಡುತ್ತಿದ್ದರಂತೆ. ಸದ್ಯ ಖದೀಮರ ತಂಡ ಪೊಲೀಸ್​ ಬಲೆಗೆ ಬಿದ್ದಿದ್ದು, ಇವರೆಲ್ಲಾ ಕುಂದಾಪುರದ ಮೂಡು ಗೋಪಾಡಿ ಮತ್ತು ಕೇರಳ ಮೂಲದವರು ಎಂದು ತಿಳಿದು ಬಂದಿದೆ. ಇವರ ವಶದಲ್ಲಿದ್ದ ಲಾರಿ ಸೇರಿ ಸುಮಾರು ಒಂದು ಕೋಟಿ ರುಪಾಯಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.