ETV Bharat / state

ಮಕ್ಕಳಿಂದಲೇ ಶಾಲಾ ಕಟ್ಟಡ ಉದ್ಘಾಟಿಸಿದ ಸಚಿವ ಸುರೇಶ್​​ ಕುಮಾರ್​​! - Minister of Education who inaugurated school building from the children

ಕುಂದಾಪುರ ತಾಲೂಕಿನ ಮಣೂರು ಸರ್ಕಾರಿ ಶಾಲೆಯ ನೂತನ ಕಟ್ಟಡ ಮತ್ತು ಸಭಾಂಗಣವನ್ನು ಉದ್ಘಾಟನೆ ಮಾಡಲು ಬಂದಿದ್ದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಶಾಲಾ ಮಕ್ಕಳಿಂದಲೇ ಉದ್ಘಾಟಿಸಿದರು.

Minister of Education who inaugurated school building from the children
ಮಕ್ಕಳಿಂದ ಶಾಲಾ ಕಟ್ಟಡ ಉದ್ಘಾಟಿಸಿದ ಶಿಕ್ಷಣ ಸಚಿವರು
author img

By

Published : Jan 14, 2020, 8:48 AM IST

ಉಡುಪಿ: ಕುಂದಾಪುರ ತಾಲೂಕಿನ ಮಣೂರು ಸರ್ಕಾರಿ ಶಾಲೆಯ ನೂತನ ಕಟ್ಟಡ ಮತ್ತು ಸಭಾಂಗಣವನ್ನು ಉದ್ಘಾಟಿಸಲು ಶಿಕ್ಷಣ ಸಚಿವ ಸುರೇಶ್ ಕುಮಾರ್ ಬೆಂಗಳೂರಿನಿಂದ ಬಂದಿದ್ದರು. ರಾಜಧಾನಿಯಿಂದ ಬಂದರೂ ಕಟ್ಟಡ ಉದ್ಘಾಟನೆ ಮಾಡಿದ್ದು ಮಾತ್ರ ಶಾಲೆಯ ಮಕ್ಕಳು. ಸಚಿವರು ಮಕ್ಕಳ ಕೈಯಲ್ಲೇ ನೂತನ ಕೊಠಡಿಗಳು, ಸಭಾಂಗಣವನ್ನು ಉದ್ಘಾಟನೆ ಮಾಡಿಸಿದರು.

ಮಕ್ಕಳಿಂದ ಶಾಲಾ ಕಟ್ಟಡ ಉದ್ಘಾಟಿಸಿದ ಶಿಕ್ಷಣ ಸಚಿವ

ಈ ವೇಳೆ ಮಾತನಾಡಿದ ಸಚಿವ ಸುರೇಶ್​ ಕುಮಾರ್​, ಮಕ್ಕಳಿಗಾಗಿ ಇರುವ ಶಾಲೆಯನ್ನು ಮಕ್ಕಳೇ ಉದ್ಘಾಟಿಸಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಇಲಾಖೆ ಮೂಲಕ ಸರ್ಕಾರಿ ಶಾಲೆಗಳಿಗೆ ಸಂಬಂಧಿಸಿದಂತೆ ನಾಲ್ಕು ನಿರ್ಣಯಗಳನ್ನು ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು.

ವಾರಕ್ಕೊಂದು ದಿನ ಪಠ್ಯೇತರ ಚಟುವಟಿಕೆ ಕಡ್ಡಾಯ ಮಾಡುವ ಜೊತೆಗೆ ಶಾಲಾ ಬ್ಯಾಗ್ ಹೊರೆ ಮುಂದಿನ ವರ್ಷದಿಂದ ಕಡಿಮೆಯಾಗಲಿದೆ. ಶಿಕ್ಷಕರಲ್ಲದ ಇತರ ತಜ್ಞರು ಮಕ್ಕಳಿಗೆ ಪಾಠ ಮಾಡುವ ಅವಕಾಶ ಕಲ್ಪಿಸಲು ನೂತನ ಆ್ಯಪ್ ಮಾಡುವುದಾಗಿ ಮತ್ತು ಶಿಕ್ಷಕರು, ಪೋಷಕರು ಮತ್ತು ಮಕ್ಕಳ ಉಪಯೋಗಕ್ಕೆ ಸಹಾಯವಾಣಿ ತೆರೆಯುವುದಾಗಿ ಹೇಳಿದರು.

ಉಡುಪಿ: ಕುಂದಾಪುರ ತಾಲೂಕಿನ ಮಣೂರು ಸರ್ಕಾರಿ ಶಾಲೆಯ ನೂತನ ಕಟ್ಟಡ ಮತ್ತು ಸಭಾಂಗಣವನ್ನು ಉದ್ಘಾಟಿಸಲು ಶಿಕ್ಷಣ ಸಚಿವ ಸುರೇಶ್ ಕುಮಾರ್ ಬೆಂಗಳೂರಿನಿಂದ ಬಂದಿದ್ದರು. ರಾಜಧಾನಿಯಿಂದ ಬಂದರೂ ಕಟ್ಟಡ ಉದ್ಘಾಟನೆ ಮಾಡಿದ್ದು ಮಾತ್ರ ಶಾಲೆಯ ಮಕ್ಕಳು. ಸಚಿವರು ಮಕ್ಕಳ ಕೈಯಲ್ಲೇ ನೂತನ ಕೊಠಡಿಗಳು, ಸಭಾಂಗಣವನ್ನು ಉದ್ಘಾಟನೆ ಮಾಡಿಸಿದರು.

ಮಕ್ಕಳಿಂದ ಶಾಲಾ ಕಟ್ಟಡ ಉದ್ಘಾಟಿಸಿದ ಶಿಕ್ಷಣ ಸಚಿವ

ಈ ವೇಳೆ ಮಾತನಾಡಿದ ಸಚಿವ ಸುರೇಶ್​ ಕುಮಾರ್​, ಮಕ್ಕಳಿಗಾಗಿ ಇರುವ ಶಾಲೆಯನ್ನು ಮಕ್ಕಳೇ ಉದ್ಘಾಟಿಸಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಇಲಾಖೆ ಮೂಲಕ ಸರ್ಕಾರಿ ಶಾಲೆಗಳಿಗೆ ಸಂಬಂಧಿಸಿದಂತೆ ನಾಲ್ಕು ನಿರ್ಣಯಗಳನ್ನು ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು.

ವಾರಕ್ಕೊಂದು ದಿನ ಪಠ್ಯೇತರ ಚಟುವಟಿಕೆ ಕಡ್ಡಾಯ ಮಾಡುವ ಜೊತೆಗೆ ಶಾಲಾ ಬ್ಯಾಗ್ ಹೊರೆ ಮುಂದಿನ ವರ್ಷದಿಂದ ಕಡಿಮೆಯಾಗಲಿದೆ. ಶಿಕ್ಷಕರಲ್ಲದ ಇತರ ತಜ್ಞರು ಮಕ್ಕಳಿಗೆ ಪಾಠ ಮಾಡುವ ಅವಕಾಶ ಕಲ್ಪಿಸಲು ನೂತನ ಆ್ಯಪ್ ಮಾಡುವುದಾಗಿ ಮತ್ತು ಶಿಕ್ಷಕರು, ಪೋಷಕರು ಮತ್ತು ಮಕ್ಕಳ ಉಪಯೋಗಕ್ಕೆ ಸಹಾಯವಾಣಿ ತೆರೆಯುವುದಾಗಿ ಹೇಳಿದರು.

Intro:Avb
B
B

ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಮಣೂರು ಸಕರ್ಾರಿ ಶಾಲೆಯ ನೂತನ ಕಟ್ಟಡ ಮತ್ತು ಸಭಾಂಗಣವನ್ನು ಉದ್ಘಾಟಿಸಲು ಶಿಕ್ಷಣ ಸಚಿವ ಸುರೇಶ್ ಕುಮಾರ್ ಬೆಂಗಳೂರಿಂದ ಬಂದಿದ್ದರು. ರಾಜಧಾನಿಯಿಂದ ಬಂದರೂ ಕಾರ್ಯಕ್ರಮ ಉದ್ಘಾಟನೆ ಮಾಡಿದ್ದು ಮಾತ್ರ ಸಕರ್ಾರಿ ಶಾಲೆಯ ಮಕ್ಕಳು. ಸಚಿವರು ಮಕ್ಕಳ ಕೈಯ್ಯಲ್ಲೆ ಪ್ರಮುಖ ಕಾರ್ಯಕ್ರಮ, ಕೊಠಡಿಗಳು, ಸಭಾಂಗಣವನ್ನು ಉದ್ಘಾಟನೆ ಮಾಡಿಸಿದರು. ಮಕ್ಕಳಿಗಾಗಿ ಇರುವ ಶಾಲೆಯನ್ನು ಮಕ್ಕಳೇ ಉದ್ಘಾಟಿಸಿದ್ದಾರೆ ಎಂದು ಸುರೇಶ್ ಕುಮಾರ್ ಹೇಳಿದರು. ಮುಂದಿನ ಶೈಕ್ಷಣಿಕ ವರ್ಷದಿಂದ ಇಲಾಖೆ ಮೂಲಕ ಸಕರ್ಾರಿ ಶಾಲೆಗಳಿಗೆ ಸಂಬಂಧಿಸಿದಂತೆ ನಾಲ್ಕು ನಿರ್ಣಯ ತೆಗೆದುಕೊಂಡಿದ್ದೇವೆ. ವಾರಕ್ಕೊಂದು ದಿನ ಪಠ್ಯೇತರ ಚಟುವಡಿಕೆ ಕಡ್ಡಾಯ ಮಾಡುವ ಜೊತೆಗೆ ಸ್ಕೂಲ್ ಬ್ಯಾಗ್ ಹೊರೆ ಮುಂದಿನ ವರ್ಷದಿಂದ ಕಡಿಮೆಯಾಗಲಿದೆ ಎಂದರು. ಶಿಕ್ಷಕರಲ್ಲದ ವಿಷಯ ತಜ್ಞರು ಮಕ್ಕಳಿಗೆ ಪಾಠ ಮಾಡುವ ಅವಕಾಶ ಕಲ್ಪಿಸಲು ಆ್ಯಪ್ ಮಾಡಿವುದಾಗಿ ಹೇಳಿದರು. ಶಿಕ್ಷಕರು, ಪೋಷಕರು ಮತ್ತು ಮಕ್ಕಳ ಉಪಯೋಗಕ್ಕೆ ಸಹಾಯವಾಣಿ ತೆರೆಯೋದಾಗಿ ಹೇಳಿದರು. ಪಕ್ಕೆಲುಬು ಹೇಳಿಸಿದ ಶಿಕ್ಷಕನ ವೃತ್ತಾಂತಕ್ಕೆ ಸಾಹಿತಿ ಲಕ್ಷ್ಮೀನಾರಾಯಣ ಭಟ್ಟರ ಆತ್ಮಚರಿತ್ರೆಯ ಕಥೆ ಹೇಳಿ ಶಿಕ್ಷಕರು ತಾಯಿ ಹೃದಯ ಬೆಳೆಸಿಕೊಳ್ಳಬೇಕು ಎಂದು ಶಿಕ್ಷಕರಿಗೆ ಸಲಹೆ ನೀಡಿದರು.

ಬೈಟ್- ಸುರೇಶ್ ಕುಮಾರ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವBody:SureshConclusion:Suresh

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.