ಉಡುಪಿ: ಶಿರ್ವ ಡಾನ್ ಬಾಸ್ಕೊ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲ ಮಹೇಶ್ ಡಿಸೋಜಾರ ಆತ್ಮಹತ್ಯೆ ಪ್ರಕರಣ ಸಂಬಂಧ ಮುದರಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಡೇವಿಡ್ ಡಿಸೋಜಾನನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಪ್ರಕರಣದ ತನಿಖಾಧಿಕಾರಿಯಾಗಿರುವ ಕಾಪು ಸರ್ಕಲ್ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಮಾತನಾಡಿ, ಮಹೇಶ್ ಡಿಸೋಜಾರಿಗೆ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪದ ಮೇಲೆ ಬಂಧಿಸಿದ್ದಾರೆ.
ಆರೋಪಿಯನ್ನು ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾರ್ಚ್ 11 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.