ETV Bharat / state

ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ದೇಶಪಾಂಡೆ - undefined

ನೆರೆ ಮತ್ತು ಬರ ನಿರ್ವಹಣೆಗೆ ಉಡುಪಿ ಜಿಲ್ಲೆಯೊಂದಕ್ಕೇ ಈಗಾಗಲೇ 24 ಕೋಟಿ ಬಿಡುಗಡೆಯಾಗಿದೆ. ಕುಡಿಯುವ ನೀರು, ಮೇವಿನ‌ ವಿಚಾರದಲ್ಲಿ ಯಾವುದೇ ಹೊಂದಾಣಿಕೆ ಮಾಡದೆ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಬರ ನಿರ್ವಹಣೆಗೆ ಸೂಕ್ತ ಕ್ರಮ‌ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದರು.

ಆರ್.ವಿ ದೇಶಪಾಂಡೆ
author img

By

Published : Jun 19, 2019, 9:39 AM IST

ಉಡುಪಿ: ಗ್ರಾಮೀಣ ಕುಡಿಯುವ ನೀರಿನ‌ ವ್ಯವಸ್ಥೆ ಮತ್ತು ನೈರ್ಮಲ್ಯದ ಕುರಿತು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಉಡುಪಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ

ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವರು:

ಈ ಹಿಂದೆಯೇ ಸಚಿವರು ಬರದ ಹಿನ್ನೆಲೆ ಜನರ ನೆರವಿಗೆ ಧಾವಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದ್ರು. ಆದ್ರೆ ಬರದ ಕುರಿತು ಸಮರ್ಪಕ‌ ಉತ್ತರ ನೀಡದ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ ಆರ್.ವಿ.ದೇಶಪಾಂಡೆ, ತಕ್ಷಣ ಪಂಚಾಯತ್​ಗಳಿಗೆ ತೆರಳಿ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು. ಇಲ್ಲದಿದ್ದರೆ ಪರಿಣಾಮ ಎದುರಿಸಬೇಕಾದೀತು ಅಂತಾ ಖಡಕ್ ವಾರ್ನಿಂಗ್ ಕೊಟ್ಟರು.

ಬಳಿಕ ಸುದ್ದಿಗಾರರ ಜೊತೆ ಮಾತಾಡಿದ ಸಚಿವರು, ಈ ವರ್ಷ ಮಳೆರಾಯ ಇನ್ನೂ ಆಶೀರ್ವಾದ ಮಾಡಿಲ್ಲ. ಸರ್ಕಾರ ಮುಂದಾಲೋಚನೆ ಮಾಡಿ ಹಲವು‌ ಕ್ರಮ‌ ಕೈಗೊಂಡಿದೆ. ಕರಾವಳಿಯಲ್ಲೂ ಮಳೆ ಬಂದಿಲ್ಲ. ಆರು ತಿಂಗಳ ಹಿಂದೆಯೇ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ಬರ ನಿರ್ವಹಣೆಗೆ ಸೂಕ್ತ ಕ್ರಮ‌ ಕೈಗೊಳ್ಳಬೇಕು. ಕುಡಿಯುವ ನೀರಿನ ಸಮಸ್ಯೆಯಾಗಬಾರದು. ಯಾರೂ ಗುಳೆ ಹೋಗಬಾರದು. ಸರ್ಕಾರ ಸಾಕಷ್ಟು ಹಣವನ್ನು ಜಿಲ್ಲಾಧಿಕಾರಿಗಳಿಗೆ ನೀಡಿದೆ. ನೆರೆ ಮತ್ತು ಬರ ನಿರ್ವಹಣೆಗೆ ಉಡುಪಿ ಜಿಲ್ಲೆಯೊಂದಕ್ಕೇ ಈಗಾಗಲೇ 24 ಕೋಟಿ ಬಿಡುಗಡೆಯಾಗಿದೆ. ನೀರು ಇಲ್ಲದ ಕಡೆ ಟ್ಯಾಂಕರ್ ವ್ಯವಸ್ಥೆ ಮಾಡಲಾಗಿದೆ. ಕುಡಿಯುವ ನೀರು, ಮೇವಿನ‌ ವಿಚಾರದಲ್ಲಿ ಯಾವುದೇ ಹೊಂದಾಣಿಕೆ ಮಾಡದೆ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಸಭೆಯಲ್ಲಿ ಕೆಲವು ಸಲಹೆ ಸೂಚನೆ ಕೊಟ್ಟಿದ್ದೇನೆ. ಅಧಿಕಾರಿಗಳು ಚುರುಕಾಗಬೇಕು. ಜನರ ಬಳಿ ಹೋಗಿ ಸಮಸ್ಯೆ ಬಗೆಹರಿಸಬೇಕು ಎಂದರು.

ಉಡುಪಿ: ಗ್ರಾಮೀಣ ಕುಡಿಯುವ ನೀರಿನ‌ ವ್ಯವಸ್ಥೆ ಮತ್ತು ನೈರ್ಮಲ್ಯದ ಕುರಿತು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಉಡುಪಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ

ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವರು:

ಈ ಹಿಂದೆಯೇ ಸಚಿವರು ಬರದ ಹಿನ್ನೆಲೆ ಜನರ ನೆರವಿಗೆ ಧಾವಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದ್ರು. ಆದ್ರೆ ಬರದ ಕುರಿತು ಸಮರ್ಪಕ‌ ಉತ್ತರ ನೀಡದ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ ಆರ್.ವಿ.ದೇಶಪಾಂಡೆ, ತಕ್ಷಣ ಪಂಚಾಯತ್​ಗಳಿಗೆ ತೆರಳಿ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು. ಇಲ್ಲದಿದ್ದರೆ ಪರಿಣಾಮ ಎದುರಿಸಬೇಕಾದೀತು ಅಂತಾ ಖಡಕ್ ವಾರ್ನಿಂಗ್ ಕೊಟ್ಟರು.

ಬಳಿಕ ಸುದ್ದಿಗಾರರ ಜೊತೆ ಮಾತಾಡಿದ ಸಚಿವರು, ಈ ವರ್ಷ ಮಳೆರಾಯ ಇನ್ನೂ ಆಶೀರ್ವಾದ ಮಾಡಿಲ್ಲ. ಸರ್ಕಾರ ಮುಂದಾಲೋಚನೆ ಮಾಡಿ ಹಲವು‌ ಕ್ರಮ‌ ಕೈಗೊಂಡಿದೆ. ಕರಾವಳಿಯಲ್ಲೂ ಮಳೆ ಬಂದಿಲ್ಲ. ಆರು ತಿಂಗಳ ಹಿಂದೆಯೇ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ಬರ ನಿರ್ವಹಣೆಗೆ ಸೂಕ್ತ ಕ್ರಮ‌ ಕೈಗೊಳ್ಳಬೇಕು. ಕುಡಿಯುವ ನೀರಿನ ಸಮಸ್ಯೆಯಾಗಬಾರದು. ಯಾರೂ ಗುಳೆ ಹೋಗಬಾರದು. ಸರ್ಕಾರ ಸಾಕಷ್ಟು ಹಣವನ್ನು ಜಿಲ್ಲಾಧಿಕಾರಿಗಳಿಗೆ ನೀಡಿದೆ. ನೆರೆ ಮತ್ತು ಬರ ನಿರ್ವಹಣೆಗೆ ಉಡುಪಿ ಜಿಲ್ಲೆಯೊಂದಕ್ಕೇ ಈಗಾಗಲೇ 24 ಕೋಟಿ ಬಿಡುಗಡೆಯಾಗಿದೆ. ನೀರು ಇಲ್ಲದ ಕಡೆ ಟ್ಯಾಂಕರ್ ವ್ಯವಸ್ಥೆ ಮಾಡಲಾಗಿದೆ. ಕುಡಿಯುವ ನೀರು, ಮೇವಿನ‌ ವಿಚಾರದಲ್ಲಿ ಯಾವುದೇ ಹೊಂದಾಣಿಕೆ ಮಾಡದೆ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಸಭೆಯಲ್ಲಿ ಕೆಲವು ಸಲಹೆ ಸೂಚನೆ ಕೊಟ್ಟಿದ್ದೇನೆ. ಅಧಿಕಾರಿಗಳು ಚುರುಕಾಗಬೇಕು. ಜನರ ಬಳಿ ಹೋಗಿ ಸಮಸ್ಯೆ ಬಗೆಹರಿಸಬೇಕು ಎಂದರು.

Intro:ಉಡುಪಿ
18-06_19
ದೇಶಪಾಂಡೆ ಸಭೆ



ಕಂದಾಯ ಸಚಿವ ಆರ್ .ವಿ ದೇಶಪಾಂಡೆ ನೇತೃತ್ವದಲ್ಲಿ ಇವತ್ತು ಉಡುಪಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಂದಾಯ ಸಚಿವರು ಗ್ರಾಮೀಣ ಕುಡಿಯುವ ನೀರಿನ‌ ವ್ಯವಸ್ಥೆ ಮತ್ತು ನೈರ್ಮಲ್ಯ ಕುರಿತು ಅಧಿಕಾರಿಗಳ ಜೊತೆಗೆ ಸಮಾಲೋಚನೆ ನಡೆಸಿದ್ರು.ಸಭೆಯಲ್ಲಿಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವರು, ಬರದ ಹಿನ್ನೆಲೆಯಲ್ಲಿ ಜನರ ನೆರವಿಗೆ ಧಾವಿಸುವಂತೆ ತಾಕೀತು ಮಾಡಿದ್ರು. ಸಮರ್ಪಕ‌ ಉತ್ತರ ನೀಡದ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ ಆರ್ .ವಿ.ದೇಶಪಾಂಡೆ ತಕ್ಷಣ ಪಂಚಾಯತ್ ಗಳಿಗೆ ತೆರಳಿ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ,ಇಲ್ಲದಿದ್ದರೆ ಪರಿಣಾಮ ಎದುರಿಸಬೇಕಾದೀತು ಅಂತ ಖಡಕ್ ವಾರ್ನಿಂಗ್ ಕೊಟ್ರು.
ಮೇಲ್ಮನೆ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ,ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜಾ ,ಜಿಲ್ಲೆಯ ಶಾಸಕರು,ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.ಬಳಿಕ ಸುದ್ದಿಗಾರರ ಜೊತೆ ಮಾತಾಡಿದ ಸಚಿವರು,ಈ ವರ್ಷ ಮೇಘರಾಜ ಇನ್ನೂ ಆಶೀರ್ವಾದ ಮಾಡಿಲ್ಲ .ಸರಕಾರ ಮುಂದಾಲೋಚನೆ ಮಾಡಿ ಹಲವು‌ ಕ್ರಮ‌ಕೈಗೊಂಡಿದೆ.ಕರಾವಳಿಯಲ್ಲೂ ಮಳೆ ಬಂದಿಲ್ಲ.ಆರು ತಿಂಗಳ ಹಿಂದೆಯೇ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ.ಬರ ನಿವಾರಣೆಗೆ ಸೂಕ್ತಕ್ರಮ‌ಕೈಗೊಳ್ಳಬೇಕು.ಕುಡಿಯುವ ನೀರಿನ ಸಮಸ್ಯೆ ಜನರಿಗೂ ಆಗಬಾರದು ,ಜಾನುವಾರುಗಳಿಗೂ ಆಗಬಾರದು.ಯಾರೂ ಗುಳೇ ಹೋಗಬಾರದು. ಸರಕಾರ ಸಾಕಷ್ಟು ಹಣವನ್ನು ಜಿಲ್ಲಾಧಿಕಾರಿಗಳಿಗೆ ನೀಡಿದೆ.ನೆರೆ ಮತ್ತು ಬರ ನಿರ್ವಹಣೆಗೆ ಉಡುಪಿ ಜಿಲ್ಲೆಯೊಂದಕ್ಕೇ ಈಗಾಗಲೇ 24 ಕೋಟಿ ಬಿಡುಗಡೆ ಆಗಿದೆ. ನೀರು ಇಲ್ಲದ ಕಡೆ ಟ್ಯಾಂಕರ್ ನೀರಿನ‌ವ್ಯವಸ್ಥೆ ಮಾಡಲಾಗಿದೆ.ಕುಡಿಯುವ ನೀರು ,ಮೇವಿನ‌ ವಿಚಾರದಲ್ಲಿ ಯಾವುದೇ ಕಾಂಪ್ರಮೈಸ್ ಮಾಡದೆ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.ಇವತ್ತಿನ ಸಭೆಯಲ್ಲಿ ಕೆಲವು ಸಲಹೆ ಸೂಚನೆ ಕೊಟ್ಟಿದ್ದೇನೆ ,ಅಧಿಕಾರಿಗಳು ಚುರುಕಾಗಬೇಕು ,ಜನರ ಬಳಿಗೆ ಹೋಗಿ ಅವರ ಸಮಸ್ಯೆ ಬಗೆಹರಿಸಬೇಕು ಎಂದರು.

ಬೈಟ್ ; ಆರ್.ವಿ.ದೇಶಪಾಂಡೆ ,ಕಂದಾಯ ಸಚಿವರುBody:KdpConclusion:Kdp

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.