ಉಡುಪಿ: ತಾಯಿ-ಮಗನ ಮೇಲೆ ಕೋಟ ಠಾಣೆಯ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕರು ಕಾಲ್ನಡಿಗೆ ಜಾಥಾ ನಡೆಸಿದರು.
ಬೈಕ್ನಲ್ಲಿ ತಾಯಿಯನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಪ್ರಶಾಂತ್ ಎಂಬಾತನ ಮೇಲೆ ಕೋಟ ಠಾಣೆಯ ಪೊಲೀಸರು ವಾಹನ ತಪಾಸಣೆಯ ನೆಪದಲ್ಲಿ ದೌರ್ಜನ್ಯ ನಡೆಸಿದ್ದಾರೆ. ಅಲ್ಲದೆ ಮಗನ ರಕ್ಷಣೆಗೆ ನಿಂತ ತಾಯಿಯ ಮೇಲೂ ಪೊಲೀಸರು ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಸಾರ್ವಜನಿಕರು ಸಾಲಿಗ್ರಾಮದಿಂದ ಕೋಟ ಹೈಸ್ಕೂಲ್ವರೆಗೆ ಕಾಲ್ನಡಿಗೆ ಜಾಥಾ ನಡೆಸಿದರು.
ಓದಿ: ವಂಚಕ ಯುವರಾಜ್ ಜೊತೆ ಹಣದ ವ್ಯವಹಾರ: ರಾಧಿಕಾ ಕುಮಾರಸ್ವಾಮಿಗೆ ಮತ್ತೆ ಎದುರಾಗುತ್ತಾ ಸಂಕಷ್ಟ?
ಪೊಲೀಸ್ ಇಲಾಖೆ ಇರುವುದು ಜನರ ಸೇತುವೆಯಾಗಿ ಕಾರ್ಯನಿರ್ವಹಿಸುವುದಕ್ಕಾಗಿಯೇ ವಿನಾ ಮನಬಂದಂತೆ ಕಾರ್ಯನಿರ್ವಹಿಸುವುದಕ್ಕೆ ಅಲ್ಲ. ಅಮಾಯಕ ತಾಯಿ-ಮಗನ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿಗಳನ್ನು ಒಂದು ವಾರದೊಳಗೆ ಅಮಾನತುಗೊಳಿಸಬೇಕು. ಇಲ್ಲವಾದಲ್ಲಿ ದೊಡ್ಡಮಟ್ಟದಲ್ಲಿ ಪ್ರತಿಭಟನೆ ಹಮ್ಮಿಕೊಂಡು ಠಾಣೆ ಎದುರು ಅಮರಣಾಂತ ಉಪವಾಸ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದ್ದಾರೆ.