ETV Bharat / state

ಅರಶಿನಗುಂಡಿ ಜಲಪಾತದಲ್ಲಿ ಕೊಚ್ಚಿ ಹೋಗಿದ್ದ ಶರತ್​ ಮೃತದೇಹ ವಾರದ ಬಳಿಕ ಪತ್ತೆ

author img

By

Published : Jul 30, 2023, 1:29 PM IST

Updated : Jul 30, 2023, 3:03 PM IST

ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಜಲಪಾತದಲ್ಲಿ ಕೊಚ್ಚಿ ಹೋಗಿದ್ದ ಶರತ್​ ಮೃತದೇಹ ವಾರದ ಬಳಿಕ ಪತ್ತೆಯಾಗಿದೆ.

sharath
ಶರತ್​ ಮೃತದೇಹ ವಾರದ ಬಳಿಕ ಪತ್ತೆ

ಉಡುಪಿ: ಕಳೆದ ವಾರ ಜಿಲ್ಲೆಯ ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಜಲಪಾತದಲ್ಲಿ ಬಂಡೆಯ ಮೇಲೆ ನಿಂತು ಜಲಪಾತ ವೀಕ್ಷಿಸುತ್ತಿದ್ದ ಯುವಕನೊಬ್ಬ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ನೀರು ಪಾಲಾಗಿರುವ ಘಟನೆ ನಡೆದಿತ್ತು. ಭದ್ರಾವತಿ ಮೂಲದ ಶರತ್​ ಕುಮಾರ್​ (23) ನೀರಿನಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿತ್ತು.

ಯುವಕನ ಶವ ಪತ್ತೆ ಹಚ್ಚಲು ಕೊಲ್ಲೂರು ಪೊಲೀಸರು, ಅಗ್ನಿಶಾಮಕ ದಳ, ಸ್ಥಳೀಯರು ಮತ್ತು ಮುಳುಗು ತಜ್ಞರ ತಂಡಗಳು ಶೋಧ ಕಾರ್ಯಾಚರಣೆ ನಡೆಸಿದ್ದರು. ಅದರಂತೆ ಇಂದು ಶರತ್​ ಮೃತದೇಹ ಅರಶಿನ ಗುಂಡಿ ಜಲಪಾತದಿಂದ 200 ಮೀಟರ್​ ಕೆಳಗಡೆ ದೊರೆತಿದೆ. ಬಂಡೆ ಕಲ್ಲಿನೊಳಗಡೆ ಸಿಲುಕಿ ಹಾಕಿಕೊಂಡ ಮೃತದೇಹವನ್ನು ಹೊರತೆಗೆಯಲಾಗಿದೆ.

ಘಟನೆ ಹಿನ್ನೆಲೆ: ಜುಲೈ 23 ರಂದು ಕೊಲ್ಲೂರಿಗೆ ಕಾರಿನಲ್ಲಿ ಬಂದಿದ್ದ ಶರತ್​, ಜಲಪಾತ ವೀಕ್ಷಣೆಗೆಂದು ತೆರಳಿದ್ದಾಗ ದುರ್ಘಟನೆ ಸಂಭವಿಸಿತ್ತು. ಬಂಡೆಯ ಮೇಲೆ ನಿಂತು ಧುಮ್ಮಿಕ್ಕುವ ಜಲಪಾತವನ್ನು ಇವರು ವೀಕ್ಷಿಸುತ್ತಿದ್ದರು. ಇದನ್ನು ಸ್ನೇಹಿತ ಮೊಬೈಲ್​ನಲ್ಲಿ ಚಿತ್ರೀಕರಿಸುತ್ತಿದ್ದರು. ಆದರೆ ಶರತ್​ ಕುಮಾರ್​ ಈ ವೇಳೆ ಆಕಸ್ಮಿಕವಾಗಿ ಕಾಲುಜಾರಿ ನೀರಿನಲ್ಲಿ ಬಿದ್ದು ಕೊಚ್ಚಿ ಹೋಗಿದ್ದರು. ಕೊಲ್ಲೂರು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಇದನ್ನೂ ಓದಿ: Watch: ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ನೀರಿನಲ್ಲಿ ಕೊಚ್ಚಿಹೋದ ಯುವಕ.. ದೃಶ್ಯ ಮೊಬೈಲ್​ನಲ್ಲಿ ಸೆರೆ

ಮುಂಗಾರು ಮಳೆ​ ಜೋರಾಗಿದ್ದು, ಜಲಪಾತಗಳು ರಭಸವಾಗಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಸದ್ಯ ಅರಶಿನಗುಂಡಿ ಫಾಲ್ಸ್ ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಇಂದಿನಿಂದ ಕೊಡಚಾದ್ರಿ ಬೆಟ್ಟಕ್ಕೂ ಪ್ರವೇಶ ನಿಷೇಧವಿದೆ. ಫಾಲ್ಸ್, ಚಾರಣಕ್ಕೂ ಕಡಿವಾಣ ಹಾಕಲಾಗಿದೆ.

ರೀಲ್ಸ್​ ಮಾಡಲು ಹೋಗಿ ಆಪತ್ತು: ಇತ್ತೀಚೆಗೆ ಇನ್​ಸ್ಟಾಗ್ರಾಮ್​ ರೀಲ್ಸ್​ ಮಾಡಲೆಂದು ಹೋಗಿ ಅನೇಕ ಯುವಕರು ತಮ್ಮ ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತಿರುವ ಘಟನೆಗಳು ಹೆಚ್ಚಾಗುತ್ತಿದೆ. ನಿನ್ನೆಯಷ್ಟೇ ರೀಲ್ಸ್​ ಮಾಡಲು ಹೋಗಿ ಯುವಕನೊಬ್ಬ ಗಂಭೀರ ಗಾಯಗೊಂಡ ಘಟನೆ ಹುಬ್ಬಳ್ಳಿ ಜಿಲ್ಲೆಯ ಅಣ್ಣಿಗೇರಿ ರಸ್ತೆಯಲ್ಲಿ ನಡೆದಿತ್ತು. ಗದಗ ಜಿಲ್ಲೆಯ ನರಗುಂದ ಪಟ್ಟಣದ ನಿವಾಸಿ ಸಮೀರ್​ ಎಂಬುವವರು, ಬೈಕ್​ ಮೇಲೆ ನಿಂತು ತೆರಳುತ್ತಿದ್ದಾಗ ಅವಘಡ ಸಂಭವಿಸಿತ್ತು.

ಇದನ್ನೂ ಓದಿ: Kodachadri Hills: ಇಂದಿನಿಂದ ಕೊಡಚಾದ್ರಿ ಬೆಟ್ಟಕ್ಕೆ ಪ್ರವೇಶ ನಿಷೇಧ: ಫಾಲ್ಸ್, ಚಾರಣಕ್ಕೂ ಕಡಿವಾಣ

ರೀಲ್ಸ್​ ಮಾಡಲೆಂದು ಬೈಕ್​ ಮೇಲೆ ನಿಂತು ದೂರದವರೆಗೆ ತೆರಳಿದ್ದ ಸಮೀರ್​ ಬಳಿಕ ಆಯತಪ್ಪಿ ಕೆಳಗೆ ಬಿದ್ದಿದ್ದ. ಗಂಭೀರವಾಗಿ ಗಾಯಗೊಂಡ ಆತನನ್ನು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಯುವಕನಿಗೆ ಚಿಕಿತ್ಸೆ ನಡೆಯುತ್ತಿದೆ. ಅಣ್ಣಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಸದ್ಯ ಈ ವಿಡಿಯೋ ವೈರಲ್​ ಆಗಿದೆ.

ಇದನ್ನೂ ಓದಿ: ಹೊಗೆನಕಲ್ ಫಾಲ್ಸ್​ನಲ್ಲಿ ಮುಳುಗಿ ತಮಿಳುನಾಡಿನ ಇಬ್ಬರು ಯುವಕರು ಸಾವು

ಉಡುಪಿ: ಕಳೆದ ವಾರ ಜಿಲ್ಲೆಯ ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಜಲಪಾತದಲ್ಲಿ ಬಂಡೆಯ ಮೇಲೆ ನಿಂತು ಜಲಪಾತ ವೀಕ್ಷಿಸುತ್ತಿದ್ದ ಯುವಕನೊಬ್ಬ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ನೀರು ಪಾಲಾಗಿರುವ ಘಟನೆ ನಡೆದಿತ್ತು. ಭದ್ರಾವತಿ ಮೂಲದ ಶರತ್​ ಕುಮಾರ್​ (23) ನೀರಿನಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿತ್ತು.

ಯುವಕನ ಶವ ಪತ್ತೆ ಹಚ್ಚಲು ಕೊಲ್ಲೂರು ಪೊಲೀಸರು, ಅಗ್ನಿಶಾಮಕ ದಳ, ಸ್ಥಳೀಯರು ಮತ್ತು ಮುಳುಗು ತಜ್ಞರ ತಂಡಗಳು ಶೋಧ ಕಾರ್ಯಾಚರಣೆ ನಡೆಸಿದ್ದರು. ಅದರಂತೆ ಇಂದು ಶರತ್​ ಮೃತದೇಹ ಅರಶಿನ ಗುಂಡಿ ಜಲಪಾತದಿಂದ 200 ಮೀಟರ್​ ಕೆಳಗಡೆ ದೊರೆತಿದೆ. ಬಂಡೆ ಕಲ್ಲಿನೊಳಗಡೆ ಸಿಲುಕಿ ಹಾಕಿಕೊಂಡ ಮೃತದೇಹವನ್ನು ಹೊರತೆಗೆಯಲಾಗಿದೆ.

ಘಟನೆ ಹಿನ್ನೆಲೆ: ಜುಲೈ 23 ರಂದು ಕೊಲ್ಲೂರಿಗೆ ಕಾರಿನಲ್ಲಿ ಬಂದಿದ್ದ ಶರತ್​, ಜಲಪಾತ ವೀಕ್ಷಣೆಗೆಂದು ತೆರಳಿದ್ದಾಗ ದುರ್ಘಟನೆ ಸಂಭವಿಸಿತ್ತು. ಬಂಡೆಯ ಮೇಲೆ ನಿಂತು ಧುಮ್ಮಿಕ್ಕುವ ಜಲಪಾತವನ್ನು ಇವರು ವೀಕ್ಷಿಸುತ್ತಿದ್ದರು. ಇದನ್ನು ಸ್ನೇಹಿತ ಮೊಬೈಲ್​ನಲ್ಲಿ ಚಿತ್ರೀಕರಿಸುತ್ತಿದ್ದರು. ಆದರೆ ಶರತ್​ ಕುಮಾರ್​ ಈ ವೇಳೆ ಆಕಸ್ಮಿಕವಾಗಿ ಕಾಲುಜಾರಿ ನೀರಿನಲ್ಲಿ ಬಿದ್ದು ಕೊಚ್ಚಿ ಹೋಗಿದ್ದರು. ಕೊಲ್ಲೂರು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಇದನ್ನೂ ಓದಿ: Watch: ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ನೀರಿನಲ್ಲಿ ಕೊಚ್ಚಿಹೋದ ಯುವಕ.. ದೃಶ್ಯ ಮೊಬೈಲ್​ನಲ್ಲಿ ಸೆರೆ

ಮುಂಗಾರು ಮಳೆ​ ಜೋರಾಗಿದ್ದು, ಜಲಪಾತಗಳು ರಭಸವಾಗಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಸದ್ಯ ಅರಶಿನಗುಂಡಿ ಫಾಲ್ಸ್ ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಇಂದಿನಿಂದ ಕೊಡಚಾದ್ರಿ ಬೆಟ್ಟಕ್ಕೂ ಪ್ರವೇಶ ನಿಷೇಧವಿದೆ. ಫಾಲ್ಸ್, ಚಾರಣಕ್ಕೂ ಕಡಿವಾಣ ಹಾಕಲಾಗಿದೆ.

ರೀಲ್ಸ್​ ಮಾಡಲು ಹೋಗಿ ಆಪತ್ತು: ಇತ್ತೀಚೆಗೆ ಇನ್​ಸ್ಟಾಗ್ರಾಮ್​ ರೀಲ್ಸ್​ ಮಾಡಲೆಂದು ಹೋಗಿ ಅನೇಕ ಯುವಕರು ತಮ್ಮ ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತಿರುವ ಘಟನೆಗಳು ಹೆಚ್ಚಾಗುತ್ತಿದೆ. ನಿನ್ನೆಯಷ್ಟೇ ರೀಲ್ಸ್​ ಮಾಡಲು ಹೋಗಿ ಯುವಕನೊಬ್ಬ ಗಂಭೀರ ಗಾಯಗೊಂಡ ಘಟನೆ ಹುಬ್ಬಳ್ಳಿ ಜಿಲ್ಲೆಯ ಅಣ್ಣಿಗೇರಿ ರಸ್ತೆಯಲ್ಲಿ ನಡೆದಿತ್ತು. ಗದಗ ಜಿಲ್ಲೆಯ ನರಗುಂದ ಪಟ್ಟಣದ ನಿವಾಸಿ ಸಮೀರ್​ ಎಂಬುವವರು, ಬೈಕ್​ ಮೇಲೆ ನಿಂತು ತೆರಳುತ್ತಿದ್ದಾಗ ಅವಘಡ ಸಂಭವಿಸಿತ್ತು.

ಇದನ್ನೂ ಓದಿ: Kodachadri Hills: ಇಂದಿನಿಂದ ಕೊಡಚಾದ್ರಿ ಬೆಟ್ಟಕ್ಕೆ ಪ್ರವೇಶ ನಿಷೇಧ: ಫಾಲ್ಸ್, ಚಾರಣಕ್ಕೂ ಕಡಿವಾಣ

ರೀಲ್ಸ್​ ಮಾಡಲೆಂದು ಬೈಕ್​ ಮೇಲೆ ನಿಂತು ದೂರದವರೆಗೆ ತೆರಳಿದ್ದ ಸಮೀರ್​ ಬಳಿಕ ಆಯತಪ್ಪಿ ಕೆಳಗೆ ಬಿದ್ದಿದ್ದ. ಗಂಭೀರವಾಗಿ ಗಾಯಗೊಂಡ ಆತನನ್ನು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಯುವಕನಿಗೆ ಚಿಕಿತ್ಸೆ ನಡೆಯುತ್ತಿದೆ. ಅಣ್ಣಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಸದ್ಯ ಈ ವಿಡಿಯೋ ವೈರಲ್​ ಆಗಿದೆ.

ಇದನ್ನೂ ಓದಿ: ಹೊಗೆನಕಲ್ ಫಾಲ್ಸ್​ನಲ್ಲಿ ಮುಳುಗಿ ತಮಿಳುನಾಡಿನ ಇಬ್ಬರು ಯುವಕರು ಸಾವು

Last Updated : Jul 30, 2023, 3:03 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.