ETV Bharat / state

ಶಾರೀಕ್ ಉಡುಪಿಗೆ ಬಂದಿದ್ದರ ಬಗ್ಗೆ ಮಂಗಳೂರು ಪೊಲೀಸರೇ ಮಾಹಿತಿ ನೀಡುತ್ತಾರೆ: ಎಸ್​ಪಿ ಅಕ್ಷಯ್

author img

By

Published : Dec 2, 2022, 3:12 PM IST

ಪೊಲೀಸ್​ ತನಿಖೆಯಲ್ಲಿ ಶಾರೀಕ್ ಉಡುಪಿಗೆ ಬಂದ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಈ ಬಗ್ಗೆ ಮಂಗಳೂರು ಪೊಲೀಸರೇ ವಿವರ ಮಾಹಿತಿ ನೀಡುತ್ತಾರೆ ಅಂತಾ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ ಹಾಕೆ ಹೇಳಿದ್ದಾರೆ.

ಎಸ್​ಪಿ ಅಕ್ಷಯ್ ಮಚ್ಚೀಂದ್ರ ಹಾಕೆ
ಎಸ್​ಪಿ ಅಕ್ಷಯ್ ಮಚ್ಚೀಂದ್ರ ಹಾಕೆ

ಉಡುಪಿ: ಪೊಲೀಸ್​ ತನಿಖೆಯಲ್ಲಿ ಶಾರೀಕ್ ಉಡುಪಿಗೆ ಬಂದ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಆ ಪ್ರಯುಕ್ತ ಮಂಗಳೂರು ಸಿಟಿ ಪೊಲೀಸರು ಉಡುಪಿಗೆ ಬಂದು ವಿಚಾರಣೆ ನಡೆಸಿದ್ದರು. ಅಕ್ಟೋಬರ್ ತಿಂಗಳಲ್ಲಿ ಒಂದು ಬಾರಿ ಈ ಭಾಗದಲ್ಲಿ ಆತ ಪ್ರವಾಸ ಮಾಡಿದ್ದ. ಹೀಗಾಗಿಯೇ ಮಂಗಳೂರು ಪೊಲೀಸರು ತನಿಖೆ ನಡೆಸಿ ಹೋಗಿದ್ದಾರೆ. ಉಡುಪಿ ಪೊಲೀಸರು ಈ ಪ್ರಕರಣದ ತನಿಖಾಧಿಕಾರಿಗಳಲ್ಲ. ಈ ಬಗ್ಗೆ ಮಂಗಳೂರು ಪೊಲೀಸರೇ ವಿವರವಾದ ಮಾಹಿತಿ ನೀಡುತ್ತಾರೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ ಹಾಕೆ ಹೇಳಿದ್ದಾರೆ.

ಎಸ್​ಪಿ ಅಕ್ಷಯ್ ಮಚ್ಚೀಂದ್ರ ಹಾಕೆ ಅವರು ಮಾತನಾಡಿದರು

ಕಾರ್ಮಿಕರಾಗಿ ಬರುವವರ ದಾಖಲೆ ಸತ್ಯಾಸತ್ಯತೆ ಪರಿಶೀಲನೆ ವಿಚಾರವಾಗಿ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೇಂದ್ರ ಹಾಕೆ, ನಮ್ಮ ಜಿಲ್ಲೆಯ ಮಲ್ಪೆ ಭಾಗಕ್ಕೆ ಹೊರ ರಾಜ್ಯಗಳಿಂದ ಅನೇಕ ಕಾರ್ಮಿಕರು ಬರುತ್ತಾರೆ. ಮೀನುಗಾರ ಸಂಘಟನೆಗಳ ಜೊತೆ ನಾವು ಈಗಾಗಲೇ ಮಾತನಾಡಿದ್ದೇವೆ. ಮೀನುಗಾರಿಕಾ ಬೋಟುಗಳಲ್ಲಿ ಮತ್ತು ಮೀನು ಫ್ಯಾಕ್ಟರಿಗಳಲ್ಲಿ ಕೆಲಸ ಮಾಡಲು ಹೊರರಾಜ್ಯದ ಕಾರ್ಮಿಕರು ಹೆಚ್ಚಾಗಿ ಬರುತ್ತಾರೆ. ಬಲೆ ನೇಯುವ ಕಾರ್ಖಾನೆಗಳು ಐಸ್ ಫ್ಯಾಕ್ಟರಿಗಳಲ್ಲಿ ದುಡಿಯುತ್ತಾರೆ. ಮೀನುಗಾರಿಕಾ ಸಂಘಟನೆಗಳು ಈ ಕಾರ್ಮಿಕರ ಎಲ್ಲ ವಿವರ ಸಂಗ್ರಹಿಸುವಂತೆ ಸೂಚಿಸಲಾಗಿದೆ. ತಾತ್ಕಾಲಿಕ ನೆಲೆಯಲ್ಲಿ ಕಾರ್ಮಿಕರು ಬಂದಿದ್ದರು. ಮಾಹಿತಿ ಸಂಗ್ರಹ ಕಡ್ಡಾಯ ಮಾಡಲಾಗಿದೆ ಎಂದರು.

ಆಯಕಟ್ಟಿನ ಸ್ಥಳಗಳಲ್ಲಿ ಮತ್ತಷ್ಟು ಸಿಸಿ ಕ್ಯಾಮೆರಾ ಅಳವಡಿಸಲಾಗುವುದು. ಮೀನುಗಾರ ಮುಖಂಡರಿಂದಲೂ ಮಾಹಿತಿ ಸಂಗ್ರಹಿಸುತ್ತೇವೆ.
ತಂತ್ರಜ್ಞಾನ ಆಧಾರಿತ ನಿರ್ವಹಣೆ ಮಾಡುತ್ತೇವೆ. ಮಂಗಳೂರು ಘಟನೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ್ದೇವೆ. ಹತ್ತು ಹಲವಾರು ದೇವಸ್ಥಾನಗಳ ಭದ್ರತೆಯ ಬಗ್ಗೆ ಚರ್ಚಿಸಿದ್ದೇವೆ. ದೇವಸ್ಥಾನಗಳನ್ನು ಒಳಗೊಂಡ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಮಾಡುತ್ತೇವೆ. ನಿಯಮಿತವಾಗಿ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಲು ಕ್ರಮ ಕೈಗೊಳ್ಳುತ್ತೇವೆ. ಮುಜರಾಯಿ ದೇವಸ್ಥಾನಗಳಿಗೆ ಹೊರತಾಗಿ ಭಕ್ತರು ಹೆಚ್ಚು ಬರುವ ದೇವಸ್ಥಾನಗಳ ಬಗ್ಗೆ ನಿಗಾ ಇರಿಸುತ್ತೇವೆ. ಪಬ್ಲಿಕ್ ಸೇಫ್ಟಿ ಆಕ್ಟ್ ಅನುಸಾರ ನಿರ್ದೇಶನ ನೀಡುತ್ತೇವೆ ಅಂತಾ ಅವರು ಹೇಳಿದ್ದಾರೆ.

ಓದಿ: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆ ಎನ್​ಐಎಗೆ ಹಸ್ತಾಂತರ, ದಾಖಲೆ ಪಡೆದ ಅಧಿಕಾರಿಗಳು

ಉಡುಪಿ: ಪೊಲೀಸ್​ ತನಿಖೆಯಲ್ಲಿ ಶಾರೀಕ್ ಉಡುಪಿಗೆ ಬಂದ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಆ ಪ್ರಯುಕ್ತ ಮಂಗಳೂರು ಸಿಟಿ ಪೊಲೀಸರು ಉಡುಪಿಗೆ ಬಂದು ವಿಚಾರಣೆ ನಡೆಸಿದ್ದರು. ಅಕ್ಟೋಬರ್ ತಿಂಗಳಲ್ಲಿ ಒಂದು ಬಾರಿ ಈ ಭಾಗದಲ್ಲಿ ಆತ ಪ್ರವಾಸ ಮಾಡಿದ್ದ. ಹೀಗಾಗಿಯೇ ಮಂಗಳೂರು ಪೊಲೀಸರು ತನಿಖೆ ನಡೆಸಿ ಹೋಗಿದ್ದಾರೆ. ಉಡುಪಿ ಪೊಲೀಸರು ಈ ಪ್ರಕರಣದ ತನಿಖಾಧಿಕಾರಿಗಳಲ್ಲ. ಈ ಬಗ್ಗೆ ಮಂಗಳೂರು ಪೊಲೀಸರೇ ವಿವರವಾದ ಮಾಹಿತಿ ನೀಡುತ್ತಾರೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ ಹಾಕೆ ಹೇಳಿದ್ದಾರೆ.

ಎಸ್​ಪಿ ಅಕ್ಷಯ್ ಮಚ್ಚೀಂದ್ರ ಹಾಕೆ ಅವರು ಮಾತನಾಡಿದರು

ಕಾರ್ಮಿಕರಾಗಿ ಬರುವವರ ದಾಖಲೆ ಸತ್ಯಾಸತ್ಯತೆ ಪರಿಶೀಲನೆ ವಿಚಾರವಾಗಿ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೇಂದ್ರ ಹಾಕೆ, ನಮ್ಮ ಜಿಲ್ಲೆಯ ಮಲ್ಪೆ ಭಾಗಕ್ಕೆ ಹೊರ ರಾಜ್ಯಗಳಿಂದ ಅನೇಕ ಕಾರ್ಮಿಕರು ಬರುತ್ತಾರೆ. ಮೀನುಗಾರ ಸಂಘಟನೆಗಳ ಜೊತೆ ನಾವು ಈಗಾಗಲೇ ಮಾತನಾಡಿದ್ದೇವೆ. ಮೀನುಗಾರಿಕಾ ಬೋಟುಗಳಲ್ಲಿ ಮತ್ತು ಮೀನು ಫ್ಯಾಕ್ಟರಿಗಳಲ್ಲಿ ಕೆಲಸ ಮಾಡಲು ಹೊರರಾಜ್ಯದ ಕಾರ್ಮಿಕರು ಹೆಚ್ಚಾಗಿ ಬರುತ್ತಾರೆ. ಬಲೆ ನೇಯುವ ಕಾರ್ಖಾನೆಗಳು ಐಸ್ ಫ್ಯಾಕ್ಟರಿಗಳಲ್ಲಿ ದುಡಿಯುತ್ತಾರೆ. ಮೀನುಗಾರಿಕಾ ಸಂಘಟನೆಗಳು ಈ ಕಾರ್ಮಿಕರ ಎಲ್ಲ ವಿವರ ಸಂಗ್ರಹಿಸುವಂತೆ ಸೂಚಿಸಲಾಗಿದೆ. ತಾತ್ಕಾಲಿಕ ನೆಲೆಯಲ್ಲಿ ಕಾರ್ಮಿಕರು ಬಂದಿದ್ದರು. ಮಾಹಿತಿ ಸಂಗ್ರಹ ಕಡ್ಡಾಯ ಮಾಡಲಾಗಿದೆ ಎಂದರು.

ಆಯಕಟ್ಟಿನ ಸ್ಥಳಗಳಲ್ಲಿ ಮತ್ತಷ್ಟು ಸಿಸಿ ಕ್ಯಾಮೆರಾ ಅಳವಡಿಸಲಾಗುವುದು. ಮೀನುಗಾರ ಮುಖಂಡರಿಂದಲೂ ಮಾಹಿತಿ ಸಂಗ್ರಹಿಸುತ್ತೇವೆ.
ತಂತ್ರಜ್ಞಾನ ಆಧಾರಿತ ನಿರ್ವಹಣೆ ಮಾಡುತ್ತೇವೆ. ಮಂಗಳೂರು ಘಟನೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ್ದೇವೆ. ಹತ್ತು ಹಲವಾರು ದೇವಸ್ಥಾನಗಳ ಭದ್ರತೆಯ ಬಗ್ಗೆ ಚರ್ಚಿಸಿದ್ದೇವೆ. ದೇವಸ್ಥಾನಗಳನ್ನು ಒಳಗೊಂಡ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಮಾಡುತ್ತೇವೆ. ನಿಯಮಿತವಾಗಿ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಲು ಕ್ರಮ ಕೈಗೊಳ್ಳುತ್ತೇವೆ. ಮುಜರಾಯಿ ದೇವಸ್ಥಾನಗಳಿಗೆ ಹೊರತಾಗಿ ಭಕ್ತರು ಹೆಚ್ಚು ಬರುವ ದೇವಸ್ಥಾನಗಳ ಬಗ್ಗೆ ನಿಗಾ ಇರಿಸುತ್ತೇವೆ. ಪಬ್ಲಿಕ್ ಸೇಫ್ಟಿ ಆಕ್ಟ್ ಅನುಸಾರ ನಿರ್ದೇಶನ ನೀಡುತ್ತೇವೆ ಅಂತಾ ಅವರು ಹೇಳಿದ್ದಾರೆ.

ಓದಿ: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆ ಎನ್​ಐಎಗೆ ಹಸ್ತಾಂತರ, ದಾಖಲೆ ಪಡೆದ ಅಧಿಕಾರಿಗಳು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.