ETV Bharat / state

ಉಡುಪಿ ಸಮುದ್ರದಲ್ಲಿ ನಾಡದೋಣಿ ದುರಂತ: ನಾಲ್ವರು ಮೀನುಗಾರರು ಕಣ್ಮರೆ

ಮೀನುಗಾರಿಕೆಗೆ ತೆರಳಿದ್ದ ದೋಣಿ ಅಲೆಗಳ ತೀವ್ರತೆಗೆ ಬಂಡೆಗೆ ಡಿಕ್ಕಿ ಹೊಡೆದು ಸಂಪೂರ್ಣ ಹಾನಿಯಾಗಿ ಹನ್ನೊಂದು ಮೀನುಗಾರರ ಪೈಕಿ ನಾಲ್ವರು ಕಾಣೆಯಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

author img

By

Published : Aug 16, 2020, 8:02 PM IST

Updated : Aug 16, 2020, 11:05 PM IST

koderi-boat-tragedy-fishers-rescue-work-processing
ನಾಡದೋಣಿ ದುರಂತ

ಉಡುಪಿ: ಕಿರಿಮಂಜೇಶ್ವರ ಸಮೀಪದ ಕೊಡೇರಿಯಲ್ಲಿ ದೋಣಿ ದುರಂತ ಸಂಭವಿಸಿದೆ. ಪರಿಣಾಮ, ನಾಲ್ಕು ಮಂದಿ ಮೀನುಗಾರರು ಕಣ್ಮರೆಯಾಗಿದ್ದಾರೆ. ಕುಂದಾಪುರ ತಾಲೂಕಿನ ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇಂದು ಮುಂಜಾನೆ ಸಾಗರಶ್ರೀ ಎಂಬ ನಾಡದೋಣಿಯಲ್ಲಿ 11 ಮಂದಿ ಮೀನುಗಾರಿಕೆಗೆ ತೆರಳಿದ್ದರು. ಸಮುದ್ರದಿಂದ ವಾಪಸಾಗುವ ವೇಳೆ ಅಲೆಗಳ ತೀವ್ರತೆಗೆ ನಾಡದೋಣಿ ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ ಸಂಪೂರ್ಣ ಹಾನಿಯಾಗಿ ಹನ್ನೊಂದು ಮಂದಿ ಮೀನುಗಾರರ ಪೈಕಿ ನಾಲ್ವರು ಕಾಣೆಯಾಗಿದ್ದಾರೆ. ಸದ್ಯ ಮೀನುಗಾರರಿಗೆ ಶೋಧ ಕಾರ್ಯ ನಡೆಯುತ್ತಿದೆ.

ಉಡುಪಿ ಸಮುದ್ರದಲ್ಲಿ ನಾಡದೋಣಿ ದುರಂತ

ನಾಗ ಕಾರ್ವಿ (55), ಶೇಖರ ಕಾರ್ವಿ, ಮಂಜುನಾಥ ಕಾರ್ವಿ ಹಾಗು ಲಕ್ಷ್ಮಣ ಕಾರ್ವಿ ನಾಪತ್ತೆಯಾಗಿರುವ ಮೀನುಗಾರರಾಗಿದ್ದಾರೆ.

ಬದುಕುಳಿದು ಬಂದ 7 ಮಂದಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಮನೆಗೆ ಹಿಂದಿರುಗಿದ್ದಾರೆ. ಉಳಿದ ನಾಲ್ವರಲ್ಲಿ ಇಬ್ಬರು ಮೀನುಗಾರರು, ನೀರಿನೊಳಗೆ ಬಲೆಯಲ್ಲಿ ಸಿಲುಕಿಕೊಂಡಿದ್ದಾರೆ ಎನ್ನುವ ಮಾಹಿತಿ ದೊರೆತಿದೆ.

ಬಲೆಯಲ್ಲಿ ಸಿಲುಕಿದವರನ್ನು ರಕ್ಷಿಸಲು ಕಾರ್ಯಾಚರಣೆ ನಡೆಯುತ್ತಿದೆ. ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗಿರುವ ಕಾರಣ ಕಾರ್ಯಾಚರಣೆ ತೊಡಕಾಗುತ್ತಿದೆ.

ಉಡುಪಿ: ಕಿರಿಮಂಜೇಶ್ವರ ಸಮೀಪದ ಕೊಡೇರಿಯಲ್ಲಿ ದೋಣಿ ದುರಂತ ಸಂಭವಿಸಿದೆ. ಪರಿಣಾಮ, ನಾಲ್ಕು ಮಂದಿ ಮೀನುಗಾರರು ಕಣ್ಮರೆಯಾಗಿದ್ದಾರೆ. ಕುಂದಾಪುರ ತಾಲೂಕಿನ ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇಂದು ಮುಂಜಾನೆ ಸಾಗರಶ್ರೀ ಎಂಬ ನಾಡದೋಣಿಯಲ್ಲಿ 11 ಮಂದಿ ಮೀನುಗಾರಿಕೆಗೆ ತೆರಳಿದ್ದರು. ಸಮುದ್ರದಿಂದ ವಾಪಸಾಗುವ ವೇಳೆ ಅಲೆಗಳ ತೀವ್ರತೆಗೆ ನಾಡದೋಣಿ ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ ಸಂಪೂರ್ಣ ಹಾನಿಯಾಗಿ ಹನ್ನೊಂದು ಮಂದಿ ಮೀನುಗಾರರ ಪೈಕಿ ನಾಲ್ವರು ಕಾಣೆಯಾಗಿದ್ದಾರೆ. ಸದ್ಯ ಮೀನುಗಾರರಿಗೆ ಶೋಧ ಕಾರ್ಯ ನಡೆಯುತ್ತಿದೆ.

ಉಡುಪಿ ಸಮುದ್ರದಲ್ಲಿ ನಾಡದೋಣಿ ದುರಂತ

ನಾಗ ಕಾರ್ವಿ (55), ಶೇಖರ ಕಾರ್ವಿ, ಮಂಜುನಾಥ ಕಾರ್ವಿ ಹಾಗು ಲಕ್ಷ್ಮಣ ಕಾರ್ವಿ ನಾಪತ್ತೆಯಾಗಿರುವ ಮೀನುಗಾರರಾಗಿದ್ದಾರೆ.

ಬದುಕುಳಿದು ಬಂದ 7 ಮಂದಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಮನೆಗೆ ಹಿಂದಿರುಗಿದ್ದಾರೆ. ಉಳಿದ ನಾಲ್ವರಲ್ಲಿ ಇಬ್ಬರು ಮೀನುಗಾರರು, ನೀರಿನೊಳಗೆ ಬಲೆಯಲ್ಲಿ ಸಿಲುಕಿಕೊಂಡಿದ್ದಾರೆ ಎನ್ನುವ ಮಾಹಿತಿ ದೊರೆತಿದೆ.

ಬಲೆಯಲ್ಲಿ ಸಿಲುಕಿದವರನ್ನು ರಕ್ಷಿಸಲು ಕಾರ್ಯಾಚರಣೆ ನಡೆಯುತ್ತಿದೆ. ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗಿರುವ ಕಾರಣ ಕಾರ್ಯಾಚರಣೆ ತೊಡಕಾಗುತ್ತಿದೆ.

Last Updated : Aug 16, 2020, 11:05 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.