ETV Bharat / state

ದೇವಸ್ಥಾನಗಳಲ್ಲಿ ಮಧ್ಯಾಹ್ನದ ಅನ್ನಸಂತರ್ಪಣೆಗೆ ಅನುಮತಿ ನೀಡಿದ ಉಡುಪಿ ಡಿಸಿ

author img

By

Published : Oct 8, 2020, 11:04 PM IST

ನವರಾತ್ರಿ-ದೀಪಾವಳಿ ಸೇರಿದಂತೆ ಇನ್ನಿತರ ಜಾತ್ರಾ ಮಹೋತ್ಸವಗಳಲ್ಲಿ ವೈರಸ್ ಹರಡದಂತೆ ಎಚ್ಚರ ವಹಿಸಲು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ದೇವಸ್ಥಾನದ ಆಡಳಿತಾಧಿಕಾರಿಗಳು ಹಾಗೂ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆಯನ್ನು ನೀಡಿದ್ದಾರೆ.

udupi-dc-allowed-for-lunch-at-temples-news
ದೇವಸ್ಥಾನಗಳಲ್ಲಿ ಮಧ್ಯಾಹ್ನದ ಊಟಕ್ಕೆ ಅನುಮತಿ ನೀಡಿದ ಉಡುಪಿ ಡಿಸಿ

ಉಡುಪಿ: ಜಿಲ್ಲೆಯ ದೇವಸ್ಥಾನಗಳಲ್ಲಿ ಮಧ್ಯಾಹ್ನದ ಊಟಕ್ಕೆ ಜಿಲ್ಲಾಧಿಕಾರಿಗಳು ಅವಕಾಶ ನೀಡಿದ್ದಾರೆ. ಆದರೆ ಈ ಹಿಂದೆ ದೇವಾಲಯಗಳಲ್ಲಿ ಅನ್ನಸಂತರ್ಪಣೆ ಮಾಡುತ್ತಿದ್ದಲ್ಲಿ ಮಾತ್ರ ಮುಂದುವರಿಸಿಕೊಂಡು ಹೋಗಬಹುದಾಗಿದ್ದು, ಹೊಸದಾಗಿ ಪ್ರಾರಂಭಿಸುವುದನ್ನು ತಪ್ಪಿಸಬೇಕು ಎಂದು ಸೂಚನೆ ನೀಡಿದ್ದಾರೆ.

ದೇವಸ್ಥಾನಗಳಲ್ಲಿ ಮಧ್ಯಾಹ್ನದ ಊಟಕ್ಕೆ ಅನುಮತಿ ನೀಡಿದ ಉಡುಪಿ ಡಿಸಿ

ಜೊತೆಗೆ ಕೋವಿಡ್ ನಿಯಮಗಳನ್ನು ಕಠಿಣವಾಗಿ ಪಾಲಿಸುವಂತೆ ಎಚ್ಚರಿಸಿದ್ದಾರೆ. ನವರಾತ್ರಿ-ದೀಪಾವಳಿ ಸೇರಿದಂತೆ ಇನ್ನಿತರ ಜಾತ್ರಾ ಮಹೋತ್ಸವಗಳಲ್ಲಿ ವೈರಸ್ ಹರಡದಂತೆ ಎಚ್ಚರ ವಹಿಸಲು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ದೇವಸ್ಥಾನದ ಆಡಳಿತಾಧಿಕಾರಿಗಳು ಹಾಗೂ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆಯನ್ನು ನೀಡಿದ್ದಾರೆ.

ದೇವಾಲಯಗಳಿಗೆ ಬರುವ ಭಕ್ತಾದಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ 6 ಅಡಿ ಅಂತರದ ಬಾಕ್ಸ್ ಮಾರ್ಕ್‍ಗಳನ್ನು ಹಾಕಬೇಕು. ಪ್ರತಿಯೊಬ್ಬ ಭಕ್ತಾಧಿಗಳು ಮುಖಗವಸು ಧರಿಸಲೇಬೇಕು. ಥರ್ಮಲ್ ಸ್ಕ್ಯಾನಿಂಗ್ ಹಾಗೂ ಕೈ ತೊಳೆಯುವಿಕೆ ಅಥವಾ ಸ್ಯಾನಿಟೈಸರ್ ವ್ಯವಸ್ಥೆ ಕಡ್ಡಾಯವಾಗಿ ಮಾಡುವಂತೆ ನೋಡಿಕೊಳ್ಳಬೇಕು. ರಜಾದಿನಗಳಲ್ಲಿ ಹಬ್ಬಕ್ಕೆ ಹೆಚ್ಚು ಜನರು ಬರುವ ಸಾಧ್ಯತೆ ಇರುವ ಹಿನ್ನಲೆ ಅಗತ್ಯವಿದ್ದಲ್ಲಿ ಪೊಲೀಸ್ ಇಲಾಖೆಯ ಸಹಾಯ ಪಡೆಯಬೇಕು ಎಂದಿದ್ದಾರೆ.

ಉಡುಪಿ: ಜಿಲ್ಲೆಯ ದೇವಸ್ಥಾನಗಳಲ್ಲಿ ಮಧ್ಯಾಹ್ನದ ಊಟಕ್ಕೆ ಜಿಲ್ಲಾಧಿಕಾರಿಗಳು ಅವಕಾಶ ನೀಡಿದ್ದಾರೆ. ಆದರೆ ಈ ಹಿಂದೆ ದೇವಾಲಯಗಳಲ್ಲಿ ಅನ್ನಸಂತರ್ಪಣೆ ಮಾಡುತ್ತಿದ್ದಲ್ಲಿ ಮಾತ್ರ ಮುಂದುವರಿಸಿಕೊಂಡು ಹೋಗಬಹುದಾಗಿದ್ದು, ಹೊಸದಾಗಿ ಪ್ರಾರಂಭಿಸುವುದನ್ನು ತಪ್ಪಿಸಬೇಕು ಎಂದು ಸೂಚನೆ ನೀಡಿದ್ದಾರೆ.

ದೇವಸ್ಥಾನಗಳಲ್ಲಿ ಮಧ್ಯಾಹ್ನದ ಊಟಕ್ಕೆ ಅನುಮತಿ ನೀಡಿದ ಉಡುಪಿ ಡಿಸಿ

ಜೊತೆಗೆ ಕೋವಿಡ್ ನಿಯಮಗಳನ್ನು ಕಠಿಣವಾಗಿ ಪಾಲಿಸುವಂತೆ ಎಚ್ಚರಿಸಿದ್ದಾರೆ. ನವರಾತ್ರಿ-ದೀಪಾವಳಿ ಸೇರಿದಂತೆ ಇನ್ನಿತರ ಜಾತ್ರಾ ಮಹೋತ್ಸವಗಳಲ್ಲಿ ವೈರಸ್ ಹರಡದಂತೆ ಎಚ್ಚರ ವಹಿಸಲು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ದೇವಸ್ಥಾನದ ಆಡಳಿತಾಧಿಕಾರಿಗಳು ಹಾಗೂ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆಯನ್ನು ನೀಡಿದ್ದಾರೆ.

ದೇವಾಲಯಗಳಿಗೆ ಬರುವ ಭಕ್ತಾದಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ 6 ಅಡಿ ಅಂತರದ ಬಾಕ್ಸ್ ಮಾರ್ಕ್‍ಗಳನ್ನು ಹಾಕಬೇಕು. ಪ್ರತಿಯೊಬ್ಬ ಭಕ್ತಾಧಿಗಳು ಮುಖಗವಸು ಧರಿಸಲೇಬೇಕು. ಥರ್ಮಲ್ ಸ್ಕ್ಯಾನಿಂಗ್ ಹಾಗೂ ಕೈ ತೊಳೆಯುವಿಕೆ ಅಥವಾ ಸ್ಯಾನಿಟೈಸರ್ ವ್ಯವಸ್ಥೆ ಕಡ್ಡಾಯವಾಗಿ ಮಾಡುವಂತೆ ನೋಡಿಕೊಳ್ಳಬೇಕು. ರಜಾದಿನಗಳಲ್ಲಿ ಹಬ್ಬಕ್ಕೆ ಹೆಚ್ಚು ಜನರು ಬರುವ ಸಾಧ್ಯತೆ ಇರುವ ಹಿನ್ನಲೆ ಅಗತ್ಯವಿದ್ದಲ್ಲಿ ಪೊಲೀಸ್ ಇಲಾಖೆಯ ಸಹಾಯ ಪಡೆಯಬೇಕು ಎಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.