ETV Bharat / state

ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ ಮಾಡಬೇಡಿ: ಕಮಿಷನ್ ‌ಆರೋಪಕ್ಕೆ ವಜ್ರದೇಹಿ ಸ್ವಾಮೀಜಿ ತಿರುಗೇಟು

author img

By

Published : Apr 19, 2022, 10:29 AM IST

ನನಗೆ ಗೊತ್ತಿರುವ ಪ್ರಕಾರ ಯಾವುದೇ ಶ್ರೀಗಳು ಕಮಿಷನ್ ಕೊಟ್ಟಿಲ್ಲ. ಗಾಳಿಯಲ್ಲಿ ಗುಂಡು ಹಾರಿಸಿದರೆ ಸರಿಯಲ್ಲ‌. ದಾಖಲೆ ಕೊಡಿ ಎಂದು ರಾಜಶೇಖರಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ.

Rajashekharananda swamiji
ರಾಜಶೇಖರಾನಂದ ಸ್ವಾಮೀಜಿ

ಉಡುಪಿ: ದಾಖಲೆಗಳ‌ ಸಹಿತ ಸಾಬೀತು ಪಡಿಸಿ. ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ ಮಾಡಬೇಡಿ ಎಂದು ದಿಂಗಾಲೇಶ್ವರ ಶ್ರೀಗಳ ಮಠಗಳ ಅನುದಾನಕ್ಕೆ 30 ಪರ್ಸೆಂಟ್​​ ಕಮಿಷನ್ ‌ಆರೋಪಕ್ಕೆ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ತಿರುಗೇಟು ನೀಡಿದ್ದಾರೆ.

30 ಪರ್ಸೆಂಟ್​​ ಕಮಿಷನ್ ‌ಆರೋಪ: ವಜ್ರದೇಹಿ ಸ್ವಾಮೀಜಿ ಪ್ರತಿಕ್ರಿಯೆ..

ಅನಗತ್ಯವಾಗಿ ಮಠ ಮಾನ್ಯಗಳಿಂದಲೂ ಕಮಿಷನ್ ಆರೋಪ ಮಾಡಬೇಡಿ. ದಿಂಗಾಲೇಶ್ವರ ಸ್ವಾಮೀಜಿಗಳ ಆರೋಪ‌ ಅಪ್ಪಟ ಸುಳ್ಳು. ಈ ಬಗ್ಗೆ ನಾನು ಖಡಾಖಂಡಿತವಾಗಿ ಹೇಳುತ್ತೇನೆ. ನಮ್ಮ ಮಠಕ್ಕೂ 50 ಲಕ್ಷ ರೂಪಾಯಿ ಬಂದಿದೆ. ನಾವ್ಯಾರು ಒಂದು ನಯಾಪೈಸೆ ಕಮಿಷನ್ ನೀಡಿಲ್ಲ. ನಾವು ಯಾವುದೇ ಹಂತದಲ್ಲಿ ಸರ್ಕಾರದ ಅಧಿಕಾರಿಗಳಿಗೆ ಕಮಿಷನ್ ಕೊಟ್ಟಿಲ್ಲ. ಇಂತಹ ಸುಳ್ಳು ಸಂದೇಶ ಹಬ್ಬಿಸಬಾರದು ಎಂದರು.

ಎಲ್ಲೋ ಆದ ಇಂದು ಘಟನೆ ನಮ್ಮಲ್ಲೂ ಆಗಿದೆ ಎನ್ನುವುದು ಸರಿಯಲ್ಲ. ನನಗೆ ಗೊತ್ತಿರುವ ಪ್ರಕಾರ ಯಾವುದೇ ಶ್ರೀಗಳು ಕಮಿಷನ್ ಕೊಟ್ಟಿಲ್ಲ. ಗಾಳಿಯಲ್ಲಿ ಗುಂಡು ಹಾರಿಸಿದರೆ ಸರಿಯಲ್ಲ‌. ದಾಖಲೆ ಕೊಡಿ ಎಂದು ರಾಜಶೇಖರಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಐಸ್‌ಕ್ರೀಂ ಕೊಟ್ಟರೆ ಅದು ತಲುಪುವಾಗ ಕಡ್ಡಿಯಷ್ಟೇ ಉಳಿದಿರುತ್ತೆ.. ಅನುದಾನಕ್ಕಾಗಿ ಮಠಗಳೂ 30% ಕಮೀಷನ್​ ಕೊಡ್ಬೇಕು : ದಿಂಗಾಲೇಶ್ವರ ಶ್ರೀ

ಉಡುಪಿ: ದಾಖಲೆಗಳ‌ ಸಹಿತ ಸಾಬೀತು ಪಡಿಸಿ. ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ ಮಾಡಬೇಡಿ ಎಂದು ದಿಂಗಾಲೇಶ್ವರ ಶ್ರೀಗಳ ಮಠಗಳ ಅನುದಾನಕ್ಕೆ 30 ಪರ್ಸೆಂಟ್​​ ಕಮಿಷನ್ ‌ಆರೋಪಕ್ಕೆ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ತಿರುಗೇಟು ನೀಡಿದ್ದಾರೆ.

30 ಪರ್ಸೆಂಟ್​​ ಕಮಿಷನ್ ‌ಆರೋಪ: ವಜ್ರದೇಹಿ ಸ್ವಾಮೀಜಿ ಪ್ರತಿಕ್ರಿಯೆ..

ಅನಗತ್ಯವಾಗಿ ಮಠ ಮಾನ್ಯಗಳಿಂದಲೂ ಕಮಿಷನ್ ಆರೋಪ ಮಾಡಬೇಡಿ. ದಿಂಗಾಲೇಶ್ವರ ಸ್ವಾಮೀಜಿಗಳ ಆರೋಪ‌ ಅಪ್ಪಟ ಸುಳ್ಳು. ಈ ಬಗ್ಗೆ ನಾನು ಖಡಾಖಂಡಿತವಾಗಿ ಹೇಳುತ್ತೇನೆ. ನಮ್ಮ ಮಠಕ್ಕೂ 50 ಲಕ್ಷ ರೂಪಾಯಿ ಬಂದಿದೆ. ನಾವ್ಯಾರು ಒಂದು ನಯಾಪೈಸೆ ಕಮಿಷನ್ ನೀಡಿಲ್ಲ. ನಾವು ಯಾವುದೇ ಹಂತದಲ್ಲಿ ಸರ್ಕಾರದ ಅಧಿಕಾರಿಗಳಿಗೆ ಕಮಿಷನ್ ಕೊಟ್ಟಿಲ್ಲ. ಇಂತಹ ಸುಳ್ಳು ಸಂದೇಶ ಹಬ್ಬಿಸಬಾರದು ಎಂದರು.

ಎಲ್ಲೋ ಆದ ಇಂದು ಘಟನೆ ನಮ್ಮಲ್ಲೂ ಆಗಿದೆ ಎನ್ನುವುದು ಸರಿಯಲ್ಲ. ನನಗೆ ಗೊತ್ತಿರುವ ಪ್ರಕಾರ ಯಾವುದೇ ಶ್ರೀಗಳು ಕಮಿಷನ್ ಕೊಟ್ಟಿಲ್ಲ. ಗಾಳಿಯಲ್ಲಿ ಗುಂಡು ಹಾರಿಸಿದರೆ ಸರಿಯಲ್ಲ‌. ದಾಖಲೆ ಕೊಡಿ ಎಂದು ರಾಜಶೇಖರಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಐಸ್‌ಕ್ರೀಂ ಕೊಟ್ಟರೆ ಅದು ತಲುಪುವಾಗ ಕಡ್ಡಿಯಷ್ಟೇ ಉಳಿದಿರುತ್ತೆ.. ಅನುದಾನಕ್ಕಾಗಿ ಮಠಗಳೂ 30% ಕಮೀಷನ್​ ಕೊಡ್ಬೇಕು : ದಿಂಗಾಲೇಶ್ವರ ಶ್ರೀ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.