ಉಡುಪಿ : ಅಯೋಧ್ಯೆ ರಾಮ ಮಂದಿರ ವಿವಾದಿತ ಕ್ಷೇತ್ರ ಎಂದಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಉಡುಪಿಯ ಪಲಿಮಾರು ಮಠದ ವಿದ್ಯಾಧೀಶ ಶ್ರೀಗಳು ತಿರುಗೇಟು ನೀಡಿದ್ದಾರೆ.
ಓದಿ: ಪಡಿಕಲ್, ಸಮರ್ಥ್ ಶತಕದಾಟ: ರೈಲ್ವೇಸ್ ವಿರುದ್ದ ಕರ್ನಾಟಕಕ್ಕೆ 10 ವಿಕೆಟ್ಗಳ ಭರ್ಜರಿ ಜಯ
ಉಡುಪಿಯ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, ನ್ಯಾಯಾಲಯದ ಆದೇಶ ಒಪ್ಪುತ್ತಿಲ್ಲ ಅಂದರೆ ನಾಚಿಕೆಗೇಡು. ರಾಮಮಂದಿರಕ್ಕೆ ಬೇಕಾದ ಎಲ್ಲಾ ಸಾಕ್ಷಿಗಳನ್ನು ಭೂಗರ್ಭದಿಂದ ಪಡೆಯಲಾಗಿದೆ. ಕೆ ಕೆ ಮಹಮ್ಮದ್ ಅವರ ನೇತೃತ್ವದಲ್ಲಿ ಉತ್ಖನನ ನಡೆದು ಸಾಕ್ಷಿಗಳು ಕಣ್ಣ ಮುಂದಿವೆ.
ಕೆಲ ಜನನಾಯಕರು ಮಂದಿರಕ್ಕೆ ಹತ್ತು ರೂಪಾಯಿ ಕೊಡಬೇಕಿದ್ದರೆ, ಭೂಮಿ ವಿವಾದ ಗ್ರಸ್ತ ಎನ್ನುತ್ತಿದ್ದಾರೆ. ರಾಮಮಂದಿರ ಇದ್ದ ಬಗ್ಗೆ ಎಲ್ಲಾ ಪುರಾವೆಗಳನ್ನು ನ್ಯಾಯಾಲಯಕ್ಕೆ ನೀಡಲಾಗಿದೆ. ಐವರು ನ್ಯಾಯಾಧೀಶರು ಸೇರಿ ತೀರ್ಪು ನೀಡಿದ್ದಾರೆ.
ಅದರಲ್ಲೂ ಓರ್ವ ಮುಸ್ಲಿಂ ಸಮಾಜದ ನ್ಯಾಯಾಧೀಶರೇ ಇದ್ದರು, ಆದರೂ ಓರ್ವ ವಕೀಲರಾಗಿರುವ ಜನನಾಯಕ ಈ ತೀರ್ಪನ್ನು ಒಪ್ಪುತ್ತಿಲ್ಲ. ಇದು ನಿಜಕ್ಕೂ ನಾಚಿಕೆಗೇಡಿನ ಸಂಗತಿ. ಚೆಂಬಲ್ ಕಣಿವೆಯ ಡಕಾಯಿತರಿಗಿಂತಲೂ ಇಂತಹ ಜನ ನಾಯಕರು ಅಪಾಯಕಾರಿ ಎಂದಿದ್ದಾರೆ.