ಉಡುಪಿ: ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಉಡುಪಿ ಜಿಲ್ಲಾ ಕೇಂದ್ರದಲ್ಲಿರುವ ಸಂತ ಸಿಸಿಲೀಸ್ ಶಾಲೆಯಲ್ಲಿ ನಡೆಯಲಿದ್ದು, ಚುನಾವಣಾ ಆಯೋಗದ ಮಾರ್ಗಸೂಚಿಯ ಅನ್ವಯ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮತ ಎಣಿಕೆಯನ್ನು ಒಟ್ಟು 14 ಕೊಠಡಿಗಳಲ್ಲಿ ನಡೆಸಲು ತಯಾರಿ ಮಾಡಿ ಕೊಳ್ಳಲಾಗಿದೆ. ಒಟ್ಟು ಉಡುಪಿ ಜಿಲ್ಲೆಯ ನಾಲ್ಕು ಹಾಗೂ ಚಿಕ್ಕಮಗಳೂರು ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ. ಮತ ಎಣಿಕೆಗಾಗಿ 127 ಮಂದಿ ಮೇಲ್ವಿಚಾರಕರು, 131 ಮಂದಿ ಮತ ಎಣಿಕೆ ಸಹಾಯಕರು, 127 ಮಂದಿ ಮೈಕ್ರೋ ಅಬ್ಸರ್ವರ್, 127 ಡಿ ದರ್ಜೆಯ ನೌಕರರನ್ನು ನಿಯೋಜಿಸಲಾಗಿದೆ. ನಾಳೆ ಬೆಳಗ್ಗೆ 6 ರಿಂದ ಮೇ.25 ಬೆಳಗ್ಗೆ ಆರು ಗಂಟೆಯವರೆಗೆ ಸೆಕ್ಷನ್ 144 ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದರು.
ಬಳಿಕ ಎಸ್ಪಿ ಅವರು ಮಾತನಾಡಿ ಮತ ಎಣಿಕೆ ನಡೆಯುವ ಶಾಲೆಯ ಸುತ್ತ ಮುತ್ತ ಪೊಲೀಸ್ ಗಾರ್ಡ್ಗಳನ್ನು ನಿಯೋಜನೆ ಮಾಡಲಾಗುತ್ತದೆ. ಪೋಲಿಂಗ್ ಏಜೆನ್ಸಿ ಅವರಿಗೆ, ಮಾಧ್ಯಮದವರಿಗೆ ಹಾಗೂ ಪೋಲಿಂಗ್ ಅಧಿಕಾರಿಗಳಿಗೆ ಈ ಮೂವರಿಗೆ ಮಾತ್ರ ಪ್ರವೇಶವನ್ನು ನೀಡಲಾಗುತ್ತದೆ. ಇವರಿಗೆ ಜಿಲ್ಲಾಧಿಕಾರಿ ಕಚೇರಿಯಿಂದ ಪಾಸ್ ವ್ಯವಸ್ಥೆ ಮಾಡಲಾಗಿದೆ. ಪಾಸ್ ಪಡೆದವರಿಗೆ ಮಾತ್ರ ಪ್ರವೇಶ ಇರುತ್ತದೆ. 130 ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. 3 ಡಿಎಸ್ಪಿಗಳು, 6 ಇನ್ಸ್ಪೆಕ್ಟರ್ಗಳು, 23 ಪಿಎಸ್ಐ, 280 ಕಾನ್ಸ್ಟೇಬಲ್ಸ್ಗಳು ಸೇರಿದಂತೆ 83 ಹೋಮ್ ಗಾರ್ಡ್ಗಳನ್ನು ನಿಯೋಜನೆ ಮಾಡಲಾಗಿದೆ ಎಂದರು.