ETV Bharat / state

ಉಡುಪಿಯಲ್ಲಿ ಯೋಗ ಹಾಗೂ ಪ್ರಕೃತಿ ಚಿಕಿತ್ಸಾಲಯಕ್ಕೆ ವೀರೇಂದ್ರ ಹೆಗ್ಗಡೆ ಚಾಲನೆ - ಉಡುಪಿಯಲ್ಲಿ ಎತ್ತರದ ಜಗತ್ತಿನ ಅತಿ ಎತ್ತರದ ಸ್ವಾಮಿ ವಿವೇಕಾನಂದ ಪ್ರತಿಮೆ ಸುದ್ದಿ

ಉಡುಪಿಯಲ್ಲಿ ಆರಂಭವಾದ ಯೋಗ ಮತ್ತು ಪ್ರಕೃತಿ ಚಿಕಿತ್ಸೆ (ಸರ್ವಕ್ಷೇಮ) ಆಸ್ಪತ್ರೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಚಾಲನೆ ನೀಡಿದ್ದಾರೆ.

yogabana natural health centre
ಪರಿಸರ ಸ್ನೇಹಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ
author img

By

Published : Feb 2, 2020, 8:38 AM IST

ಉಡುಪಿ: ಯೋಗ ಮತ್ತು ಪ್ರಕೃತಿ ಚಿಕಿತ್ಸೆಗಾಗಿ ಮೂಡುಗಿಳಿಯಾರಿನ ಯೋಗಬನದ ಪ್ರಕೃತಿ ಮಡಿಲಲ್ಲಿ ತಲೆ ಎತ್ತಿರುವ ಯೋಗ ಮತ್ತು ಪ್ರಕೃತಿ ಚಿಕಿತ್ಸೆ (ಸರ್ವಕ್ಷೇಮ) ಆಸ್ಪತ್ರೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಚಾಲನೆ ನೀಡಿದರು.

ಪರಿಸರ ಸ್ನೇಹಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ

ಡಿವೈನ್ ಪಾರ್ಕ್ ಟ್ರಸ್ಟ್​​​ನ ಅಂಗಸಂಸ್ಥೆಯಾದ ಆಸ್ಪತ್ರೆ ಮತ್ತು ಸಂಶೋಧನಾ ಪ್ರತಿಷ್ಠಾನವನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಡಾ.ವೀರೇಂದ್ರ ಹೆಗ್ಗಡೆಯವರು, "ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಇಂದಿನ ಅಗತ್ಯವಾಗಿದೆ. ನಿಸರ್ಗದ ಮಡಿಲಲ್ಲಿ ಆಸ್ಪತ್ರೆ ಇರುವುದರಿಂದ ಇಲ್ಲಿ ದೊರೆಯುವ ಚಿಕಿತ್ಸೆ ಹೆಚ್ಚು ಪ್ರಯೋಜನಕಾರಿಯಾಗಿದೆ. ವಾಸ್ತುಶಿಲ್ಪ ಹಾಗೂ ಪ್ರಾಚೀನ ಶೈಲಿಯಿಂದಾಗಿ ಆಸ್ಪತ್ರೆ ಪ್ರಕೃತಿಗೆ ಹತ್ತಿರವಾಗಿದೆ. ಪರಿಸರಸ್ನೇಹಿ ವಸ್ತುಗಳನ್ನು ಬಳಕೆ ಮಾಡಿಕೊಂಡಿರುವುದು ಇದರ ಹೆಮ್ಮೆ ಎಂದರು.

ಇನ್ನು ಜಗತ್ತಿನ ಅತಿ ಎತ್ತರದ ಸ್ವಾಮಿ ವಿವೇಕಾನಂದ ಪ್ರತಿಮೆಯನ್ನು ಯೋಗ ವಿಶ್ವವಿದ್ಯಾಲಯದ ಕುಲಪತಿಗಳಾದ ಹೆಚ್.ಆರ್.ನಾಗೇಂದ್ರ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಿವೈನ್‍ಪಾರ್ಕ್ ಟ್ರಸ್ಟ್​​ನ ಆಡಳಿತ ನಿರ್ದೇಶಕರು ಮಾತನಾಡಿ, "ಶಾಂತಿ, ನೆಮ್ಮದಿ ಅರಸುವವರಿಗೆ ಇದು ಸೂಕ್ತ ಜಾಗ. ಪ್ರಕೃತಿ ಚಿಕಿತ್ಸೆ ಇವತ್ತು ವಿಶ್ವಾದ್ಯಂತ ಪಸರಿಸಿದೆ. ಇದಕ್ಕೆ ಕಾರಣ ನಮ್ಮ ಪ್ರಕೃತಿಯಲ್ಲಿಯೇ ಇರುವ ಔಷಧಿ ಗುಣ. ನಾವು ಇದನ್ನು ಬೆಳೆಸಿ ಉಳಿಸಬೇಕಿದೆ ಎಂದರು.

ಆಸ್ಪತ್ರೆ ವಿಶೇಷತೆ:

ಪ್ರಾಚೀನ ದೇಗುಲದ ವಾಸ್ತು ವಿನ್ಯಾಸವನ್ನು ಹೊಂದಿದ ಜಗತ್ತಿನ ಪ್ರಥಮ ಯೋಗ ಆಸ್ಪತ್ರೆಯಾಗಿದೆ. ಆಯುಷ್ ವಿಭಾಗದಲ್ಲಿ ದೇಶದ ಪ್ರಥಮ ಪರಿಸರ ಸ್ನೇಹಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ. ಕರಾವಳಿಯ ಪ್ರಾಚೀನ ಶೈಲಿಯಲ್ಲಿ ನಿರ್ಮಾಣಗೊಂಡಿದೆ. ಪ್ರಕೃತಿ, ಯೋಗ, ಆಹಾರ, ಆಧ್ಯಾತ್ಮಿಕತೆ, ಸಂಗೀತ, ಹಸಿರು, ಹಾಸ್ಯ, ಮೌನ ಚಿಕಿತ್ಸೆಯ ಸಂಗಮ. ಪರಿಸರ ಸ್ನೇಹಿ ಆಸ್ಪತ್ರೆ ಇದಾಗಿದೆ. ಸೋಲಾರ್ ವ್ಯವಸ್ಥೆ ಇದೆ. ಸೈಕಲ್ ಟ್ರ್ಯಾಕ್ ಕೂಡ ನಿರ್ಮಾಣಗೊಂಡಿದೆ.

ಏನಿದು ಡಿವೈನ್ ಪಾರ್ಕ್ ಟ್ರಸ್ಟ್:
ವ್ಯಕ್ತಿತ್ವ ನಿರ್ಮಾಣ ಹಾಗೂ ರಾಷ್ಟ್ರೋತ್ಥಾನದ ಬೇರೆ ಬೇರೆ ಯೋಜನೆಗಳಲ್ಲಿ ಆಧ್ಯಾತ್ಮ, ಆರೋಗ್ಯ, ಯೋಗದ ಮಹಿಮೆಯನ್ನು ತಿಳಿಸಿಕೊಡುವ ಕಾರ್ಯಕ್ರಮವನ್ನು ಡಿವೈನ್​ ಪಾರ್ಕ್​ ಟ್ರಸ್ಟ್​ ಹಮ್ಮಿಕೊಂಡಿದೆ.

ಪ್ರತಿಮೆ ವಿಶೇಷತೆ:
ಇದು ಜಗತ್ತಿನಲ್ಲೇ ಅತಿ ಎತ್ತರದ ಸ್ವಾಮಿ ವಿವೇಕಾನಂದರ ಪ್ರತಿಮೆಯಾಗಿದೆ. 35 ಅಡಿ ಎತ್ತರ ಇದೆ. ಪ್ರತಿಮೆಗೆ ವಿಶೇಷವಾದ ಬೆಳಕಿನ ವ್ಯವಸ್ಥೆ ಮಾಡಲಾಗಿದೆ. ಹಸಿರು ಹುಲ್ಲು ಹಾಸಿನ ನಡುವೆ ಇದನ್ನು ಇರಿಸಲಾಗಿದೆ.

ಉಡುಪಿ: ಯೋಗ ಮತ್ತು ಪ್ರಕೃತಿ ಚಿಕಿತ್ಸೆಗಾಗಿ ಮೂಡುಗಿಳಿಯಾರಿನ ಯೋಗಬನದ ಪ್ರಕೃತಿ ಮಡಿಲಲ್ಲಿ ತಲೆ ಎತ್ತಿರುವ ಯೋಗ ಮತ್ತು ಪ್ರಕೃತಿ ಚಿಕಿತ್ಸೆ (ಸರ್ವಕ್ಷೇಮ) ಆಸ್ಪತ್ರೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಚಾಲನೆ ನೀಡಿದರು.

ಪರಿಸರ ಸ್ನೇಹಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ

ಡಿವೈನ್ ಪಾರ್ಕ್ ಟ್ರಸ್ಟ್​​​ನ ಅಂಗಸಂಸ್ಥೆಯಾದ ಆಸ್ಪತ್ರೆ ಮತ್ತು ಸಂಶೋಧನಾ ಪ್ರತಿಷ್ಠಾನವನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಡಾ.ವೀರೇಂದ್ರ ಹೆಗ್ಗಡೆಯವರು, "ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಇಂದಿನ ಅಗತ್ಯವಾಗಿದೆ. ನಿಸರ್ಗದ ಮಡಿಲಲ್ಲಿ ಆಸ್ಪತ್ರೆ ಇರುವುದರಿಂದ ಇಲ್ಲಿ ದೊರೆಯುವ ಚಿಕಿತ್ಸೆ ಹೆಚ್ಚು ಪ್ರಯೋಜನಕಾರಿಯಾಗಿದೆ. ವಾಸ್ತುಶಿಲ್ಪ ಹಾಗೂ ಪ್ರಾಚೀನ ಶೈಲಿಯಿಂದಾಗಿ ಆಸ್ಪತ್ರೆ ಪ್ರಕೃತಿಗೆ ಹತ್ತಿರವಾಗಿದೆ. ಪರಿಸರಸ್ನೇಹಿ ವಸ್ತುಗಳನ್ನು ಬಳಕೆ ಮಾಡಿಕೊಂಡಿರುವುದು ಇದರ ಹೆಮ್ಮೆ ಎಂದರು.

ಇನ್ನು ಜಗತ್ತಿನ ಅತಿ ಎತ್ತರದ ಸ್ವಾಮಿ ವಿವೇಕಾನಂದ ಪ್ರತಿಮೆಯನ್ನು ಯೋಗ ವಿಶ್ವವಿದ್ಯಾಲಯದ ಕುಲಪತಿಗಳಾದ ಹೆಚ್.ಆರ್.ನಾಗೇಂದ್ರ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಿವೈನ್‍ಪಾರ್ಕ್ ಟ್ರಸ್ಟ್​​ನ ಆಡಳಿತ ನಿರ್ದೇಶಕರು ಮಾತನಾಡಿ, "ಶಾಂತಿ, ನೆಮ್ಮದಿ ಅರಸುವವರಿಗೆ ಇದು ಸೂಕ್ತ ಜಾಗ. ಪ್ರಕೃತಿ ಚಿಕಿತ್ಸೆ ಇವತ್ತು ವಿಶ್ವಾದ್ಯಂತ ಪಸರಿಸಿದೆ. ಇದಕ್ಕೆ ಕಾರಣ ನಮ್ಮ ಪ್ರಕೃತಿಯಲ್ಲಿಯೇ ಇರುವ ಔಷಧಿ ಗುಣ. ನಾವು ಇದನ್ನು ಬೆಳೆಸಿ ಉಳಿಸಬೇಕಿದೆ ಎಂದರು.

ಆಸ್ಪತ್ರೆ ವಿಶೇಷತೆ:

ಪ್ರಾಚೀನ ದೇಗುಲದ ವಾಸ್ತು ವಿನ್ಯಾಸವನ್ನು ಹೊಂದಿದ ಜಗತ್ತಿನ ಪ್ರಥಮ ಯೋಗ ಆಸ್ಪತ್ರೆಯಾಗಿದೆ. ಆಯುಷ್ ವಿಭಾಗದಲ್ಲಿ ದೇಶದ ಪ್ರಥಮ ಪರಿಸರ ಸ್ನೇಹಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ. ಕರಾವಳಿಯ ಪ್ರಾಚೀನ ಶೈಲಿಯಲ್ಲಿ ನಿರ್ಮಾಣಗೊಂಡಿದೆ. ಪ್ರಕೃತಿ, ಯೋಗ, ಆಹಾರ, ಆಧ್ಯಾತ್ಮಿಕತೆ, ಸಂಗೀತ, ಹಸಿರು, ಹಾಸ್ಯ, ಮೌನ ಚಿಕಿತ್ಸೆಯ ಸಂಗಮ. ಪರಿಸರ ಸ್ನೇಹಿ ಆಸ್ಪತ್ರೆ ಇದಾಗಿದೆ. ಸೋಲಾರ್ ವ್ಯವಸ್ಥೆ ಇದೆ. ಸೈಕಲ್ ಟ್ರ್ಯಾಕ್ ಕೂಡ ನಿರ್ಮಾಣಗೊಂಡಿದೆ.

ಏನಿದು ಡಿವೈನ್ ಪಾರ್ಕ್ ಟ್ರಸ್ಟ್:
ವ್ಯಕ್ತಿತ್ವ ನಿರ್ಮಾಣ ಹಾಗೂ ರಾಷ್ಟ್ರೋತ್ಥಾನದ ಬೇರೆ ಬೇರೆ ಯೋಜನೆಗಳಲ್ಲಿ ಆಧ್ಯಾತ್ಮ, ಆರೋಗ್ಯ, ಯೋಗದ ಮಹಿಮೆಯನ್ನು ತಿಳಿಸಿಕೊಡುವ ಕಾರ್ಯಕ್ರಮವನ್ನು ಡಿವೈನ್​ ಪಾರ್ಕ್​ ಟ್ರಸ್ಟ್​ ಹಮ್ಮಿಕೊಂಡಿದೆ.

ಪ್ರತಿಮೆ ವಿಶೇಷತೆ:
ಇದು ಜಗತ್ತಿನಲ್ಲೇ ಅತಿ ಎತ್ತರದ ಸ್ವಾಮಿ ವಿವೇಕಾನಂದರ ಪ್ರತಿಮೆಯಾಗಿದೆ. 35 ಅಡಿ ಎತ್ತರ ಇದೆ. ಪ್ರತಿಮೆಗೆ ವಿಶೇಷವಾದ ಬೆಳಕಿನ ವ್ಯವಸ್ಥೆ ಮಾಡಲಾಗಿದೆ. ಹಸಿರು ಹುಲ್ಲು ಹಾಸಿನ ನಡುವೆ ಇದನ್ನು ಇರಿಸಲಾಗಿದೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.