ಶಿರಸಿ : ನಗರದಲ್ಲಿ ದ್ವಿಚಕ್ರ ವಾಹನಗಳಿಗೆ ಹೆಡ್ಲೈಟ್, ಹಾರನ್ ಮತ್ತು ಸೈಲೆನ್ಸರ್ಗಳನ್ನು ಬದಲಾಯಿಸಿಕೊಂಡು, ಚಾಲನೆ ವೇಳೆ ಹೆಚ್ಚಿನ ಶಬ್ದ ಉಂಟು ಮಾಡುವ ಮೂಲಕ ಸಾರ್ವಜನಿಕರಿಗೆ ಕಿರಿಕಿರಿ ಮಾಡುತ್ತಿದ್ದ 10ಕ್ಕೂ ಹೆಚ್ಚು ವಾಹನಗಳನ್ನು ಶಿರಸಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಡಿಎಸ್ಪಿ ಗೋಪಾಲಕೃಷ್ಣ ನಾಯಕ ಮತ್ತು ಸಿಪಿಐ ಪ್ರದೀಪ್ ಬಿಯುರವರ ಮಾರ್ಗದರ್ಶನದಲ್ಲಿ ಮಾರುಕಟ್ಟೆ ಠಾಣೆ ಪಿಎಸ್ಐ ನಾಗಪ್ಪ ವಾಹನಗಳನ್ನು ಜಪ್ತಿ ಪಡಿಸಿಕೊಂಡಿದ್ದು, ಮೋಟಾರ್ ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿದ್ದಾರೆ.
ಯಾರಾದರೂ ದ್ವಿಚಕ್ರ ವಾಹನಗಳ ಲೈಟ್, ಹಾರನ್, ಸೈಲೆನ್ಸರ್ನ ಭಾಗಗಳನ್ನು ಬದಲಾಯಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡಿದಲ್ಲಿ ಅಂತವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಅಂತಾ ಶಿರಸಿ ವೃತ್ತ ನಿರೀಕ್ಷಕ ಬಿ.ಯು.ಪ್ರದೀಪ್ ಎಚ್ಚರಿಕೆ ನೀಡಿದ್ದಾರೆ.
ಸಾರ್ವಜನಿಕರಿಗೆ ಕಿರಿಕಿರಿ ಮಾಡ್ತಿದ್ದ ದ್ವಿಚಕ್ರ ವಾಹನ ವಶಕ್ಕೆ ಪಡೆದ ಪೊಲೀಸರು! - ದ್ವಿಚಕ್ರ ವಾಹನ ವಶಕ್ಕೆ ಪಡೆದ ಪೊಲೀಸರು
ಹಾರನ್, ಹೆಡ್ಲೈಟ್, ಸೈಲೆನ್ಸರ್ ಬದಲಾಯಿಸಿಕೊಂಡು ದೊಡ್ಡ ಮಟ್ಟದಲ್ಲಿ ಶಬ್ದ ಮಾಡ್ತಿದ್ದ ವಾಹನಗಳನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
![ಸಾರ್ವಜನಿಕರಿಗೆ ಕಿರಿಕಿರಿ ಮಾಡ್ತಿದ್ದ ದ್ವಿಚಕ್ರ ವಾಹನ ವಶಕ್ಕೆ ಪಡೆದ ಪೊಲೀಸರು! 10 bike seized by Sirsi police](https://etvbharatimages.akamaized.net/etvbharat/prod-images/768-512-8828899-841-8828899-1600287134478.jpg?imwidth=3840)
ಶಿರಸಿ : ನಗರದಲ್ಲಿ ದ್ವಿಚಕ್ರ ವಾಹನಗಳಿಗೆ ಹೆಡ್ಲೈಟ್, ಹಾರನ್ ಮತ್ತು ಸೈಲೆನ್ಸರ್ಗಳನ್ನು ಬದಲಾಯಿಸಿಕೊಂಡು, ಚಾಲನೆ ವೇಳೆ ಹೆಚ್ಚಿನ ಶಬ್ದ ಉಂಟು ಮಾಡುವ ಮೂಲಕ ಸಾರ್ವಜನಿಕರಿಗೆ ಕಿರಿಕಿರಿ ಮಾಡುತ್ತಿದ್ದ 10ಕ್ಕೂ ಹೆಚ್ಚು ವಾಹನಗಳನ್ನು ಶಿರಸಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಡಿಎಸ್ಪಿ ಗೋಪಾಲಕೃಷ್ಣ ನಾಯಕ ಮತ್ತು ಸಿಪಿಐ ಪ್ರದೀಪ್ ಬಿಯುರವರ ಮಾರ್ಗದರ್ಶನದಲ್ಲಿ ಮಾರುಕಟ್ಟೆ ಠಾಣೆ ಪಿಎಸ್ಐ ನಾಗಪ್ಪ ವಾಹನಗಳನ್ನು ಜಪ್ತಿ ಪಡಿಸಿಕೊಂಡಿದ್ದು, ಮೋಟಾರ್ ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿದ್ದಾರೆ.
ಯಾರಾದರೂ ದ್ವಿಚಕ್ರ ವಾಹನಗಳ ಲೈಟ್, ಹಾರನ್, ಸೈಲೆನ್ಸರ್ನ ಭಾಗಗಳನ್ನು ಬದಲಾಯಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡಿದಲ್ಲಿ ಅಂತವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಅಂತಾ ಶಿರಸಿ ವೃತ್ತ ನಿರೀಕ್ಷಕ ಬಿ.ಯು.ಪ್ರದೀಪ್ ಎಚ್ಚರಿಕೆ ನೀಡಿದ್ದಾರೆ.