ETV Bharat / state

ಕಾರವಾರದಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 21 ಜನರ ಬಂಧನ! - ಕಾರವಾರ ಪೊಲೀಸರಿಂದ 21 ಜನ ಬಂಧನ,

ಕಾರವಾರದಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿ 21 ಜನರನ್ನು ಬಂಧಿಸಿದ್ದಾರೆ.

21 people arrested, 21 people arrested by Karwar police, Karwar police news, 21 ಜನ ಬಂಧನ, ಕಾರವಾರ ಪೊಲೀಸರಿಂದ 21 ಜನ ಬಂಧನ, ಕಾರವಾರ ಪೊಲೀಸ್​ ಸುದ್ದಿ,
ಕಾರವಾರದಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ
author img

By

Published : Jan 26, 2021, 1:55 PM IST

ಕಾರವಾರ: ನಗರದ ವಿವಿಧೆಡೆ ಸೇರಿದಂತೆ ಒಟ್ಟು 20 ಓಸಿ ಅಡ್ಡೆಗಳ ಮೇಲೆ ದಾಳಿ ನಡೆಸಿದ ಪೊಲೀಸರು 21 ಆರೋಪಿಗಳನ್ನು ಬಂಧಿಸಿರುವ ಘಟನೆ ನಿನ್ನೆ ನಡೆದಿದೆ.‘

ಪ್ರೊಬೇಸನರಿ ಐಪಿಎಸ್ ಅಧಿಕಾರಿ ಕುಸಾಲ್ ನೇತೃದಲ್ಲಿ ಸುಮಾರು 60 ಕ್ಕೂ ಹೆಚ್ಚು ಪೊಲೀಸರು ಏಕಕಾಲದಲ್ಲಿ ನಗರದ ವಿವಿಧೆಡೆ 20 ಓಸಿ ಅಡ್ಡೆಗಳ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಓಸಿ ಚೀಟಿ, ಮೊಬೈಲ್ ಹಾಗೂ ಅಂದಾಜು 1 ಲಕ್ಷ ರೂ ನಗದು ಹಣ ಸಹಿತ 21 ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ನಗರದ ಡಿ.ಆರ್ ಗ್ರೌಂಡ್​ಗೆ ಕರೆದುಕೊಂಡು ಬಂದು ವಿಚಾರಣೆ ನಡೆಸಲಾಯಿತು.

ಕಾರವಾರದಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ

ನಗರದಲ್ಲಿ ಓಸಿ ಹಾವಳಿ ಹೆಚ್ಚಾದ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿದ್ದ ಹಿನ್ನೆಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜ್ ಮಾರ್ಗದರ್ಶನದಲ್ಲಿ ಪ್ರೊಬೇಶ್ನರಿ ಐಪಿಎಸ್ ಅಧಿಕಾರಿ ಕುಸಾಲ್ ಹಾಗೂ ಪಿಎಸ್ಐ ಮತ್ತು ಪೊಲೀಸ್ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದ್ದಾರೆ. ಇನ್ನು ಬಂಧನಕ್ಕೊಳಗಾದ ಆರೋಪಿಗಳಿಗೆ ಎಸ್​ಪಿ ಶಿವಪ್ರಕಾಶ್ ದೇವರಾಜ್ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳಿಗೆ ಆದ್ಯತೆ ಇಲ್ಲ. ಓಸಿ ಚಟುವಟಿಕೆ ಹೆಚ್ಚಾದ ಬಗ್ಗೆ ದೂರು ಕೇಳಿ ಬಂದ ಹಿನ್ನೆಲೆ ದಾಳಿ ನಡೆಸಲಾಗಿದೆ. ಸದ್ಯ ಕಾರವಾರದಲ್ಲಿ ದಾಳಿ ನಡೆಸಿದ್ದು, ಮುಂದಿನ ದಿನದಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ದಾಳಿ ನಡೆಸಲಾಗುವುದು. ಈ ಬಗ್ಗೆ ಎಲ್ಲಾ ಪೊಲೀಸ್ ಠಾಣೆಗಳಿಗೂ ಸೂಚನೆ ಕೊಡಲಾಗುವುದು ಎಂದು ತಿಳಿಸಿದ್ದಾರೆ.

ಕಾರವಾರ: ನಗರದ ವಿವಿಧೆಡೆ ಸೇರಿದಂತೆ ಒಟ್ಟು 20 ಓಸಿ ಅಡ್ಡೆಗಳ ಮೇಲೆ ದಾಳಿ ನಡೆಸಿದ ಪೊಲೀಸರು 21 ಆರೋಪಿಗಳನ್ನು ಬಂಧಿಸಿರುವ ಘಟನೆ ನಿನ್ನೆ ನಡೆದಿದೆ.‘

ಪ್ರೊಬೇಸನರಿ ಐಪಿಎಸ್ ಅಧಿಕಾರಿ ಕುಸಾಲ್ ನೇತೃದಲ್ಲಿ ಸುಮಾರು 60 ಕ್ಕೂ ಹೆಚ್ಚು ಪೊಲೀಸರು ಏಕಕಾಲದಲ್ಲಿ ನಗರದ ವಿವಿಧೆಡೆ 20 ಓಸಿ ಅಡ್ಡೆಗಳ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಓಸಿ ಚೀಟಿ, ಮೊಬೈಲ್ ಹಾಗೂ ಅಂದಾಜು 1 ಲಕ್ಷ ರೂ ನಗದು ಹಣ ಸಹಿತ 21 ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ನಗರದ ಡಿ.ಆರ್ ಗ್ರೌಂಡ್​ಗೆ ಕರೆದುಕೊಂಡು ಬಂದು ವಿಚಾರಣೆ ನಡೆಸಲಾಯಿತು.

ಕಾರವಾರದಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ

ನಗರದಲ್ಲಿ ಓಸಿ ಹಾವಳಿ ಹೆಚ್ಚಾದ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿದ್ದ ಹಿನ್ನೆಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜ್ ಮಾರ್ಗದರ್ಶನದಲ್ಲಿ ಪ್ರೊಬೇಶ್ನರಿ ಐಪಿಎಸ್ ಅಧಿಕಾರಿ ಕುಸಾಲ್ ಹಾಗೂ ಪಿಎಸ್ಐ ಮತ್ತು ಪೊಲೀಸ್ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದ್ದಾರೆ. ಇನ್ನು ಬಂಧನಕ್ಕೊಳಗಾದ ಆರೋಪಿಗಳಿಗೆ ಎಸ್​ಪಿ ಶಿವಪ್ರಕಾಶ್ ದೇವರಾಜ್ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳಿಗೆ ಆದ್ಯತೆ ಇಲ್ಲ. ಓಸಿ ಚಟುವಟಿಕೆ ಹೆಚ್ಚಾದ ಬಗ್ಗೆ ದೂರು ಕೇಳಿ ಬಂದ ಹಿನ್ನೆಲೆ ದಾಳಿ ನಡೆಸಲಾಗಿದೆ. ಸದ್ಯ ಕಾರವಾರದಲ್ಲಿ ದಾಳಿ ನಡೆಸಿದ್ದು, ಮುಂದಿನ ದಿನದಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ದಾಳಿ ನಡೆಸಲಾಗುವುದು. ಈ ಬಗ್ಗೆ ಎಲ್ಲಾ ಪೊಲೀಸ್ ಠಾಣೆಗಳಿಗೂ ಸೂಚನೆ ಕೊಡಲಾಗುವುದು ಎಂದು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.