ETV Bharat / state

ಪರೇಶ್ ಮೇಸ್ತ ಕೊಲೆ ಆರೋಪಿಗೆ ವಕ್ಫ್​ ಬೋರ್ಡ್​ನಲ್ಲಿ ಸ್ಥಾನ: ನಾಯಕರ ಆರೋಪ-ಪ್ರತ್ಯಾರೋಪ

author img

By

Published : Aug 16, 2022, 3:46 PM IST

Updated : Aug 16, 2022, 4:36 PM IST

ಪರೇಶ್ ಮೇಸ್ತ ಕೊಲೆ ಆರೋಪಿಯಾದ ಆಜಾದ್ ಅಣ್ಣಿಗೇರಿಯನ್ನು ಉತ್ತರ ಕನ್ನಡ ಜಿಲ್ಲಾ ವಕ್ಫ್ ಬೋರ್ಡಿನ ಉಪಾಧ್ಯಕ್ಷನಾಗಿ ನೇಮಕ ಮಾಡಲಾಗಿತ್ತು. ನಂತರ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಅದನ್ನು ತಡೆಹಿಡಿಯಲಾಗಿತ್ತು. ಆದರೆ ಇದು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸಾಕಷ್ಟು ಟೀಕೆ, ಆರೋಪಕ್ಕೆ ಕಾರಣವಾಗಿದೆ.

Accused of Paresh Mesta
ಆರೋಪ-ಪ್ರತ್ಯಾರೋಪದಲ್ಲಿ ತೊಡಗಿರುವ ನಾಯಕರು

ಶಿರಸಿ: ಉತ್ತರ ಕನ್ನಡ ಸೇರಿದಂತೆ ರಾಜ್ಯದಲ್ಲಿ ಕಿಡಿ ಹೊತ್ತಿಸಿದ್ದ ಹೊನ್ನಾವರದ ಪರೇಶ್ ಮೇಸ್ತ ಪ್ರಕರಣದ ಆರೋಪಿಗೆ ವಕ್ಫ್ ಬೋರ್ಡಿನಲ್ಲಿ ಸ್ಥಾನ ಕಲ್ಪಿಸಲಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ನಾಯಕರ ನಡುವೆ ವಾಗ್ವಾದ ನಡೆಯುತ್ತಿದೆ. ಎರಡೂ ಪಕ್ಷಗಳು ಟೀಕೆ ಮತ್ತು ಸಮಜಾಯಿಷಿಯಲ್ಲಿ ತೊಡಗಿಕೊಂಡಿವೆ. ರಾಜಕೀಯವಾಗಿ ಪ್ರಭಾವ ಬೀರುವ ವಿಷಯವಾದ ಕಾರಣ ಪಕ್ಷವನ್ನು ಸಮರ್ಥನೆ ಮಾಡಿಕೊಳ್ಳುವ ಕೆಲಸ ನಡೆಯುತ್ತಿದೆ.

ನಾಯಕರ ಆರೋಪ-ಪ್ರತ್ಯಾರೋಪ

ಉಪಾಧ್ಯಕ್ಷ ಸ್ಥಾನ ನೀಡುವಲ್ಲಿ ಕಾಂಗ್ರೆಸ್ ಕೈವಾಡವಿದೆ ಎಂದು ಬಿಜೆಪಿ ಶಾಸಕಿ ರೂಪಾಲಿ ನಾಯ್ಕ ಆರೋಪಿಸಿದ್ದರು. ಅದಕ್ಕೆ ಕಾಂಗ್ರೆಸ್ ತಿರುಗೇಟು ನೀಡಿದೆ. ಯಾವ ಪಕ್ಷ ಅಧಿಕಾರದಲ್ಲಿದೆ ಎಂಬುದನ್ನು ಗಮನಿಸಬೇಕು. ಈ ಬಗ್ಗೆ ಕ್ಷಮೆಯಾಚನೆ ಮಾಡಬೇಕು ಹಾಗೂ ಬಿಜೆಪಿಯ ತಪ್ಪಿಗೆ ಇತರರ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಇನ್ನು ಬಿಜೆಪಿಯವರು ತಮ್ಮ ತಪ್ಪನ್ನು ಸಮರ್ಥನೆ ಮಾಡಿಕೊಂಡಿದ್ದು, ವಕ್ಫ್ ಬೋರ್ಡಿನಲ್ಲಿ ಬಹುಮತ ಇಲ್ಲದ ಕಾರಣ ಹೀಗಾಗಿದೆ ಎಂದಿದ್ದಾರೆ. ಕಾಂಗ್ರೆಸ್ ಪಕ್ಷದ ಅಣ್ಣಿಗೇರಿ ವಕ್ಫ ಬೋರ್ಡಿಗೆ ಬರಲು ರಾಜ್ಯ ವಕ್ಫ್ ಬೋರ್ಡಿನಲ್ಲಿ ಬಹುಮತ ಇಲ್ಲದಿರುವುದು ಮುಖ್ಯ ಕಾರಣವಾಗಿದೆ. ಇದರಲ್ಲಿ ಕಾಂಗ್ರೆಸ್ ಪಕ್ಷದ ಮುತವರ್ಜಿ ಇದೆ. ಆದರೆ ನಮ್ಮ ಗಮನಕ್ಕೆ ಬಂದ ತಕ್ಷಣ ಸರಿಪಡಿಸಲಾಗಿದೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಪ್ರತಿಕ್ರಿಯಿಸಿದ್ದಾರೆ.‌

ಇದನ್ನೂ ಓದಿ: ವಕ್ಫ್ ಬೋರ್ಡ್​ಗೆ ಪರೇಶ ಮೆಸ್ತಾ ಪ್ರಕರಣದ ಆರೋಪಿ ನೇಮಕ: ವಿರೋಧದ ಬೆನ್ನಲ್ಲೇ ಆದೇಶಕ್ಕೆ ತಡೆ

ಶಿರಸಿ: ಉತ್ತರ ಕನ್ನಡ ಸೇರಿದಂತೆ ರಾಜ್ಯದಲ್ಲಿ ಕಿಡಿ ಹೊತ್ತಿಸಿದ್ದ ಹೊನ್ನಾವರದ ಪರೇಶ್ ಮೇಸ್ತ ಪ್ರಕರಣದ ಆರೋಪಿಗೆ ವಕ್ಫ್ ಬೋರ್ಡಿನಲ್ಲಿ ಸ್ಥಾನ ಕಲ್ಪಿಸಲಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ನಾಯಕರ ನಡುವೆ ವಾಗ್ವಾದ ನಡೆಯುತ್ತಿದೆ. ಎರಡೂ ಪಕ್ಷಗಳು ಟೀಕೆ ಮತ್ತು ಸಮಜಾಯಿಷಿಯಲ್ಲಿ ತೊಡಗಿಕೊಂಡಿವೆ. ರಾಜಕೀಯವಾಗಿ ಪ್ರಭಾವ ಬೀರುವ ವಿಷಯವಾದ ಕಾರಣ ಪಕ್ಷವನ್ನು ಸಮರ್ಥನೆ ಮಾಡಿಕೊಳ್ಳುವ ಕೆಲಸ ನಡೆಯುತ್ತಿದೆ.

ನಾಯಕರ ಆರೋಪ-ಪ್ರತ್ಯಾರೋಪ

ಉಪಾಧ್ಯಕ್ಷ ಸ್ಥಾನ ನೀಡುವಲ್ಲಿ ಕಾಂಗ್ರೆಸ್ ಕೈವಾಡವಿದೆ ಎಂದು ಬಿಜೆಪಿ ಶಾಸಕಿ ರೂಪಾಲಿ ನಾಯ್ಕ ಆರೋಪಿಸಿದ್ದರು. ಅದಕ್ಕೆ ಕಾಂಗ್ರೆಸ್ ತಿರುಗೇಟು ನೀಡಿದೆ. ಯಾವ ಪಕ್ಷ ಅಧಿಕಾರದಲ್ಲಿದೆ ಎಂಬುದನ್ನು ಗಮನಿಸಬೇಕು. ಈ ಬಗ್ಗೆ ಕ್ಷಮೆಯಾಚನೆ ಮಾಡಬೇಕು ಹಾಗೂ ಬಿಜೆಪಿಯ ತಪ್ಪಿಗೆ ಇತರರ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಇನ್ನು ಬಿಜೆಪಿಯವರು ತಮ್ಮ ತಪ್ಪನ್ನು ಸಮರ್ಥನೆ ಮಾಡಿಕೊಂಡಿದ್ದು, ವಕ್ಫ್ ಬೋರ್ಡಿನಲ್ಲಿ ಬಹುಮತ ಇಲ್ಲದ ಕಾರಣ ಹೀಗಾಗಿದೆ ಎಂದಿದ್ದಾರೆ. ಕಾಂಗ್ರೆಸ್ ಪಕ್ಷದ ಅಣ್ಣಿಗೇರಿ ವಕ್ಫ ಬೋರ್ಡಿಗೆ ಬರಲು ರಾಜ್ಯ ವಕ್ಫ್ ಬೋರ್ಡಿನಲ್ಲಿ ಬಹುಮತ ಇಲ್ಲದಿರುವುದು ಮುಖ್ಯ ಕಾರಣವಾಗಿದೆ. ಇದರಲ್ಲಿ ಕಾಂಗ್ರೆಸ್ ಪಕ್ಷದ ಮುತವರ್ಜಿ ಇದೆ. ಆದರೆ ನಮ್ಮ ಗಮನಕ್ಕೆ ಬಂದ ತಕ್ಷಣ ಸರಿಪಡಿಸಲಾಗಿದೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಪ್ರತಿಕ್ರಿಯಿಸಿದ್ದಾರೆ.‌

ಇದನ್ನೂ ಓದಿ: ವಕ್ಫ್ ಬೋರ್ಡ್​ಗೆ ಪರೇಶ ಮೆಸ್ತಾ ಪ್ರಕರಣದ ಆರೋಪಿ ನೇಮಕ: ವಿರೋಧದ ಬೆನ್ನಲ್ಲೇ ಆದೇಶಕ್ಕೆ ತಡೆ

Last Updated : Aug 16, 2022, 4:36 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.