ETV Bharat / state

ಕೋವಿಡ್​ನಿಂದ ಪೋಷಕರನ್ನು ಕಳೆದುಕೊಂಡ 25 ಮಕ್ಕಳ ಆರೈಕೆಗೆ ಕ್ರಮ; ನೋಡಲ್ ಅಧಿಕಾರಿ - ಕೊರೊನಾದಿಂದ ಅನಾಥರಾದ ಮಕ್ಕಳ ರಾಜ್ಯ ನೋಡಲ್ ಆಫಿಸರ್

ಕಳೆದ ಕೆಲ ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಅನಾಥ ಮಕ್ಕಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಅವರ ಸಮಸ್ಯೆ ಆಲಿಸಲಾಗಿದೆ. ಸದ್ಯ ರಾಜ್ಯದಲ್ಲಿ ತಂದೆ ತಾಯಿ ಇಬ್ಬರನ್ನು ಕಳೆದುಕೊಂಡು ಅನಾಥರಾದವರ ಪೈಕಿ 19 ಕುಟುಂಬಗಳ 25 ಮಕ್ಕಳಿದ್ದಾರೆ. ಅವರಿಗೆ ಯಾವುದೇ ಸಮಸ್ಯೆಯಾಗದಂತೆ ಮತ್ತು ಅವರ ಆರೈಕೆಗೂ ಕ್ರಮ ಕೈಗೊಂಡಿರುವುದಾಗಿ ರಾಜ್ಯ ನೋಡಲ್ ಆಫಿಸರ್ ಕೆ.ಪಿ. ಮೋಹನರಾಜ್ ತಿಳಿಸಿದರು.

action-to-be-taken-to-provide-all-facilities-for-children-of-the-dead-corona-infected
ಕೆಪಿ ಮೋಹನ್​ರಾಜ್​​
author img

By

Published : Jun 5, 2021, 8:41 PM IST

ಕಾರವಾರ: ಕೊರೊನಾ‌ ಸೋಂಕಿನಿಂದಾಗಿ ತಂದೆ-ತಾಯಿ ಇಬ್ಬರನ್ನು ಕಳೆದುಕೊಂಡು ಅನಾಥರಾದ ಮಕ್ಕಳ ಪೈಕಿ ರಾಜ್ಯದಲ್ಲಿ ಒಟ್ಟು 19 ಕುಟುಂಬಗಳ 25 ಮಕ್ಕಳಿದ್ದು, ಅಂತವರ ಸಮಸ್ಯೆ ಆಲಿಸಿ ಸರ್ಕಾರದಿಂದ ನಿಗದಿಪಡಿಸಿದ ಸೌಲಭ್ಯಗಳನ್ನು ತಕ್ಷಣ ಪೂರೈಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಕೊರೊನಾದಿಂದ ಅನಾಥರಾದ ಮಕ್ಕಳ ಉಸ್ತುವಾರಿಯ ರಾಜ್ಯ ನೋಡಲ್ ಆಫೀಸರ್ ಕೆ.ಪಿ. ಮೋಹನರಾಜ್ ಹೇಳಿದರು.

ಮೃತ ಕೋವಿಡ್​​ ಸೋಂಕಿತರ ಮಕ್ಕಳಿಗೆ ನಿಗದಿತ ಸೌಲಭ್ಯಗಳನ್ನು ತಕ್ಷಣ ಪೂರೈಸಲು ಕ್ರಮ

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಜೊತೆಗೆ ಕೊವಿಡ್​ನಿಂದಾಗಿ ತಂದೆ ತಾಯಿ ಕಳೆದುಕೊಂಡು ರಾಜ್ಯದಲ್ಲಿ ಅನಾಥರಾದ ಮಕ್ಕಳ ನೋಡೆಲ್ ಆಫೀಸರ್ ಆಗಿಯೂ ನೇಮಕ ಮಾಡಿದೆ. ಅದರಂತೆ ಕಳೆದ ಕೆಲ ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಅನಾಥ ಮಕ್ಕಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಅವರ ಸಮಸ್ಯೆ ಆಲಿಸಲಾಗಿದೆ. ಸದ್ಯ ರಾಜ್ಯದಲ್ಲಿ ತಂದೆ ತಾಯಿ ಇಬ್ಬರನ್ನು ಕಳೆದುಕೊಂಡು ಅನಾಥರಾದವರ ಪೈಕಿ 19 ಕುಟುಂಬಗಳ 25 ಮಕ್ಕಳಿದ್ದಾರೆ ಎಂದು ಮಾಹಿತಿ ನೀಡಿದರು.

ರಾಯಚೂರು 4, ಬಾಗಲಕೋಟೆ 3, ಬೆಳಗಾವಿ, ಗದಗ, ಕೊಡಗು, ಮೈಸೂರು, ಬೆಂಗಳೂರು ನಗರ, ಬೀದರದಲ್ಲಿ ತಲಾ 2 ಹಾಗೂ ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ರಾಮನಗರ, ಮಂಡ್ಯ, ಕೋಲಾರದಲ್ಲಿ ತಲಾ ಒಬ್ಬರು ತಂದೆ ತಾಯಿ ಇಬ್ಬರನ್ನು ಕಳೆದುಕೊಂಡವರಿದ್ದಾರೆ ಎಂದು ತಿಳಿಸಿದರು.

ಈ ಎಲ್ಲ ಮಕ್ಕಳಿಗೆ ಈಗಾಗಲೇ ಮುಖ್ಯಮಂತ್ರಿ ಸೂಚನೆಯಂತೆ ಸರ್ಕಾರದಿಂದ ಸೂಚಿಸಿದ ಸೌಲಭ್ಯಗಳನ್ನು ತಕ್ಷಣ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಅವರಿಗೆ ಯಾವುದೇ ಸಮಸ್ಯೆಯಾಗದಂತೆ ಮತ್ತು ಅವರ ಆರೈಕೆಗೂ ಕ್ರಮ ಕೈಗೊಂಡಿರುವುದಾಗಿ ಅವರು ಹೇಳಿದರು.

ಉತ್ತರ ಕನ್ನಡದಲ್ಲಿ ಪಾಸಿಟಿವಿಟಿ ರೇಟ್ ಇಳಿಕೆ

ಮೇ 28 ರಂದು 673 ಮಂದಿಗೆ ಸೋಂಕು ದೃಢಪಟ್ಟಿದ್ದು, ಶೇ 26.58ರಷ್ಟು ಪಾಸಿಟಿವಿಟಿ ಇತ್ತು. ಜೂನ್ 4 ರಂದು 567 ಮಂದಿಯಲ್ಲಿ ಸೋಂಕು ಪತ್ತೆಯಾಗಿತ್ತು. ಇದರಿಂದ ಕೊರೊನಾ ಪಾಸಿಟಿವಿಟಿ ದರ ಶೇ 15.79ಕ್ಕೆ ಇಳಿಕೆಯಾಗಿದ್ದು, ಪಾಸಿಟಿವಿಟಿ ದರ ಮತ್ತಷ್ಟು ಕಡಿಮೆಯಾಗುವ ನಿರೀಕ್ಷೆ ಇದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು.

ಜಿಲ್ಲೆಯಲ್ಲಿ ಇದುವರೆಗೆ 28,376 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ವಿಕಲಚೇತನರ ಪೈಕಿ 4617 ಮಂದಿಗೆ ವ್ಯಾಕ್ಸಿನ್​ ಹಾಕಲಾಗಿದೆ. ಬಿಟ್ಟು ಹೋದವರಿಗಾಗಿ ಎರಡು ದಿನಗಳ ಕಾಲ ಪುನರ್ ಲಸಿಕಾಕರಣವನ್ನು ಕೈಗೊಳ್ಳಲಾಗುತ್ತಿದೆ. ಇದರೊಂದಿಗೆ ಕೋ-ಮಾರ್ಬಿಡಿಟಿ ಹೊಂದಿರುವವರಿಗೆ ವೈದ್ಯರ ಸೂಕ್ತ ಪ್ರಮಾಣಪತ್ರವನ್ನು ಪಡೆದುಕೊಂಡು ತಾಲ್ಲೂಕು ಹಾಗೂ ಪ್ರಾಥಮಿಕ ಕೇಂದ್ರಗಳಲ್ಲಿಯೂ ವ್ಯಾಕ್ಸಿನೇಷನ್ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಕಾರವಾರ: ಕೊರೊನಾ‌ ಸೋಂಕಿನಿಂದಾಗಿ ತಂದೆ-ತಾಯಿ ಇಬ್ಬರನ್ನು ಕಳೆದುಕೊಂಡು ಅನಾಥರಾದ ಮಕ್ಕಳ ಪೈಕಿ ರಾಜ್ಯದಲ್ಲಿ ಒಟ್ಟು 19 ಕುಟುಂಬಗಳ 25 ಮಕ್ಕಳಿದ್ದು, ಅಂತವರ ಸಮಸ್ಯೆ ಆಲಿಸಿ ಸರ್ಕಾರದಿಂದ ನಿಗದಿಪಡಿಸಿದ ಸೌಲಭ್ಯಗಳನ್ನು ತಕ್ಷಣ ಪೂರೈಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಕೊರೊನಾದಿಂದ ಅನಾಥರಾದ ಮಕ್ಕಳ ಉಸ್ತುವಾರಿಯ ರಾಜ್ಯ ನೋಡಲ್ ಆಫೀಸರ್ ಕೆ.ಪಿ. ಮೋಹನರಾಜ್ ಹೇಳಿದರು.

ಮೃತ ಕೋವಿಡ್​​ ಸೋಂಕಿತರ ಮಕ್ಕಳಿಗೆ ನಿಗದಿತ ಸೌಲಭ್ಯಗಳನ್ನು ತಕ್ಷಣ ಪೂರೈಸಲು ಕ್ರಮ

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಜೊತೆಗೆ ಕೊವಿಡ್​ನಿಂದಾಗಿ ತಂದೆ ತಾಯಿ ಕಳೆದುಕೊಂಡು ರಾಜ್ಯದಲ್ಲಿ ಅನಾಥರಾದ ಮಕ್ಕಳ ನೋಡೆಲ್ ಆಫೀಸರ್ ಆಗಿಯೂ ನೇಮಕ ಮಾಡಿದೆ. ಅದರಂತೆ ಕಳೆದ ಕೆಲ ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಅನಾಥ ಮಕ್ಕಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಅವರ ಸಮಸ್ಯೆ ಆಲಿಸಲಾಗಿದೆ. ಸದ್ಯ ರಾಜ್ಯದಲ್ಲಿ ತಂದೆ ತಾಯಿ ಇಬ್ಬರನ್ನು ಕಳೆದುಕೊಂಡು ಅನಾಥರಾದವರ ಪೈಕಿ 19 ಕುಟುಂಬಗಳ 25 ಮಕ್ಕಳಿದ್ದಾರೆ ಎಂದು ಮಾಹಿತಿ ನೀಡಿದರು.

ರಾಯಚೂರು 4, ಬಾಗಲಕೋಟೆ 3, ಬೆಳಗಾವಿ, ಗದಗ, ಕೊಡಗು, ಮೈಸೂರು, ಬೆಂಗಳೂರು ನಗರ, ಬೀದರದಲ್ಲಿ ತಲಾ 2 ಹಾಗೂ ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ರಾಮನಗರ, ಮಂಡ್ಯ, ಕೋಲಾರದಲ್ಲಿ ತಲಾ ಒಬ್ಬರು ತಂದೆ ತಾಯಿ ಇಬ್ಬರನ್ನು ಕಳೆದುಕೊಂಡವರಿದ್ದಾರೆ ಎಂದು ತಿಳಿಸಿದರು.

ಈ ಎಲ್ಲ ಮಕ್ಕಳಿಗೆ ಈಗಾಗಲೇ ಮುಖ್ಯಮಂತ್ರಿ ಸೂಚನೆಯಂತೆ ಸರ್ಕಾರದಿಂದ ಸೂಚಿಸಿದ ಸೌಲಭ್ಯಗಳನ್ನು ತಕ್ಷಣ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಅವರಿಗೆ ಯಾವುದೇ ಸಮಸ್ಯೆಯಾಗದಂತೆ ಮತ್ತು ಅವರ ಆರೈಕೆಗೂ ಕ್ರಮ ಕೈಗೊಂಡಿರುವುದಾಗಿ ಅವರು ಹೇಳಿದರು.

ಉತ್ತರ ಕನ್ನಡದಲ್ಲಿ ಪಾಸಿಟಿವಿಟಿ ರೇಟ್ ಇಳಿಕೆ

ಮೇ 28 ರಂದು 673 ಮಂದಿಗೆ ಸೋಂಕು ದೃಢಪಟ್ಟಿದ್ದು, ಶೇ 26.58ರಷ್ಟು ಪಾಸಿಟಿವಿಟಿ ಇತ್ತು. ಜೂನ್ 4 ರಂದು 567 ಮಂದಿಯಲ್ಲಿ ಸೋಂಕು ಪತ್ತೆಯಾಗಿತ್ತು. ಇದರಿಂದ ಕೊರೊನಾ ಪಾಸಿಟಿವಿಟಿ ದರ ಶೇ 15.79ಕ್ಕೆ ಇಳಿಕೆಯಾಗಿದ್ದು, ಪಾಸಿಟಿವಿಟಿ ದರ ಮತ್ತಷ್ಟು ಕಡಿಮೆಯಾಗುವ ನಿರೀಕ್ಷೆ ಇದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು.

ಜಿಲ್ಲೆಯಲ್ಲಿ ಇದುವರೆಗೆ 28,376 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ವಿಕಲಚೇತನರ ಪೈಕಿ 4617 ಮಂದಿಗೆ ವ್ಯಾಕ್ಸಿನ್​ ಹಾಕಲಾಗಿದೆ. ಬಿಟ್ಟು ಹೋದವರಿಗಾಗಿ ಎರಡು ದಿನಗಳ ಕಾಲ ಪುನರ್ ಲಸಿಕಾಕರಣವನ್ನು ಕೈಗೊಳ್ಳಲಾಗುತ್ತಿದೆ. ಇದರೊಂದಿಗೆ ಕೋ-ಮಾರ್ಬಿಡಿಟಿ ಹೊಂದಿರುವವರಿಗೆ ವೈದ್ಯರ ಸೂಕ್ತ ಪ್ರಮಾಣಪತ್ರವನ್ನು ಪಡೆದುಕೊಂಡು ತಾಲ್ಲೂಕು ಹಾಗೂ ಪ್ರಾಥಮಿಕ ಕೇಂದ್ರಗಳಲ್ಲಿಯೂ ವ್ಯಾಕ್ಸಿನೇಷನ್ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.